Homeದಲಿತ್ ಫೈಲ್ಸ್ತಮಿಳುನಾಡಿನ ಚರ್ಚ್‌ನಲ್ಲಿ ಜಾತಿ ತಾರತಮ್ಯ; ದಲಿತ ಕ್ರೈಸ್ತರಿಂದ ಉಪವಾಸ ಸತ್ಯಾಗ್ರಹ

ತಮಿಳುನಾಡಿನ ಚರ್ಚ್‌ನಲ್ಲಿ ಜಾತಿ ತಾರತಮ್ಯ; ದಲಿತ ಕ್ರೈಸ್ತರಿಂದ ಉಪವಾಸ ಸತ್ಯಾಗ್ರಹ

- Advertisement -
- Advertisement -

ತಮಿಳುನಾಡಿನ ತಿರುಚಿಯ ತುರೈಯೂರ್ ಬಳಿಯ ಕೊಟ್ಟಪಾಳಯಂ ಗ್ರಾಮದ ದಲಿತ ಕ್ರೈಸ್ತರ ಗುಂಪೊಂದು ಜಿಲ್ಲಾಧೀಕಾರಿಗಳ ಕಷೇರಿ ಎದುರು ಸೋಮವಾರ ಉಪವಾಸ ಸತ್ಯಾಗ್ರಹ ನಡೆಸಿದರು. “ಚರ್ಚ್‌ನಲ್ಲಿ ತಾವು ತಾರತಮ್ಯವನ್ನು ಎದುರಿಸುತ್ತಿದ್ದೇವೆ, ಶತಮಾನಗಳಷ್ಟು ಹಳೆಯದಾದ ಸೇಂಟ್ ಮೇರಿ ಮ್ಯಾಗ್ಡಲೀನ್ ಚರ್ಚ್‌ನ ಉತ್ಸವ ಮತ್ತು ಇತರ ಚಟುವಟಿಕೆಗಳಲ್ಲಿ ಭಾಗವಹಿಸಲು ನಮಗೆ ಅವಕಾಶ ನೀಡುತ್ತಿಲ್ಲ” ಎಂದು ಆರೋಪಿಸಿದರು.

ಜುಲೈ 14 ರಂದು ಉತ್ಸವ ಪ್ರಾರಂಭವಾಯಿತು. ಕುಂಭಕೋಣಂನ ರೋಮನ್ ಕ್ಯಾಥೋಲಿಕ್ ಡಯಾಸಿಸ್ ಅಡಿಯಲ್ಲಿ ಚರ್ಚ್ ಕಾರ್ಯನಿರ್ವಹಿಸುತ್ತದೆ. “ಪ್ಯಾರಿಷ್‌ನಲ್ಲಿ ನಡೆಯುತ್ತಿರುವ ಜಾತಿ ತಾರತಮ್ಯ”ದ ವಿರುದ್ಧ ತಮ್ಮ ಪ್ರತಿಭಟನೆಯನ್ನು ದಾಖಲಿಸಲು ಮಂಗಳವಾರ ನಿಗದಿಯಾಗಿರುವ ರಥ ಮೆರವಣಿಗೆಯಲ್ಲಿ ಭಾಗವಹಿಸುವುದಿಲ್ಲ ಎಂದು ಬಿಷಪ್ ಜೀವನಂದಂ ಅಮಲನಾಥನ್ ಹೇಳಿದರು.

ದಶಕಗಳಿಂದ, ತಮಗೆ ಚರ್ಚ್‌ಗೆ ಚಂದಾದಾರಿಕೆ ಪಾವತಿಸಲು ಅವಕಾಶವಿಲ್ಲ, ಯೋಜನಾ ಸಮಿತಿಗಳಿಂದ ಹೊರಗಿಡಲಾಗಿದೆ ಎಂದು ದಲಿತ ಕ್ರೈಸ್ತರು ಹೇಳಿದರು. ಇದಲ್ಲದೆ, ಚರ್ಚ್ ರಥವನ್ನು ನಾವು ವಾಸಿಸುವ ಪ್ರದೇಶಕ್ಕೆ ತರುವುದಕ್ಕೆ ಬಿಡುವುದಿಲ್ಲ ಎಂದು ಅವರು ಆರೋಪಿಸಿದರು. “ಇದು ನಮ್ಮ ಹಬ್ಬವಲ್ಲ ಎಂದು ಪಾದ್ರಿ ಮತ್ತು ಹಲವಾರು ಪ್ರಬಲ ಜಾತಿಯ ಕ್ರಿಶ್ಚಿಯನ್ನರು ನಮಗೆ ಹೇಳಿದರು” ಎಂದು ನೋವು ತೋಡಿಕೊಂಡಿದ್ದಾರೆ.

ಇತರರಿಂದ ಸ್ವೀಕರಿಸುವಂತೆ ಚರ್ಚ್ ಆಡಳಿತ  ನಮ್ಮಿಂದ ಚಂದಾ ಸಂಗ್ರಹಿಸಲು ನಿರಾಕರಿಸುತ್ತದೆ. ಬದಲಾಗಿ, ದೇಣಿಗೆ ನೀಡುವಂತೆ ನಮ್ಮನ್ನು ಕೇಳಲಾಗುತ್ತದೆ ಎಂದು ದೀರ್ಘಕಾಲದ ಪ್ಯಾರಿಷನರ್ ಜೆ. ದಾಸ್ ಪ್ರಕಾಶ್ ಹೇಳಿದರು. ಜುಲೈ 6 ರಂದು ನಡೆದ ಉತ್ಸವ ಯೋಜನಾ ಸಭೆಯ ಸಂದರ್ಭದಲ್ಲಿ ದಲಿತರಿಗೆ ಬೆದರಿಕೆ ಹಾಕಿದ್ದಾರೆ ಎಂದು ಹೇಳಲಾದ ಪ್ಯಾರಿಷ್ ಪಾದ್ರಿ ಮತ್ತು ಇತರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ವಾರದ ಕುಂದುಕೊರತೆಗಳ ಸಭೆಯಲ್ಲಿ ಪ್ರತಿಭಟನಾಕಾರರು ಡಿಆರ್‌ಒಗೆ ಅರ್ಜಿ ಸಲ್ಲಿಸಿದರು.

“ನಮ್ಮನ್ನು ಜಾತಿವಾದಿ ಪದಗಳಿಂದ ನಿಂದಿಸಲಾಯಿತು, ಮಧ್ಯಪ್ರವೇಶಿಸದಂತೆ ಎಚ್ಚರಿಸಲಾಯಿತು” ಎಂದು ಮತ್ತೊಬ್ಬ ಸದಸ್ಯರು ಹೇಳಿದರು. ಪ್ಯಾರಿಷನರ್ ಆರ್. ರಾಜ್ ನೊಬಿಲಿ, “ನಾವು ಒಮ್ಮೆ ಚಂದಾದಾರಿಕೆಯನ್ನು ಪಾವತಿಸಿದರೆ, ನಮಗೆ ಪ್ರಶ್ನಿಸುವ ಹಕ್ಕಿದೆ. ಅದಕ್ಕಾಗಿಯೇ ಅವರು ನಮ್ಮಿಂದ ಅದನ್ನು ಸಂಗ್ರಹಿಸುತ್ತಿಲ್ಲ. ಹಬ್ಬದ ಸಮಯದಲ್ಲಿ ಏಳು ರಥಗಳನ್ನು ಓಡಿಸುತ್ತಿದ್ದರೂ, ಚಿಕ್ಕದು ಕೂಡ ನಮ್ಮ ಬೀದಿಗಳಿಗೆ ಪ್ರವೇಶಿಸುವುದಿಲ್ಲ” ಎಂದರು.

“ಜಿಲ್ಲಾ ಆಡಳಿತವು ಕನಿಷ್ಠ ರಥವು ನಮ್ಮ ಪ್ರದೇಶಕ್ಕೆ ಬರುವಂತೆ ನೋಡಿಕೊಳ್ಳಬೇಕು” ಎಂದು ಅವರು ಹೇಳಿದರು. “ಇದು ಸಂವಿಧಾನವು ಖಾತರಿಪಡಿಸಿದ ಸಮಾನತೆಯ ಉಲ್ಲಂಘನೆಯಾಗಿದೆ. ಇದನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರೂ, ಯಾರೂ ಮಧ್ಯಪ್ರವೇಶಿಸಿಲ್ಲ” ಎಂದು ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮಾನವ ಹಕ್ಕುಗಳ ವಕೀಲ ಜೋ ಕೆನಡಿ ಹೇಳಿದರು.

“ಚರ್ಚ್ ಈ ಜಾತಿ ಗೋಡೆಯನ್ನು ಒಳಗಿನಿಂದ ಕೆಡವಬೇಕು” ಎಂದು ಅವರು ಹೇಳಿದರು. ಅವರ ಇತರ ಬೇಡಿಕೆಗಳಲ್ಲಿ ಆಂತರಿಕ ಪ್ಯಾರಿಷ್ ಕೌನ್ಸಿಲ್ ರಚನೆ, ಧಾರ್ಮಿಕ ಮತ್ತು ಉತ್ಸವ ಕಾರ್ಯಕ್ರಮಗಳಲ್ಲಿ ಸಮಾನ ಹಕ್ಕುಗಳು ಮತ್ತು ಜಾತಿ ಆಧಾರಿತ ತಾರತಮ್ಯಕ್ಕಾಗಿ ಕಾನೂನು ಕ್ರಮ ಸೇರಿವೆ. ಪ್ಯಾರಿಷ್‌ನಲ್ಲಿ ನಡೆಯುತ್ತಿರುವ ಜಾತಿ ತಾರತಮ್ಯದಿಂದಾಗಿ ಮಂಗಳವಾರ ರಥೋತ್ಸವವನ್ನು ಬಹಿಷ್ಕರಿಸುವುದಾಗಿ ಬಿಷಪ್ ಜೀವನಂದಂ ಅಮಲನಾಥನ್ ತಿಳಿಸಿದರು ಎಂದು ‘ಟಿಎನ್‌ಐಇ’ ವರದಿ ಮಾಡಿದೆ.

ದಲಿತ ಕ್ರೈಸ್ತರಿಗೆ ಸಮಾನ ಹಕ್ಕುಗಳನ್ನು ನೀಡದಿರಲು ಪ್ರಬಲ ಜಾತಿಯ ಕ್ರೈಸ್ತರು ತಮ್ಮ ನಿಲುವಿನಲ್ಲಿ ಹಠಮಾರಿ ಎಂದು ಅವರು ಹೇಳಿದರು. ಆದರೂ, ಚರ್ಚ್ ಯಾರ ವಿರುದ್ಧವೂ ತಾರತಮ್ಯ ಮಾಡಿಲ್ಲ ಎಂದು ಅವರು ಸಮರ್ಥಿಸಿಕೊಂಡರು.

ಆಂಧ್ರಪ್ರದೇಶ: ದಲಿತ ಯುವಕನ ಮೇಲೆ ಅಮಾನವೀಯ ಹಲ್ಲೆ; ಮೂವರ ವಿರುದ್ಧ ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...