Homeದಲಿತ್ ಫೈಲ್ಸ್ತಮಿಳುನಾಡಿನ ಚರ್ಚ್‌ನಲ್ಲಿ ಜಾತಿ ತಾರತಮ್ಯ; ದಲಿತ ಕ್ರೈಸ್ತರಿಂದ ಉಪವಾಸ ಸತ್ಯಾಗ್ರಹ

ತಮಿಳುನಾಡಿನ ಚರ್ಚ್‌ನಲ್ಲಿ ಜಾತಿ ತಾರತಮ್ಯ; ದಲಿತ ಕ್ರೈಸ್ತರಿಂದ ಉಪವಾಸ ಸತ್ಯಾಗ್ರಹ

- Advertisement -
- Advertisement -

ತಮಿಳುನಾಡಿನ ತಿರುಚಿಯ ತುರೈಯೂರ್ ಬಳಿಯ ಕೊಟ್ಟಪಾಳಯಂ ಗ್ರಾಮದ ದಲಿತ ಕ್ರೈಸ್ತರ ಗುಂಪೊಂದು ಜಿಲ್ಲಾಧೀಕಾರಿಗಳ ಕಷೇರಿ ಎದುರು ಸೋಮವಾರ ಉಪವಾಸ ಸತ್ಯಾಗ್ರಹ ನಡೆಸಿದರು. “ಚರ್ಚ್‌ನಲ್ಲಿ ತಾವು ತಾರತಮ್ಯವನ್ನು ಎದುರಿಸುತ್ತಿದ್ದೇವೆ, ಶತಮಾನಗಳಷ್ಟು ಹಳೆಯದಾದ ಸೇಂಟ್ ಮೇರಿ ಮ್ಯಾಗ್ಡಲೀನ್ ಚರ್ಚ್‌ನ ಉತ್ಸವ ಮತ್ತು ಇತರ ಚಟುವಟಿಕೆಗಳಲ್ಲಿ ಭಾಗವಹಿಸಲು ನಮಗೆ ಅವಕಾಶ ನೀಡುತ್ತಿಲ್ಲ” ಎಂದು ಆರೋಪಿಸಿದರು.

ಜುಲೈ 14 ರಂದು ಉತ್ಸವ ಪ್ರಾರಂಭವಾಯಿತು. ಕುಂಭಕೋಣಂನ ರೋಮನ್ ಕ್ಯಾಥೋಲಿಕ್ ಡಯಾಸಿಸ್ ಅಡಿಯಲ್ಲಿ ಚರ್ಚ್ ಕಾರ್ಯನಿರ್ವಹಿಸುತ್ತದೆ. “ಪ್ಯಾರಿಷ್‌ನಲ್ಲಿ ನಡೆಯುತ್ತಿರುವ ಜಾತಿ ತಾರತಮ್ಯ”ದ ವಿರುದ್ಧ ತಮ್ಮ ಪ್ರತಿಭಟನೆಯನ್ನು ದಾಖಲಿಸಲು ಮಂಗಳವಾರ ನಿಗದಿಯಾಗಿರುವ ರಥ ಮೆರವಣಿಗೆಯಲ್ಲಿ ಭಾಗವಹಿಸುವುದಿಲ್ಲ ಎಂದು ಬಿಷಪ್ ಜೀವನಂದಂ ಅಮಲನಾಥನ್ ಹೇಳಿದರು.

ದಶಕಗಳಿಂದ, ತಮಗೆ ಚರ್ಚ್‌ಗೆ ಚಂದಾದಾರಿಕೆ ಪಾವತಿಸಲು ಅವಕಾಶವಿಲ್ಲ, ಯೋಜನಾ ಸಮಿತಿಗಳಿಂದ ಹೊರಗಿಡಲಾಗಿದೆ ಎಂದು ದಲಿತ ಕ್ರೈಸ್ತರು ಹೇಳಿದರು. ಇದಲ್ಲದೆ, ಚರ್ಚ್ ರಥವನ್ನು ನಾವು ವಾಸಿಸುವ ಪ್ರದೇಶಕ್ಕೆ ತರುವುದಕ್ಕೆ ಬಿಡುವುದಿಲ್ಲ ಎಂದು ಅವರು ಆರೋಪಿಸಿದರು. “ಇದು ನಮ್ಮ ಹಬ್ಬವಲ್ಲ ಎಂದು ಪಾದ್ರಿ ಮತ್ತು ಹಲವಾರು ಪ್ರಬಲ ಜಾತಿಯ ಕ್ರಿಶ್ಚಿಯನ್ನರು ನಮಗೆ ಹೇಳಿದರು” ಎಂದು ನೋವು ತೋಡಿಕೊಂಡಿದ್ದಾರೆ.

ಇತರರಿಂದ ಸ್ವೀಕರಿಸುವಂತೆ ಚರ್ಚ್ ಆಡಳಿತ  ನಮ್ಮಿಂದ ಚಂದಾ ಸಂಗ್ರಹಿಸಲು ನಿರಾಕರಿಸುತ್ತದೆ. ಬದಲಾಗಿ, ದೇಣಿಗೆ ನೀಡುವಂತೆ ನಮ್ಮನ್ನು ಕೇಳಲಾಗುತ್ತದೆ ಎಂದು ದೀರ್ಘಕಾಲದ ಪ್ಯಾರಿಷನರ್ ಜೆ. ದಾಸ್ ಪ್ರಕಾಶ್ ಹೇಳಿದರು. ಜುಲೈ 6 ರಂದು ನಡೆದ ಉತ್ಸವ ಯೋಜನಾ ಸಭೆಯ ಸಂದರ್ಭದಲ್ಲಿ ದಲಿತರಿಗೆ ಬೆದರಿಕೆ ಹಾಕಿದ್ದಾರೆ ಎಂದು ಹೇಳಲಾದ ಪ್ಯಾರಿಷ್ ಪಾದ್ರಿ ಮತ್ತು ಇತರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ವಾರದ ಕುಂದುಕೊರತೆಗಳ ಸಭೆಯಲ್ಲಿ ಪ್ರತಿಭಟನಾಕಾರರು ಡಿಆರ್‌ಒಗೆ ಅರ್ಜಿ ಸಲ್ಲಿಸಿದರು.

“ನಮ್ಮನ್ನು ಜಾತಿವಾದಿ ಪದಗಳಿಂದ ನಿಂದಿಸಲಾಯಿತು, ಮಧ್ಯಪ್ರವೇಶಿಸದಂತೆ ಎಚ್ಚರಿಸಲಾಯಿತು” ಎಂದು ಮತ್ತೊಬ್ಬ ಸದಸ್ಯರು ಹೇಳಿದರು. ಪ್ಯಾರಿಷನರ್ ಆರ್. ರಾಜ್ ನೊಬಿಲಿ, “ನಾವು ಒಮ್ಮೆ ಚಂದಾದಾರಿಕೆಯನ್ನು ಪಾವತಿಸಿದರೆ, ನಮಗೆ ಪ್ರಶ್ನಿಸುವ ಹಕ್ಕಿದೆ. ಅದಕ್ಕಾಗಿಯೇ ಅವರು ನಮ್ಮಿಂದ ಅದನ್ನು ಸಂಗ್ರಹಿಸುತ್ತಿಲ್ಲ. ಹಬ್ಬದ ಸಮಯದಲ್ಲಿ ಏಳು ರಥಗಳನ್ನು ಓಡಿಸುತ್ತಿದ್ದರೂ, ಚಿಕ್ಕದು ಕೂಡ ನಮ್ಮ ಬೀದಿಗಳಿಗೆ ಪ್ರವೇಶಿಸುವುದಿಲ್ಲ” ಎಂದರು.

“ಜಿಲ್ಲಾ ಆಡಳಿತವು ಕನಿಷ್ಠ ರಥವು ನಮ್ಮ ಪ್ರದೇಶಕ್ಕೆ ಬರುವಂತೆ ನೋಡಿಕೊಳ್ಳಬೇಕು” ಎಂದು ಅವರು ಹೇಳಿದರು. “ಇದು ಸಂವಿಧಾನವು ಖಾತರಿಪಡಿಸಿದ ಸಮಾನತೆಯ ಉಲ್ಲಂಘನೆಯಾಗಿದೆ. ಇದನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರೂ, ಯಾರೂ ಮಧ್ಯಪ್ರವೇಶಿಸಿಲ್ಲ” ಎಂದು ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮಾನವ ಹಕ್ಕುಗಳ ವಕೀಲ ಜೋ ಕೆನಡಿ ಹೇಳಿದರು.

“ಚರ್ಚ್ ಈ ಜಾತಿ ಗೋಡೆಯನ್ನು ಒಳಗಿನಿಂದ ಕೆಡವಬೇಕು” ಎಂದು ಅವರು ಹೇಳಿದರು. ಅವರ ಇತರ ಬೇಡಿಕೆಗಳಲ್ಲಿ ಆಂತರಿಕ ಪ್ಯಾರಿಷ್ ಕೌನ್ಸಿಲ್ ರಚನೆ, ಧಾರ್ಮಿಕ ಮತ್ತು ಉತ್ಸವ ಕಾರ್ಯಕ್ರಮಗಳಲ್ಲಿ ಸಮಾನ ಹಕ್ಕುಗಳು ಮತ್ತು ಜಾತಿ ಆಧಾರಿತ ತಾರತಮ್ಯಕ್ಕಾಗಿ ಕಾನೂನು ಕ್ರಮ ಸೇರಿವೆ. ಪ್ಯಾರಿಷ್‌ನಲ್ಲಿ ನಡೆಯುತ್ತಿರುವ ಜಾತಿ ತಾರತಮ್ಯದಿಂದಾಗಿ ಮಂಗಳವಾರ ರಥೋತ್ಸವವನ್ನು ಬಹಿಷ್ಕರಿಸುವುದಾಗಿ ಬಿಷಪ್ ಜೀವನಂದಂ ಅಮಲನಾಥನ್ ತಿಳಿಸಿದರು ಎಂದು ‘ಟಿಎನ್‌ಐಇ’ ವರದಿ ಮಾಡಿದೆ.

ದಲಿತ ಕ್ರೈಸ್ತರಿಗೆ ಸಮಾನ ಹಕ್ಕುಗಳನ್ನು ನೀಡದಿರಲು ಪ್ರಬಲ ಜಾತಿಯ ಕ್ರೈಸ್ತರು ತಮ್ಮ ನಿಲುವಿನಲ್ಲಿ ಹಠಮಾರಿ ಎಂದು ಅವರು ಹೇಳಿದರು. ಆದರೂ, ಚರ್ಚ್ ಯಾರ ವಿರುದ್ಧವೂ ತಾರತಮ್ಯ ಮಾಡಿಲ್ಲ ಎಂದು ಅವರು ಸಮರ್ಥಿಸಿಕೊಂಡರು.

ಆಂಧ್ರಪ್ರದೇಶ: ದಲಿತ ಯುವಕನ ಮೇಲೆ ಅಮಾನವೀಯ ಹಲ್ಲೆ; ಮೂವರ ವಿರುದ್ಧ ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....