Homeಮುಖಪುಟಸಂಪಾದಕೀಯ; ಮೈಮನಸ್ಸುಗಳಲ್ಲಿ ನಾಟಿರುವ ಜಾತಿಯೆಂಬ ಅಪಾಯಕಾರಿ ಸುಳಿಯಲ್ಲಿ ಬ್ರಾಹ್ಮಣ್ಯದ ಪಾಳೆಗಾರಿಕೆ

ಸಂಪಾದಕೀಯ; ಮೈಮನಸ್ಸುಗಳಲ್ಲಿ ನಾಟಿರುವ ಜಾತಿಯೆಂಬ ಅಪಾಯಕಾರಿ ಸುಳಿಯಲ್ಲಿ ಬ್ರಾಹ್ಮಣ್ಯದ ಪಾಳೆಗಾರಿಕೆ

- Advertisement -
- Advertisement -

ಕರ್ನಾಟಕದಲ್ಲಿ ಹಲವು ಕಾಲಘಟ್ಟಗಳಲ್ಲಿ ಸಾಂಸ್ಕೃತಿಕ ಚರ್ಚೆ-ವಾಗ್ವಾದಗಳು ಜರುಗಿವೆ. ಆ ವಾಗ್ವಾದಗಳಲ್ಲಿ ಹಲವು ಬಾರಿ ಜಾತಿಯ ವಿಷಯವೂ ಮುನ್ನೆಲೆಗೆ ಬಂದು ಒಂದಷ್ಟು ಹೊಸ ತಿಳಿವಳಿಕೆಗೆ ದಾರಿಮಾಡಿಕೊಟ್ಟಿದೆ. ಕುವೆಂಪು ಅವರ ಶೂದ್ರತಪಸ್ವಿ ನಾಟಕದ ವಾಗ್ವಾದ ಇರಬಹುದು, ಬಿ.ಬಸವಲಿಂಗಪ್ಪನವರ ಬೂಸಾ ಪ್ರಕರಣ ಇರಬಹುದು, ಸಾಂಸ್ಕೃತಿಕ ಮತ್ತು ರಾಜಕೀಯ ರಂಗಗಳಲ್ಲಿ ಬಿಸಿಬಿಸಿ ಜಾತಿ ಚರ್ಚೆಗಳು ನಡೆದಿವೆ. ಬ್ರಾಹ್ಮಣ್ಯ ಮತ್ತು ಪುರೋಹಿತಶಾಹಿ ಪಾರಮ್ಯವನ್ನು ಪ್ರಶ್ನಿಸಲಾಗಿದೆ. ಆದರೂ ಬ್ರಾಹ್ಮಣ್ಯದ ಯಜಮಾನಿಕೆಯನ್ನು ನಮ್ಮ ಸಮಾಜದಿಂದ ತೊಲಗಿಸುವುದು ಸುಲಭ ಮಾತಲ್ಲ. ಈಗ ಕನ್ನಡ ಚಿತ್ರನಟರಾದ ಚೇತನ್ ಅಹಿಂಸ ಮತ್ತು ಕಿರಣ್ ಶ್ರೀನಿವಾಸ್ ಈ ಚರ್ಚೆಗೆ ಹೊಸ ಹೊಳಪು ನೀಡಿದ್ದು, ಚೇತನ್ ಅವರ ಮೇಲೆ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ನಗರ ಪೊಲೀಸ ಕಮಿಶನರ್ ಕಮಲ್ ಪಂತ್ ಅವರಿಗೆ ದೂರು ನೀಡಿದ್ದರು. ಅದಲ್ಲದೆ ರಾಜ್ಯದ ಹಲವು ಕಡೆ ಚೇತನ್ ವಿರುದ್ಧ ದೂರು ದಾಖಲಾಗಿದ್ದು, ಅವರು ಪೊಲೀಸ್ ವಿಚಾರಣೆಗೂ ಹಾಜರಾಗಿದ್ದಾರೆ. ತಾವು ನುಡಿದಿರುವ ಮಾತುಗಳಿಗೆ ಬದ್ಧರಾಗಿರುವುದಾಗಿಯೂ ಮತ್ತು ವಿಚಾರಣೆಗೆ ಸಂಪೂರ್ಣವಾಗಿ ಸಹಕರಿಸುವುದಾಗಿಯೂ ಚೇತನ್ ತಿಳಿಸಿ ಘನತೆಯನ್ನು ಮೆರೆದಿದ್ದಾರೆ. ತಾವು ಒಂದು ನಿರ್ದಿಷ್ಟ ಜಾತಿಯ ವಿರುದ್ಧ ಮಾತನಾಡಿಲ್ಲ; ಬದಲಾಗಿ ಬ್ರಾಹ್ಮಣ್ಯದ ವಿರುದ್ಧ ಮಾತನಾಡಿದ್ದೀನಿ, ತಾರತಮ್ಯವನ್ನು ಪೋಷಿಸುವ ಬ್ರಾಹ್ಮಣ್ಯ ಇಂದು ಎಲ್ಲ ಜಾತಿಗಳಲ್ಲೂ ಇದೆ ಎಂದು ಅವರು ಸ್ಪಷ್ಟಪಡಿಸಿದ್ದರೂ ಅವರ ವಿರುದ್ಧ ಹಲವು ವೇದಿಕೆಗಳಲ್ಲಿ ನಿಂದನೆಯನ್ನು ಸುರಿಸಲಾಗುತ್ತಿದೆ.

1938ರಲ್ಲಿ ನಡೆದ ರೈಲ್ವೇ ನಿಮ್ನವರ್ಗದ ಕಾರ್ಮಿಕರ ಸಮಾವೇಶದಲ್ಲಿ ಮಾತನಾಡುತ್ತಾ ಬಾಬಾಸಾಹೇಬರು ಬ್ರಾಹ್ಮಣ್ಯವನ್ನು ಹೀಗೆ ವ್ಯಾಖ್ಯಾನಿಸುತ್ತಾರೆ: “ನನ್ನ ದೃಷ್ಟಿಯಲ್ಲಿ, ಈ ದೇಶದ ಕಾರ್ಮಿಕರು ಇಬ್ಬರು ಶತ್ರುಗಳ ಜೊತೆಗೆ ಹೋರಾಡಬೇಕಿದೆ. ಆ ಇಬ್ಬರು ಶತ್ರುಗಳು ಬ್ರಾಹ್ಮಣ್ಯ ಮತ್ತು ಬಂಡವಾಳಶಾಹಿ” ಎನ್ನುವ ಅವರು ಮುಂದುವರೆದು “ಬ್ರಾಹ್ಮಣ್ಯ ಅಂದರೆ ಬ್ರಾಹ್ಮಣರು ಒಂದು ಸಮುದಾಯವಾಗಿ ಹೊಂದಿರುವ ಅಧಿಕಾರ, ಸವಲತ್ತುಗಳು ಮತ್ತು ಹಿತಾಸಕ್ತಿಯಷ್ಟೇ ಅಲ್ಲ. ಆ ದೃಷ್ಟಿಯಲ್ಲಿ ನಾನು ಆ ಪದವನ್ನು ಬಳಸುತ್ತಿಲ್ಲ. ಬ್ರಾಹ್ಮಣ್ಯ ಅಂದರೆ ನನ್ನ ಪ್ರಕಾರ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಭಾವನೆಯನ್ನು ಇಲ್ಲವಾಗಿಸುವುದು. ಆ ನಿಟ್ಟಿನಲ್ಲಿ ಇದು ಎಲ್ಲಾ ವರ್ಗಗಳಲ್ಲೂ ವ್ಯಾಪಕವಾಗಿದೆ ಮತ್ತು ಇದರ ಹುಟ್ಟಿಗೆ ಅವರೇ ಕಾರಣರಾಗಿದ್ದರೂ ಬ್ರಾಹ್ಮಣರಲ್ಲಿ ಮಾತ್ರ ಅದು ಉಳಿದಿದೆ ಎನ್ನಲಾಗುವುದಿಲ್ಲ” ಎನ್ನುತ್ತಾರೆ. ಮುಂದುವರೆದು “…ಬ್ರಾಹ್ಮಣ್ಯ ಕೆಲವು ವರ್ಗಗಳಿಗೆ ಮಾತ್ರ ಸವಲತ್ತಿನ ಸ್ಥಾನ ನೀಡುತ್ತದೆ. ಕೆಲವು ವರ್ಗಗಳಿಗೆ ಅದು ಅವಕಾಶದ ಸಮಾನತೆಯನ್ನು ನಿರಾಕರಿಸುತ್ತದೆ” ಎಂದು ವ್ಯಾಖ್ಯಾನಿಸಿ, ಅಂದಿನ ಯೂನಿಯನ್ ಲೀಡರ್‌ಗಳಲ್ಲಿ ಇದ್ದ ಬ್ರಾಹ್ಮಣ್ಯವನ್ನೂ ವಿಮರ್ಶಿಸಿ, ಟೀಕಿಸಿ ನಿಮ್ನವರ್ಗದ ಕಾರ್ಮಿಕರ ಹಿತವನ್ನು ಕಾಪಾಡುವಂತಹ ಹೊಸ ಯೂನಿಯನ್ ಅವಶ್ಯಕತೆಯ ಬಗ್ಗೆ, ಆ ಯೂನಿಯನ್ ರಾಜಕೀಯ ಅಧಿಕಾರಕ್ಕೆ ಪ್ರಯತ್ನಿಸಬೇಕಾದ ಬಗ್ಗೆ ಬಾಬಾಸಾಹೇಬರು ಅಂದು ಮಾಡಿದ ಭಾಷಣ ಐತಿಹಾಸಿಕವಾದದ್ದು.

ಬ್ರಾಹ್ಮಣ್ಯದ ಬಗ್ಗೆ ಇಷ್ಟು ವರ್ಷಗಳಿಂದ ಹೊಮ್ಮಿರುವ ಸ್ಪಷ್ಟವಾದ ವಿಚಾರವನ್ನು ಕಡೆಗಣಿಸಿ, ಈ ನೆಲದ ಪಾರಂಪರಿಕ ಜಾತಿ ತಾರತಮ್ಯವನ್ನು ಬಯಸುವ ಮನಸ್ಸುಗಳು ಇಂದು ಮತ್ತೆ ರಚ್ಚೆ ಹಿಡಿದಿವೆ. ಇದು ಕುವೆಂಪು ಕಾಲದಲ್ಲಿಯೂ ಆಗಿತ್ತು. ಬಸವಲಿಂಗಪ್ಪ, ಸಿದ್ಧಲಿಂಗಯ್ಯನವರ ಮೇಲೆ ದಾಳಿ ನಡೆಸಿದ ಶಕ್ತಿಗಳು ಕೂಡ ಇವೇ ಆಗಿದ್ದವು. ಇಂದು ಚೇತನ್ ಮೇಲೆ ಮುಗಿಬಿದ್ದವರೂ ಅವರೇ ಆಗಿದ್ದಾರೆ. ವಿವಿಧ ಕಾಲಘಟ್ಟಗಳಲ್ಲಿ ಬ್ರಾಹ್ಮಣ್ಯವನ್ನು ತೊಲಗಿಸುವುದಕ್ಕೆ ಚಿಂತಿಸಿದವರ ಮೇಲೆ, ಅದಕ್ಕಾಗಿ ಕೆಲಸ ಮಾಡಿದವರ ಮೇಲೆ ದಾಳಿ ನಡೆಸಿರುವುದಕ್ಕೆ ಹಲವು ನಿದರ್ಶನಗಳಿವೆ. ಆರ್.ವೆಂಕಟೇಶ್ ಎಂಬುವವರು ’ವಿಚಾರ ತರಂಗ’ ಎಂಬ ಪುಸ್ತಕವೊಂದನ್ನು ಸಂಪಾದಿಸಿದ್ದಾರೆ. ವಿಚಾರವಾದ ಗೌಣವಾಗಿದ್ದು ಬ್ರಾಹ್ಮಣ್ಯದ ಶ್ರೇಷ್ಠತೆಯ ವ್ಯಸನಕ್ಕೆ ಬಿದ್ದಿರುವ ಕೃತಿಯದು. ಪುಸ್ತಕದ ಕೊನೆಯ ಭಾಗದ ’ವಿಶ್ವಮಾನವೀಯ ಚಿಂತನ’ ಎಂಬ ತಲೆಬರಹದಲ್ಲಿ ಪ್ರಕಟವಾಗಿರುವ ಲೇಖನಗಳಲ್ಲಿ ಕುವೆಂಪು ಅವರನ್ನು, ಅವರ ವಿಶ್ವಮಾನವ ವಿಚಾರವನ್ನು

PC : Prajavani

ವಿರೋಧಿಸುವ ಲೇಖನಗಳದ್ದೇ ಸಿಂಹಪಾಲು. ಅದರಲ್ಲಿ ಸ್ಥಾನ ಪಡೆದುಕೊಂಡಿರುವ ಪರಮ ಬ್ರಾಹ್ಮಣ್ಯದ ಲೇಖನ ’ವಿಶ್ವಮಾನವೀಯತೆ ಹಾಗು ಸಮಯಸಾಧಕತನ’. 1975ರಲ್ಲಿ ’ಮಧ್ವವಿಜಯ’ ಎಂಬ ಪತ್ರಿಕೆಗೆ ಪುತ್ತಿಗೆ ಲಕ್ಷ್ಮೀನಾರಾಯಣರಾಯರು ಎಂಬುವವರು ಬರೆದಿರುವ ಸಂಪಾದಕೀಯದಲ್ಲಿ ಕುವೆಂಪು ಮತ್ತು ಪ್ರಗತಿಪರ ಬರಹಗಾರರ ಒಕ್ಕೂಟದ ಮೇಲೆ ವಿಷ ಕಾರುವುದಕ್ಕೆಂದೇ ಅವರು ತಮ್ಮ ಬುದ್ಧಿಯನ್ನೆಲ್ಲಾ ಖರ್ಚು ಮಾಡಿದ್ದಾರೆ. ಅದರ ಒಂದು ಪ್ಯಾರಾವನ್ನು ಇಲ್ಲಿ ಉಲ್ಲೇಖಿಸುತ್ತಿರುವ ಉದ್ದೇಶ, ಬ್ರಾಹ್ಮಣ್ಯದ ನೀಚತನ ಸ್ಪಷ್ಟವಾದೀತೆಂದು: “…ನನಗೀಗ ಬಲವಾದ ಅನುಮಾನವೊಂದು ಕಾಡುತ್ತಿದೆ. ಇದನ್ನು ಅಮೆರಿಕಾದ ವಾಟರ್‌ಗೇಟ್ ಪ್ರಕರಣದಂತೆ ಯಾರಾದರೂ ಸಾಹಸಿಗಳು ಬಯಲಿಗೆಳೆದರೆ ಉಪಕಾರ. ಇತ್ತೀಚೆಗೆ ಗತಿಸಿದ ದೊಡ್ಡ ವಾಗ್ಗೇಯಕಾರರು, ತತ್ತ್ವಶಾಸ್ತ್ರ ಪಂಡಿತರು, ಮಹಾಮೇಧಾವಿಗಳೆಂದು ದೇಶವಿದೇಶಗಳಲ್ಲಿ ಮೂಢ ಜನರಿಂದ ಮತ್ತು ಭಟ್ಟಂಗಿಗಳಿಂದ ಹೊಗಳಿಸಿಕೊಂಡ ದೊಡ್ಡ ವ್ಯಕ್ತಿಯೊಬ್ಬರಿಗೆ ಕೀರ್ತನೆ ಪ್ರಬಂಧಗಳನ್ನು ಭಾಷಣಗಳನ್ನು ಬರೆದುಕೊಡುತ್ತಿದ್ದವರೆಲ್ಲಾ ಯಾರು ಯಾರು ಎಂಬುದು ನನಗೆ ಗೊತ್ತು. ಇದು ಪ್ರಚಾರಯುಗ, ಭಾಷಣಯುಗ. ಪತ್ರಿಕೆಗಳಲ್ಲಿ ಬಂದದ್ದೆಲ್ಲಾ ಸತ್ಯವೆಂದು ತಿಳಿದು ವಿಮರ್ಶೆ ಮಾಡದೆ ನಂಬುವ ಅವಿದ್ಯಾವಂತರೇ ಬಹುತೇಕವಾಗಿರುವ ಈ ನಮ್ಮ ದೇಶದಲ್ಲಿ ಇದೆಲ್ಲಾ ಈಗೀಗ ಮಾಮೂಲು. ಇಲಿಮರಿಯಿಂದ ಹಿಡಿದು ಪರಮಾಣು ಬಾಂಬಿನವರೆಗೆ (Every Thing Under Sun) ವೇದಿಕೆಯ ಮೇಲೆ ಭರ್ಜರಿ ಹೂ ಹಾರ ಹಾಕಿಸಿಕೊಂಡು ತಾವು ಮಾತನಾಡುವ ವಿಷಯದ ಬಗ್ಗೆ ಸ್ವಲ್ಪ ಕೂಡಾ ತಮಗೆ ತಿಳಿದಿಲ್ಲವಾದರೂ ಮಂತ್ರಿಗಳೆಲ್ಲ ಭಾಷಣ ಬಿಗಿಯುತ್ತಾರೆ. ಕಾರ್ಯದರ್ಶಿಗಳು ಬರೆದುಕೊಡುತ್ತಾರೆ, ಮಂತ್ರಿಗಳು ಭಾಷಣ ಬಿಗಿಯುತ್ತಾರೆ. ಇಬ್ಬರಿಗೂ ಇದೇ ಕೆಲಸ ಯಾವಾಗಲೂ. ಹಾಗೆಯೇ ಪುಟ್ಟಪ್ಪ ದಕ್ಷಿಣೆಯ ಆಸೆ ತೋರಿಸಿ ಬಡ ಬ್ರಾಹ್ಮಣನೊಬ್ಬನಿಂದ ಬರೆಸಿರಬಹುದೆ?”

PC : ಅರಳಿಮರ

ಕುವೆಂಪು ಅವರಿಗೆ ಇಂತಹ ನೀಚ ಶಕ್ತಿಗಳನ್ನು ಮೆಟ್ಟಿನಿಲ್ಲುವ ಶಕ್ತಿ ಹಲವು ಕಾರಣಗಳಿಂದ ಒದಗಿತ್ತು. ಆದರೆ ಒಂದು ಹೇಳಿಕೆಗಾಗಿ ಬಿ.ಬಸವಲಿಂಗಪ್ಪನವರನ್ನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮಾಡಿದ ಜಾತಿ ಕಬಂಧಗಳು ಮತ್ತು ಅದರಲ್ಲಿ ಅಂತರ್ಗತವಾಗಿರುವ ಬ್ರಾಹ್ಮಣ್ಯ ಎಷ್ಟು ದೈತ್ಯಾಕಾರವಾದದ್ದು, ಎಷ್ಟು ವಿಷಕಾರಿ ಮತ್ತು ಎಷ್ಟು ವಿನಾಶಕಾರಿ ಎಂಬುದನ್ನು ಮನಗಾಣಬಹುದು. ಇಂದು ಚೇತನ್ ವಿರುದ್ಧ ಅದು ತನ್ನ ತೋಳು ತಟ್ಟಿರುವುದು ಸಾಂಕೇತಿಕವಷ್ಟೇ! ಸಾವಿರಾರು ವರ್ಷಗಳಿಂದ ಅದರ ಕಾಲ್ತುಳಿತಕ್ಕೆ ಸಿಕ್ಕಿ ನಶಿಸಿಹೋದವರಿಗೆ ಲೆಕ್ಕವೇ ಇಲ್ಲ. ಮತ್ತೊಂದು ಕೋನದಿಂದ ನೋಡುವುದಾದರೆ ಆರ್ಥಶಾಸ್ತ್ರಜ್ಞ ಜೀನ್ ಡ್ರೀಜ್ ಹೇಳುವಂತೆ, ಸಂವಿಧಾನ ನೀಡಿದ ಬಲದಿಂದ ಈಗಷ್ಟೇ ಹಿಂದುಳಿದವರು ಮತ್ತು ದಲಿತರು ಸಣ್ಣ ಮಟ್ಟದಲ್ಲಿ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮುಂದುವರೆಯುತ್ತಿದ್ದಂತೆ, ಹೊಟ್ಟೆ ಉರಿಯಿಂದ ಮೇಲ್ಜಾತಿಗಳು ಎದ್ದಿರುವ ’ಬಂಡಾಯ’ ಕೂಡ ಇದಾಗಿದೆ.

ಇಂತಹ ದುರಿತ ಸಮಯದಲ್ಲಿ ನ್ಯಾಯಪಥ ಪತ್ರಿಕೆಯ ಈ ಸಂಚಿಕೆಯಲ್ಲಿ ಬ್ರಾಹ್ಮಣ್ಯದ ಬಗ್ಗೆ ಚರ್ಚೆಯನ್ನು ಪ್ರಾರಂಭಿಸಿದ್ದೇವೆ. ಚಿಂತಕರಾದ ರಾಜೇಂದ್ರ ಚೆನ್ನಿ, ಕವಿ ಮೂಡ್ನಾಕೂಡು ಚಿನ್ನಸ್ವಾಮಿ, ಯುವ ಸಂಶೋಧಕ ಅಮರ್ ಹೊಳೆಗದ್ದೆ ತಮ್ಮ ವಾದಗಳನ್ನು ಮಂಡಿಸಿದ್ದಾರೆ. ಬ್ರಾಹ್ಮಣ್ಯದ ಬೇರುಗಳು ಎಷ್ಟು ಆಳಕ್ಕೆ ಇಳಿದಿವೆಯೋ ಹಾಗೆಯೇ ಈ ಆಧುನಿಕ ಜಗತ್ತಿನಲ್ಲಿ ಅದು ಚಾಚಿರುವ ಕೊಂಬೆಗಳು ಕೂಡ ವಿಸ್ತಾರವಾಗಿದೆ. ವಾಸಿಸುವ ಸ್ಥಳಗಳಲ್ಲಿ ಸೆಗ್ರಿಗೇಶನ್, ಮೆರಿಟ್ ಎಂಬುದರ ಬಗ್ಗೆ ಸುಳ್ಳಿನ ಪ್ರಾಮುಖ್ಯತೆ, ಮೀಸಲಾತಿ-ಪ್ರಾತಿನಿಧ್ಯದ ಬಗ್ಗೆ ಲೇವಡಿ ಮಾಡುವ ಪ್ರಚಾರ ಇತ್ಯಾದಿಯಾಗಿ ಅದು ರೂಪಾಂತರಗೊಂಡಿದೆ. ಪತ್ರಿಕೆ ಮುಂದಿನ ವಾರಗಳಲ್ಲಿ ಇವುಗಳ ಚರ್ಚೆಯನ್ನು ಪ್ರಮುಖವಾಗಿ ಕೈಗೆತ್ತಿಕೊಳ್ಳಲಿದೆ.


ಇದನ್ನೂ ಓದಿ: ಬ್ರಾಹ್ಮಣ್ಯದ ವಿರೋಧ ಮತ್ತು ಜಾತಿ ವಾಸ್ತವದ ಪ್ರಶ್ನೆಗೆ ಒಂದು ಉತ್ತರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...