Homeದಲಿತ್ ಫೈಲ್ಸ್ತಮಿಳುನಾಡಿನ ಚರ್ಚ್‌ನಲ್ಲಿ ಜಾತಿ ತಾರತಮ್ಯ; ದಲಿತ ಕ್ರೈಸ್ತರಿಂದ ಉಪವಾಸ ಸತ್ಯಾಗ್ರಹ

ತಮಿಳುನಾಡಿನ ಚರ್ಚ್‌ನಲ್ಲಿ ಜಾತಿ ತಾರತಮ್ಯ; ದಲಿತ ಕ್ರೈಸ್ತರಿಂದ ಉಪವಾಸ ಸತ್ಯಾಗ್ರಹ

- Advertisement -
- Advertisement -

ತಮಿಳುನಾಡಿನ ತಿರುಚಿಯ ತುರೈಯೂರ್ ಬಳಿಯ ಕೊಟ್ಟಪಾಳಯಂ ಗ್ರಾಮದ ದಲಿತ ಕ್ರೈಸ್ತರ ಗುಂಪೊಂದು ಜಿಲ್ಲಾಧೀಕಾರಿಗಳ ಕಷೇರಿ ಎದುರು ಸೋಮವಾರ ಉಪವಾಸ ಸತ್ಯಾಗ್ರಹ ನಡೆಸಿದರು. “ಚರ್ಚ್‌ನಲ್ಲಿ ತಾವು ತಾರತಮ್ಯವನ್ನು ಎದುರಿಸುತ್ತಿದ್ದೇವೆ, ಶತಮಾನಗಳಷ್ಟು ಹಳೆಯದಾದ ಸೇಂಟ್ ಮೇರಿ ಮ್ಯಾಗ್ಡಲೀನ್ ಚರ್ಚ್‌ನ ಉತ್ಸವ ಮತ್ತು ಇತರ ಚಟುವಟಿಕೆಗಳಲ್ಲಿ ಭಾಗವಹಿಸಲು ನಮಗೆ ಅವಕಾಶ ನೀಡುತ್ತಿಲ್ಲ” ಎಂದು ಆರೋಪಿಸಿದರು.

ಜುಲೈ 14 ರಂದು ಉತ್ಸವ ಪ್ರಾರಂಭವಾಯಿತು. ಕುಂಭಕೋಣಂನ ರೋಮನ್ ಕ್ಯಾಥೋಲಿಕ್ ಡಯಾಸಿಸ್ ಅಡಿಯಲ್ಲಿ ಚರ್ಚ್ ಕಾರ್ಯನಿರ್ವಹಿಸುತ್ತದೆ. “ಪ್ಯಾರಿಷ್‌ನಲ್ಲಿ ನಡೆಯುತ್ತಿರುವ ಜಾತಿ ತಾರತಮ್ಯ”ದ ವಿರುದ್ಧ ತಮ್ಮ ಪ್ರತಿಭಟನೆಯನ್ನು ದಾಖಲಿಸಲು ಮಂಗಳವಾರ ನಿಗದಿಯಾಗಿರುವ ರಥ ಮೆರವಣಿಗೆಯಲ್ಲಿ ಭಾಗವಹಿಸುವುದಿಲ್ಲ ಎಂದು ಬಿಷಪ್ ಜೀವನಂದಂ ಅಮಲನಾಥನ್ ಹೇಳಿದರು.

ದಶಕಗಳಿಂದ, ತಮಗೆ ಚರ್ಚ್‌ಗೆ ಚಂದಾದಾರಿಕೆ ಪಾವತಿಸಲು ಅವಕಾಶವಿಲ್ಲ, ಯೋಜನಾ ಸಮಿತಿಗಳಿಂದ ಹೊರಗಿಡಲಾಗಿದೆ ಎಂದು ದಲಿತ ಕ್ರೈಸ್ತರು ಹೇಳಿದರು. ಇದಲ್ಲದೆ, ಚರ್ಚ್ ರಥವನ್ನು ನಾವು ವಾಸಿಸುವ ಪ್ರದೇಶಕ್ಕೆ ತರುವುದಕ್ಕೆ ಬಿಡುವುದಿಲ್ಲ ಎಂದು ಅವರು ಆರೋಪಿಸಿದರು. “ಇದು ನಮ್ಮ ಹಬ್ಬವಲ್ಲ ಎಂದು ಪಾದ್ರಿ ಮತ್ತು ಹಲವಾರು ಪ್ರಬಲ ಜಾತಿಯ ಕ್ರಿಶ್ಚಿಯನ್ನರು ನಮಗೆ ಹೇಳಿದರು” ಎಂದು ನೋವು ತೋಡಿಕೊಂಡಿದ್ದಾರೆ.

ಇತರರಿಂದ ಸ್ವೀಕರಿಸುವಂತೆ ಚರ್ಚ್ ಆಡಳಿತ  ನಮ್ಮಿಂದ ಚಂದಾ ಸಂಗ್ರಹಿಸಲು ನಿರಾಕರಿಸುತ್ತದೆ. ಬದಲಾಗಿ, ದೇಣಿಗೆ ನೀಡುವಂತೆ ನಮ್ಮನ್ನು ಕೇಳಲಾಗುತ್ತದೆ ಎಂದು ದೀರ್ಘಕಾಲದ ಪ್ಯಾರಿಷನರ್ ಜೆ. ದಾಸ್ ಪ್ರಕಾಶ್ ಹೇಳಿದರು. ಜುಲೈ 6 ರಂದು ನಡೆದ ಉತ್ಸವ ಯೋಜನಾ ಸಭೆಯ ಸಂದರ್ಭದಲ್ಲಿ ದಲಿತರಿಗೆ ಬೆದರಿಕೆ ಹಾಕಿದ್ದಾರೆ ಎಂದು ಹೇಳಲಾದ ಪ್ಯಾರಿಷ್ ಪಾದ್ರಿ ಮತ್ತು ಇತರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ವಾರದ ಕುಂದುಕೊರತೆಗಳ ಸಭೆಯಲ್ಲಿ ಪ್ರತಿಭಟನಾಕಾರರು ಡಿಆರ್‌ಒಗೆ ಅರ್ಜಿ ಸಲ್ಲಿಸಿದರು.

“ನಮ್ಮನ್ನು ಜಾತಿವಾದಿ ಪದಗಳಿಂದ ನಿಂದಿಸಲಾಯಿತು, ಮಧ್ಯಪ್ರವೇಶಿಸದಂತೆ ಎಚ್ಚರಿಸಲಾಯಿತು” ಎಂದು ಮತ್ತೊಬ್ಬ ಸದಸ್ಯರು ಹೇಳಿದರು. ಪ್ಯಾರಿಷನರ್ ಆರ್. ರಾಜ್ ನೊಬಿಲಿ, “ನಾವು ಒಮ್ಮೆ ಚಂದಾದಾರಿಕೆಯನ್ನು ಪಾವತಿಸಿದರೆ, ನಮಗೆ ಪ್ರಶ್ನಿಸುವ ಹಕ್ಕಿದೆ. ಅದಕ್ಕಾಗಿಯೇ ಅವರು ನಮ್ಮಿಂದ ಅದನ್ನು ಸಂಗ್ರಹಿಸುತ್ತಿಲ್ಲ. ಹಬ್ಬದ ಸಮಯದಲ್ಲಿ ಏಳು ರಥಗಳನ್ನು ಓಡಿಸುತ್ತಿದ್ದರೂ, ಚಿಕ್ಕದು ಕೂಡ ನಮ್ಮ ಬೀದಿಗಳಿಗೆ ಪ್ರವೇಶಿಸುವುದಿಲ್ಲ” ಎಂದರು.

“ಜಿಲ್ಲಾ ಆಡಳಿತವು ಕನಿಷ್ಠ ರಥವು ನಮ್ಮ ಪ್ರದೇಶಕ್ಕೆ ಬರುವಂತೆ ನೋಡಿಕೊಳ್ಳಬೇಕು” ಎಂದು ಅವರು ಹೇಳಿದರು. “ಇದು ಸಂವಿಧಾನವು ಖಾತರಿಪಡಿಸಿದ ಸಮಾನತೆಯ ಉಲ್ಲಂಘನೆಯಾಗಿದೆ. ಇದನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರೂ, ಯಾರೂ ಮಧ್ಯಪ್ರವೇಶಿಸಿಲ್ಲ” ಎಂದು ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮಾನವ ಹಕ್ಕುಗಳ ವಕೀಲ ಜೋ ಕೆನಡಿ ಹೇಳಿದರು.

“ಚರ್ಚ್ ಈ ಜಾತಿ ಗೋಡೆಯನ್ನು ಒಳಗಿನಿಂದ ಕೆಡವಬೇಕು” ಎಂದು ಅವರು ಹೇಳಿದರು. ಅವರ ಇತರ ಬೇಡಿಕೆಗಳಲ್ಲಿ ಆಂತರಿಕ ಪ್ಯಾರಿಷ್ ಕೌನ್ಸಿಲ್ ರಚನೆ, ಧಾರ್ಮಿಕ ಮತ್ತು ಉತ್ಸವ ಕಾರ್ಯಕ್ರಮಗಳಲ್ಲಿ ಸಮಾನ ಹಕ್ಕುಗಳು ಮತ್ತು ಜಾತಿ ಆಧಾರಿತ ತಾರತಮ್ಯಕ್ಕಾಗಿ ಕಾನೂನು ಕ್ರಮ ಸೇರಿವೆ. ಪ್ಯಾರಿಷ್‌ನಲ್ಲಿ ನಡೆಯುತ್ತಿರುವ ಜಾತಿ ತಾರತಮ್ಯದಿಂದಾಗಿ ಮಂಗಳವಾರ ರಥೋತ್ಸವವನ್ನು ಬಹಿಷ್ಕರಿಸುವುದಾಗಿ ಬಿಷಪ್ ಜೀವನಂದಂ ಅಮಲನಾಥನ್ ತಿಳಿಸಿದರು ಎಂದು ‘ಟಿಎನ್‌ಐಇ’ ವರದಿ ಮಾಡಿದೆ.

ದಲಿತ ಕ್ರೈಸ್ತರಿಗೆ ಸಮಾನ ಹಕ್ಕುಗಳನ್ನು ನೀಡದಿರಲು ಪ್ರಬಲ ಜಾತಿಯ ಕ್ರೈಸ್ತರು ತಮ್ಮ ನಿಲುವಿನಲ್ಲಿ ಹಠಮಾರಿ ಎಂದು ಅವರು ಹೇಳಿದರು. ಆದರೂ, ಚರ್ಚ್ ಯಾರ ವಿರುದ್ಧವೂ ತಾರತಮ್ಯ ಮಾಡಿಲ್ಲ ಎಂದು ಅವರು ಸಮರ್ಥಿಸಿಕೊಂಡರು.

ಆಂಧ್ರಪ್ರದೇಶ: ದಲಿತ ಯುವಕನ ಮೇಲೆ ಅಮಾನವೀಯ ಹಲ್ಲೆ; ಮೂವರ ವಿರುದ್ಧ ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...