Homeಮುಖಪುಟಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ: ಎರಡು ತಿಂಗಳೊಳಗೆ ನಿಯಮ ರೂಪಿಸಲು ಯುಜಿಸಿಗೆ ಸುಪ್ರೀಂ ಕೋರ್ಟ್...

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ: ಎರಡು ತಿಂಗಳೊಳಗೆ ನಿಯಮ ರೂಪಿಸಲು ಯುಜಿಸಿಗೆ ಸುಪ್ರೀಂ ಕೋರ್ಟ್ ಸೂಚನೆ

- Advertisement -
- Advertisement -

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ಖಂಡಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ (ಪಿಐಎಲ್‌) ವಿವಿಧ ಪಕ್ಷಕಾರರು ನೀಡಿದ ಸಲಹೆಗಳನ್ನು ಪರಿಗಣಿಸಲು ಮತ್ತು ನಿಯಮಗಳ ಅಧಿಸೂಚನೆಗೆ ಸಂಬಂಧಿಸಿದಂತೆ ಅಂತಿಮ ನಿರ್ಧಾರ ತೆಗೆದುಕೊಳ್ಳಲು ವಿಶ್ವವಿದ್ಯಾಲಯ ಅನುದಾನ ಆಯೋಗಕ್ಕೆ (ಯುಜಿಸಿ) ಸುಪ್ರೀಂ ಕೋರ್ಟ್ ಸೋಮವಾರ 8 ವಾರಗಳ (2 ತಿಂಗಳು) ಕಾಲಾವಕಾಶ ನೀಡಿದೆ.

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ಕಿರುಕುಳವನ್ನು ಎದುರಿಸಿ ಆತ್ಮಹತ್ಯೆ ಮಾಡಿಕೊಂಡ ಹಿಂದುಳಿದ ಸಮುದಾಯಗಳ ಇಬ್ಬರು ವಿದ್ಯಾರ್ಥಿಗಳಾದ ರೋಹಿತ್ ವೇಮುಲಾ ಮತ್ತು ಪಾಯಲ್ ತದ್ವಿ ಅವರ ತಾಯಂದಿರು 2019ರಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರಿದ್ದ ಪೀಠವು ಪಿಐಎಲ್‌ ವಿಚಾರಣೆ ನಡೆಸಿ, ಅರ್ಜಿದಾರರು ನೀಡಿರುವ ಈ ಕೆಳಗಿನ ಸಲಹೆಗಳನ್ನು ಯುಜಿಸಿ ಪರಿಗಣಿಸಬಹುದು ಎಂದು ಹೇಳಿದೆ.

ತಾರತಮ್ಯದ ಚಟುವಟಿಕೆಗಳನ್ನು ನಿಷೇಧಿಸುವುದು- ತಿಳಿದಿರುವ ಎಲ್ಲಾ ರೀತಿಯ ತಾರತಮ್ಯಗಳ ಮೇಲೆ ಸ್ಪಷ್ಟ ನಿಷೇಧ ಹೇರುವುದು ಮತ್ತು ಶಿಸ್ತು ಕ್ರಮಗಳನ್ನು ಜಾರಿಗೊಳಿಸುವುದು.

ವರ್ಗೀಕರಣ ಮಾಡದಿರುವುದು- ಪ್ರವೇಶ ಶ್ರೇಣಿ (Entrance rank)ಅಥವಾ ಶೈಕ್ಷಣಿಕ ಕಾರ್ಯಕ್ಷಮತೆಯ ಆಧಾರದ ಮೇಲೆ ಹಾಸ್ಟೆಲ್‌ಗಳು, ತರಗತಿ ಕೊಠಡಿಗಳು ಅಥವಾ ಪ್ರಾಯೋಗಿಕ ಬ್ಯಾಚ್‌ಗಳನ್ನು ವರ್ಗೀಕರಣ ಮಾಡದಿರುವುದು.

ವಿದ್ಯಾರ್ಥಿವೇತನ ವಿತರಣೆ- ದೂರುಗಳನ್ನು ಪತ್ತೆಹಚ್ಚಲು ಮತ್ತು ಸರ್ಕಾರ ಪಾವತಿ ವಿಳಂಬ ಮಾಡಿದಾಗ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಕಿರುಕುಳ ನೀಡುವುದನ್ನು ತಡೆಯಲು ವಿದ್ಯಾರ್ಥಿವೇತನ ಪ್ರಕ್ರಿಯೆಯನ್ನು ಡಿಜಿಟಲೀಕರಣಗೊಳಿಸುವುದು.

ಕುಂದುಕೊರತೆ ಪರಿಹಾರ- ಕನಿಷ್ಠ 50 ಶೇಕಡ ಎಸ್‌ಸಿ/ಎಸ್‌ಟಿ ಮತ್ತು ಒಬಿಸಿ ಸಮುದಾಯಗಳ ಸದಸ್ಯರನ್ನು ಹೊಂದಿರುವ, ಹಾಗೂ ಅದೇ ಸಮುದಾಯದ ಅಧ್ಯಕ್ಷರನ್ನು ಹೊಂದಿರುವ ಕುಂದು ಕೊರತೆ ಪರಿಹಾರ ಸಮಿತಿಯನ್ನು ರಚಿಸಬೇಕು; ಅಂತಹ ಸಮಿತಿಯ ಆದೇಶಗಳ ವಿರುದ್ಧ ರಾಷ್ಟ್ರೀಯ ಪರಿಶಿಷ್ಟ ಜಾತಿಗಳು/ಪರಿಶಿಷ್ಟ ಪಂಗಡಗಳ ಆಯೋಗದ ಮುಂದೆ ಮೇಲ್ಮನವಿ ಸಲ್ಲಿಸಬಹುದು.

ದೂರುದಾರರ ರಕ್ಷಣೆ- ದೂರುದಾರರು ಕಿರುಕುಳ, ಅವಮಾನ ಮತ್ತು ಬೆದರಿಕೆಗೆ ಒಳಗಾಗಿಲ್ಲ. ಅವರು ದೂರನ್ನು ಮುಂದುವರಿಸಲು ಅವಕಾಶ ಹೊಂದಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಲು ಸಾಕ್ಷಿ ರಕ್ಷಣೆಯಂತಹ ಮಾದರಿಯನ್ನು ಅನ್ವಯಿಸುದು.

ನಿರ್ಲಕ್ಷ್ಯಕ್ಕೆ ವೈಯಕ್ತಿಕ ಹೊಣೆಗಾರಿಕೆ- ಸಂಸ್ಥೆಗಳ ಮುಖ್ಯಸ್ಥರು ಸೇರಿದಂತೆ ಸಿಬ್ಬಂದಿ ಸದಸ್ಯರನ್ನು ನಿರ್ಲಕ್ಷ್ಯಕ್ಕೆ ವೈಯಕ್ತಿಕ ಹೊಣೆಗಾರರನ್ನಾಗಿ ಮಾಡುವುದು.

ಮಾನಸಿಕ ಆರೋಗ್ಯ ಸಮಾಲೋಚನೆ- ತಳ ಸಮುದಾಯಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ವಿಶೇಷವಾಗಿ ತರಬೇತಿ ಪಡೆದ ಸಲಹೆಗಾರರ ನೇಮಕ ಕಡ್ಡಾಯಗೊಳಿಸುವುದು.

ಮಾನ್ಯತೆ ಮತ್ತು ಮೌಲ್ಯಮಾಪನ- ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆ ಮಂಡಳಿ (ಎನ್‌ಎಎಸಿ) ತಾರತಮ್ಯ ವಿರೋಧಿ ನೀತಿಗಳನ್ನು ಜಾರಿಗೊಳಿಸಲು ನಿರ್ದಿಷ್ಟ ಮಾನದಂಡಗಳನ್ನು ಸೇರಿಸಬೇಕು. ಲಿಂಗ ಮತ್ತು ಇತರ ಸಾಮಾಜಿಕ ಗುಂಪುಗಳ ಕುರಿತು ಅನಾಮಧೇಯ ಡೇಟಾವನ್ನು ಸಂಗ್ರಹಿಸಲು ಮತ್ತು ಪ್ರಕಟಿಸಲು ಸಾಮಾಜಿಕ ಮೌಲ್ಯಮಾಪನ ನಡೆಸುವುದನ್ನು ಕಡ್ಡಾಯಗೊಳಿಸಬೇಕು.

ನಿಯಮ ಪಾಲಿಸದ ಸಂಸ್ಥೆಗಳ ಮೇಲೆ ಕ್ರಮ- ಯುಜಿಸಿ ನಿಯಮಗಳನ್ನು ಪಾಲಿಸದ ಸಂಸ್ಥೆಗಳ ಅನುದಾನ ಮತ್ತು ಮಾನ್ಯತೆಗಳನ್ನು ಹಿಂಪಡೆಯುವಂತಹ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು.

ಸಮಾನ ಕಲಿಕಾ ಬೆಂಬಲ- ತಳ ವರ್ಗಗಳ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಕೋರ್ಸ್‌ಗಳನ್ನು ನಡೆಸಬೇಕು.

ವಿಚಾರಣೆಯ ಸಮಯದಲ್ಲಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಕರಡು ನಿಯಮಗಳನ್ನು ಪ್ರಕಟಿಸಿದ ನಂತರ 391 ಸಲಹೆಗಳನ್ನು ಸ್ವೀಕರಿಸಲಾಗಿದೆ ಮತ್ತು ಅವುಗಳನ್ನು ತಜ್ಞರ ಸಮಿತಿಯು ಪರಿಗಣಿಸಿದೆ. ಯುಜಿಸಿಯಿಂದ ಅವುಗಳ ಪರಿಶೀಲನೆಗೆ ಶಿಫಾರಸು ಮಾಡಿದೆ. ಹಾಗಾಗಿ, ಆ ಹಂತದಲ್ಲಿ ವಿಷಯ ಬಾಕಿ ಇದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಈ ಸಲಹೆಗಳಲ್ಲಿ, ಕೆಲವು ‘ತುಂಬಾ ಒಳ್ಳೆಯದಿದೆ. 1-2 ‘ಸಮಸ್ಯಾತ್ಮಕ’ವಾಗಿದೆ ಎಂದು ನ್ಯಾಯಮೂರ್ತಿ ಕಾಂತ್ ಹೇಳಿದರು.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಅವರು, ಪ್ರಕರಣವನ್ನು 2019 ರಲ್ಲಿ ದಾಖಲಿಸಲಾಗಿದ್ದು, ಹಲವು ವಿದ್ಯಾರ್ಥಿಗಳು ಈ ನಡುವೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

“ಕರಡು ನಿಯಮಗಳನ್ನು ಪ್ರಕಟಿಸಲಾಗಿದೆ. ಅರ್ಜಿದಾರರು ಕೂಡ ತಮ್ಮ ಸಲಹೆಗಳನ್ನು ನೀಡಿದ್ದಾರೆ. ಸುಪ್ರೀಂ ಕೋರ್ಟ್‌ನ ಎರಡು ಸಮನ್ವಯ ಪೀಠಗಳು ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಿವೆ. ಅರ್ಜಿದಾರರು ವಿದ್ಯಾರ್ಥಿಗಳ ಆತ್ಮಹತ್ಯೆಗಳನ್ನು ತಡೆಯುವಲ್ಲಿ ಆಸಕ್ತಿ ಹೊಂದಿದ್ದಾರೆ. ಈಗ ನಿಯಮಗಳನ್ನು ಜಾರಿಗೆ ತರಲಾಗುತ್ತಿಲ್ಲ ಎಂಬ ಸರಳ ದೂರಿನೊಂದಿಗೆ ನಾವು ನ್ಯಾಯಾಲಯಕ್ಕೆ ಬಂದಿದ್ದೇವೆ. ನಿಯಮಗಳನ್ನು ಅಂತಿಮಗೊಳಿಸುವ ಮೊದಲು ಅರ್ಜಿದಾರರ ಸಲಹೆಗಳನ್ನು ಪರಿಗಣಿಸಬೇಕು” ಎಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಕಾಂತ್ ಅವರು, “ಅರ್ಜಿದಾರರು ತಮ್ಮ ಟಿಪ್ಪಣಿಯಲ್ಲಿ ದೂರುದಾರರ ರಕ್ಷಣೆ, ಮಾನಸಿಕ ಆರೋಗ್ಯ ಸಮಾಲೋಚನೆ, ನಿರ್ಲಕ್ಷ್ಯಕ್ಕೆ ವೈಯಕ್ತಿಕ ಹೊಣೆಗಾರಿಕೆ, ಲೆಕ್ಕಪರಿಶೋಧನೆ, ಅನುಸರಣೆ ಮಾಡದಿದ್ದಕ್ಕಾಗಿ ಕ್ರಮ ಇತ್ಯಾದಿ 10 ವಿಷಯಗಳನ್ನು ವಿವರಿಸಿದ್ದಾರೆ. ಈಗ ಈ ವಿಷಯವು ಯುಜಿಸಿಯಲ್ಲಿ ಬಾಕಿ ಇದೆ. ಪ್ರಸ್ತಾವಿತ ನಿಯಮಗಳಲ್ಲಿ ಅರ್ಜಿದಾರರು ನೀಡಿರುವ ಸಲಹೆಗಳನ್ನು ಕೂಡ ಪರಿಗಣಿಸಬೇಕೆಂದು ನಾವು ಇಂದು ನಿರ್ದೇಶಿಸುತ್ತೇವೆ. ಅವರು (ಯುಜಿಸಿ) ಹೇಗೆ ಹಿಂದೆ ಸರಿಯುತ್ತಾರೆ ನೋಡೋಣ” ಎಂದರು.

ನ್ಯಾಯಾಧೀಶರ ನಿರ್ಧಾರಕ್ಕೆ ಸಮ್ಮತಿ ಸೂಚಿಸಿದ ಇಂದಿರಾ ಜೈಸಿಂಗ್, ಅಂತಿಮ ನಿಯಮಗಳನ್ನು ಜಾರಿಗೊಳಿಸಲು ಸಮಯ ಮಿತಿಯನ್ನು ವಿಧಿಸಬಹುದು. ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ತೀರ್ಪಿಗಾಗಿ ನಾವು ಎದುರು ನೋಡುತ್ತಿದ್ದೇವೆ. ಯಾವುದೇ ವಿಷಯವನ್ನು ಅಂತಿಮಗೊಳಿಸುವ ಮೊದಲು ಈ ಬಗ್ಗೆ ನಿಮ್ಮೊಂದಿಗೆ ಮಾತನಾಡಲು ದಯವಿಟ್ಟು ಅವಕಾಶ ನೀಡಿ, ಅದು ನನ್ನ ಏಕೈಕ ವಿನಂತಿ. ನಾವು 2019 ರಿಂದ ತಾಳ್ಮೆಯಿಂದ ವಿಚಾರಣೆಗಾಗಿ ಕಾಯುತ್ತಿದ್ದೇವೆ” ಎಂದು ಮನವಿ ಮಾಡಿದರು.

ನ್ಯಾಯಾಲಯವು ತನ್ನ ಆದೇಶದಲ್ಲಿ, ಅರ್ಜಿದಾರರು ಸಲ್ಲಿಸಿದ ಸಂಕ್ಷಿಪ್ತ ಟಿಪ್ಪಣಿಯನ್ನು ಯುಜಿಸಿಗೆ ಕಳುಹಿಸಲು ಸೂಚಿಸಿದೆ, ಅದರಲ್ಲಿರುವ ಅರ್ಜಿದಾರರ ಸಲಹೆಗಳನ್ನು ಪರಿಶೀಲಿಸಲು ಹೇಳಿದೆ. ಜೊತೆಗೆ, ತಜ್ಞರ ಸಮಿತಿಯ ವರದಿಯಲ್ಲಿ ಒಳಗೊಂಡಿರುವ ಸಲಹೆಗಳು ಮತ್ತು ಇತರ ಪಕ್ಷಕಾರರಿಂದ ಬಂದ ಸಲಹೆಗಳನ್ನು ಕೂಡ ಪರಿಗಣಿಸಿ, ಯುಜಿಸಿ ಶೀಘ್ರವಾಗಿ ಅಂತಿಮ ನಿಯಮಗಳನ್ನು ಅಧಿಸೂಚಿಸುವ ನಿರ್ಧಾರವನ್ನು ತೆಗೆದುಕೊಳ್ಳುವ ವಿಶ್ವಾಸವನ್ನು ನ್ಯಾಯಾಲಯ ವ್ಯಕ್ತಪಡಿಸಿದೆ.

ಗುಜರಾತ್‌ ಡಿಸ್ಟರ್ಬ್ಡ್‌ ಏರಿಯಾಸ್ ಆ್ಯಕ್ಟ್‌: 15ರ ಮುಸ್ಲಿಂ ಬಾಲಕಿ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...