Homeಮುಖಪುಟಭಾರತದಲ್ಲಿ ಮಕ್ಕಳ ಕುಬ್ಜತೆ ಹೆಚ್ಚಳಕ್ಕೆ ಜಾತಿ ತಾರತಮ್ಯ ಕಾರಣ : ಅಧ್ಯಯನ ವರದಿ

ಭಾರತದಲ್ಲಿ ಮಕ್ಕಳ ಕುಬ್ಜತೆ ಹೆಚ್ಚಳಕ್ಕೆ ಜಾತಿ ತಾರತಮ್ಯ ಕಾರಣ : ಅಧ್ಯಯನ ವರದಿ

- Advertisement -
- Advertisement -

ಭಾರತವು ಅರ್ಥಿಕವಾಗಿ ಸದೃಢವಾಗುತ್ತಿರುವ ಹೊರತಾಗಿಯೂ ದೇಶದಲ್ಲಿ ಪ್ರಾಯಕ್ಕೆ ಸರಿಯಾದ ದೇಹದ ಬೆಳವಣಿಗೆಯಿರದ (ಕುಬ್ಜ) ಮಕ್ಕಳ ಸಂಖ್ಯೆಯು ಸಬ್-ಸಹರನ್ ಆಫ್ರಿಕಾದ ರಾಷ್ಟ್ರಗಳ ಮಕ್ಕಳಿಗಿಂತ ಹೆಚ್ಚಿದೆ. ಭಾರತದಲ್ಲಿ ಜಾತಿ ತಾರತಮ್ಯ ಅಧಿಕವಾಗಿರುವುದೇ ಇದಕ್ಕೆ ಕಾರಣವೆಂದು ‘ಜರ್ನಲ್ ಆಫ್ ಇಕನಾಮಿಕ್ಸ್, ರೇಸ್ ಆ್ಯಂಡ್ ಪಾಲಿಸಿ‘ ನಿಯತಕಾಲಿಕೆ ಅಕ್ಟೋಬರ್ 26ರಂದು ಪ್ರಕಟಿಸಿದ ಅಧ್ಯಯನ ವರದಿಯಯಲ್ಲಿ ತಿಳಿಸಿದೆ.

ಅರ್ಥಶಾಸ್ತ್ರಜ್ಞರಾದ ಅಶ್ವಿನಿ ದೇಶಪಾಂಡೆ ಮತ್ತು ರಾಜೇಶ್ ರಾಮಚಂದ್ರನ್ ಅವರು ರಚಿಸಿರುವ ಅಧ್ಯಯನ ವರದಿಯಲ್ಲಿ, ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳಂತಹ ಐತಿಹಾಸಿಕವಾಗಿ ಕಡೆಗಣಿಸಲ್ಪಟ್ಟಿರುವ ಸಮುದಾಯಗಳ ಮಕ್ಕಳು ಕುಳ್ಳಗಿರುವ ಸಾಧ್ಯತೆಯು, ಪ್ರಬಲ ಜಾತಿಯ ಮಕ್ಕಳಿಗಿಂತ ಶೇ.50ರಷ್ಟು ಅಧಿಕವೆಂದು  ಹೇಳಲಾಗಿದೆ.

ಪ್ರಬಲ ಪಂಗಡಗಳ ಶೇ.27ರಷ್ಟು ಮಕ್ಕಳಲ್ಲಿ ಕುಬ್ಜತೆಯುು ಕಂಡು ಬಂದಿದೆ. ಸಬ್‌-ಸಹರನ್ ಆಫ್ರಿಕಾದಲ್ಲಿ ಶೇ.34ರಷ್ಟು ಮಕ್ಕಳು ವಯಸ್ಸಿಗಿಂತ ಕಡಿಮೆ ಎತ್ತರವನ್ನು ಹೊಂದಿದ್ದರೆ, ಭಾರತದಲ್ಲಿ ಅಂತಹ ಮಕ್ಕಳ ಸಂಖ್ಯೆ ಒಟ್ಟಾರೆ ಶೇ.36 ಆಗಿದೆ. ದೀರ್ಘಕಾಲದ ಅಥವಾ ಪುನರಾವರ್ತಿತ ಅಪೌಷ್ಟಿಕತೆಯು ಮಕ್ಕಳ ಕುಬ್ಜತನಕ್ಕೆ ಕಾರಣವೆಂದು ವರದಿಯು ವಿವರಿಸಿದೆ.

ಸಬ್-ಸಹರನ್ ಆಫ್ರಿಕಾದ ಮಕ್ಕಳು ಭಾರತದಲ್ಲಿರುವುದಕ್ಕಿಂತ ‘ಕೆಟ್ಟ ರೋಗ ಪರಿಸರ ಮತ್ತು ಕಡಿಮೆ ಕ್ಯಾಲೋರಿ ಸಮಸ್ಯೆ’ಯನ್ನು ಎದುರಿಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.

ಭಾರತದ ಮಕ್ಕಳಲ್ಲಿ ಹೆಚ್ಚಿನ ಕುಬ್ಜತೆ ಕಂಡು ಬರುತ್ತಿರುವುದನ್ನು ‘ಇಂಡಿಯನ್ ಎನಿಗ್ಮಾ’ಎಂದು ಕರೆದಿರುವ ವರದಿಯು, ಕೇವಲ ಪ್ರಬಲ ವರ್ಗದ ಮಕ್ಕಳನ್ನು ಆಫ್ರಿಕಾದೊಂದಿಗೆ ಹೋಲಿಸಿದರೆ ಭಾರತದ ಸ್ಥಿತಿಯು ಚೆನ್ನಾಗಿದೆ ಎಂದಿದೆ.

ವರದಿಯಲ್ಲಿ ಬಹಿರಂಗಗೊಂಡಿರುವ ವಿಚಾರ ಆಶ್ಚರ್ಯಪಡುವಂತಲ್ಲ. ಸಾಮಾನ್ಯವಾಗಿ ಭಾರತದಲ್ಲಿ ಪ್ರಬಲ ವರ್ಗದ ಮಕ್ಕಳು ಉತ್ತಮ ಆಹಾರ ಪಡೆಯುತ್ತಿದ್ದಾರೆ. ರೋಗಗಳಿಂದ ರಕ್ಷಣೆ ಪಡೆಯುತ್ತಿದ್ದಾರೆ. ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದಿರುವ ವರ್ಗದ ಮತ್ತು ಬುಡಕಟ್ಟು ವರ್ಗದ ಮಕ್ಕಳು ಪೌಷ್ಟಿಕ ಆಹಾರ ಮತ್ತು ರೋಗದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ವರದಿ ಹೇಳಿದೆ.

ದೇಶಪಾಂಡೆ ಮತ್ತು ರಾಮಚಂದ್ರನ್ ಅವರ ಅಧ್ಯಯನ ವರದಿಯನ್ನು ಭಾರತದ ಐದು ವರ್ಷದೊಳಗಿನ 2 ಲಕ್ಷ ಮಕ್ಕಳನ್ನು ಒಳಗೊಂಡ ರಾಷ್ಟ್ರವ್ಯಾಪಿ ಗೃಹ ಸಮೀಕ್ಷೆಯ ಆಧಾರದ ಮೇಲೆ ರಚಿಸಲಾಗಿದೆ. ಇದು 2019 ರಿಂದ 2021ರವರೆಗಿನ ಭಾರತದ ರಾಷ್ಟ್ರೀಯ ಆರೋಗ್ಯ ಮತ್ತು ಜನಸಂಖ್ಯಾ ಸಮೀಕ್ಷೆಗಳ ಮೇಲಿನ ಸಂಶೋಧನೆಗಳನ್ನು ಆಧರಿಸಿದೆ. ಅಲ್ಲದೆ, ಸಬ್‌-ಸಹರನ್ ಆಫ್ರಿಕಾ ದೇಶಗಳ 2015ರ ನಂತರದ ದತ್ತಾಂಶಗಳನ್ನು ಇದಕ್ಕಾಗಿ ವಿಶ್ಲೇಷಿಸಲಾಗಿದೆ.

ಭಾರತದಲ್ಲಿ ವಯಸ್ಸಿಗೆ ಅನುಗುಣವಾದ ಎತ್ತರವನ್ನು ಹೊಂದಿರದ ಮಕ್ಕಳ ಸಂಖ್ಯೆ 2022ರಲ್ಲಿ 31.7 ಶೇಖಡ ಆಗಿದ್ದರೆ, ಸಬ್‌-ಸಹರನ್ ಆಫ್ರಿಕಾದ ರಾಷ್ಟ್ರಗಳಲ್ಲಿ ಅಂತಹ ಮಕ್ಕಳ ಸಂಖ್ಯೆ 31.3 ಶೇ. ಆಗಿದೆ ಎಂದು ವಿಶ್ವಸಂಸ್ಥೆಯ ಮಕ್ಕಳ ನಿಧಿ (ಯುನಿಸೆಫ್), ವಿಶ್ವ ಆರೋಗ್ಯ ಸಂಸ್ಥೆ ಹಾಗೂ ವಿಶ್ವಬ್ಯಾಂಕ್ ಪ್ರಕಟಿಸಿದ ಮಕ್ಕಳ ಪೌಷ್ಟಿಕತೆ ಕುರಿತ ಜಂಟಿ ಅಂದಾಜು ವರದಿ ತಿಳಿಸಿದೆ.

ಅಧ್ಯಯನ ವರದಿ ಪ್ರಕಟಿಸಿರುವ ಅರ್ಥಶಾಸ್ತ್ರಜ್ಞರಾದ ಅಶ್ವಿನಿ ದೇಶಪಾಂಡೆ ಹರಿಯಾಣದ ಅಶೋಕ ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿದ್ದರೆ, ರಾಮಚಂದ್ರನ್ ಅವರು ಮೊನಾಶ್ ವಿಶ್ವವಿದ್ಯಾಲಯ ಮಲೇಷ್ಯಾದಲ್ಲಿ ಹಿರಿಯ ಉಪನ್ಯಾಸಕರಾಗಿದ್ದಾರೆ.

ಭಾರತದಲ್ಲಿ ಮಕ್ಕಳಲ್ಲಿ ಹೆಚ್ಚಾಗುತ್ತಿರುವ ಕುಬ್ಜತೆಯನ್ನು ಪರಿಹರಿಸಲು ಏನಾದರು ನೀತಿ ರೂಪಿಸುವುದಾದರೆ, ಅದರಲ್ಲಿ ಜಾತಿಯನ್ನು ಮುಖ್ಯವಾಗಿ ಪರಿಗಣಿಸಬೇಕು ಎಂದು ಅಧ್ಯಯನ ವರದಿ ಅವರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ : ‘ಜೈ ಶ್ರೀ ರಾಮ್’ ಘೋಷಣೆ ಕೂಗಿಲ್ಲ ಎಂಬ ಕಾರಣಕ್ಕೆ ಊಟ ನಿರಾಕರಿಸಿದ ಎನ್‌ಜಿಒ ಸಿಬ್ಬಂದಿ; ವಿಡಿಯೊ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...

ಉದ್ಯಮಿಗಳಾದ ನಂದನ್ ನಿಲೇಕಣಿ- ನಿಖಿಲ್ ಕಾಮತ್, ನಟ ಶಿವರಾಜ್‌ಕುಮಾರ್ ಅವರಿಗೂ ಎಸ್‌ಐಆರ್ ನೋಟಿಸ್‌

ಇನ್ಫೋಸಿಸ್ ಸಹ-ಸಂಸ್ಥಾಪಕ, ಕೇಂದ್ರ ಸರ್ಕಾರದ 'ಪರೀಕ್ಷಾ ಸುಧಾರಣಾ ಉನ್ನತ ಮಟ್ಟದ ಕಾರ್ಯಪಡೆ' ಮುಕ್ಯಸ್ಥ ನಂದನ್ ನಿಲೇಕಣಿ ಹಾಗೂ ಅವರ ಇಡೀ ಕುಟುಂಬವು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಚುನಾವಣಾ...

ರಾಷ್ಟ್ರೀಯ ಮಹಿಳಾ ಆಯೋಗದ ಕಾರ್ಯಾಗಾರದಲ್ಲಿ ಬರೀ ಹಿಂದಿ ಮಾತು : ಆಕ್ಷೇಪ ವ್ಯಕ್ತಪಡಿಸಿ ಹೊರನಡೆದ ಕೇರಳದ ಶಾಸಕರು

ರಾಷ್ಟ್ರೀಯ ಮಹಿಳಾ ಆಯೋಗ (NCW) ಮಂಗಳವಾರ (ಸೆ.8) ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ, ಬಹುಪಾಲು ಸೆಷನ್‌ಗಳನ್ನು ಹಿಂದಿ ಭಾಷೆಯಲ್ಲೇ ನಡೆಸಲಾಗುತ್ತಿದೆ ಮತ್ತು ಹಿಂದಿ ಮಾತನಾಡದ ರಾಜ್ಯಗಳ ಭಾಗವಹಿಸುವಿಕೆಗೆ ಕರಾರುವಕ್ಕಾಗಿ ನಡವಳಿಕೆಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತಿದೆ ಎಂದು ಆರೋಪಿಸಿ,...

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...