Homeದಲಿತ್ ಫೈಲ್ಸ್ತಮಿಳುನಾಡಿನ ಚರ್ಚ್‌ನಲ್ಲಿ ಜಾತಿ ತಾರತಮ್ಯ; ದಲಿತ ಕ್ರೈಸ್ತರಿಂದ ಉಪವಾಸ ಸತ್ಯಾಗ್ರಹ

ತಮಿಳುನಾಡಿನ ಚರ್ಚ್‌ನಲ್ಲಿ ಜಾತಿ ತಾರತಮ್ಯ; ದಲಿತ ಕ್ರೈಸ್ತರಿಂದ ಉಪವಾಸ ಸತ್ಯಾಗ್ರಹ

- Advertisement -
- Advertisement -

ತಮಿಳುನಾಡಿನ ತಿರುಚಿಯ ತುರೈಯೂರ್ ಬಳಿಯ ಕೊಟ್ಟಪಾಳಯಂ ಗ್ರಾಮದ ದಲಿತ ಕ್ರೈಸ್ತರ ಗುಂಪೊಂದು ಜಿಲ್ಲಾಧೀಕಾರಿಗಳ ಕಷೇರಿ ಎದುರು ಸೋಮವಾರ ಉಪವಾಸ ಸತ್ಯಾಗ್ರಹ ನಡೆಸಿದರು. “ಚರ್ಚ್‌ನಲ್ಲಿ ತಾವು ತಾರತಮ್ಯವನ್ನು ಎದುರಿಸುತ್ತಿದ್ದೇವೆ, ಶತಮಾನಗಳಷ್ಟು ಹಳೆಯದಾದ ಸೇಂಟ್ ಮೇರಿ ಮ್ಯಾಗ್ಡಲೀನ್ ಚರ್ಚ್‌ನ ಉತ್ಸವ ಮತ್ತು ಇತರ ಚಟುವಟಿಕೆಗಳಲ್ಲಿ ಭಾಗವಹಿಸಲು ನಮಗೆ ಅವಕಾಶ ನೀಡುತ್ತಿಲ್ಲ” ಎಂದು ಆರೋಪಿಸಿದರು.

ಜುಲೈ 14 ರಂದು ಉತ್ಸವ ಪ್ರಾರಂಭವಾಯಿತು. ಕುಂಭಕೋಣಂನ ರೋಮನ್ ಕ್ಯಾಥೋಲಿಕ್ ಡಯಾಸಿಸ್ ಅಡಿಯಲ್ಲಿ ಚರ್ಚ್ ಕಾರ್ಯನಿರ್ವಹಿಸುತ್ತದೆ. “ಪ್ಯಾರಿಷ್‌ನಲ್ಲಿ ನಡೆಯುತ್ತಿರುವ ಜಾತಿ ತಾರತಮ್ಯ”ದ ವಿರುದ್ಧ ತಮ್ಮ ಪ್ರತಿಭಟನೆಯನ್ನು ದಾಖಲಿಸಲು ಮಂಗಳವಾರ ನಿಗದಿಯಾಗಿರುವ ರಥ ಮೆರವಣಿಗೆಯಲ್ಲಿ ಭಾಗವಹಿಸುವುದಿಲ್ಲ ಎಂದು ಬಿಷಪ್ ಜೀವನಂದಂ ಅಮಲನಾಥನ್ ಹೇಳಿದರು.

ದಶಕಗಳಿಂದ, ತಮಗೆ ಚರ್ಚ್‌ಗೆ ಚಂದಾದಾರಿಕೆ ಪಾವತಿಸಲು ಅವಕಾಶವಿಲ್ಲ, ಯೋಜನಾ ಸಮಿತಿಗಳಿಂದ ಹೊರಗಿಡಲಾಗಿದೆ ಎಂದು ದಲಿತ ಕ್ರೈಸ್ತರು ಹೇಳಿದರು. ಇದಲ್ಲದೆ, ಚರ್ಚ್ ರಥವನ್ನು ನಾವು ವಾಸಿಸುವ ಪ್ರದೇಶಕ್ಕೆ ತರುವುದಕ್ಕೆ ಬಿಡುವುದಿಲ್ಲ ಎಂದು ಅವರು ಆರೋಪಿಸಿದರು. “ಇದು ನಮ್ಮ ಹಬ್ಬವಲ್ಲ ಎಂದು ಪಾದ್ರಿ ಮತ್ತು ಹಲವಾರು ಪ್ರಬಲ ಜಾತಿಯ ಕ್ರಿಶ್ಚಿಯನ್ನರು ನಮಗೆ ಹೇಳಿದರು” ಎಂದು ನೋವು ತೋಡಿಕೊಂಡಿದ್ದಾರೆ.

ಇತರರಿಂದ ಸ್ವೀಕರಿಸುವಂತೆ ಚರ್ಚ್ ಆಡಳಿತ  ನಮ್ಮಿಂದ ಚಂದಾ ಸಂಗ್ರಹಿಸಲು ನಿರಾಕರಿಸುತ್ತದೆ. ಬದಲಾಗಿ, ದೇಣಿಗೆ ನೀಡುವಂತೆ ನಮ್ಮನ್ನು ಕೇಳಲಾಗುತ್ತದೆ ಎಂದು ದೀರ್ಘಕಾಲದ ಪ್ಯಾರಿಷನರ್ ಜೆ. ದಾಸ್ ಪ್ರಕಾಶ್ ಹೇಳಿದರು. ಜುಲೈ 6 ರಂದು ನಡೆದ ಉತ್ಸವ ಯೋಜನಾ ಸಭೆಯ ಸಂದರ್ಭದಲ್ಲಿ ದಲಿತರಿಗೆ ಬೆದರಿಕೆ ಹಾಕಿದ್ದಾರೆ ಎಂದು ಹೇಳಲಾದ ಪ್ಯಾರಿಷ್ ಪಾದ್ರಿ ಮತ್ತು ಇತರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ವಾರದ ಕುಂದುಕೊರತೆಗಳ ಸಭೆಯಲ್ಲಿ ಪ್ರತಿಭಟನಾಕಾರರು ಡಿಆರ್‌ಒಗೆ ಅರ್ಜಿ ಸಲ್ಲಿಸಿದರು.

“ನಮ್ಮನ್ನು ಜಾತಿವಾದಿ ಪದಗಳಿಂದ ನಿಂದಿಸಲಾಯಿತು, ಮಧ್ಯಪ್ರವೇಶಿಸದಂತೆ ಎಚ್ಚರಿಸಲಾಯಿತು” ಎಂದು ಮತ್ತೊಬ್ಬ ಸದಸ್ಯರು ಹೇಳಿದರು. ಪ್ಯಾರಿಷನರ್ ಆರ್. ರಾಜ್ ನೊಬಿಲಿ, “ನಾವು ಒಮ್ಮೆ ಚಂದಾದಾರಿಕೆಯನ್ನು ಪಾವತಿಸಿದರೆ, ನಮಗೆ ಪ್ರಶ್ನಿಸುವ ಹಕ್ಕಿದೆ. ಅದಕ್ಕಾಗಿಯೇ ಅವರು ನಮ್ಮಿಂದ ಅದನ್ನು ಸಂಗ್ರಹಿಸುತ್ತಿಲ್ಲ. ಹಬ್ಬದ ಸಮಯದಲ್ಲಿ ಏಳು ರಥಗಳನ್ನು ಓಡಿಸುತ್ತಿದ್ದರೂ, ಚಿಕ್ಕದು ಕೂಡ ನಮ್ಮ ಬೀದಿಗಳಿಗೆ ಪ್ರವೇಶಿಸುವುದಿಲ್ಲ” ಎಂದರು.

“ಜಿಲ್ಲಾ ಆಡಳಿತವು ಕನಿಷ್ಠ ರಥವು ನಮ್ಮ ಪ್ರದೇಶಕ್ಕೆ ಬರುವಂತೆ ನೋಡಿಕೊಳ್ಳಬೇಕು” ಎಂದು ಅವರು ಹೇಳಿದರು. “ಇದು ಸಂವಿಧಾನವು ಖಾತರಿಪಡಿಸಿದ ಸಮಾನತೆಯ ಉಲ್ಲಂಘನೆಯಾಗಿದೆ. ಇದನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರೂ, ಯಾರೂ ಮಧ್ಯಪ್ರವೇಶಿಸಿಲ್ಲ” ಎಂದು ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮಾನವ ಹಕ್ಕುಗಳ ವಕೀಲ ಜೋ ಕೆನಡಿ ಹೇಳಿದರು.

“ಚರ್ಚ್ ಈ ಜಾತಿ ಗೋಡೆಯನ್ನು ಒಳಗಿನಿಂದ ಕೆಡವಬೇಕು” ಎಂದು ಅವರು ಹೇಳಿದರು. ಅವರ ಇತರ ಬೇಡಿಕೆಗಳಲ್ಲಿ ಆಂತರಿಕ ಪ್ಯಾರಿಷ್ ಕೌನ್ಸಿಲ್ ರಚನೆ, ಧಾರ್ಮಿಕ ಮತ್ತು ಉತ್ಸವ ಕಾರ್ಯಕ್ರಮಗಳಲ್ಲಿ ಸಮಾನ ಹಕ್ಕುಗಳು ಮತ್ತು ಜಾತಿ ಆಧಾರಿತ ತಾರತಮ್ಯಕ್ಕಾಗಿ ಕಾನೂನು ಕ್ರಮ ಸೇರಿವೆ. ಪ್ಯಾರಿಷ್‌ನಲ್ಲಿ ನಡೆಯುತ್ತಿರುವ ಜಾತಿ ತಾರತಮ್ಯದಿಂದಾಗಿ ಮಂಗಳವಾರ ರಥೋತ್ಸವವನ್ನು ಬಹಿಷ್ಕರಿಸುವುದಾಗಿ ಬಿಷಪ್ ಜೀವನಂದಂ ಅಮಲನಾಥನ್ ತಿಳಿಸಿದರು ಎಂದು ‘ಟಿಎನ್‌ಐಇ’ ವರದಿ ಮಾಡಿದೆ.

ದಲಿತ ಕ್ರೈಸ್ತರಿಗೆ ಸಮಾನ ಹಕ್ಕುಗಳನ್ನು ನೀಡದಿರಲು ಪ್ರಬಲ ಜಾತಿಯ ಕ್ರೈಸ್ತರು ತಮ್ಮ ನಿಲುವಿನಲ್ಲಿ ಹಠಮಾರಿ ಎಂದು ಅವರು ಹೇಳಿದರು. ಆದರೂ, ಚರ್ಚ್ ಯಾರ ವಿರುದ್ಧವೂ ತಾರತಮ್ಯ ಮಾಡಿಲ್ಲ ಎಂದು ಅವರು ಸಮರ್ಥಿಸಿಕೊಂಡರು.

ಆಂಧ್ರಪ್ರದೇಶ: ದಲಿತ ಯುವಕನ ಮೇಲೆ ಅಮಾನವೀಯ ಹಲ್ಲೆ; ಮೂವರ ವಿರುದ್ಧ ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...