Homeಮುಖಪುಟಭಾರತದಲ್ಲಿ ಮಕ್ಕಳ ಕುಬ್ಜತೆ ಹೆಚ್ಚಳಕ್ಕೆ ಜಾತಿ ತಾರತಮ್ಯ ಕಾರಣ : ಅಧ್ಯಯನ ವರದಿ

ಭಾರತದಲ್ಲಿ ಮಕ್ಕಳ ಕುಬ್ಜತೆ ಹೆಚ್ಚಳಕ್ಕೆ ಜಾತಿ ತಾರತಮ್ಯ ಕಾರಣ : ಅಧ್ಯಯನ ವರದಿ

- Advertisement -
- Advertisement -

ಭಾರತವು ಅರ್ಥಿಕವಾಗಿ ಸದೃಢವಾಗುತ್ತಿರುವ ಹೊರತಾಗಿಯೂ ದೇಶದಲ್ಲಿ ಪ್ರಾಯಕ್ಕೆ ಸರಿಯಾದ ದೇಹದ ಬೆಳವಣಿಗೆಯಿರದ (ಕುಬ್ಜ) ಮಕ್ಕಳ ಸಂಖ್ಯೆಯು ಸಬ್-ಸಹರನ್ ಆಫ್ರಿಕಾದ ರಾಷ್ಟ್ರಗಳ ಮಕ್ಕಳಿಗಿಂತ ಹೆಚ್ಚಿದೆ. ಭಾರತದಲ್ಲಿ ಜಾತಿ ತಾರತಮ್ಯ ಅಧಿಕವಾಗಿರುವುದೇ ಇದಕ್ಕೆ ಕಾರಣವೆಂದು ‘ಜರ್ನಲ್ ಆಫ್ ಇಕನಾಮಿಕ್ಸ್, ರೇಸ್ ಆ್ಯಂಡ್ ಪಾಲಿಸಿ‘ ನಿಯತಕಾಲಿಕೆ ಅಕ್ಟೋಬರ್ 26ರಂದು ಪ್ರಕಟಿಸಿದ ಅಧ್ಯಯನ ವರದಿಯಯಲ್ಲಿ ತಿಳಿಸಿದೆ.

ಅರ್ಥಶಾಸ್ತ್ರಜ್ಞರಾದ ಅಶ್ವಿನಿ ದೇಶಪಾಂಡೆ ಮತ್ತು ರಾಜೇಶ್ ರಾಮಚಂದ್ರನ್ ಅವರು ರಚಿಸಿರುವ ಅಧ್ಯಯನ ವರದಿಯಲ್ಲಿ, ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳಂತಹ ಐತಿಹಾಸಿಕವಾಗಿ ಕಡೆಗಣಿಸಲ್ಪಟ್ಟಿರುವ ಸಮುದಾಯಗಳ ಮಕ್ಕಳು ಕುಳ್ಳಗಿರುವ ಸಾಧ್ಯತೆಯು, ಪ್ರಬಲ ಜಾತಿಯ ಮಕ್ಕಳಿಗಿಂತ ಶೇ.50ರಷ್ಟು ಅಧಿಕವೆಂದು  ಹೇಳಲಾಗಿದೆ.

ಪ್ರಬಲ ಪಂಗಡಗಳ ಶೇ.27ರಷ್ಟು ಮಕ್ಕಳಲ್ಲಿ ಕುಬ್ಜತೆಯುು ಕಂಡು ಬಂದಿದೆ. ಸಬ್‌-ಸಹರನ್ ಆಫ್ರಿಕಾದಲ್ಲಿ ಶೇ.34ರಷ್ಟು ಮಕ್ಕಳು ವಯಸ್ಸಿಗಿಂತ ಕಡಿಮೆ ಎತ್ತರವನ್ನು ಹೊಂದಿದ್ದರೆ, ಭಾರತದಲ್ಲಿ ಅಂತಹ ಮಕ್ಕಳ ಸಂಖ್ಯೆ ಒಟ್ಟಾರೆ ಶೇ.36 ಆಗಿದೆ. ದೀರ್ಘಕಾಲದ ಅಥವಾ ಪುನರಾವರ್ತಿತ ಅಪೌಷ್ಟಿಕತೆಯು ಮಕ್ಕಳ ಕುಬ್ಜತನಕ್ಕೆ ಕಾರಣವೆಂದು ವರದಿಯು ವಿವರಿಸಿದೆ.

ಸಬ್-ಸಹರನ್ ಆಫ್ರಿಕಾದ ಮಕ್ಕಳು ಭಾರತದಲ್ಲಿರುವುದಕ್ಕಿಂತ ‘ಕೆಟ್ಟ ರೋಗ ಪರಿಸರ ಮತ್ತು ಕಡಿಮೆ ಕ್ಯಾಲೋರಿ ಸಮಸ್ಯೆ’ಯನ್ನು ಎದುರಿಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.

ಭಾರತದ ಮಕ್ಕಳಲ್ಲಿ ಹೆಚ್ಚಿನ ಕುಬ್ಜತೆ ಕಂಡು ಬರುತ್ತಿರುವುದನ್ನು ‘ಇಂಡಿಯನ್ ಎನಿಗ್ಮಾ’ಎಂದು ಕರೆದಿರುವ ವರದಿಯು, ಕೇವಲ ಪ್ರಬಲ ವರ್ಗದ ಮಕ್ಕಳನ್ನು ಆಫ್ರಿಕಾದೊಂದಿಗೆ ಹೋಲಿಸಿದರೆ ಭಾರತದ ಸ್ಥಿತಿಯು ಚೆನ್ನಾಗಿದೆ ಎಂದಿದೆ.

ವರದಿಯಲ್ಲಿ ಬಹಿರಂಗಗೊಂಡಿರುವ ವಿಚಾರ ಆಶ್ಚರ್ಯಪಡುವಂತಲ್ಲ. ಸಾಮಾನ್ಯವಾಗಿ ಭಾರತದಲ್ಲಿ ಪ್ರಬಲ ವರ್ಗದ ಮಕ್ಕಳು ಉತ್ತಮ ಆಹಾರ ಪಡೆಯುತ್ತಿದ್ದಾರೆ. ರೋಗಗಳಿಂದ ರಕ್ಷಣೆ ಪಡೆಯುತ್ತಿದ್ದಾರೆ. ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದಿರುವ ವರ್ಗದ ಮತ್ತು ಬುಡಕಟ್ಟು ವರ್ಗದ ಮಕ್ಕಳು ಪೌಷ್ಟಿಕ ಆಹಾರ ಮತ್ತು ರೋಗದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ವರದಿ ಹೇಳಿದೆ.

ದೇಶಪಾಂಡೆ ಮತ್ತು ರಾಮಚಂದ್ರನ್ ಅವರ ಅಧ್ಯಯನ ವರದಿಯನ್ನು ಭಾರತದ ಐದು ವರ್ಷದೊಳಗಿನ 2 ಲಕ್ಷ ಮಕ್ಕಳನ್ನು ಒಳಗೊಂಡ ರಾಷ್ಟ್ರವ್ಯಾಪಿ ಗೃಹ ಸಮೀಕ್ಷೆಯ ಆಧಾರದ ಮೇಲೆ ರಚಿಸಲಾಗಿದೆ. ಇದು 2019 ರಿಂದ 2021ರವರೆಗಿನ ಭಾರತದ ರಾಷ್ಟ್ರೀಯ ಆರೋಗ್ಯ ಮತ್ತು ಜನಸಂಖ್ಯಾ ಸಮೀಕ್ಷೆಗಳ ಮೇಲಿನ ಸಂಶೋಧನೆಗಳನ್ನು ಆಧರಿಸಿದೆ. ಅಲ್ಲದೆ, ಸಬ್‌-ಸಹರನ್ ಆಫ್ರಿಕಾ ದೇಶಗಳ 2015ರ ನಂತರದ ದತ್ತಾಂಶಗಳನ್ನು ಇದಕ್ಕಾಗಿ ವಿಶ್ಲೇಷಿಸಲಾಗಿದೆ.

ಭಾರತದಲ್ಲಿ ವಯಸ್ಸಿಗೆ ಅನುಗುಣವಾದ ಎತ್ತರವನ್ನು ಹೊಂದಿರದ ಮಕ್ಕಳ ಸಂಖ್ಯೆ 2022ರಲ್ಲಿ 31.7 ಶೇಖಡ ಆಗಿದ್ದರೆ, ಸಬ್‌-ಸಹರನ್ ಆಫ್ರಿಕಾದ ರಾಷ್ಟ್ರಗಳಲ್ಲಿ ಅಂತಹ ಮಕ್ಕಳ ಸಂಖ್ಯೆ 31.3 ಶೇ. ಆಗಿದೆ ಎಂದು ವಿಶ್ವಸಂಸ್ಥೆಯ ಮಕ್ಕಳ ನಿಧಿ (ಯುನಿಸೆಫ್), ವಿಶ್ವ ಆರೋಗ್ಯ ಸಂಸ್ಥೆ ಹಾಗೂ ವಿಶ್ವಬ್ಯಾಂಕ್ ಪ್ರಕಟಿಸಿದ ಮಕ್ಕಳ ಪೌಷ್ಟಿಕತೆ ಕುರಿತ ಜಂಟಿ ಅಂದಾಜು ವರದಿ ತಿಳಿಸಿದೆ.

ಅಧ್ಯಯನ ವರದಿ ಪ್ರಕಟಿಸಿರುವ ಅರ್ಥಶಾಸ್ತ್ರಜ್ಞರಾದ ಅಶ್ವಿನಿ ದೇಶಪಾಂಡೆ ಹರಿಯಾಣದ ಅಶೋಕ ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿದ್ದರೆ, ರಾಮಚಂದ್ರನ್ ಅವರು ಮೊನಾಶ್ ವಿಶ್ವವಿದ್ಯಾಲಯ ಮಲೇಷ್ಯಾದಲ್ಲಿ ಹಿರಿಯ ಉಪನ್ಯಾಸಕರಾಗಿದ್ದಾರೆ.

ಭಾರತದಲ್ಲಿ ಮಕ್ಕಳಲ್ಲಿ ಹೆಚ್ಚಾಗುತ್ತಿರುವ ಕುಬ್ಜತೆಯನ್ನು ಪರಿಹರಿಸಲು ಏನಾದರು ನೀತಿ ರೂಪಿಸುವುದಾದರೆ, ಅದರಲ್ಲಿ ಜಾತಿಯನ್ನು ಮುಖ್ಯವಾಗಿ ಪರಿಗಣಿಸಬೇಕು ಎಂದು ಅಧ್ಯಯನ ವರದಿ ಅವರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ : ‘ಜೈ ಶ್ರೀ ರಾಮ್’ ಘೋಷಣೆ ಕೂಗಿಲ್ಲ ಎಂಬ ಕಾರಣಕ್ಕೆ ಊಟ ನಿರಾಕರಿಸಿದ ಎನ್‌ಜಿಒ ಸಿಬ್ಬಂದಿ; ವಿಡಿಯೊ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...