Homeಮುಖಪುಟಭಾರತದಲ್ಲಿ ಮಕ್ಕಳ ಕುಬ್ಜತೆ ಹೆಚ್ಚಳಕ್ಕೆ ಜಾತಿ ತಾರತಮ್ಯ ಕಾರಣ : ಅಧ್ಯಯನ ವರದಿ

ಭಾರತದಲ್ಲಿ ಮಕ್ಕಳ ಕುಬ್ಜತೆ ಹೆಚ್ಚಳಕ್ಕೆ ಜಾತಿ ತಾರತಮ್ಯ ಕಾರಣ : ಅಧ್ಯಯನ ವರದಿ

- Advertisement -
- Advertisement -

ಭಾರತವು ಅರ್ಥಿಕವಾಗಿ ಸದೃಢವಾಗುತ್ತಿರುವ ಹೊರತಾಗಿಯೂ ದೇಶದಲ್ಲಿ ಪ್ರಾಯಕ್ಕೆ ಸರಿಯಾದ ದೇಹದ ಬೆಳವಣಿಗೆಯಿರದ (ಕುಬ್ಜ) ಮಕ್ಕಳ ಸಂಖ್ಯೆಯು ಸಬ್-ಸಹರನ್ ಆಫ್ರಿಕಾದ ರಾಷ್ಟ್ರಗಳ ಮಕ್ಕಳಿಗಿಂತ ಹೆಚ್ಚಿದೆ. ಭಾರತದಲ್ಲಿ ಜಾತಿ ತಾರತಮ್ಯ ಅಧಿಕವಾಗಿರುವುದೇ ಇದಕ್ಕೆ ಕಾರಣವೆಂದು ‘ಜರ್ನಲ್ ಆಫ್ ಇಕನಾಮಿಕ್ಸ್, ರೇಸ್ ಆ್ಯಂಡ್ ಪಾಲಿಸಿ‘ ನಿಯತಕಾಲಿಕೆ ಅಕ್ಟೋಬರ್ 26ರಂದು ಪ್ರಕಟಿಸಿದ ಅಧ್ಯಯನ ವರದಿಯಯಲ್ಲಿ ತಿಳಿಸಿದೆ.

ಅರ್ಥಶಾಸ್ತ್ರಜ್ಞರಾದ ಅಶ್ವಿನಿ ದೇಶಪಾಂಡೆ ಮತ್ತು ರಾಜೇಶ್ ರಾಮಚಂದ್ರನ್ ಅವರು ರಚಿಸಿರುವ ಅಧ್ಯಯನ ವರದಿಯಲ್ಲಿ, ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳಂತಹ ಐತಿಹಾಸಿಕವಾಗಿ ಕಡೆಗಣಿಸಲ್ಪಟ್ಟಿರುವ ಸಮುದಾಯಗಳ ಮಕ್ಕಳು ಕುಳ್ಳಗಿರುವ ಸಾಧ್ಯತೆಯು, ಪ್ರಬಲ ಜಾತಿಯ ಮಕ್ಕಳಿಗಿಂತ ಶೇ.50ರಷ್ಟು ಅಧಿಕವೆಂದು  ಹೇಳಲಾಗಿದೆ.

ಪ್ರಬಲ ಪಂಗಡಗಳ ಶೇ.27ರಷ್ಟು ಮಕ್ಕಳಲ್ಲಿ ಕುಬ್ಜತೆಯುು ಕಂಡು ಬಂದಿದೆ. ಸಬ್‌-ಸಹರನ್ ಆಫ್ರಿಕಾದಲ್ಲಿ ಶೇ.34ರಷ್ಟು ಮಕ್ಕಳು ವಯಸ್ಸಿಗಿಂತ ಕಡಿಮೆ ಎತ್ತರವನ್ನು ಹೊಂದಿದ್ದರೆ, ಭಾರತದಲ್ಲಿ ಅಂತಹ ಮಕ್ಕಳ ಸಂಖ್ಯೆ ಒಟ್ಟಾರೆ ಶೇ.36 ಆಗಿದೆ. ದೀರ್ಘಕಾಲದ ಅಥವಾ ಪುನರಾವರ್ತಿತ ಅಪೌಷ್ಟಿಕತೆಯು ಮಕ್ಕಳ ಕುಬ್ಜತನಕ್ಕೆ ಕಾರಣವೆಂದು ವರದಿಯು ವಿವರಿಸಿದೆ.

ಸಬ್-ಸಹರನ್ ಆಫ್ರಿಕಾದ ಮಕ್ಕಳು ಭಾರತದಲ್ಲಿರುವುದಕ್ಕಿಂತ ‘ಕೆಟ್ಟ ರೋಗ ಪರಿಸರ ಮತ್ತು ಕಡಿಮೆ ಕ್ಯಾಲೋರಿ ಸಮಸ್ಯೆ’ಯನ್ನು ಎದುರಿಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.

ಭಾರತದ ಮಕ್ಕಳಲ್ಲಿ ಹೆಚ್ಚಿನ ಕುಬ್ಜತೆ ಕಂಡು ಬರುತ್ತಿರುವುದನ್ನು ‘ಇಂಡಿಯನ್ ಎನಿಗ್ಮಾ’ಎಂದು ಕರೆದಿರುವ ವರದಿಯು, ಕೇವಲ ಪ್ರಬಲ ವರ್ಗದ ಮಕ್ಕಳನ್ನು ಆಫ್ರಿಕಾದೊಂದಿಗೆ ಹೋಲಿಸಿದರೆ ಭಾರತದ ಸ್ಥಿತಿಯು ಚೆನ್ನಾಗಿದೆ ಎಂದಿದೆ.

ವರದಿಯಲ್ಲಿ ಬಹಿರಂಗಗೊಂಡಿರುವ ವಿಚಾರ ಆಶ್ಚರ್ಯಪಡುವಂತಲ್ಲ. ಸಾಮಾನ್ಯವಾಗಿ ಭಾರತದಲ್ಲಿ ಪ್ರಬಲ ವರ್ಗದ ಮಕ್ಕಳು ಉತ್ತಮ ಆಹಾರ ಪಡೆಯುತ್ತಿದ್ದಾರೆ. ರೋಗಗಳಿಂದ ರಕ್ಷಣೆ ಪಡೆಯುತ್ತಿದ್ದಾರೆ. ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದಿರುವ ವರ್ಗದ ಮತ್ತು ಬುಡಕಟ್ಟು ವರ್ಗದ ಮಕ್ಕಳು ಪೌಷ್ಟಿಕ ಆಹಾರ ಮತ್ತು ರೋಗದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ವರದಿ ಹೇಳಿದೆ.

ದೇಶಪಾಂಡೆ ಮತ್ತು ರಾಮಚಂದ್ರನ್ ಅವರ ಅಧ್ಯಯನ ವರದಿಯನ್ನು ಭಾರತದ ಐದು ವರ್ಷದೊಳಗಿನ 2 ಲಕ್ಷ ಮಕ್ಕಳನ್ನು ಒಳಗೊಂಡ ರಾಷ್ಟ್ರವ್ಯಾಪಿ ಗೃಹ ಸಮೀಕ್ಷೆಯ ಆಧಾರದ ಮೇಲೆ ರಚಿಸಲಾಗಿದೆ. ಇದು 2019 ರಿಂದ 2021ರವರೆಗಿನ ಭಾರತದ ರಾಷ್ಟ್ರೀಯ ಆರೋಗ್ಯ ಮತ್ತು ಜನಸಂಖ್ಯಾ ಸಮೀಕ್ಷೆಗಳ ಮೇಲಿನ ಸಂಶೋಧನೆಗಳನ್ನು ಆಧರಿಸಿದೆ. ಅಲ್ಲದೆ, ಸಬ್‌-ಸಹರನ್ ಆಫ್ರಿಕಾ ದೇಶಗಳ 2015ರ ನಂತರದ ದತ್ತಾಂಶಗಳನ್ನು ಇದಕ್ಕಾಗಿ ವಿಶ್ಲೇಷಿಸಲಾಗಿದೆ.

ಭಾರತದಲ್ಲಿ ವಯಸ್ಸಿಗೆ ಅನುಗುಣವಾದ ಎತ್ತರವನ್ನು ಹೊಂದಿರದ ಮಕ್ಕಳ ಸಂಖ್ಯೆ 2022ರಲ್ಲಿ 31.7 ಶೇಖಡ ಆಗಿದ್ದರೆ, ಸಬ್‌-ಸಹರನ್ ಆಫ್ರಿಕಾದ ರಾಷ್ಟ್ರಗಳಲ್ಲಿ ಅಂತಹ ಮಕ್ಕಳ ಸಂಖ್ಯೆ 31.3 ಶೇ. ಆಗಿದೆ ಎಂದು ವಿಶ್ವಸಂಸ್ಥೆಯ ಮಕ್ಕಳ ನಿಧಿ (ಯುನಿಸೆಫ್), ವಿಶ್ವ ಆರೋಗ್ಯ ಸಂಸ್ಥೆ ಹಾಗೂ ವಿಶ್ವಬ್ಯಾಂಕ್ ಪ್ರಕಟಿಸಿದ ಮಕ್ಕಳ ಪೌಷ್ಟಿಕತೆ ಕುರಿತ ಜಂಟಿ ಅಂದಾಜು ವರದಿ ತಿಳಿಸಿದೆ.

ಅಧ್ಯಯನ ವರದಿ ಪ್ರಕಟಿಸಿರುವ ಅರ್ಥಶಾಸ್ತ್ರಜ್ಞರಾದ ಅಶ್ವಿನಿ ದೇಶಪಾಂಡೆ ಹರಿಯಾಣದ ಅಶೋಕ ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿದ್ದರೆ, ರಾಮಚಂದ್ರನ್ ಅವರು ಮೊನಾಶ್ ವಿಶ್ವವಿದ್ಯಾಲಯ ಮಲೇಷ್ಯಾದಲ್ಲಿ ಹಿರಿಯ ಉಪನ್ಯಾಸಕರಾಗಿದ್ದಾರೆ.

ಭಾರತದಲ್ಲಿ ಮಕ್ಕಳಲ್ಲಿ ಹೆಚ್ಚಾಗುತ್ತಿರುವ ಕುಬ್ಜತೆಯನ್ನು ಪರಿಹರಿಸಲು ಏನಾದರು ನೀತಿ ರೂಪಿಸುವುದಾದರೆ, ಅದರಲ್ಲಿ ಜಾತಿಯನ್ನು ಮುಖ್ಯವಾಗಿ ಪರಿಗಣಿಸಬೇಕು ಎಂದು ಅಧ್ಯಯನ ವರದಿ ಅವರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ : ‘ಜೈ ಶ್ರೀ ರಾಮ್’ ಘೋಷಣೆ ಕೂಗಿಲ್ಲ ಎಂಬ ಕಾರಣಕ್ಕೆ ಊಟ ನಿರಾಕರಿಸಿದ ಎನ್‌ಜಿಒ ಸಿಬ್ಬಂದಿ; ವಿಡಿಯೊ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...