Homeಮುಖಪುಟಭಾರತದಲ್ಲಿ ಮಕ್ಕಳ ಕುಬ್ಜತೆ ಹೆಚ್ಚಳಕ್ಕೆ ಜಾತಿ ತಾರತಮ್ಯ ಕಾರಣ : ಅಧ್ಯಯನ ವರದಿ

ಭಾರತದಲ್ಲಿ ಮಕ್ಕಳ ಕುಬ್ಜತೆ ಹೆಚ್ಚಳಕ್ಕೆ ಜಾತಿ ತಾರತಮ್ಯ ಕಾರಣ : ಅಧ್ಯಯನ ವರದಿ

- Advertisement -
- Advertisement -

ಭಾರತವು ಅರ್ಥಿಕವಾಗಿ ಸದೃಢವಾಗುತ್ತಿರುವ ಹೊರತಾಗಿಯೂ ದೇಶದಲ್ಲಿ ಪ್ರಾಯಕ್ಕೆ ಸರಿಯಾದ ದೇಹದ ಬೆಳವಣಿಗೆಯಿರದ (ಕುಬ್ಜ) ಮಕ್ಕಳ ಸಂಖ್ಯೆಯು ಸಬ್-ಸಹರನ್ ಆಫ್ರಿಕಾದ ರಾಷ್ಟ್ರಗಳ ಮಕ್ಕಳಿಗಿಂತ ಹೆಚ್ಚಿದೆ. ಭಾರತದಲ್ಲಿ ಜಾತಿ ತಾರತಮ್ಯ ಅಧಿಕವಾಗಿರುವುದೇ ಇದಕ್ಕೆ ಕಾರಣವೆಂದು ‘ಜರ್ನಲ್ ಆಫ್ ಇಕನಾಮಿಕ್ಸ್, ರೇಸ್ ಆ್ಯಂಡ್ ಪಾಲಿಸಿ‘ ನಿಯತಕಾಲಿಕೆ ಅಕ್ಟೋಬರ್ 26ರಂದು ಪ್ರಕಟಿಸಿದ ಅಧ್ಯಯನ ವರದಿಯಯಲ್ಲಿ ತಿಳಿಸಿದೆ.

ಅರ್ಥಶಾಸ್ತ್ರಜ್ಞರಾದ ಅಶ್ವಿನಿ ದೇಶಪಾಂಡೆ ಮತ್ತು ರಾಜೇಶ್ ರಾಮಚಂದ್ರನ್ ಅವರು ರಚಿಸಿರುವ ಅಧ್ಯಯನ ವರದಿಯಲ್ಲಿ, ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳಂತಹ ಐತಿಹಾಸಿಕವಾಗಿ ಕಡೆಗಣಿಸಲ್ಪಟ್ಟಿರುವ ಸಮುದಾಯಗಳ ಮಕ್ಕಳು ಕುಳ್ಳಗಿರುವ ಸಾಧ್ಯತೆಯು, ಪ್ರಬಲ ಜಾತಿಯ ಮಕ್ಕಳಿಗಿಂತ ಶೇ.50ರಷ್ಟು ಅಧಿಕವೆಂದು  ಹೇಳಲಾಗಿದೆ.

ಪ್ರಬಲ ಪಂಗಡಗಳ ಶೇ.27ರಷ್ಟು ಮಕ್ಕಳಲ್ಲಿ ಕುಬ್ಜತೆಯುು ಕಂಡು ಬಂದಿದೆ. ಸಬ್‌-ಸಹರನ್ ಆಫ್ರಿಕಾದಲ್ಲಿ ಶೇ.34ರಷ್ಟು ಮಕ್ಕಳು ವಯಸ್ಸಿಗಿಂತ ಕಡಿಮೆ ಎತ್ತರವನ್ನು ಹೊಂದಿದ್ದರೆ, ಭಾರತದಲ್ಲಿ ಅಂತಹ ಮಕ್ಕಳ ಸಂಖ್ಯೆ ಒಟ್ಟಾರೆ ಶೇ.36 ಆಗಿದೆ. ದೀರ್ಘಕಾಲದ ಅಥವಾ ಪುನರಾವರ್ತಿತ ಅಪೌಷ್ಟಿಕತೆಯು ಮಕ್ಕಳ ಕುಬ್ಜತನಕ್ಕೆ ಕಾರಣವೆಂದು ವರದಿಯು ವಿವರಿಸಿದೆ.

ಸಬ್-ಸಹರನ್ ಆಫ್ರಿಕಾದ ಮಕ್ಕಳು ಭಾರತದಲ್ಲಿರುವುದಕ್ಕಿಂತ ‘ಕೆಟ್ಟ ರೋಗ ಪರಿಸರ ಮತ್ತು ಕಡಿಮೆ ಕ್ಯಾಲೋರಿ ಸಮಸ್ಯೆ’ಯನ್ನು ಎದುರಿಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.

ಭಾರತದ ಮಕ್ಕಳಲ್ಲಿ ಹೆಚ್ಚಿನ ಕುಬ್ಜತೆ ಕಂಡು ಬರುತ್ತಿರುವುದನ್ನು ‘ಇಂಡಿಯನ್ ಎನಿಗ್ಮಾ’ಎಂದು ಕರೆದಿರುವ ವರದಿಯು, ಕೇವಲ ಪ್ರಬಲ ವರ್ಗದ ಮಕ್ಕಳನ್ನು ಆಫ್ರಿಕಾದೊಂದಿಗೆ ಹೋಲಿಸಿದರೆ ಭಾರತದ ಸ್ಥಿತಿಯು ಚೆನ್ನಾಗಿದೆ ಎಂದಿದೆ.

ವರದಿಯಲ್ಲಿ ಬಹಿರಂಗಗೊಂಡಿರುವ ವಿಚಾರ ಆಶ್ಚರ್ಯಪಡುವಂತಲ್ಲ. ಸಾಮಾನ್ಯವಾಗಿ ಭಾರತದಲ್ಲಿ ಪ್ರಬಲ ವರ್ಗದ ಮಕ್ಕಳು ಉತ್ತಮ ಆಹಾರ ಪಡೆಯುತ್ತಿದ್ದಾರೆ. ರೋಗಗಳಿಂದ ರಕ್ಷಣೆ ಪಡೆಯುತ್ತಿದ್ದಾರೆ. ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದಿರುವ ವರ್ಗದ ಮತ್ತು ಬುಡಕಟ್ಟು ವರ್ಗದ ಮಕ್ಕಳು ಪೌಷ್ಟಿಕ ಆಹಾರ ಮತ್ತು ರೋಗದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ವರದಿ ಹೇಳಿದೆ.

ದೇಶಪಾಂಡೆ ಮತ್ತು ರಾಮಚಂದ್ರನ್ ಅವರ ಅಧ್ಯಯನ ವರದಿಯನ್ನು ಭಾರತದ ಐದು ವರ್ಷದೊಳಗಿನ 2 ಲಕ್ಷ ಮಕ್ಕಳನ್ನು ಒಳಗೊಂಡ ರಾಷ್ಟ್ರವ್ಯಾಪಿ ಗೃಹ ಸಮೀಕ್ಷೆಯ ಆಧಾರದ ಮೇಲೆ ರಚಿಸಲಾಗಿದೆ. ಇದು 2019 ರಿಂದ 2021ರವರೆಗಿನ ಭಾರತದ ರಾಷ್ಟ್ರೀಯ ಆರೋಗ್ಯ ಮತ್ತು ಜನಸಂಖ್ಯಾ ಸಮೀಕ್ಷೆಗಳ ಮೇಲಿನ ಸಂಶೋಧನೆಗಳನ್ನು ಆಧರಿಸಿದೆ. ಅಲ್ಲದೆ, ಸಬ್‌-ಸಹರನ್ ಆಫ್ರಿಕಾ ದೇಶಗಳ 2015ರ ನಂತರದ ದತ್ತಾಂಶಗಳನ್ನು ಇದಕ್ಕಾಗಿ ವಿಶ್ಲೇಷಿಸಲಾಗಿದೆ.

ಭಾರತದಲ್ಲಿ ವಯಸ್ಸಿಗೆ ಅನುಗುಣವಾದ ಎತ್ತರವನ್ನು ಹೊಂದಿರದ ಮಕ್ಕಳ ಸಂಖ್ಯೆ 2022ರಲ್ಲಿ 31.7 ಶೇಖಡ ಆಗಿದ್ದರೆ, ಸಬ್‌-ಸಹರನ್ ಆಫ್ರಿಕಾದ ರಾಷ್ಟ್ರಗಳಲ್ಲಿ ಅಂತಹ ಮಕ್ಕಳ ಸಂಖ್ಯೆ 31.3 ಶೇ. ಆಗಿದೆ ಎಂದು ವಿಶ್ವಸಂಸ್ಥೆಯ ಮಕ್ಕಳ ನಿಧಿ (ಯುನಿಸೆಫ್), ವಿಶ್ವ ಆರೋಗ್ಯ ಸಂಸ್ಥೆ ಹಾಗೂ ವಿಶ್ವಬ್ಯಾಂಕ್ ಪ್ರಕಟಿಸಿದ ಮಕ್ಕಳ ಪೌಷ್ಟಿಕತೆ ಕುರಿತ ಜಂಟಿ ಅಂದಾಜು ವರದಿ ತಿಳಿಸಿದೆ.

ಅಧ್ಯಯನ ವರದಿ ಪ್ರಕಟಿಸಿರುವ ಅರ್ಥಶಾಸ್ತ್ರಜ್ಞರಾದ ಅಶ್ವಿನಿ ದೇಶಪಾಂಡೆ ಹರಿಯಾಣದ ಅಶೋಕ ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿದ್ದರೆ, ರಾಮಚಂದ್ರನ್ ಅವರು ಮೊನಾಶ್ ವಿಶ್ವವಿದ್ಯಾಲಯ ಮಲೇಷ್ಯಾದಲ್ಲಿ ಹಿರಿಯ ಉಪನ್ಯಾಸಕರಾಗಿದ್ದಾರೆ.

ಭಾರತದಲ್ಲಿ ಮಕ್ಕಳಲ್ಲಿ ಹೆಚ್ಚಾಗುತ್ತಿರುವ ಕುಬ್ಜತೆಯನ್ನು ಪರಿಹರಿಸಲು ಏನಾದರು ನೀತಿ ರೂಪಿಸುವುದಾದರೆ, ಅದರಲ್ಲಿ ಜಾತಿಯನ್ನು ಮುಖ್ಯವಾಗಿ ಪರಿಗಣಿಸಬೇಕು ಎಂದು ಅಧ್ಯಯನ ವರದಿ ಅವರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ : ‘ಜೈ ಶ್ರೀ ರಾಮ್’ ಘೋಷಣೆ ಕೂಗಿಲ್ಲ ಎಂಬ ಕಾರಣಕ್ಕೆ ಊಟ ನಿರಾಕರಿಸಿದ ಎನ್‌ಜಿಒ ಸಿಬ್ಬಂದಿ; ವಿಡಿಯೊ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...