Homeಮುಖಪುಟಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ: ಎರಡು ತಿಂಗಳೊಳಗೆ ನಿಯಮ ರೂಪಿಸಲು ಯುಜಿಸಿಗೆ ಸುಪ್ರೀಂ ಕೋರ್ಟ್...

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ: ಎರಡು ತಿಂಗಳೊಳಗೆ ನಿಯಮ ರೂಪಿಸಲು ಯುಜಿಸಿಗೆ ಸುಪ್ರೀಂ ಕೋರ್ಟ್ ಸೂಚನೆ

- Advertisement -
- Advertisement -

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ಖಂಡಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ (ಪಿಐಎಲ್‌) ವಿವಿಧ ಪಕ್ಷಕಾರರು ನೀಡಿದ ಸಲಹೆಗಳನ್ನು ಪರಿಗಣಿಸಲು ಮತ್ತು ನಿಯಮಗಳ ಅಧಿಸೂಚನೆಗೆ ಸಂಬಂಧಿಸಿದಂತೆ ಅಂತಿಮ ನಿರ್ಧಾರ ತೆಗೆದುಕೊಳ್ಳಲು ವಿಶ್ವವಿದ್ಯಾಲಯ ಅನುದಾನ ಆಯೋಗಕ್ಕೆ (ಯುಜಿಸಿ) ಸುಪ್ರೀಂ ಕೋರ್ಟ್ ಸೋಮವಾರ 8 ವಾರಗಳ (2 ತಿಂಗಳು) ಕಾಲಾವಕಾಶ ನೀಡಿದೆ.

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ಕಿರುಕುಳವನ್ನು ಎದುರಿಸಿ ಆತ್ಮಹತ್ಯೆ ಮಾಡಿಕೊಂಡ ಹಿಂದುಳಿದ ಸಮುದಾಯಗಳ ಇಬ್ಬರು ವಿದ್ಯಾರ್ಥಿಗಳಾದ ರೋಹಿತ್ ವೇಮುಲಾ ಮತ್ತು ಪಾಯಲ್ ತದ್ವಿ ಅವರ ತಾಯಂದಿರು 2019ರಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರಿದ್ದ ಪೀಠವು ಪಿಐಎಲ್‌ ವಿಚಾರಣೆ ನಡೆಸಿ, ಅರ್ಜಿದಾರರು ನೀಡಿರುವ ಈ ಕೆಳಗಿನ ಸಲಹೆಗಳನ್ನು ಯುಜಿಸಿ ಪರಿಗಣಿಸಬಹುದು ಎಂದು ಹೇಳಿದೆ.

ತಾರತಮ್ಯದ ಚಟುವಟಿಕೆಗಳನ್ನು ನಿಷೇಧಿಸುವುದು- ತಿಳಿದಿರುವ ಎಲ್ಲಾ ರೀತಿಯ ತಾರತಮ್ಯಗಳ ಮೇಲೆ ಸ್ಪಷ್ಟ ನಿಷೇಧ ಹೇರುವುದು ಮತ್ತು ಶಿಸ್ತು ಕ್ರಮಗಳನ್ನು ಜಾರಿಗೊಳಿಸುವುದು.

ವರ್ಗೀಕರಣ ಮಾಡದಿರುವುದು- ಪ್ರವೇಶ ಶ್ರೇಣಿ (Entrance rank)ಅಥವಾ ಶೈಕ್ಷಣಿಕ ಕಾರ್ಯಕ್ಷಮತೆಯ ಆಧಾರದ ಮೇಲೆ ಹಾಸ್ಟೆಲ್‌ಗಳು, ತರಗತಿ ಕೊಠಡಿಗಳು ಅಥವಾ ಪ್ರಾಯೋಗಿಕ ಬ್ಯಾಚ್‌ಗಳನ್ನು ವರ್ಗೀಕರಣ ಮಾಡದಿರುವುದು.

ವಿದ್ಯಾರ್ಥಿವೇತನ ವಿತರಣೆ- ದೂರುಗಳನ್ನು ಪತ್ತೆಹಚ್ಚಲು ಮತ್ತು ಸರ್ಕಾರ ಪಾವತಿ ವಿಳಂಬ ಮಾಡಿದಾಗ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಕಿರುಕುಳ ನೀಡುವುದನ್ನು ತಡೆಯಲು ವಿದ್ಯಾರ್ಥಿವೇತನ ಪ್ರಕ್ರಿಯೆಯನ್ನು ಡಿಜಿಟಲೀಕರಣಗೊಳಿಸುವುದು.

ಕುಂದುಕೊರತೆ ಪರಿಹಾರ- ಕನಿಷ್ಠ 50 ಶೇಕಡ ಎಸ್‌ಸಿ/ಎಸ್‌ಟಿ ಮತ್ತು ಒಬಿಸಿ ಸಮುದಾಯಗಳ ಸದಸ್ಯರನ್ನು ಹೊಂದಿರುವ, ಹಾಗೂ ಅದೇ ಸಮುದಾಯದ ಅಧ್ಯಕ್ಷರನ್ನು ಹೊಂದಿರುವ ಕುಂದು ಕೊರತೆ ಪರಿಹಾರ ಸಮಿತಿಯನ್ನು ರಚಿಸಬೇಕು; ಅಂತಹ ಸಮಿತಿಯ ಆದೇಶಗಳ ವಿರುದ್ಧ ರಾಷ್ಟ್ರೀಯ ಪರಿಶಿಷ್ಟ ಜಾತಿಗಳು/ಪರಿಶಿಷ್ಟ ಪಂಗಡಗಳ ಆಯೋಗದ ಮುಂದೆ ಮೇಲ್ಮನವಿ ಸಲ್ಲಿಸಬಹುದು.

ದೂರುದಾರರ ರಕ್ಷಣೆ- ದೂರುದಾರರು ಕಿರುಕುಳ, ಅವಮಾನ ಮತ್ತು ಬೆದರಿಕೆಗೆ ಒಳಗಾಗಿಲ್ಲ. ಅವರು ದೂರನ್ನು ಮುಂದುವರಿಸಲು ಅವಕಾಶ ಹೊಂದಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಲು ಸಾಕ್ಷಿ ರಕ್ಷಣೆಯಂತಹ ಮಾದರಿಯನ್ನು ಅನ್ವಯಿಸುದು.

ನಿರ್ಲಕ್ಷ್ಯಕ್ಕೆ ವೈಯಕ್ತಿಕ ಹೊಣೆಗಾರಿಕೆ- ಸಂಸ್ಥೆಗಳ ಮುಖ್ಯಸ್ಥರು ಸೇರಿದಂತೆ ಸಿಬ್ಬಂದಿ ಸದಸ್ಯರನ್ನು ನಿರ್ಲಕ್ಷ್ಯಕ್ಕೆ ವೈಯಕ್ತಿಕ ಹೊಣೆಗಾರರನ್ನಾಗಿ ಮಾಡುವುದು.

ಮಾನಸಿಕ ಆರೋಗ್ಯ ಸಮಾಲೋಚನೆ- ತಳ ಸಮುದಾಯಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ವಿಶೇಷವಾಗಿ ತರಬೇತಿ ಪಡೆದ ಸಲಹೆಗಾರರ ನೇಮಕ ಕಡ್ಡಾಯಗೊಳಿಸುವುದು.

ಮಾನ್ಯತೆ ಮತ್ತು ಮೌಲ್ಯಮಾಪನ- ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆ ಮಂಡಳಿ (ಎನ್‌ಎಎಸಿ) ತಾರತಮ್ಯ ವಿರೋಧಿ ನೀತಿಗಳನ್ನು ಜಾರಿಗೊಳಿಸಲು ನಿರ್ದಿಷ್ಟ ಮಾನದಂಡಗಳನ್ನು ಸೇರಿಸಬೇಕು. ಲಿಂಗ ಮತ್ತು ಇತರ ಸಾಮಾಜಿಕ ಗುಂಪುಗಳ ಕುರಿತು ಅನಾಮಧೇಯ ಡೇಟಾವನ್ನು ಸಂಗ್ರಹಿಸಲು ಮತ್ತು ಪ್ರಕಟಿಸಲು ಸಾಮಾಜಿಕ ಮೌಲ್ಯಮಾಪನ ನಡೆಸುವುದನ್ನು ಕಡ್ಡಾಯಗೊಳಿಸಬೇಕು.

ನಿಯಮ ಪಾಲಿಸದ ಸಂಸ್ಥೆಗಳ ಮೇಲೆ ಕ್ರಮ- ಯುಜಿಸಿ ನಿಯಮಗಳನ್ನು ಪಾಲಿಸದ ಸಂಸ್ಥೆಗಳ ಅನುದಾನ ಮತ್ತು ಮಾನ್ಯತೆಗಳನ್ನು ಹಿಂಪಡೆಯುವಂತಹ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು.

ಸಮಾನ ಕಲಿಕಾ ಬೆಂಬಲ- ತಳ ವರ್ಗಗಳ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಕೋರ್ಸ್‌ಗಳನ್ನು ನಡೆಸಬೇಕು.

ವಿಚಾರಣೆಯ ಸಮಯದಲ್ಲಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಕರಡು ನಿಯಮಗಳನ್ನು ಪ್ರಕಟಿಸಿದ ನಂತರ 391 ಸಲಹೆಗಳನ್ನು ಸ್ವೀಕರಿಸಲಾಗಿದೆ ಮತ್ತು ಅವುಗಳನ್ನು ತಜ್ಞರ ಸಮಿತಿಯು ಪರಿಗಣಿಸಿದೆ. ಯುಜಿಸಿಯಿಂದ ಅವುಗಳ ಪರಿಶೀಲನೆಗೆ ಶಿಫಾರಸು ಮಾಡಿದೆ. ಹಾಗಾಗಿ, ಆ ಹಂತದಲ್ಲಿ ವಿಷಯ ಬಾಕಿ ಇದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಈ ಸಲಹೆಗಳಲ್ಲಿ, ಕೆಲವು ‘ತುಂಬಾ ಒಳ್ಳೆಯದಿದೆ. 1-2 ‘ಸಮಸ್ಯಾತ್ಮಕ’ವಾಗಿದೆ ಎಂದು ನ್ಯಾಯಮೂರ್ತಿ ಕಾಂತ್ ಹೇಳಿದರು.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಅವರು, ಪ್ರಕರಣವನ್ನು 2019 ರಲ್ಲಿ ದಾಖಲಿಸಲಾಗಿದ್ದು, ಹಲವು ವಿದ್ಯಾರ್ಥಿಗಳು ಈ ನಡುವೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

“ಕರಡು ನಿಯಮಗಳನ್ನು ಪ್ರಕಟಿಸಲಾಗಿದೆ. ಅರ್ಜಿದಾರರು ಕೂಡ ತಮ್ಮ ಸಲಹೆಗಳನ್ನು ನೀಡಿದ್ದಾರೆ. ಸುಪ್ರೀಂ ಕೋರ್ಟ್‌ನ ಎರಡು ಸಮನ್ವಯ ಪೀಠಗಳು ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಿವೆ. ಅರ್ಜಿದಾರರು ವಿದ್ಯಾರ್ಥಿಗಳ ಆತ್ಮಹತ್ಯೆಗಳನ್ನು ತಡೆಯುವಲ್ಲಿ ಆಸಕ್ತಿ ಹೊಂದಿದ್ದಾರೆ. ಈಗ ನಿಯಮಗಳನ್ನು ಜಾರಿಗೆ ತರಲಾಗುತ್ತಿಲ್ಲ ಎಂಬ ಸರಳ ದೂರಿನೊಂದಿಗೆ ನಾವು ನ್ಯಾಯಾಲಯಕ್ಕೆ ಬಂದಿದ್ದೇವೆ. ನಿಯಮಗಳನ್ನು ಅಂತಿಮಗೊಳಿಸುವ ಮೊದಲು ಅರ್ಜಿದಾರರ ಸಲಹೆಗಳನ್ನು ಪರಿಗಣಿಸಬೇಕು” ಎಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಕಾಂತ್ ಅವರು, “ಅರ್ಜಿದಾರರು ತಮ್ಮ ಟಿಪ್ಪಣಿಯಲ್ಲಿ ದೂರುದಾರರ ರಕ್ಷಣೆ, ಮಾನಸಿಕ ಆರೋಗ್ಯ ಸಮಾಲೋಚನೆ, ನಿರ್ಲಕ್ಷ್ಯಕ್ಕೆ ವೈಯಕ್ತಿಕ ಹೊಣೆಗಾರಿಕೆ, ಲೆಕ್ಕಪರಿಶೋಧನೆ, ಅನುಸರಣೆ ಮಾಡದಿದ್ದಕ್ಕಾಗಿ ಕ್ರಮ ಇತ್ಯಾದಿ 10 ವಿಷಯಗಳನ್ನು ವಿವರಿಸಿದ್ದಾರೆ. ಈಗ ಈ ವಿಷಯವು ಯುಜಿಸಿಯಲ್ಲಿ ಬಾಕಿ ಇದೆ. ಪ್ರಸ್ತಾವಿತ ನಿಯಮಗಳಲ್ಲಿ ಅರ್ಜಿದಾರರು ನೀಡಿರುವ ಸಲಹೆಗಳನ್ನು ಕೂಡ ಪರಿಗಣಿಸಬೇಕೆಂದು ನಾವು ಇಂದು ನಿರ್ದೇಶಿಸುತ್ತೇವೆ. ಅವರು (ಯುಜಿಸಿ) ಹೇಗೆ ಹಿಂದೆ ಸರಿಯುತ್ತಾರೆ ನೋಡೋಣ” ಎಂದರು.

ನ್ಯಾಯಾಧೀಶರ ನಿರ್ಧಾರಕ್ಕೆ ಸಮ್ಮತಿ ಸೂಚಿಸಿದ ಇಂದಿರಾ ಜೈಸಿಂಗ್, ಅಂತಿಮ ನಿಯಮಗಳನ್ನು ಜಾರಿಗೊಳಿಸಲು ಸಮಯ ಮಿತಿಯನ್ನು ವಿಧಿಸಬಹುದು. ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ತೀರ್ಪಿಗಾಗಿ ನಾವು ಎದುರು ನೋಡುತ್ತಿದ್ದೇವೆ. ಯಾವುದೇ ವಿಷಯವನ್ನು ಅಂತಿಮಗೊಳಿಸುವ ಮೊದಲು ಈ ಬಗ್ಗೆ ನಿಮ್ಮೊಂದಿಗೆ ಮಾತನಾಡಲು ದಯವಿಟ್ಟು ಅವಕಾಶ ನೀಡಿ, ಅದು ನನ್ನ ಏಕೈಕ ವಿನಂತಿ. ನಾವು 2019 ರಿಂದ ತಾಳ್ಮೆಯಿಂದ ವಿಚಾರಣೆಗಾಗಿ ಕಾಯುತ್ತಿದ್ದೇವೆ” ಎಂದು ಮನವಿ ಮಾಡಿದರು.

ನ್ಯಾಯಾಲಯವು ತನ್ನ ಆದೇಶದಲ್ಲಿ, ಅರ್ಜಿದಾರರು ಸಲ್ಲಿಸಿದ ಸಂಕ್ಷಿಪ್ತ ಟಿಪ್ಪಣಿಯನ್ನು ಯುಜಿಸಿಗೆ ಕಳುಹಿಸಲು ಸೂಚಿಸಿದೆ, ಅದರಲ್ಲಿರುವ ಅರ್ಜಿದಾರರ ಸಲಹೆಗಳನ್ನು ಪರಿಶೀಲಿಸಲು ಹೇಳಿದೆ. ಜೊತೆಗೆ, ತಜ್ಞರ ಸಮಿತಿಯ ವರದಿಯಲ್ಲಿ ಒಳಗೊಂಡಿರುವ ಸಲಹೆಗಳು ಮತ್ತು ಇತರ ಪಕ್ಷಕಾರರಿಂದ ಬಂದ ಸಲಹೆಗಳನ್ನು ಕೂಡ ಪರಿಗಣಿಸಿ, ಯುಜಿಸಿ ಶೀಘ್ರವಾಗಿ ಅಂತಿಮ ನಿಯಮಗಳನ್ನು ಅಧಿಸೂಚಿಸುವ ನಿರ್ಧಾರವನ್ನು ತೆಗೆದುಕೊಳ್ಳುವ ವಿಶ್ವಾಸವನ್ನು ನ್ಯಾಯಾಲಯ ವ್ಯಕ್ತಪಡಿಸಿದೆ.

ಗುಜರಾತ್‌ ಡಿಸ್ಟರ್ಬ್ಡ್‌ ಏರಿಯಾಸ್ ಆ್ಯಕ್ಟ್‌: 15ರ ಮುಸ್ಲಿಂ ಬಾಲಕಿ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...