Homeದಲಿತ್ ಫೈಲ್ಸ್ತಮಿಳುನಾಡಿನ ಚರ್ಚ್‌ನಲ್ಲಿ ಜಾತಿ ತಾರತಮ್ಯ; ದಲಿತ ಕ್ರೈಸ್ತರಿಂದ ಉಪವಾಸ ಸತ್ಯಾಗ್ರಹ

ತಮಿಳುನಾಡಿನ ಚರ್ಚ್‌ನಲ್ಲಿ ಜಾತಿ ತಾರತಮ್ಯ; ದಲಿತ ಕ್ರೈಸ್ತರಿಂದ ಉಪವಾಸ ಸತ್ಯಾಗ್ರಹ

- Advertisement -
- Advertisement -

ತಮಿಳುನಾಡಿನ ತಿರುಚಿಯ ತುರೈಯೂರ್ ಬಳಿಯ ಕೊಟ್ಟಪಾಳಯಂ ಗ್ರಾಮದ ದಲಿತ ಕ್ರೈಸ್ತರ ಗುಂಪೊಂದು ಜಿಲ್ಲಾಧೀಕಾರಿಗಳ ಕಷೇರಿ ಎದುರು ಸೋಮವಾರ ಉಪವಾಸ ಸತ್ಯಾಗ್ರಹ ನಡೆಸಿದರು. “ಚರ್ಚ್‌ನಲ್ಲಿ ತಾವು ತಾರತಮ್ಯವನ್ನು ಎದುರಿಸುತ್ತಿದ್ದೇವೆ, ಶತಮಾನಗಳಷ್ಟು ಹಳೆಯದಾದ ಸೇಂಟ್ ಮೇರಿ ಮ್ಯಾಗ್ಡಲೀನ್ ಚರ್ಚ್‌ನ ಉತ್ಸವ ಮತ್ತು ಇತರ ಚಟುವಟಿಕೆಗಳಲ್ಲಿ ಭಾಗವಹಿಸಲು ನಮಗೆ ಅವಕಾಶ ನೀಡುತ್ತಿಲ್ಲ” ಎಂದು ಆರೋಪಿಸಿದರು.

ಜುಲೈ 14 ರಂದು ಉತ್ಸವ ಪ್ರಾರಂಭವಾಯಿತು. ಕುಂಭಕೋಣಂನ ರೋಮನ್ ಕ್ಯಾಥೋಲಿಕ್ ಡಯಾಸಿಸ್ ಅಡಿಯಲ್ಲಿ ಚರ್ಚ್ ಕಾರ್ಯನಿರ್ವಹಿಸುತ್ತದೆ. “ಪ್ಯಾರಿಷ್‌ನಲ್ಲಿ ನಡೆಯುತ್ತಿರುವ ಜಾತಿ ತಾರತಮ್ಯ”ದ ವಿರುದ್ಧ ತಮ್ಮ ಪ್ರತಿಭಟನೆಯನ್ನು ದಾಖಲಿಸಲು ಮಂಗಳವಾರ ನಿಗದಿಯಾಗಿರುವ ರಥ ಮೆರವಣಿಗೆಯಲ್ಲಿ ಭಾಗವಹಿಸುವುದಿಲ್ಲ ಎಂದು ಬಿಷಪ್ ಜೀವನಂದಂ ಅಮಲನಾಥನ್ ಹೇಳಿದರು.

ದಶಕಗಳಿಂದ, ತಮಗೆ ಚರ್ಚ್‌ಗೆ ಚಂದಾದಾರಿಕೆ ಪಾವತಿಸಲು ಅವಕಾಶವಿಲ್ಲ, ಯೋಜನಾ ಸಮಿತಿಗಳಿಂದ ಹೊರಗಿಡಲಾಗಿದೆ ಎಂದು ದಲಿತ ಕ್ರೈಸ್ತರು ಹೇಳಿದರು. ಇದಲ್ಲದೆ, ಚರ್ಚ್ ರಥವನ್ನು ನಾವು ವಾಸಿಸುವ ಪ್ರದೇಶಕ್ಕೆ ತರುವುದಕ್ಕೆ ಬಿಡುವುದಿಲ್ಲ ಎಂದು ಅವರು ಆರೋಪಿಸಿದರು. “ಇದು ನಮ್ಮ ಹಬ್ಬವಲ್ಲ ಎಂದು ಪಾದ್ರಿ ಮತ್ತು ಹಲವಾರು ಪ್ರಬಲ ಜಾತಿಯ ಕ್ರಿಶ್ಚಿಯನ್ನರು ನಮಗೆ ಹೇಳಿದರು” ಎಂದು ನೋವು ತೋಡಿಕೊಂಡಿದ್ದಾರೆ.

ಇತರರಿಂದ ಸ್ವೀಕರಿಸುವಂತೆ ಚರ್ಚ್ ಆಡಳಿತ  ನಮ್ಮಿಂದ ಚಂದಾ ಸಂಗ್ರಹಿಸಲು ನಿರಾಕರಿಸುತ್ತದೆ. ಬದಲಾಗಿ, ದೇಣಿಗೆ ನೀಡುವಂತೆ ನಮ್ಮನ್ನು ಕೇಳಲಾಗುತ್ತದೆ ಎಂದು ದೀರ್ಘಕಾಲದ ಪ್ಯಾರಿಷನರ್ ಜೆ. ದಾಸ್ ಪ್ರಕಾಶ್ ಹೇಳಿದರು. ಜುಲೈ 6 ರಂದು ನಡೆದ ಉತ್ಸವ ಯೋಜನಾ ಸಭೆಯ ಸಂದರ್ಭದಲ್ಲಿ ದಲಿತರಿಗೆ ಬೆದರಿಕೆ ಹಾಕಿದ್ದಾರೆ ಎಂದು ಹೇಳಲಾದ ಪ್ಯಾರಿಷ್ ಪಾದ್ರಿ ಮತ್ತು ಇತರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ವಾರದ ಕುಂದುಕೊರತೆಗಳ ಸಭೆಯಲ್ಲಿ ಪ್ರತಿಭಟನಾಕಾರರು ಡಿಆರ್‌ಒಗೆ ಅರ್ಜಿ ಸಲ್ಲಿಸಿದರು.

“ನಮ್ಮನ್ನು ಜಾತಿವಾದಿ ಪದಗಳಿಂದ ನಿಂದಿಸಲಾಯಿತು, ಮಧ್ಯಪ್ರವೇಶಿಸದಂತೆ ಎಚ್ಚರಿಸಲಾಯಿತು” ಎಂದು ಮತ್ತೊಬ್ಬ ಸದಸ್ಯರು ಹೇಳಿದರು. ಪ್ಯಾರಿಷನರ್ ಆರ್. ರಾಜ್ ನೊಬಿಲಿ, “ನಾವು ಒಮ್ಮೆ ಚಂದಾದಾರಿಕೆಯನ್ನು ಪಾವತಿಸಿದರೆ, ನಮಗೆ ಪ್ರಶ್ನಿಸುವ ಹಕ್ಕಿದೆ. ಅದಕ್ಕಾಗಿಯೇ ಅವರು ನಮ್ಮಿಂದ ಅದನ್ನು ಸಂಗ್ರಹಿಸುತ್ತಿಲ್ಲ. ಹಬ್ಬದ ಸಮಯದಲ್ಲಿ ಏಳು ರಥಗಳನ್ನು ಓಡಿಸುತ್ತಿದ್ದರೂ, ಚಿಕ್ಕದು ಕೂಡ ನಮ್ಮ ಬೀದಿಗಳಿಗೆ ಪ್ರವೇಶಿಸುವುದಿಲ್ಲ” ಎಂದರು.

“ಜಿಲ್ಲಾ ಆಡಳಿತವು ಕನಿಷ್ಠ ರಥವು ನಮ್ಮ ಪ್ರದೇಶಕ್ಕೆ ಬರುವಂತೆ ನೋಡಿಕೊಳ್ಳಬೇಕು” ಎಂದು ಅವರು ಹೇಳಿದರು. “ಇದು ಸಂವಿಧಾನವು ಖಾತರಿಪಡಿಸಿದ ಸಮಾನತೆಯ ಉಲ್ಲಂಘನೆಯಾಗಿದೆ. ಇದನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರೂ, ಯಾರೂ ಮಧ್ಯಪ್ರವೇಶಿಸಿಲ್ಲ” ಎಂದು ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮಾನವ ಹಕ್ಕುಗಳ ವಕೀಲ ಜೋ ಕೆನಡಿ ಹೇಳಿದರು.

“ಚರ್ಚ್ ಈ ಜಾತಿ ಗೋಡೆಯನ್ನು ಒಳಗಿನಿಂದ ಕೆಡವಬೇಕು” ಎಂದು ಅವರು ಹೇಳಿದರು. ಅವರ ಇತರ ಬೇಡಿಕೆಗಳಲ್ಲಿ ಆಂತರಿಕ ಪ್ಯಾರಿಷ್ ಕೌನ್ಸಿಲ್ ರಚನೆ, ಧಾರ್ಮಿಕ ಮತ್ತು ಉತ್ಸವ ಕಾರ್ಯಕ್ರಮಗಳಲ್ಲಿ ಸಮಾನ ಹಕ್ಕುಗಳು ಮತ್ತು ಜಾತಿ ಆಧಾರಿತ ತಾರತಮ್ಯಕ್ಕಾಗಿ ಕಾನೂನು ಕ್ರಮ ಸೇರಿವೆ. ಪ್ಯಾರಿಷ್‌ನಲ್ಲಿ ನಡೆಯುತ್ತಿರುವ ಜಾತಿ ತಾರತಮ್ಯದಿಂದಾಗಿ ಮಂಗಳವಾರ ರಥೋತ್ಸವವನ್ನು ಬಹಿಷ್ಕರಿಸುವುದಾಗಿ ಬಿಷಪ್ ಜೀವನಂದಂ ಅಮಲನಾಥನ್ ತಿಳಿಸಿದರು ಎಂದು ‘ಟಿಎನ್‌ಐಇ’ ವರದಿ ಮಾಡಿದೆ.

ದಲಿತ ಕ್ರೈಸ್ತರಿಗೆ ಸಮಾನ ಹಕ್ಕುಗಳನ್ನು ನೀಡದಿರಲು ಪ್ರಬಲ ಜಾತಿಯ ಕ್ರೈಸ್ತರು ತಮ್ಮ ನಿಲುವಿನಲ್ಲಿ ಹಠಮಾರಿ ಎಂದು ಅವರು ಹೇಳಿದರು. ಆದರೂ, ಚರ್ಚ್ ಯಾರ ವಿರುದ್ಧವೂ ತಾರತಮ್ಯ ಮಾಡಿಲ್ಲ ಎಂದು ಅವರು ಸಮರ್ಥಿಸಿಕೊಂಡರು.

ಆಂಧ್ರಪ್ರದೇಶ: ದಲಿತ ಯುವಕನ ಮೇಲೆ ಅಮಾನವೀಯ ಹಲ್ಲೆ; ಮೂವರ ವಿರುದ್ಧ ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....