Homeಮುಖಪುಟಭಾರತದಲ್ಲಿ ಮಕ್ಕಳ ಕುಬ್ಜತೆ ಹೆಚ್ಚಳಕ್ಕೆ ಜಾತಿ ತಾರತಮ್ಯ ಕಾರಣ : ಅಧ್ಯಯನ ವರದಿ

ಭಾರತದಲ್ಲಿ ಮಕ್ಕಳ ಕುಬ್ಜತೆ ಹೆಚ್ಚಳಕ್ಕೆ ಜಾತಿ ತಾರತಮ್ಯ ಕಾರಣ : ಅಧ್ಯಯನ ವರದಿ

- Advertisement -
- Advertisement -

ಭಾರತವು ಅರ್ಥಿಕವಾಗಿ ಸದೃಢವಾಗುತ್ತಿರುವ ಹೊರತಾಗಿಯೂ ದೇಶದಲ್ಲಿ ಪ್ರಾಯಕ್ಕೆ ಸರಿಯಾದ ದೇಹದ ಬೆಳವಣಿಗೆಯಿರದ (ಕುಬ್ಜ) ಮಕ್ಕಳ ಸಂಖ್ಯೆಯು ಸಬ್-ಸಹರನ್ ಆಫ್ರಿಕಾದ ರಾಷ್ಟ್ರಗಳ ಮಕ್ಕಳಿಗಿಂತ ಹೆಚ್ಚಿದೆ. ಭಾರತದಲ್ಲಿ ಜಾತಿ ತಾರತಮ್ಯ ಅಧಿಕವಾಗಿರುವುದೇ ಇದಕ್ಕೆ ಕಾರಣವೆಂದು ‘ಜರ್ನಲ್ ಆಫ್ ಇಕನಾಮಿಕ್ಸ್, ರೇಸ್ ಆ್ಯಂಡ್ ಪಾಲಿಸಿ‘ ನಿಯತಕಾಲಿಕೆ ಅಕ್ಟೋಬರ್ 26ರಂದು ಪ್ರಕಟಿಸಿದ ಅಧ್ಯಯನ ವರದಿಯಯಲ್ಲಿ ತಿಳಿಸಿದೆ.

ಅರ್ಥಶಾಸ್ತ್ರಜ್ಞರಾದ ಅಶ್ವಿನಿ ದೇಶಪಾಂಡೆ ಮತ್ತು ರಾಜೇಶ್ ರಾಮಚಂದ್ರನ್ ಅವರು ರಚಿಸಿರುವ ಅಧ್ಯಯನ ವರದಿಯಲ್ಲಿ, ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳಂತಹ ಐತಿಹಾಸಿಕವಾಗಿ ಕಡೆಗಣಿಸಲ್ಪಟ್ಟಿರುವ ಸಮುದಾಯಗಳ ಮಕ್ಕಳು ಕುಳ್ಳಗಿರುವ ಸಾಧ್ಯತೆಯು, ಪ್ರಬಲ ಜಾತಿಯ ಮಕ್ಕಳಿಗಿಂತ ಶೇ.50ರಷ್ಟು ಅಧಿಕವೆಂದು  ಹೇಳಲಾಗಿದೆ.

ಪ್ರಬಲ ಪಂಗಡಗಳ ಶೇ.27ರಷ್ಟು ಮಕ್ಕಳಲ್ಲಿ ಕುಬ್ಜತೆಯುು ಕಂಡು ಬಂದಿದೆ. ಸಬ್‌-ಸಹರನ್ ಆಫ್ರಿಕಾದಲ್ಲಿ ಶೇ.34ರಷ್ಟು ಮಕ್ಕಳು ವಯಸ್ಸಿಗಿಂತ ಕಡಿಮೆ ಎತ್ತರವನ್ನು ಹೊಂದಿದ್ದರೆ, ಭಾರತದಲ್ಲಿ ಅಂತಹ ಮಕ್ಕಳ ಸಂಖ್ಯೆ ಒಟ್ಟಾರೆ ಶೇ.36 ಆಗಿದೆ. ದೀರ್ಘಕಾಲದ ಅಥವಾ ಪುನರಾವರ್ತಿತ ಅಪೌಷ್ಟಿಕತೆಯು ಮಕ್ಕಳ ಕುಬ್ಜತನಕ್ಕೆ ಕಾರಣವೆಂದು ವರದಿಯು ವಿವರಿಸಿದೆ.

ಸಬ್-ಸಹರನ್ ಆಫ್ರಿಕಾದ ಮಕ್ಕಳು ಭಾರತದಲ್ಲಿರುವುದಕ್ಕಿಂತ ‘ಕೆಟ್ಟ ರೋಗ ಪರಿಸರ ಮತ್ತು ಕಡಿಮೆ ಕ್ಯಾಲೋರಿ ಸಮಸ್ಯೆ’ಯನ್ನು ಎದುರಿಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.

ಭಾರತದ ಮಕ್ಕಳಲ್ಲಿ ಹೆಚ್ಚಿನ ಕುಬ್ಜತೆ ಕಂಡು ಬರುತ್ತಿರುವುದನ್ನು ‘ಇಂಡಿಯನ್ ಎನಿಗ್ಮಾ’ಎಂದು ಕರೆದಿರುವ ವರದಿಯು, ಕೇವಲ ಪ್ರಬಲ ವರ್ಗದ ಮಕ್ಕಳನ್ನು ಆಫ್ರಿಕಾದೊಂದಿಗೆ ಹೋಲಿಸಿದರೆ ಭಾರತದ ಸ್ಥಿತಿಯು ಚೆನ್ನಾಗಿದೆ ಎಂದಿದೆ.

ವರದಿಯಲ್ಲಿ ಬಹಿರಂಗಗೊಂಡಿರುವ ವಿಚಾರ ಆಶ್ಚರ್ಯಪಡುವಂತಲ್ಲ. ಸಾಮಾನ್ಯವಾಗಿ ಭಾರತದಲ್ಲಿ ಪ್ರಬಲ ವರ್ಗದ ಮಕ್ಕಳು ಉತ್ತಮ ಆಹಾರ ಪಡೆಯುತ್ತಿದ್ದಾರೆ. ರೋಗಗಳಿಂದ ರಕ್ಷಣೆ ಪಡೆಯುತ್ತಿದ್ದಾರೆ. ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದಿರುವ ವರ್ಗದ ಮತ್ತು ಬುಡಕಟ್ಟು ವರ್ಗದ ಮಕ್ಕಳು ಪೌಷ್ಟಿಕ ಆಹಾರ ಮತ್ತು ರೋಗದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ವರದಿ ಹೇಳಿದೆ.

ದೇಶಪಾಂಡೆ ಮತ್ತು ರಾಮಚಂದ್ರನ್ ಅವರ ಅಧ್ಯಯನ ವರದಿಯನ್ನು ಭಾರತದ ಐದು ವರ್ಷದೊಳಗಿನ 2 ಲಕ್ಷ ಮಕ್ಕಳನ್ನು ಒಳಗೊಂಡ ರಾಷ್ಟ್ರವ್ಯಾಪಿ ಗೃಹ ಸಮೀಕ್ಷೆಯ ಆಧಾರದ ಮೇಲೆ ರಚಿಸಲಾಗಿದೆ. ಇದು 2019 ರಿಂದ 2021ರವರೆಗಿನ ಭಾರತದ ರಾಷ್ಟ್ರೀಯ ಆರೋಗ್ಯ ಮತ್ತು ಜನಸಂಖ್ಯಾ ಸಮೀಕ್ಷೆಗಳ ಮೇಲಿನ ಸಂಶೋಧನೆಗಳನ್ನು ಆಧರಿಸಿದೆ. ಅಲ್ಲದೆ, ಸಬ್‌-ಸಹರನ್ ಆಫ್ರಿಕಾ ದೇಶಗಳ 2015ರ ನಂತರದ ದತ್ತಾಂಶಗಳನ್ನು ಇದಕ್ಕಾಗಿ ವಿಶ್ಲೇಷಿಸಲಾಗಿದೆ.

ಭಾರತದಲ್ಲಿ ವಯಸ್ಸಿಗೆ ಅನುಗುಣವಾದ ಎತ್ತರವನ್ನು ಹೊಂದಿರದ ಮಕ್ಕಳ ಸಂಖ್ಯೆ 2022ರಲ್ಲಿ 31.7 ಶೇಖಡ ಆಗಿದ್ದರೆ, ಸಬ್‌-ಸಹರನ್ ಆಫ್ರಿಕಾದ ರಾಷ್ಟ್ರಗಳಲ್ಲಿ ಅಂತಹ ಮಕ್ಕಳ ಸಂಖ್ಯೆ 31.3 ಶೇ. ಆಗಿದೆ ಎಂದು ವಿಶ್ವಸಂಸ್ಥೆಯ ಮಕ್ಕಳ ನಿಧಿ (ಯುನಿಸೆಫ್), ವಿಶ್ವ ಆರೋಗ್ಯ ಸಂಸ್ಥೆ ಹಾಗೂ ವಿಶ್ವಬ್ಯಾಂಕ್ ಪ್ರಕಟಿಸಿದ ಮಕ್ಕಳ ಪೌಷ್ಟಿಕತೆ ಕುರಿತ ಜಂಟಿ ಅಂದಾಜು ವರದಿ ತಿಳಿಸಿದೆ.

ಅಧ್ಯಯನ ವರದಿ ಪ್ರಕಟಿಸಿರುವ ಅರ್ಥಶಾಸ್ತ್ರಜ್ಞರಾದ ಅಶ್ವಿನಿ ದೇಶಪಾಂಡೆ ಹರಿಯಾಣದ ಅಶೋಕ ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿದ್ದರೆ, ರಾಮಚಂದ್ರನ್ ಅವರು ಮೊನಾಶ್ ವಿಶ್ವವಿದ್ಯಾಲಯ ಮಲೇಷ್ಯಾದಲ್ಲಿ ಹಿರಿಯ ಉಪನ್ಯಾಸಕರಾಗಿದ್ದಾರೆ.

ಭಾರತದಲ್ಲಿ ಮಕ್ಕಳಲ್ಲಿ ಹೆಚ್ಚಾಗುತ್ತಿರುವ ಕುಬ್ಜತೆಯನ್ನು ಪರಿಹರಿಸಲು ಏನಾದರು ನೀತಿ ರೂಪಿಸುವುದಾದರೆ, ಅದರಲ್ಲಿ ಜಾತಿಯನ್ನು ಮುಖ್ಯವಾಗಿ ಪರಿಗಣಿಸಬೇಕು ಎಂದು ಅಧ್ಯಯನ ವರದಿ ಅವರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ : ‘ಜೈ ಶ್ರೀ ರಾಮ್’ ಘೋಷಣೆ ಕೂಗಿಲ್ಲ ಎಂಬ ಕಾರಣಕ್ಕೆ ಊಟ ನಿರಾಕರಿಸಿದ ಎನ್‌ಜಿಒ ಸಿಬ್ಬಂದಿ; ವಿಡಿಯೊ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...