Homeಮುಖಪುಟಭಾರತದಲ್ಲಿ ಮಕ್ಕಳ ಕುಬ್ಜತೆ ಹೆಚ್ಚಳಕ್ಕೆ ಜಾತಿ ತಾರತಮ್ಯ ಕಾರಣ : ಅಧ್ಯಯನ ವರದಿ

ಭಾರತದಲ್ಲಿ ಮಕ್ಕಳ ಕುಬ್ಜತೆ ಹೆಚ್ಚಳಕ್ಕೆ ಜಾತಿ ತಾರತಮ್ಯ ಕಾರಣ : ಅಧ್ಯಯನ ವರದಿ

- Advertisement -
- Advertisement -

ಭಾರತವು ಅರ್ಥಿಕವಾಗಿ ಸದೃಢವಾಗುತ್ತಿರುವ ಹೊರತಾಗಿಯೂ ದೇಶದಲ್ಲಿ ಪ್ರಾಯಕ್ಕೆ ಸರಿಯಾದ ದೇಹದ ಬೆಳವಣಿಗೆಯಿರದ (ಕುಬ್ಜ) ಮಕ್ಕಳ ಸಂಖ್ಯೆಯು ಸಬ್-ಸಹರನ್ ಆಫ್ರಿಕಾದ ರಾಷ್ಟ್ರಗಳ ಮಕ್ಕಳಿಗಿಂತ ಹೆಚ್ಚಿದೆ. ಭಾರತದಲ್ಲಿ ಜಾತಿ ತಾರತಮ್ಯ ಅಧಿಕವಾಗಿರುವುದೇ ಇದಕ್ಕೆ ಕಾರಣವೆಂದು ‘ಜರ್ನಲ್ ಆಫ್ ಇಕನಾಮಿಕ್ಸ್, ರೇಸ್ ಆ್ಯಂಡ್ ಪಾಲಿಸಿ‘ ನಿಯತಕಾಲಿಕೆ ಅಕ್ಟೋಬರ್ 26ರಂದು ಪ್ರಕಟಿಸಿದ ಅಧ್ಯಯನ ವರದಿಯಯಲ್ಲಿ ತಿಳಿಸಿದೆ.

ಅರ್ಥಶಾಸ್ತ್ರಜ್ಞರಾದ ಅಶ್ವಿನಿ ದೇಶಪಾಂಡೆ ಮತ್ತು ರಾಜೇಶ್ ರಾಮಚಂದ್ರನ್ ಅವರು ರಚಿಸಿರುವ ಅಧ್ಯಯನ ವರದಿಯಲ್ಲಿ, ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳಂತಹ ಐತಿಹಾಸಿಕವಾಗಿ ಕಡೆಗಣಿಸಲ್ಪಟ್ಟಿರುವ ಸಮುದಾಯಗಳ ಮಕ್ಕಳು ಕುಳ್ಳಗಿರುವ ಸಾಧ್ಯತೆಯು, ಪ್ರಬಲ ಜಾತಿಯ ಮಕ್ಕಳಿಗಿಂತ ಶೇ.50ರಷ್ಟು ಅಧಿಕವೆಂದು  ಹೇಳಲಾಗಿದೆ.

ಪ್ರಬಲ ಪಂಗಡಗಳ ಶೇ.27ರಷ್ಟು ಮಕ್ಕಳಲ್ಲಿ ಕುಬ್ಜತೆಯುು ಕಂಡು ಬಂದಿದೆ. ಸಬ್‌-ಸಹರನ್ ಆಫ್ರಿಕಾದಲ್ಲಿ ಶೇ.34ರಷ್ಟು ಮಕ್ಕಳು ವಯಸ್ಸಿಗಿಂತ ಕಡಿಮೆ ಎತ್ತರವನ್ನು ಹೊಂದಿದ್ದರೆ, ಭಾರತದಲ್ಲಿ ಅಂತಹ ಮಕ್ಕಳ ಸಂಖ್ಯೆ ಒಟ್ಟಾರೆ ಶೇ.36 ಆಗಿದೆ. ದೀರ್ಘಕಾಲದ ಅಥವಾ ಪುನರಾವರ್ತಿತ ಅಪೌಷ್ಟಿಕತೆಯು ಮಕ್ಕಳ ಕುಬ್ಜತನಕ್ಕೆ ಕಾರಣವೆಂದು ವರದಿಯು ವಿವರಿಸಿದೆ.

ಸಬ್-ಸಹರನ್ ಆಫ್ರಿಕಾದ ಮಕ್ಕಳು ಭಾರತದಲ್ಲಿರುವುದಕ್ಕಿಂತ ‘ಕೆಟ್ಟ ರೋಗ ಪರಿಸರ ಮತ್ತು ಕಡಿಮೆ ಕ್ಯಾಲೋರಿ ಸಮಸ್ಯೆ’ಯನ್ನು ಎದುರಿಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.

ಭಾರತದ ಮಕ್ಕಳಲ್ಲಿ ಹೆಚ್ಚಿನ ಕುಬ್ಜತೆ ಕಂಡು ಬರುತ್ತಿರುವುದನ್ನು ‘ಇಂಡಿಯನ್ ಎನಿಗ್ಮಾ’ಎಂದು ಕರೆದಿರುವ ವರದಿಯು, ಕೇವಲ ಪ್ರಬಲ ವರ್ಗದ ಮಕ್ಕಳನ್ನು ಆಫ್ರಿಕಾದೊಂದಿಗೆ ಹೋಲಿಸಿದರೆ ಭಾರತದ ಸ್ಥಿತಿಯು ಚೆನ್ನಾಗಿದೆ ಎಂದಿದೆ.

ವರದಿಯಲ್ಲಿ ಬಹಿರಂಗಗೊಂಡಿರುವ ವಿಚಾರ ಆಶ್ಚರ್ಯಪಡುವಂತಲ್ಲ. ಸಾಮಾನ್ಯವಾಗಿ ಭಾರತದಲ್ಲಿ ಪ್ರಬಲ ವರ್ಗದ ಮಕ್ಕಳು ಉತ್ತಮ ಆಹಾರ ಪಡೆಯುತ್ತಿದ್ದಾರೆ. ರೋಗಗಳಿಂದ ರಕ್ಷಣೆ ಪಡೆಯುತ್ತಿದ್ದಾರೆ. ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದಿರುವ ವರ್ಗದ ಮತ್ತು ಬುಡಕಟ್ಟು ವರ್ಗದ ಮಕ್ಕಳು ಪೌಷ್ಟಿಕ ಆಹಾರ ಮತ್ತು ರೋಗದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ವರದಿ ಹೇಳಿದೆ.

ದೇಶಪಾಂಡೆ ಮತ್ತು ರಾಮಚಂದ್ರನ್ ಅವರ ಅಧ್ಯಯನ ವರದಿಯನ್ನು ಭಾರತದ ಐದು ವರ್ಷದೊಳಗಿನ 2 ಲಕ್ಷ ಮಕ್ಕಳನ್ನು ಒಳಗೊಂಡ ರಾಷ್ಟ್ರವ್ಯಾಪಿ ಗೃಹ ಸಮೀಕ್ಷೆಯ ಆಧಾರದ ಮೇಲೆ ರಚಿಸಲಾಗಿದೆ. ಇದು 2019 ರಿಂದ 2021ರವರೆಗಿನ ಭಾರತದ ರಾಷ್ಟ್ರೀಯ ಆರೋಗ್ಯ ಮತ್ತು ಜನಸಂಖ್ಯಾ ಸಮೀಕ್ಷೆಗಳ ಮೇಲಿನ ಸಂಶೋಧನೆಗಳನ್ನು ಆಧರಿಸಿದೆ. ಅಲ್ಲದೆ, ಸಬ್‌-ಸಹರನ್ ಆಫ್ರಿಕಾ ದೇಶಗಳ 2015ರ ನಂತರದ ದತ್ತಾಂಶಗಳನ್ನು ಇದಕ್ಕಾಗಿ ವಿಶ್ಲೇಷಿಸಲಾಗಿದೆ.

ಭಾರತದಲ್ಲಿ ವಯಸ್ಸಿಗೆ ಅನುಗುಣವಾದ ಎತ್ತರವನ್ನು ಹೊಂದಿರದ ಮಕ್ಕಳ ಸಂಖ್ಯೆ 2022ರಲ್ಲಿ 31.7 ಶೇಖಡ ಆಗಿದ್ದರೆ, ಸಬ್‌-ಸಹರನ್ ಆಫ್ರಿಕಾದ ರಾಷ್ಟ್ರಗಳಲ್ಲಿ ಅಂತಹ ಮಕ್ಕಳ ಸಂಖ್ಯೆ 31.3 ಶೇ. ಆಗಿದೆ ಎಂದು ವಿಶ್ವಸಂಸ್ಥೆಯ ಮಕ್ಕಳ ನಿಧಿ (ಯುನಿಸೆಫ್), ವಿಶ್ವ ಆರೋಗ್ಯ ಸಂಸ್ಥೆ ಹಾಗೂ ವಿಶ್ವಬ್ಯಾಂಕ್ ಪ್ರಕಟಿಸಿದ ಮಕ್ಕಳ ಪೌಷ್ಟಿಕತೆ ಕುರಿತ ಜಂಟಿ ಅಂದಾಜು ವರದಿ ತಿಳಿಸಿದೆ.

ಅಧ್ಯಯನ ವರದಿ ಪ್ರಕಟಿಸಿರುವ ಅರ್ಥಶಾಸ್ತ್ರಜ್ಞರಾದ ಅಶ್ವಿನಿ ದೇಶಪಾಂಡೆ ಹರಿಯಾಣದ ಅಶೋಕ ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿದ್ದರೆ, ರಾಮಚಂದ್ರನ್ ಅವರು ಮೊನಾಶ್ ವಿಶ್ವವಿದ್ಯಾಲಯ ಮಲೇಷ್ಯಾದಲ್ಲಿ ಹಿರಿಯ ಉಪನ್ಯಾಸಕರಾಗಿದ್ದಾರೆ.

ಭಾರತದಲ್ಲಿ ಮಕ್ಕಳಲ್ಲಿ ಹೆಚ್ಚಾಗುತ್ತಿರುವ ಕುಬ್ಜತೆಯನ್ನು ಪರಿಹರಿಸಲು ಏನಾದರು ನೀತಿ ರೂಪಿಸುವುದಾದರೆ, ಅದರಲ್ಲಿ ಜಾತಿಯನ್ನು ಮುಖ್ಯವಾಗಿ ಪರಿಗಣಿಸಬೇಕು ಎಂದು ಅಧ್ಯಯನ ವರದಿ ಅವರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ : ‘ಜೈ ಶ್ರೀ ರಾಮ್’ ಘೋಷಣೆ ಕೂಗಿಲ್ಲ ಎಂಬ ಕಾರಣಕ್ಕೆ ಊಟ ನಿರಾಕರಿಸಿದ ಎನ್‌ಜಿಒ ಸಿಬ್ಬಂದಿ; ವಿಡಿಯೊ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...