Homeಮುಖಪುಟಭಾರತದಲ್ಲಿ ಮಕ್ಕಳ ಕುಬ್ಜತೆ ಹೆಚ್ಚಳಕ್ಕೆ ಜಾತಿ ತಾರತಮ್ಯ ಕಾರಣ : ಅಧ್ಯಯನ ವರದಿ

ಭಾರತದಲ್ಲಿ ಮಕ್ಕಳ ಕುಬ್ಜತೆ ಹೆಚ್ಚಳಕ್ಕೆ ಜಾತಿ ತಾರತಮ್ಯ ಕಾರಣ : ಅಧ್ಯಯನ ವರದಿ

- Advertisement -
- Advertisement -

ಭಾರತವು ಅರ್ಥಿಕವಾಗಿ ಸದೃಢವಾಗುತ್ತಿರುವ ಹೊರತಾಗಿಯೂ ದೇಶದಲ್ಲಿ ಪ್ರಾಯಕ್ಕೆ ಸರಿಯಾದ ದೇಹದ ಬೆಳವಣಿಗೆಯಿರದ (ಕುಬ್ಜ) ಮಕ್ಕಳ ಸಂಖ್ಯೆಯು ಸಬ್-ಸಹರನ್ ಆಫ್ರಿಕಾದ ರಾಷ್ಟ್ರಗಳ ಮಕ್ಕಳಿಗಿಂತ ಹೆಚ್ಚಿದೆ. ಭಾರತದಲ್ಲಿ ಜಾತಿ ತಾರತಮ್ಯ ಅಧಿಕವಾಗಿರುವುದೇ ಇದಕ್ಕೆ ಕಾರಣವೆಂದು ‘ಜರ್ನಲ್ ಆಫ್ ಇಕನಾಮಿಕ್ಸ್, ರೇಸ್ ಆ್ಯಂಡ್ ಪಾಲಿಸಿ‘ ನಿಯತಕಾಲಿಕೆ ಅಕ್ಟೋಬರ್ 26ರಂದು ಪ್ರಕಟಿಸಿದ ಅಧ್ಯಯನ ವರದಿಯಯಲ್ಲಿ ತಿಳಿಸಿದೆ.

ಅರ್ಥಶಾಸ್ತ್ರಜ್ಞರಾದ ಅಶ್ವಿನಿ ದೇಶಪಾಂಡೆ ಮತ್ತು ರಾಜೇಶ್ ರಾಮಚಂದ್ರನ್ ಅವರು ರಚಿಸಿರುವ ಅಧ್ಯಯನ ವರದಿಯಲ್ಲಿ, ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳಂತಹ ಐತಿಹಾಸಿಕವಾಗಿ ಕಡೆಗಣಿಸಲ್ಪಟ್ಟಿರುವ ಸಮುದಾಯಗಳ ಮಕ್ಕಳು ಕುಳ್ಳಗಿರುವ ಸಾಧ್ಯತೆಯು, ಪ್ರಬಲ ಜಾತಿಯ ಮಕ್ಕಳಿಗಿಂತ ಶೇ.50ರಷ್ಟು ಅಧಿಕವೆಂದು  ಹೇಳಲಾಗಿದೆ.

ಪ್ರಬಲ ಪಂಗಡಗಳ ಶೇ.27ರಷ್ಟು ಮಕ್ಕಳಲ್ಲಿ ಕುಬ್ಜತೆಯುು ಕಂಡು ಬಂದಿದೆ. ಸಬ್‌-ಸಹರನ್ ಆಫ್ರಿಕಾದಲ್ಲಿ ಶೇ.34ರಷ್ಟು ಮಕ್ಕಳು ವಯಸ್ಸಿಗಿಂತ ಕಡಿಮೆ ಎತ್ತರವನ್ನು ಹೊಂದಿದ್ದರೆ, ಭಾರತದಲ್ಲಿ ಅಂತಹ ಮಕ್ಕಳ ಸಂಖ್ಯೆ ಒಟ್ಟಾರೆ ಶೇ.36 ಆಗಿದೆ. ದೀರ್ಘಕಾಲದ ಅಥವಾ ಪುನರಾವರ್ತಿತ ಅಪೌಷ್ಟಿಕತೆಯು ಮಕ್ಕಳ ಕುಬ್ಜತನಕ್ಕೆ ಕಾರಣವೆಂದು ವರದಿಯು ವಿವರಿಸಿದೆ.

ಸಬ್-ಸಹರನ್ ಆಫ್ರಿಕಾದ ಮಕ್ಕಳು ಭಾರತದಲ್ಲಿರುವುದಕ್ಕಿಂತ ‘ಕೆಟ್ಟ ರೋಗ ಪರಿಸರ ಮತ್ತು ಕಡಿಮೆ ಕ್ಯಾಲೋರಿ ಸಮಸ್ಯೆ’ಯನ್ನು ಎದುರಿಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.

ಭಾರತದ ಮಕ್ಕಳಲ್ಲಿ ಹೆಚ್ಚಿನ ಕುಬ್ಜತೆ ಕಂಡು ಬರುತ್ತಿರುವುದನ್ನು ‘ಇಂಡಿಯನ್ ಎನಿಗ್ಮಾ’ಎಂದು ಕರೆದಿರುವ ವರದಿಯು, ಕೇವಲ ಪ್ರಬಲ ವರ್ಗದ ಮಕ್ಕಳನ್ನು ಆಫ್ರಿಕಾದೊಂದಿಗೆ ಹೋಲಿಸಿದರೆ ಭಾರತದ ಸ್ಥಿತಿಯು ಚೆನ್ನಾಗಿದೆ ಎಂದಿದೆ.

ವರದಿಯಲ್ಲಿ ಬಹಿರಂಗಗೊಂಡಿರುವ ವಿಚಾರ ಆಶ್ಚರ್ಯಪಡುವಂತಲ್ಲ. ಸಾಮಾನ್ಯವಾಗಿ ಭಾರತದಲ್ಲಿ ಪ್ರಬಲ ವರ್ಗದ ಮಕ್ಕಳು ಉತ್ತಮ ಆಹಾರ ಪಡೆಯುತ್ತಿದ್ದಾರೆ. ರೋಗಗಳಿಂದ ರಕ್ಷಣೆ ಪಡೆಯುತ್ತಿದ್ದಾರೆ. ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದಿರುವ ವರ್ಗದ ಮತ್ತು ಬುಡಕಟ್ಟು ವರ್ಗದ ಮಕ್ಕಳು ಪೌಷ್ಟಿಕ ಆಹಾರ ಮತ್ತು ರೋಗದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ವರದಿ ಹೇಳಿದೆ.

ದೇಶಪಾಂಡೆ ಮತ್ತು ರಾಮಚಂದ್ರನ್ ಅವರ ಅಧ್ಯಯನ ವರದಿಯನ್ನು ಭಾರತದ ಐದು ವರ್ಷದೊಳಗಿನ 2 ಲಕ್ಷ ಮಕ್ಕಳನ್ನು ಒಳಗೊಂಡ ರಾಷ್ಟ್ರವ್ಯಾಪಿ ಗೃಹ ಸಮೀಕ್ಷೆಯ ಆಧಾರದ ಮೇಲೆ ರಚಿಸಲಾಗಿದೆ. ಇದು 2019 ರಿಂದ 2021ರವರೆಗಿನ ಭಾರತದ ರಾಷ್ಟ್ರೀಯ ಆರೋಗ್ಯ ಮತ್ತು ಜನಸಂಖ್ಯಾ ಸಮೀಕ್ಷೆಗಳ ಮೇಲಿನ ಸಂಶೋಧನೆಗಳನ್ನು ಆಧರಿಸಿದೆ. ಅಲ್ಲದೆ, ಸಬ್‌-ಸಹರನ್ ಆಫ್ರಿಕಾ ದೇಶಗಳ 2015ರ ನಂತರದ ದತ್ತಾಂಶಗಳನ್ನು ಇದಕ್ಕಾಗಿ ವಿಶ್ಲೇಷಿಸಲಾಗಿದೆ.

ಭಾರತದಲ್ಲಿ ವಯಸ್ಸಿಗೆ ಅನುಗುಣವಾದ ಎತ್ತರವನ್ನು ಹೊಂದಿರದ ಮಕ್ಕಳ ಸಂಖ್ಯೆ 2022ರಲ್ಲಿ 31.7 ಶೇಖಡ ಆಗಿದ್ದರೆ, ಸಬ್‌-ಸಹರನ್ ಆಫ್ರಿಕಾದ ರಾಷ್ಟ್ರಗಳಲ್ಲಿ ಅಂತಹ ಮಕ್ಕಳ ಸಂಖ್ಯೆ 31.3 ಶೇ. ಆಗಿದೆ ಎಂದು ವಿಶ್ವಸಂಸ್ಥೆಯ ಮಕ್ಕಳ ನಿಧಿ (ಯುನಿಸೆಫ್), ವಿಶ್ವ ಆರೋಗ್ಯ ಸಂಸ್ಥೆ ಹಾಗೂ ವಿಶ್ವಬ್ಯಾಂಕ್ ಪ್ರಕಟಿಸಿದ ಮಕ್ಕಳ ಪೌಷ್ಟಿಕತೆ ಕುರಿತ ಜಂಟಿ ಅಂದಾಜು ವರದಿ ತಿಳಿಸಿದೆ.

ಅಧ್ಯಯನ ವರದಿ ಪ್ರಕಟಿಸಿರುವ ಅರ್ಥಶಾಸ್ತ್ರಜ್ಞರಾದ ಅಶ್ವಿನಿ ದೇಶಪಾಂಡೆ ಹರಿಯಾಣದ ಅಶೋಕ ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿದ್ದರೆ, ರಾಮಚಂದ್ರನ್ ಅವರು ಮೊನಾಶ್ ವಿಶ್ವವಿದ್ಯಾಲಯ ಮಲೇಷ್ಯಾದಲ್ಲಿ ಹಿರಿಯ ಉಪನ್ಯಾಸಕರಾಗಿದ್ದಾರೆ.

ಭಾರತದಲ್ಲಿ ಮಕ್ಕಳಲ್ಲಿ ಹೆಚ್ಚಾಗುತ್ತಿರುವ ಕುಬ್ಜತೆಯನ್ನು ಪರಿಹರಿಸಲು ಏನಾದರು ನೀತಿ ರೂಪಿಸುವುದಾದರೆ, ಅದರಲ್ಲಿ ಜಾತಿಯನ್ನು ಮುಖ್ಯವಾಗಿ ಪರಿಗಣಿಸಬೇಕು ಎಂದು ಅಧ್ಯಯನ ವರದಿ ಅವರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ : ‘ಜೈ ಶ್ರೀ ರಾಮ್’ ಘೋಷಣೆ ಕೂಗಿಲ್ಲ ಎಂಬ ಕಾರಣಕ್ಕೆ ಊಟ ನಿರಾಕರಿಸಿದ ಎನ್‌ಜಿಒ ಸಿಬ್ಬಂದಿ; ವಿಡಿಯೊ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...