Homeದಲಿತ್ ಫೈಲ್ಸ್ತಮಿಳುನಾಡಿನ ಚರ್ಚ್‌ನಲ್ಲಿ ಜಾತಿ ತಾರತಮ್ಯ; ದಲಿತ ಕ್ರೈಸ್ತರಿಂದ ಉಪವಾಸ ಸತ್ಯಾಗ್ರಹ

ತಮಿಳುನಾಡಿನ ಚರ್ಚ್‌ನಲ್ಲಿ ಜಾತಿ ತಾರತಮ್ಯ; ದಲಿತ ಕ್ರೈಸ್ತರಿಂದ ಉಪವಾಸ ಸತ್ಯಾಗ್ರಹ

- Advertisement -
- Advertisement -

ತಮಿಳುನಾಡಿನ ತಿರುಚಿಯ ತುರೈಯೂರ್ ಬಳಿಯ ಕೊಟ್ಟಪಾಳಯಂ ಗ್ರಾಮದ ದಲಿತ ಕ್ರೈಸ್ತರ ಗುಂಪೊಂದು ಜಿಲ್ಲಾಧೀಕಾರಿಗಳ ಕಷೇರಿ ಎದುರು ಸೋಮವಾರ ಉಪವಾಸ ಸತ್ಯಾಗ್ರಹ ನಡೆಸಿದರು. “ಚರ್ಚ್‌ನಲ್ಲಿ ತಾವು ತಾರತಮ್ಯವನ್ನು ಎದುರಿಸುತ್ತಿದ್ದೇವೆ, ಶತಮಾನಗಳಷ್ಟು ಹಳೆಯದಾದ ಸೇಂಟ್ ಮೇರಿ ಮ್ಯಾಗ್ಡಲೀನ್ ಚರ್ಚ್‌ನ ಉತ್ಸವ ಮತ್ತು ಇತರ ಚಟುವಟಿಕೆಗಳಲ್ಲಿ ಭಾಗವಹಿಸಲು ನಮಗೆ ಅವಕಾಶ ನೀಡುತ್ತಿಲ್ಲ” ಎಂದು ಆರೋಪಿಸಿದರು.

ಜುಲೈ 14 ರಂದು ಉತ್ಸವ ಪ್ರಾರಂಭವಾಯಿತು. ಕುಂಭಕೋಣಂನ ರೋಮನ್ ಕ್ಯಾಥೋಲಿಕ್ ಡಯಾಸಿಸ್ ಅಡಿಯಲ್ಲಿ ಚರ್ಚ್ ಕಾರ್ಯನಿರ್ವಹಿಸುತ್ತದೆ. “ಪ್ಯಾರಿಷ್‌ನಲ್ಲಿ ನಡೆಯುತ್ತಿರುವ ಜಾತಿ ತಾರತಮ್ಯ”ದ ವಿರುದ್ಧ ತಮ್ಮ ಪ್ರತಿಭಟನೆಯನ್ನು ದಾಖಲಿಸಲು ಮಂಗಳವಾರ ನಿಗದಿಯಾಗಿರುವ ರಥ ಮೆರವಣಿಗೆಯಲ್ಲಿ ಭಾಗವಹಿಸುವುದಿಲ್ಲ ಎಂದು ಬಿಷಪ್ ಜೀವನಂದಂ ಅಮಲನಾಥನ್ ಹೇಳಿದರು.

ದಶಕಗಳಿಂದ, ತಮಗೆ ಚರ್ಚ್‌ಗೆ ಚಂದಾದಾರಿಕೆ ಪಾವತಿಸಲು ಅವಕಾಶವಿಲ್ಲ, ಯೋಜನಾ ಸಮಿತಿಗಳಿಂದ ಹೊರಗಿಡಲಾಗಿದೆ ಎಂದು ದಲಿತ ಕ್ರೈಸ್ತರು ಹೇಳಿದರು. ಇದಲ್ಲದೆ, ಚರ್ಚ್ ರಥವನ್ನು ನಾವು ವಾಸಿಸುವ ಪ್ರದೇಶಕ್ಕೆ ತರುವುದಕ್ಕೆ ಬಿಡುವುದಿಲ್ಲ ಎಂದು ಅವರು ಆರೋಪಿಸಿದರು. “ಇದು ನಮ್ಮ ಹಬ್ಬವಲ್ಲ ಎಂದು ಪಾದ್ರಿ ಮತ್ತು ಹಲವಾರು ಪ್ರಬಲ ಜಾತಿಯ ಕ್ರಿಶ್ಚಿಯನ್ನರು ನಮಗೆ ಹೇಳಿದರು” ಎಂದು ನೋವು ತೋಡಿಕೊಂಡಿದ್ದಾರೆ.

ಇತರರಿಂದ ಸ್ವೀಕರಿಸುವಂತೆ ಚರ್ಚ್ ಆಡಳಿತ  ನಮ್ಮಿಂದ ಚಂದಾ ಸಂಗ್ರಹಿಸಲು ನಿರಾಕರಿಸುತ್ತದೆ. ಬದಲಾಗಿ, ದೇಣಿಗೆ ನೀಡುವಂತೆ ನಮ್ಮನ್ನು ಕೇಳಲಾಗುತ್ತದೆ ಎಂದು ದೀರ್ಘಕಾಲದ ಪ್ಯಾರಿಷನರ್ ಜೆ. ದಾಸ್ ಪ್ರಕಾಶ್ ಹೇಳಿದರು. ಜುಲೈ 6 ರಂದು ನಡೆದ ಉತ್ಸವ ಯೋಜನಾ ಸಭೆಯ ಸಂದರ್ಭದಲ್ಲಿ ದಲಿತರಿಗೆ ಬೆದರಿಕೆ ಹಾಕಿದ್ದಾರೆ ಎಂದು ಹೇಳಲಾದ ಪ್ಯಾರಿಷ್ ಪಾದ್ರಿ ಮತ್ತು ಇತರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ವಾರದ ಕುಂದುಕೊರತೆಗಳ ಸಭೆಯಲ್ಲಿ ಪ್ರತಿಭಟನಾಕಾರರು ಡಿಆರ್‌ಒಗೆ ಅರ್ಜಿ ಸಲ್ಲಿಸಿದರು.

“ನಮ್ಮನ್ನು ಜಾತಿವಾದಿ ಪದಗಳಿಂದ ನಿಂದಿಸಲಾಯಿತು, ಮಧ್ಯಪ್ರವೇಶಿಸದಂತೆ ಎಚ್ಚರಿಸಲಾಯಿತು” ಎಂದು ಮತ್ತೊಬ್ಬ ಸದಸ್ಯರು ಹೇಳಿದರು. ಪ್ಯಾರಿಷನರ್ ಆರ್. ರಾಜ್ ನೊಬಿಲಿ, “ನಾವು ಒಮ್ಮೆ ಚಂದಾದಾರಿಕೆಯನ್ನು ಪಾವತಿಸಿದರೆ, ನಮಗೆ ಪ್ರಶ್ನಿಸುವ ಹಕ್ಕಿದೆ. ಅದಕ್ಕಾಗಿಯೇ ಅವರು ನಮ್ಮಿಂದ ಅದನ್ನು ಸಂಗ್ರಹಿಸುತ್ತಿಲ್ಲ. ಹಬ್ಬದ ಸಮಯದಲ್ಲಿ ಏಳು ರಥಗಳನ್ನು ಓಡಿಸುತ್ತಿದ್ದರೂ, ಚಿಕ್ಕದು ಕೂಡ ನಮ್ಮ ಬೀದಿಗಳಿಗೆ ಪ್ರವೇಶಿಸುವುದಿಲ್ಲ” ಎಂದರು.

“ಜಿಲ್ಲಾ ಆಡಳಿತವು ಕನಿಷ್ಠ ರಥವು ನಮ್ಮ ಪ್ರದೇಶಕ್ಕೆ ಬರುವಂತೆ ನೋಡಿಕೊಳ್ಳಬೇಕು” ಎಂದು ಅವರು ಹೇಳಿದರು. “ಇದು ಸಂವಿಧಾನವು ಖಾತರಿಪಡಿಸಿದ ಸಮಾನತೆಯ ಉಲ್ಲಂಘನೆಯಾಗಿದೆ. ಇದನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರೂ, ಯಾರೂ ಮಧ್ಯಪ್ರವೇಶಿಸಿಲ್ಲ” ಎಂದು ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮಾನವ ಹಕ್ಕುಗಳ ವಕೀಲ ಜೋ ಕೆನಡಿ ಹೇಳಿದರು.

“ಚರ್ಚ್ ಈ ಜಾತಿ ಗೋಡೆಯನ್ನು ಒಳಗಿನಿಂದ ಕೆಡವಬೇಕು” ಎಂದು ಅವರು ಹೇಳಿದರು. ಅವರ ಇತರ ಬೇಡಿಕೆಗಳಲ್ಲಿ ಆಂತರಿಕ ಪ್ಯಾರಿಷ್ ಕೌನ್ಸಿಲ್ ರಚನೆ, ಧಾರ್ಮಿಕ ಮತ್ತು ಉತ್ಸವ ಕಾರ್ಯಕ್ರಮಗಳಲ್ಲಿ ಸಮಾನ ಹಕ್ಕುಗಳು ಮತ್ತು ಜಾತಿ ಆಧಾರಿತ ತಾರತಮ್ಯಕ್ಕಾಗಿ ಕಾನೂನು ಕ್ರಮ ಸೇರಿವೆ. ಪ್ಯಾರಿಷ್‌ನಲ್ಲಿ ನಡೆಯುತ್ತಿರುವ ಜಾತಿ ತಾರತಮ್ಯದಿಂದಾಗಿ ಮಂಗಳವಾರ ರಥೋತ್ಸವವನ್ನು ಬಹಿಷ್ಕರಿಸುವುದಾಗಿ ಬಿಷಪ್ ಜೀವನಂದಂ ಅಮಲನಾಥನ್ ತಿಳಿಸಿದರು ಎಂದು ‘ಟಿಎನ್‌ಐಇ’ ವರದಿ ಮಾಡಿದೆ.

ದಲಿತ ಕ್ರೈಸ್ತರಿಗೆ ಸಮಾನ ಹಕ್ಕುಗಳನ್ನು ನೀಡದಿರಲು ಪ್ರಬಲ ಜಾತಿಯ ಕ್ರೈಸ್ತರು ತಮ್ಮ ನಿಲುವಿನಲ್ಲಿ ಹಠಮಾರಿ ಎಂದು ಅವರು ಹೇಳಿದರು. ಆದರೂ, ಚರ್ಚ್ ಯಾರ ವಿರುದ್ಧವೂ ತಾರತಮ್ಯ ಮಾಡಿಲ್ಲ ಎಂದು ಅವರು ಸಮರ್ಥಿಸಿಕೊಂಡರು.

ಆಂಧ್ರಪ್ರದೇಶ: ದಲಿತ ಯುವಕನ ಮೇಲೆ ಅಮಾನವೀಯ ಹಲ್ಲೆ; ಮೂವರ ವಿರುದ್ಧ ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...