Homeಮುಖಪುಟಜೈಲುಗಳಲ್ಲಿ ಜಾತಿ ತಾರತಮ್ಯ - ಜೈಲು ಕೈಪಿಡಿ ತಿದ್ದುಪಡಿ ಮಾಡಿದ ಕೇಂದ್ರ ಸರ್ಕಾರ

ಜೈಲುಗಳಲ್ಲಿ ಜಾತಿ ತಾರತಮ್ಯ – ಜೈಲು ಕೈಪಿಡಿ ತಿದ್ದುಪಡಿ ಮಾಡಿದ ಕೇಂದ್ರ ಸರ್ಕಾರ

- Advertisement -
- Advertisement -

ತಾರತಮ್ಯ ಸೇರಿದಂತೆ ಜಾತಿಯ ಆಧಾರದ ಮೇಲೆ ಕೈದಿಗಳನ್ನು ಪ್ರತ್ಯೇಕಿಸುವುದನ್ನು ನಿಷೇಧಿಸಲು ಕೇಂದ್ರ ಗೃಹ ಸಚಿವಾಲಯವು ಜೈಲು ಕೈಪಿಡಿ ನಿಯಮಗಳನ್ನು ತಿದ್ದುಪಡಿ ಮಾಡಿದೆ ಎಂದು ವರದಿಯಾಗಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಸೋಮವಾರ ಪತ್ರ ಬರೆದಿರುವ ಸಚಿವಾಲಯ, ಕೈದಿಗಳ ವಿರುದ್ಧ ನಡೆಯುವ ತಾರತಮ್ಯವನ್ನು ಎದುರಿಸಲು 2016 ರ ಮಾದರಿ ಜೈಲು ಕೈಪಿಡಿ ಮತ್ತು 2023 ರ ಮಾದರಿ ಕಾರಾಗೃಹಗಳು ಮತ್ತು ತಿದ್ದುಪಡಿ ಸೇವೆಗಳ ಕಾಯಿದೆಗೆ ತಿದ್ದುಪಡಿ ಮಾಡಲಾಗಿದೆ ಎಂದು ಹೇಳಿದೆ. ಜೈಲುಗಳಲ್ಲಿ ಜಾತಿ ತಾರತಮ್ಯ

ಜೈಲುಗಳನ್ನು ನಿಯಂತ್ರಿಸುವ ಮೂಲ ತತ್ವಗಳಲ್ಲಿ ಏಕರೂಪತೆಯನ್ನು ಖಚಿತಪಡಿಸಿಕೊಳ್ಳಲು ಸಚಿವಾಲಯವು ಜನವರಿ 2016 ರಲ್ಲಿ ಮಾದರಿ ಕೈಪಿಡಿಯನ್ನು ಸಿದ್ಧಪಡಿಸಿತ್ತು. ಜೈಲಿನ ಆಡಳಿತವನ್ನು ನಿಯಂತ್ರಿಸುವ ಸ್ವಾತಂತ್ರ್ಯ ಪೂರ್ವದ ಕಾನೂನುಗಳನ್ನು ಬದಲಿಸಲು ಮೇ 2023 ರಲ್ಲಿ ಮಾದರಿ ಕಾಯಿದೆಯನ್ನು ಪರಿಚಯಿಸಲಾಯಿತು. ಜೈಲುಗಳಲ್ಲಿ ಜಾತಿ ತಾರತಮ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕಾರಾಗೃಹಗಳು ರಾಜ್ಯ ಪಟ್ಟಿಯಲ್ಲಿರುವುದರಿಂದ, ಅವುಗಳ ಆಡಳಿತ ಮತ್ತು ನಿರ್ವಹಣೆಯು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಜವಾಬ್ದಾರಿಯಾಗಿದೆ.

ಅಕ್ಟೋಬರ್ 3 ರಂದು ಸುಪ್ರೀಂ ಕೋರ್ಟ್ ಜೈಲು ಕೈಪಿಡಿ ನಿಯಮಗಳನ್ನು ತಳ್ಳಿಹಾಕಿತ್ತು. ಅದಾಗಿ ಎರಡು ತಿಂಗಳ ನಂತರ ಕೇಂದ್ರ ಸರ್ಕಾರ ನಿಯಮಗಳಿಗೆ ಬದಲಾವಣೆಗಳನ್ನು ತಂದಿದೆ. ”ತುಳಿತಕ್ಕೊಳಗಾದ ಸಮುದಾಯಗಳ ಕೈದಿಗಳನ್ನು ಜೈಲುಗಳಲ್ಲಿ ಸಣ್ಣ ಕೆಲಸಗಳಿಗೆ ನಿಯೋಜಿಸುವ ಮೂಲಕ ಜೈಲುಗಳಲ್ಲಿ ಜಾತಿ ತಾರತಮ್ಯವನ್ನು ಉತ್ತೇಜಿಸಲಾಗುತ್ತಿದೆ” ಎಂದು ಸುಪ್ರಿಂಕೋರ್ಟ್ ಹೇಳಿತ್ತು.

ಕೇಂದ್ರ ಸರ್ಕಾರ ರಾಜ್ಯಗಳಿಗೆ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಬರೆದ ಪತ್ರದಲ್ಲಿ, ಜೈಲು ಅಧಿಕಾರಿಗಳು ಯಾವುದೇ ತಾರತಮ್ಯ, ವರ್ಗೀಕರಣ ಮತ್ತು ಜಾತಿಯ ಆಧಾರದ ಮೇಲೆ ಕೈದಿಗಳನ್ನು ಪ್ರತ್ಯೇಕಿಸದಂತೆ ಕಟ್ಟುನಿಟ್ಟಾಗಿ ಖಚಿತಪಡಿಸಿಕೊಳ್ಳಬೇಕು ಎಂದು ಹೇಳಿದೆ.

“ಜೈಲುಗಳಲ್ಲಿ ಕೈದಿಗಳ ಜಾತಿಯ ಆಧಾರದ ಮೇಲೆ ಯಾವುದೇ ಕರ್ತವ್ಯ ಅಥವಾ ಕೆಲಸದ ಹಂಚಿಕೆಯಲ್ಲಿ ತಾರತಮ್ಯ ಇರಬಾರದು” ಎಂದು ಸಚಿವಾಲಯ ಹೇಳಿದೆ. ಸಚಿವಾಲಯವು ಜೈಲುಗಳೊಳಗಿನ ಒಳಚರಂಡಿ ಅಥವಾ ಸೆಪ್ಟಿಕ್ ಟ್ಯಾಂಕ್ ಅನ್ನು ಮ್ಯಾನುವಲ್ ಸ್ಕ್ಯಾವೆಂಜಿಂಗ್ ಅಥವಾ ಅಪಾಯಕಾರಿ ಶುಚಿಗೊಳಿಸುವಿಕೆಯನ್ನು ನಿರ್ಬಂಧಿಸಿದೆ.

ಇದನ್ನೂ ಓದಿ: ಭೀಮಾ ಕೋರೆಗಾಂವ್ ಪ್ರಕರಣದಿಂದ ಕೈಬಿಡುವಂತೆ ಬಾಂಬೆ ಹೈಕೋರ್ಟ್‌ಗೆ ಆನಂದ್ ತೇಲ್ತುಂಬ್ಡೆ ಅರ್ಜಿ

ಭೀಮಾ ಕೋರೆಗಾಂವ್ ಪ್ರಕರಣದಿಂದ ಕೈಬಿಡುವಂತೆ ಬಾಂಬೆ ಹೈಕೋರ್ಟ್‌ಗೆ ಆನಂದ್ ತೇಲ್ತುಂಬ್ಡೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...