Homeಮುಖಪುಟಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ: ಎರಡು ತಿಂಗಳೊಳಗೆ ನಿಯಮ ರೂಪಿಸಲು ಯುಜಿಸಿಗೆ ಸುಪ್ರೀಂ ಕೋರ್ಟ್...

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ: ಎರಡು ತಿಂಗಳೊಳಗೆ ನಿಯಮ ರೂಪಿಸಲು ಯುಜಿಸಿಗೆ ಸುಪ್ರೀಂ ಕೋರ್ಟ್ ಸೂಚನೆ

- Advertisement -
- Advertisement -

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ಖಂಡಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ (ಪಿಐಎಲ್‌) ವಿವಿಧ ಪಕ್ಷಕಾರರು ನೀಡಿದ ಸಲಹೆಗಳನ್ನು ಪರಿಗಣಿಸಲು ಮತ್ತು ನಿಯಮಗಳ ಅಧಿಸೂಚನೆಗೆ ಸಂಬಂಧಿಸಿದಂತೆ ಅಂತಿಮ ನಿರ್ಧಾರ ತೆಗೆದುಕೊಳ್ಳಲು ವಿಶ್ವವಿದ್ಯಾಲಯ ಅನುದಾನ ಆಯೋಗಕ್ಕೆ (ಯುಜಿಸಿ) ಸುಪ್ರೀಂ ಕೋರ್ಟ್ ಸೋಮವಾರ 8 ವಾರಗಳ (2 ತಿಂಗಳು) ಕಾಲಾವಕಾಶ ನೀಡಿದೆ.

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ಕಿರುಕುಳವನ್ನು ಎದುರಿಸಿ ಆತ್ಮಹತ್ಯೆ ಮಾಡಿಕೊಂಡ ಹಿಂದುಳಿದ ಸಮುದಾಯಗಳ ಇಬ್ಬರು ವಿದ್ಯಾರ್ಥಿಗಳಾದ ರೋಹಿತ್ ವೇಮುಲಾ ಮತ್ತು ಪಾಯಲ್ ತದ್ವಿ ಅವರ ತಾಯಂದಿರು 2019ರಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರಿದ್ದ ಪೀಠವು ಪಿಐಎಲ್‌ ವಿಚಾರಣೆ ನಡೆಸಿ, ಅರ್ಜಿದಾರರು ನೀಡಿರುವ ಈ ಕೆಳಗಿನ ಸಲಹೆಗಳನ್ನು ಯುಜಿಸಿ ಪರಿಗಣಿಸಬಹುದು ಎಂದು ಹೇಳಿದೆ.

ತಾರತಮ್ಯದ ಚಟುವಟಿಕೆಗಳನ್ನು ನಿಷೇಧಿಸುವುದು- ತಿಳಿದಿರುವ ಎಲ್ಲಾ ರೀತಿಯ ತಾರತಮ್ಯಗಳ ಮೇಲೆ ಸ್ಪಷ್ಟ ನಿಷೇಧ ಹೇರುವುದು ಮತ್ತು ಶಿಸ್ತು ಕ್ರಮಗಳನ್ನು ಜಾರಿಗೊಳಿಸುವುದು.

ವರ್ಗೀಕರಣ ಮಾಡದಿರುವುದು- ಪ್ರವೇಶ ಶ್ರೇಣಿ (Entrance rank)ಅಥವಾ ಶೈಕ್ಷಣಿಕ ಕಾರ್ಯಕ್ಷಮತೆಯ ಆಧಾರದ ಮೇಲೆ ಹಾಸ್ಟೆಲ್‌ಗಳು, ತರಗತಿ ಕೊಠಡಿಗಳು ಅಥವಾ ಪ್ರಾಯೋಗಿಕ ಬ್ಯಾಚ್‌ಗಳನ್ನು ವರ್ಗೀಕರಣ ಮಾಡದಿರುವುದು.

ವಿದ್ಯಾರ್ಥಿವೇತನ ವಿತರಣೆ- ದೂರುಗಳನ್ನು ಪತ್ತೆಹಚ್ಚಲು ಮತ್ತು ಸರ್ಕಾರ ಪಾವತಿ ವಿಳಂಬ ಮಾಡಿದಾಗ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಕಿರುಕುಳ ನೀಡುವುದನ್ನು ತಡೆಯಲು ವಿದ್ಯಾರ್ಥಿವೇತನ ಪ್ರಕ್ರಿಯೆಯನ್ನು ಡಿಜಿಟಲೀಕರಣಗೊಳಿಸುವುದು.

ಕುಂದುಕೊರತೆ ಪರಿಹಾರ- ಕನಿಷ್ಠ 50 ಶೇಕಡ ಎಸ್‌ಸಿ/ಎಸ್‌ಟಿ ಮತ್ತು ಒಬಿಸಿ ಸಮುದಾಯಗಳ ಸದಸ್ಯರನ್ನು ಹೊಂದಿರುವ, ಹಾಗೂ ಅದೇ ಸಮುದಾಯದ ಅಧ್ಯಕ್ಷರನ್ನು ಹೊಂದಿರುವ ಕುಂದು ಕೊರತೆ ಪರಿಹಾರ ಸಮಿತಿಯನ್ನು ರಚಿಸಬೇಕು; ಅಂತಹ ಸಮಿತಿಯ ಆದೇಶಗಳ ವಿರುದ್ಧ ರಾಷ್ಟ್ರೀಯ ಪರಿಶಿಷ್ಟ ಜಾತಿಗಳು/ಪರಿಶಿಷ್ಟ ಪಂಗಡಗಳ ಆಯೋಗದ ಮುಂದೆ ಮೇಲ್ಮನವಿ ಸಲ್ಲಿಸಬಹುದು.

ದೂರುದಾರರ ರಕ್ಷಣೆ- ದೂರುದಾರರು ಕಿರುಕುಳ, ಅವಮಾನ ಮತ್ತು ಬೆದರಿಕೆಗೆ ಒಳಗಾಗಿಲ್ಲ. ಅವರು ದೂರನ್ನು ಮುಂದುವರಿಸಲು ಅವಕಾಶ ಹೊಂದಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಲು ಸಾಕ್ಷಿ ರಕ್ಷಣೆಯಂತಹ ಮಾದರಿಯನ್ನು ಅನ್ವಯಿಸುದು.

ನಿರ್ಲಕ್ಷ್ಯಕ್ಕೆ ವೈಯಕ್ತಿಕ ಹೊಣೆಗಾರಿಕೆ- ಸಂಸ್ಥೆಗಳ ಮುಖ್ಯಸ್ಥರು ಸೇರಿದಂತೆ ಸಿಬ್ಬಂದಿ ಸದಸ್ಯರನ್ನು ನಿರ್ಲಕ್ಷ್ಯಕ್ಕೆ ವೈಯಕ್ತಿಕ ಹೊಣೆಗಾರರನ್ನಾಗಿ ಮಾಡುವುದು.

ಮಾನಸಿಕ ಆರೋಗ್ಯ ಸಮಾಲೋಚನೆ- ತಳ ಸಮುದಾಯಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ವಿಶೇಷವಾಗಿ ತರಬೇತಿ ಪಡೆದ ಸಲಹೆಗಾರರ ನೇಮಕ ಕಡ್ಡಾಯಗೊಳಿಸುವುದು.

ಮಾನ್ಯತೆ ಮತ್ತು ಮೌಲ್ಯಮಾಪನ- ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆ ಮಂಡಳಿ (ಎನ್‌ಎಎಸಿ) ತಾರತಮ್ಯ ವಿರೋಧಿ ನೀತಿಗಳನ್ನು ಜಾರಿಗೊಳಿಸಲು ನಿರ್ದಿಷ್ಟ ಮಾನದಂಡಗಳನ್ನು ಸೇರಿಸಬೇಕು. ಲಿಂಗ ಮತ್ತು ಇತರ ಸಾಮಾಜಿಕ ಗುಂಪುಗಳ ಕುರಿತು ಅನಾಮಧೇಯ ಡೇಟಾವನ್ನು ಸಂಗ್ರಹಿಸಲು ಮತ್ತು ಪ್ರಕಟಿಸಲು ಸಾಮಾಜಿಕ ಮೌಲ್ಯಮಾಪನ ನಡೆಸುವುದನ್ನು ಕಡ್ಡಾಯಗೊಳಿಸಬೇಕು.

ನಿಯಮ ಪಾಲಿಸದ ಸಂಸ್ಥೆಗಳ ಮೇಲೆ ಕ್ರಮ- ಯುಜಿಸಿ ನಿಯಮಗಳನ್ನು ಪಾಲಿಸದ ಸಂಸ್ಥೆಗಳ ಅನುದಾನ ಮತ್ತು ಮಾನ್ಯತೆಗಳನ್ನು ಹಿಂಪಡೆಯುವಂತಹ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು.

ಸಮಾನ ಕಲಿಕಾ ಬೆಂಬಲ- ತಳ ವರ್ಗಗಳ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಕೋರ್ಸ್‌ಗಳನ್ನು ನಡೆಸಬೇಕು.

ವಿಚಾರಣೆಯ ಸಮಯದಲ್ಲಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಕರಡು ನಿಯಮಗಳನ್ನು ಪ್ರಕಟಿಸಿದ ನಂತರ 391 ಸಲಹೆಗಳನ್ನು ಸ್ವೀಕರಿಸಲಾಗಿದೆ ಮತ್ತು ಅವುಗಳನ್ನು ತಜ್ಞರ ಸಮಿತಿಯು ಪರಿಗಣಿಸಿದೆ. ಯುಜಿಸಿಯಿಂದ ಅವುಗಳ ಪರಿಶೀಲನೆಗೆ ಶಿಫಾರಸು ಮಾಡಿದೆ. ಹಾಗಾಗಿ, ಆ ಹಂತದಲ್ಲಿ ವಿಷಯ ಬಾಕಿ ಇದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಈ ಸಲಹೆಗಳಲ್ಲಿ, ಕೆಲವು ‘ತುಂಬಾ ಒಳ್ಳೆಯದಿದೆ. 1-2 ‘ಸಮಸ್ಯಾತ್ಮಕ’ವಾಗಿದೆ ಎಂದು ನ್ಯಾಯಮೂರ್ತಿ ಕಾಂತ್ ಹೇಳಿದರು.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಅವರು, ಪ್ರಕರಣವನ್ನು 2019 ರಲ್ಲಿ ದಾಖಲಿಸಲಾಗಿದ್ದು, ಹಲವು ವಿದ್ಯಾರ್ಥಿಗಳು ಈ ನಡುವೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

“ಕರಡು ನಿಯಮಗಳನ್ನು ಪ್ರಕಟಿಸಲಾಗಿದೆ. ಅರ್ಜಿದಾರರು ಕೂಡ ತಮ್ಮ ಸಲಹೆಗಳನ್ನು ನೀಡಿದ್ದಾರೆ. ಸುಪ್ರೀಂ ಕೋರ್ಟ್‌ನ ಎರಡು ಸಮನ್ವಯ ಪೀಠಗಳು ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಿವೆ. ಅರ್ಜಿದಾರರು ವಿದ್ಯಾರ್ಥಿಗಳ ಆತ್ಮಹತ್ಯೆಗಳನ್ನು ತಡೆಯುವಲ್ಲಿ ಆಸಕ್ತಿ ಹೊಂದಿದ್ದಾರೆ. ಈಗ ನಿಯಮಗಳನ್ನು ಜಾರಿಗೆ ತರಲಾಗುತ್ತಿಲ್ಲ ಎಂಬ ಸರಳ ದೂರಿನೊಂದಿಗೆ ನಾವು ನ್ಯಾಯಾಲಯಕ್ಕೆ ಬಂದಿದ್ದೇವೆ. ನಿಯಮಗಳನ್ನು ಅಂತಿಮಗೊಳಿಸುವ ಮೊದಲು ಅರ್ಜಿದಾರರ ಸಲಹೆಗಳನ್ನು ಪರಿಗಣಿಸಬೇಕು” ಎಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಕಾಂತ್ ಅವರು, “ಅರ್ಜಿದಾರರು ತಮ್ಮ ಟಿಪ್ಪಣಿಯಲ್ಲಿ ದೂರುದಾರರ ರಕ್ಷಣೆ, ಮಾನಸಿಕ ಆರೋಗ್ಯ ಸಮಾಲೋಚನೆ, ನಿರ್ಲಕ್ಷ್ಯಕ್ಕೆ ವೈಯಕ್ತಿಕ ಹೊಣೆಗಾರಿಕೆ, ಲೆಕ್ಕಪರಿಶೋಧನೆ, ಅನುಸರಣೆ ಮಾಡದಿದ್ದಕ್ಕಾಗಿ ಕ್ರಮ ಇತ್ಯಾದಿ 10 ವಿಷಯಗಳನ್ನು ವಿವರಿಸಿದ್ದಾರೆ. ಈಗ ಈ ವಿಷಯವು ಯುಜಿಸಿಯಲ್ಲಿ ಬಾಕಿ ಇದೆ. ಪ್ರಸ್ತಾವಿತ ನಿಯಮಗಳಲ್ಲಿ ಅರ್ಜಿದಾರರು ನೀಡಿರುವ ಸಲಹೆಗಳನ್ನು ಕೂಡ ಪರಿಗಣಿಸಬೇಕೆಂದು ನಾವು ಇಂದು ನಿರ್ದೇಶಿಸುತ್ತೇವೆ. ಅವರು (ಯುಜಿಸಿ) ಹೇಗೆ ಹಿಂದೆ ಸರಿಯುತ್ತಾರೆ ನೋಡೋಣ” ಎಂದರು.

ನ್ಯಾಯಾಧೀಶರ ನಿರ್ಧಾರಕ್ಕೆ ಸಮ್ಮತಿ ಸೂಚಿಸಿದ ಇಂದಿರಾ ಜೈಸಿಂಗ್, ಅಂತಿಮ ನಿಯಮಗಳನ್ನು ಜಾರಿಗೊಳಿಸಲು ಸಮಯ ಮಿತಿಯನ್ನು ವಿಧಿಸಬಹುದು. ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ತೀರ್ಪಿಗಾಗಿ ನಾವು ಎದುರು ನೋಡುತ್ತಿದ್ದೇವೆ. ಯಾವುದೇ ವಿಷಯವನ್ನು ಅಂತಿಮಗೊಳಿಸುವ ಮೊದಲು ಈ ಬಗ್ಗೆ ನಿಮ್ಮೊಂದಿಗೆ ಮಾತನಾಡಲು ದಯವಿಟ್ಟು ಅವಕಾಶ ನೀಡಿ, ಅದು ನನ್ನ ಏಕೈಕ ವಿನಂತಿ. ನಾವು 2019 ರಿಂದ ತಾಳ್ಮೆಯಿಂದ ವಿಚಾರಣೆಗಾಗಿ ಕಾಯುತ್ತಿದ್ದೇವೆ” ಎಂದು ಮನವಿ ಮಾಡಿದರು.

ನ್ಯಾಯಾಲಯವು ತನ್ನ ಆದೇಶದಲ್ಲಿ, ಅರ್ಜಿದಾರರು ಸಲ್ಲಿಸಿದ ಸಂಕ್ಷಿಪ್ತ ಟಿಪ್ಪಣಿಯನ್ನು ಯುಜಿಸಿಗೆ ಕಳುಹಿಸಲು ಸೂಚಿಸಿದೆ, ಅದರಲ್ಲಿರುವ ಅರ್ಜಿದಾರರ ಸಲಹೆಗಳನ್ನು ಪರಿಶೀಲಿಸಲು ಹೇಳಿದೆ. ಜೊತೆಗೆ, ತಜ್ಞರ ಸಮಿತಿಯ ವರದಿಯಲ್ಲಿ ಒಳಗೊಂಡಿರುವ ಸಲಹೆಗಳು ಮತ್ತು ಇತರ ಪಕ್ಷಕಾರರಿಂದ ಬಂದ ಸಲಹೆಗಳನ್ನು ಕೂಡ ಪರಿಗಣಿಸಿ, ಯುಜಿಸಿ ಶೀಘ್ರವಾಗಿ ಅಂತಿಮ ನಿಯಮಗಳನ್ನು ಅಧಿಸೂಚಿಸುವ ನಿರ್ಧಾರವನ್ನು ತೆಗೆದುಕೊಳ್ಳುವ ವಿಶ್ವಾಸವನ್ನು ನ್ಯಾಯಾಲಯ ವ್ಯಕ್ತಪಡಿಸಿದೆ.

ಗುಜರಾತ್‌ ಡಿಸ್ಟರ್ಬ್ಡ್‌ ಏರಿಯಾಸ್ ಆ್ಯಕ್ಟ್‌: 15ರ ಮುಸ್ಲಿಂ ಬಾಲಕಿ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...