Homeಮುಖಪುಟಭಾರತದಲ್ಲಿ ಮಕ್ಕಳ ಕುಬ್ಜತೆ ಹೆಚ್ಚಳಕ್ಕೆ ಜಾತಿ ತಾರತಮ್ಯ ಕಾರಣ : ಅಧ್ಯಯನ ವರದಿ

ಭಾರತದಲ್ಲಿ ಮಕ್ಕಳ ಕುಬ್ಜತೆ ಹೆಚ್ಚಳಕ್ಕೆ ಜಾತಿ ತಾರತಮ್ಯ ಕಾರಣ : ಅಧ್ಯಯನ ವರದಿ

- Advertisement -
- Advertisement -

ಭಾರತವು ಅರ್ಥಿಕವಾಗಿ ಸದೃಢವಾಗುತ್ತಿರುವ ಹೊರತಾಗಿಯೂ ದೇಶದಲ್ಲಿ ಪ್ರಾಯಕ್ಕೆ ಸರಿಯಾದ ದೇಹದ ಬೆಳವಣಿಗೆಯಿರದ (ಕುಬ್ಜ) ಮಕ್ಕಳ ಸಂಖ್ಯೆಯು ಸಬ್-ಸಹರನ್ ಆಫ್ರಿಕಾದ ರಾಷ್ಟ್ರಗಳ ಮಕ್ಕಳಿಗಿಂತ ಹೆಚ್ಚಿದೆ. ಭಾರತದಲ್ಲಿ ಜಾತಿ ತಾರತಮ್ಯ ಅಧಿಕವಾಗಿರುವುದೇ ಇದಕ್ಕೆ ಕಾರಣವೆಂದು ‘ಜರ್ನಲ್ ಆಫ್ ಇಕನಾಮಿಕ್ಸ್, ರೇಸ್ ಆ್ಯಂಡ್ ಪಾಲಿಸಿ‘ ನಿಯತಕಾಲಿಕೆ ಅಕ್ಟೋಬರ್ 26ರಂದು ಪ್ರಕಟಿಸಿದ ಅಧ್ಯಯನ ವರದಿಯಯಲ್ಲಿ ತಿಳಿಸಿದೆ.

ಅರ್ಥಶಾಸ್ತ್ರಜ್ಞರಾದ ಅಶ್ವಿನಿ ದೇಶಪಾಂಡೆ ಮತ್ತು ರಾಜೇಶ್ ರಾಮಚಂದ್ರನ್ ಅವರು ರಚಿಸಿರುವ ಅಧ್ಯಯನ ವರದಿಯಲ್ಲಿ, ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳಂತಹ ಐತಿಹಾಸಿಕವಾಗಿ ಕಡೆಗಣಿಸಲ್ಪಟ್ಟಿರುವ ಸಮುದಾಯಗಳ ಮಕ್ಕಳು ಕುಳ್ಳಗಿರುವ ಸಾಧ್ಯತೆಯು, ಪ್ರಬಲ ಜಾತಿಯ ಮಕ್ಕಳಿಗಿಂತ ಶೇ.50ರಷ್ಟು ಅಧಿಕವೆಂದು  ಹೇಳಲಾಗಿದೆ.

ಪ್ರಬಲ ಪಂಗಡಗಳ ಶೇ.27ರಷ್ಟು ಮಕ್ಕಳಲ್ಲಿ ಕುಬ್ಜತೆಯುು ಕಂಡು ಬಂದಿದೆ. ಸಬ್‌-ಸಹರನ್ ಆಫ್ರಿಕಾದಲ್ಲಿ ಶೇ.34ರಷ್ಟು ಮಕ್ಕಳು ವಯಸ್ಸಿಗಿಂತ ಕಡಿಮೆ ಎತ್ತರವನ್ನು ಹೊಂದಿದ್ದರೆ, ಭಾರತದಲ್ಲಿ ಅಂತಹ ಮಕ್ಕಳ ಸಂಖ್ಯೆ ಒಟ್ಟಾರೆ ಶೇ.36 ಆಗಿದೆ. ದೀರ್ಘಕಾಲದ ಅಥವಾ ಪುನರಾವರ್ತಿತ ಅಪೌಷ್ಟಿಕತೆಯು ಮಕ್ಕಳ ಕುಬ್ಜತನಕ್ಕೆ ಕಾರಣವೆಂದು ವರದಿಯು ವಿವರಿಸಿದೆ.

ಸಬ್-ಸಹರನ್ ಆಫ್ರಿಕಾದ ಮಕ್ಕಳು ಭಾರತದಲ್ಲಿರುವುದಕ್ಕಿಂತ ‘ಕೆಟ್ಟ ರೋಗ ಪರಿಸರ ಮತ್ತು ಕಡಿಮೆ ಕ್ಯಾಲೋರಿ ಸಮಸ್ಯೆ’ಯನ್ನು ಎದುರಿಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.

ಭಾರತದ ಮಕ್ಕಳಲ್ಲಿ ಹೆಚ್ಚಿನ ಕುಬ್ಜತೆ ಕಂಡು ಬರುತ್ತಿರುವುದನ್ನು ‘ಇಂಡಿಯನ್ ಎನಿಗ್ಮಾ’ಎಂದು ಕರೆದಿರುವ ವರದಿಯು, ಕೇವಲ ಪ್ರಬಲ ವರ್ಗದ ಮಕ್ಕಳನ್ನು ಆಫ್ರಿಕಾದೊಂದಿಗೆ ಹೋಲಿಸಿದರೆ ಭಾರತದ ಸ್ಥಿತಿಯು ಚೆನ್ನಾಗಿದೆ ಎಂದಿದೆ.

ವರದಿಯಲ್ಲಿ ಬಹಿರಂಗಗೊಂಡಿರುವ ವಿಚಾರ ಆಶ್ಚರ್ಯಪಡುವಂತಲ್ಲ. ಸಾಮಾನ್ಯವಾಗಿ ಭಾರತದಲ್ಲಿ ಪ್ರಬಲ ವರ್ಗದ ಮಕ್ಕಳು ಉತ್ತಮ ಆಹಾರ ಪಡೆಯುತ್ತಿದ್ದಾರೆ. ರೋಗಗಳಿಂದ ರಕ್ಷಣೆ ಪಡೆಯುತ್ತಿದ್ದಾರೆ. ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದಿರುವ ವರ್ಗದ ಮತ್ತು ಬುಡಕಟ್ಟು ವರ್ಗದ ಮಕ್ಕಳು ಪೌಷ್ಟಿಕ ಆಹಾರ ಮತ್ತು ರೋಗದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ವರದಿ ಹೇಳಿದೆ.

ದೇಶಪಾಂಡೆ ಮತ್ತು ರಾಮಚಂದ್ರನ್ ಅವರ ಅಧ್ಯಯನ ವರದಿಯನ್ನು ಭಾರತದ ಐದು ವರ್ಷದೊಳಗಿನ 2 ಲಕ್ಷ ಮಕ್ಕಳನ್ನು ಒಳಗೊಂಡ ರಾಷ್ಟ್ರವ್ಯಾಪಿ ಗೃಹ ಸಮೀಕ್ಷೆಯ ಆಧಾರದ ಮೇಲೆ ರಚಿಸಲಾಗಿದೆ. ಇದು 2019 ರಿಂದ 2021ರವರೆಗಿನ ಭಾರತದ ರಾಷ್ಟ್ರೀಯ ಆರೋಗ್ಯ ಮತ್ತು ಜನಸಂಖ್ಯಾ ಸಮೀಕ್ಷೆಗಳ ಮೇಲಿನ ಸಂಶೋಧನೆಗಳನ್ನು ಆಧರಿಸಿದೆ. ಅಲ್ಲದೆ, ಸಬ್‌-ಸಹರನ್ ಆಫ್ರಿಕಾ ದೇಶಗಳ 2015ರ ನಂತರದ ದತ್ತಾಂಶಗಳನ್ನು ಇದಕ್ಕಾಗಿ ವಿಶ್ಲೇಷಿಸಲಾಗಿದೆ.

ಭಾರತದಲ್ಲಿ ವಯಸ್ಸಿಗೆ ಅನುಗುಣವಾದ ಎತ್ತರವನ್ನು ಹೊಂದಿರದ ಮಕ್ಕಳ ಸಂಖ್ಯೆ 2022ರಲ್ಲಿ 31.7 ಶೇಖಡ ಆಗಿದ್ದರೆ, ಸಬ್‌-ಸಹರನ್ ಆಫ್ರಿಕಾದ ರಾಷ್ಟ್ರಗಳಲ್ಲಿ ಅಂತಹ ಮಕ್ಕಳ ಸಂಖ್ಯೆ 31.3 ಶೇ. ಆಗಿದೆ ಎಂದು ವಿಶ್ವಸಂಸ್ಥೆಯ ಮಕ್ಕಳ ನಿಧಿ (ಯುನಿಸೆಫ್), ವಿಶ್ವ ಆರೋಗ್ಯ ಸಂಸ್ಥೆ ಹಾಗೂ ವಿಶ್ವಬ್ಯಾಂಕ್ ಪ್ರಕಟಿಸಿದ ಮಕ್ಕಳ ಪೌಷ್ಟಿಕತೆ ಕುರಿತ ಜಂಟಿ ಅಂದಾಜು ವರದಿ ತಿಳಿಸಿದೆ.

ಅಧ್ಯಯನ ವರದಿ ಪ್ರಕಟಿಸಿರುವ ಅರ್ಥಶಾಸ್ತ್ರಜ್ಞರಾದ ಅಶ್ವಿನಿ ದೇಶಪಾಂಡೆ ಹರಿಯಾಣದ ಅಶೋಕ ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿದ್ದರೆ, ರಾಮಚಂದ್ರನ್ ಅವರು ಮೊನಾಶ್ ವಿಶ್ವವಿದ್ಯಾಲಯ ಮಲೇಷ್ಯಾದಲ್ಲಿ ಹಿರಿಯ ಉಪನ್ಯಾಸಕರಾಗಿದ್ದಾರೆ.

ಭಾರತದಲ್ಲಿ ಮಕ್ಕಳಲ್ಲಿ ಹೆಚ್ಚಾಗುತ್ತಿರುವ ಕುಬ್ಜತೆಯನ್ನು ಪರಿಹರಿಸಲು ಏನಾದರು ನೀತಿ ರೂಪಿಸುವುದಾದರೆ, ಅದರಲ್ಲಿ ಜಾತಿಯನ್ನು ಮುಖ್ಯವಾಗಿ ಪರಿಗಣಿಸಬೇಕು ಎಂದು ಅಧ್ಯಯನ ವರದಿ ಅವರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ : ‘ಜೈ ಶ್ರೀ ರಾಮ್’ ಘೋಷಣೆ ಕೂಗಿಲ್ಲ ಎಂಬ ಕಾರಣಕ್ಕೆ ಊಟ ನಿರಾಕರಿಸಿದ ಎನ್‌ಜಿಒ ಸಿಬ್ಬಂದಿ; ವಿಡಿಯೊ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...