Homeಮುಖಪುಟ"ಜಾತಿ ಭಾರತವನ್ನು ಒಗ್ಗೂಡಿಸುವ ಅಂಶ" : ಜಾತಿ ವ್ಯವಸ್ಥೆಯನ್ನು ಸಮರ್ಥಿಸಿಕೊಂಡ ಆರ್‌ಎಸ್‌ಎಸ್‌ ಮುಖವಾಣಿ ; ವರದಿ

“ಜಾತಿ ಭಾರತವನ್ನು ಒಗ್ಗೂಡಿಸುವ ಅಂಶ” : ಜಾತಿ ವ್ಯವಸ್ಥೆಯನ್ನು ಸಮರ್ಥಿಸಿಕೊಂಡ ಆರ್‌ಎಸ್‌ಎಸ್‌ ಮುಖವಾಣಿ ; ವರದಿ

- Advertisement -
- Advertisement -

ಬಿಜೆಪಿ ಸಂಸದ ಅನುರಾಗ್ ಠಾಕೂರ್ ಅವರು ಇತ್ತೀಚಿಗೆ ಸಂಸತ್ತಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಜಾತಿ ಪ್ರಶ್ನಿಸಿ ವಿವಾದವೊಂದನ್ನು ಸೃಷ್ಟಿಸಿದ್ದರು. ಈ ಹಿನ್ನೆಲೆ ಆರ್‌ಎಸ್‌ಎಸ್‌ ಮುಖವಾಣಿ ‘ಪಾಂಚಜನ್ಯ’ ಸಾಪ್ತಾಹಿಕವು ತನ್ನ ಇತ್ತೀಚಿನ ಸಂಚಿಕೆಯಲ್ಲಿ ಜಾತಿ ವ್ಯವಸ್ಥೆಯನ್ನು ಬಲವಾಗಿ ಸಮರ್ಥಿಸಿದೆ ಎಂದು indianexpress.com ವರದಿ ಮಾಡಿದೆ.

ಜಾತಿ ವ್ಯವಸ್ಥೆಯನ್ನು ಭಾರತೀಯ ಸಮಾಜದ “ಒಗ್ಗೂಡಿಸುವ ಅಂಶ” ಎಂದು ತನ್ನ ಸಂಪಾದಕೀಯದಲ್ಲಿ ಪ್ರತಿಪಾದಿಸಿರುವ ವಾರಪತ್ರಿಕೆ, “ಮೊಘಲರಿಗೆ ಅದನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗಲಿಲ್ಲ ಮತ್ತು ಬ್ರಿಟಿಷರು ಅದನ್ನು ತಮ್ಮ ಭಾರತವನ್ನು ಆಕ್ರಮಿಸುವ ಮಾರ್ಗದಲ್ಲಿನ ತಡೆ ಎಂಬುವುದಾಗಿ ಪರಿಗಣಿಸಿದ್ದರು” ಎಂದಿದೆ.

“ಜಾತಿ ವ್ಯವಸ್ಥೆಯು ಭಾರತದ ವಿವಿಧ ವರ್ಗಗಳನ್ನು ಅವರ ವೃತ್ತಿ ಮತ್ತು ಸಂಪ್ರದಾಯದ ಆಧಾರದಲ್ಲಿ ವರ್ಗೀಕರಿಸಿದ ಒಂದು ಸರಪಳಿಯಾಗಿತ್ತು. ಕೈಗಾರಿಕಾ ಕ್ರಾಂತಿಯ ನಂತರ, ಬಂಡವಾಳಶಾಹಿಗಳು ಜಾತಿ ವ್ಯವಸ್ಥೆಯನ್ನು ಭಾರತದ ಕಾವಲುಗಾರನಂತೆ ನೋಡಿದರು” ಎಂದು ವಾರಪತ್ರಿಕೆಯ ಸಂಪಾದಕ ಹಿತೇಶ್ ಶಂಕರ್ ಸಂಪಾದಕೀಯದಲ್ಲಿ ಹೇಳಿದ್ದಾರೆ” ಎಂದು indianexpress.com ಹೇಳಿದೆ.

“ಜಾತಿ ವ್ಯವಸ್ಥೆಯು ಯಾವಾಗಲೂ ಆಕ್ರಮಣಕೋರರ ಗುರಿಯಾಗಿತ್ತು ಎಂದು ವಾದಿಸಿರುವ ಶಂಕರ್,‌ ಮೊಘಲರು ತಮ್ಮ ಖಡ್ಗದ ಬಲದಿಂದ ಅದನ್ನು ಗುರಿಯಾಗಿಸಿಕೊಂಡಿದ್ದರೆ, ಕ್ರೈಸ್ತ ಮಿಶನರಿಗಳು ಸೇವೆ ಮತ್ತು ಸುಧಾರಣೆಯ ಸೋಗಿನಲ್ಲಿ ಹಾಗೆ ಮಾಡಿದ್ದರು. ಜಾತಿಯ ರೂಪದಲ್ಲಿ ಭಾರತೀಯ ಸಮಾಜವು ಒಬ್ಬರ ಜಾತಿಗೆ ದ್ರೋಹವನ್ನು ಬಗೆಯುವುದು ದೇಶಕ್ಕೆ ದ್ರೋಹವಾಗಿದೆ ಎಂಬ ಸರಳವಾದ ವಿಷಯವನ್ನು ಅರ್ಥ ಮಾಡಿಕೊಂಡಿದೆ. ಮಿಶನರಿಗಳು ಭಾರತದ ಈ ಒಗ್ಗಟ್ಟಿನ ಸಮೀಕರಣವನ್ನು ಮೊಘಲರಿಗಿಂತ ಚೆನ್ನಾಗಿ ಅರಿತಿದ್ದರು. ಭಾರತ ಮತ್ತು ಅದರ ಸ್ವಾಭಿಮಾನವನ್ನು ಮುರಿಯಬೇಕಿದ್ದರೆ ಮೊದಲು ಜಾತಿ ವ್ಯವಸ್ಥೆಯನ್ನು ಬಂಧನ ಅಥವಾ ಶೃಂಖಲೆ ಎಂದು ಕರೆಯುವ ಮೂಲಕ ಜಾತಿಯ ಏಕೀಕರಣ ಸಮೀಕರಣವನ್ನು ಮುರಿಯಬೇಕು ಎನ್ನುವುದನ್ನು ಅವರು ಕಂಡುಕೊಂಡಿದ್ದರು. ಜಾತಿ ವ್ಯವಸ್ಥೆಯ ಕುರಿತು ಮಿಶನರಿಗಳ ಈ ತಿಳುವಳಿಕೆಯನ್ನು ಬ್ರಿಟಿಷರು ತಮ್ಮ ‘ಒಡೆದು ಆಳುವ’ ನೀತಿಗಾಗಿ ಅಳವಡಿಸಿಕೊಂಡಿದ್ದರು” ಎಂದು ಸಂಪಾದಕೀಯವು ವಾದಿಸಿದೆ ವರದಿ ತಿಳಿಸಿದೆ.

‘ಪಾಂಚಜನ್ಯ’ ದಿಂದ ಜಾತಿ ವ್ಯವಸ್ಥೆಯ ಈ ಸಮರ್ಥನೆಯು ಮಹತ್ವದ್ದಾಗಿದೆ, ಏಕೆಂದರೆ ವಂಚಿತ ವರ್ಗಗಳಿಗೆ ನೀಡಲಾಗಿರುವ ಮೀಸಲಾತಿಗೆ ತಾನು ವಿರುದ್ಧವಾಗಿಲ್ಲ ಎಂದು ವಿವರಿಸುವುದು ಆರೆಸ್ಸೆಸ್‌ಗೆ ಕಷ್ಟವಾಗಿರುವ ಸಮಯದಲ್ಲಿ ಈ ಸಮರ್ಥನೆ ಬಂದಿದೆ.

ಜಾತಿ ತಾರತಮ್ಯವು ಭಾರತೀಯ ಸಮಾಜಕ್ಕೆ ಶಾಪವಾಗಿದೆ ಮತ್ತು ಅದನ್ನು ತೊಡೆದುಹಾಕಬೇಕು ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ ಭಾಗವತ್ ಪದೇ ಪದೇ ಹೇಳುತ್ತಾರೆ. ತಮ್ಮ ಸಹೋದ್ಯೋಗಿಗಳ ಜಾತಿ ತಮಗೆ ತಿಳಿದಿಲ್ಲ ಎಂದು ಆರೆಸ್ಸೆಸ್ ಸದಸ್ಯರು ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ.

ಕಳೆದ 2,000 ವರ್ಷಗಳಿಂದ ಕೆಳಜಾತಿಗಳು ಅನುಭವಿಸಿರುವ ತಾರತಮ್ಯವನ್ನು ಸರಿದೂಗಿಸಲು ಮೀಸಲಾತಿಯನ್ನು ಇನ್ನೂ 200 ವರ್ಷಗಳ ಕಾಲ ಮುಂದುವರಿಸಿದರೂ ತಾನು ಅದನ್ನು ಬೆಂಬಲಿಸುತ್ತೇನೆ ಎಂದು ಭಾಗವತ್ ಕಳೆದ ವರ್ಷ ಹೇಳಿದ್ದರು.

“ಒಂದು ಜಾತಿ ಗುಂಪಿನಲ್ಲಿ ಪೀಳಿಗೆಯಿಂದ ಪೀಳಿಗೆಗೆ ವರ್ಗಾವಣೆಗೊಂಡ ಕೌಶಲ್ಯಗಳಿಂದಾಗಿ ಬಂಗಾಳದ ನೇಕಾರರಂತಹ ಕುಶಲಕರ್ಮಿಗಳು ಎಷ್ಟೊಂದು ನಿಪುಣರಾಗಿದ್ದರೆಂದರೆ ಅವರಂತೆ ಉತ್ಪನ್ನಗಳನ್ನು ಉತ್ಪಾದಿಸಲು ಮ್ಯಾಂಚೆಸ್ಟರ್‌ನ ಜವಳಿ ಗಿರಣಿಗಳಿಗೂ ಸಾಧ್ಯವಾಗಿರಲಿಲ್ಲ ಎಂದು ಪ್ರತಿಪಾದಿಸಿರುವ ಸಂಪಾದಕೀಯವು, ಆಕ್ರಮಣಕೋರರು ಭಾರತದ ಕೈಗಾರಿಕೆಗಳನ್ನು ನಾಶಗೊಳಿಸಿದ್ದು ಮಾತ್ರವಲ್ಲ, ಭಾರತದ ಅನನ್ಯತೆಯನ್ನು ಬದಲಿಸಲು ಮತಾಂತರದ ಮೇಲೂ ಕೇಂದ್ರೀಕರಿಸಿದ್ದರು. ಜಾತಿಗತ ಗುಂಪುಗಳು ಇದಕ್ಕೆ ಮಣಿಯದಿದ್ದಾಗ ಅವರನ್ನು ಅವಮಾನಿಸಲಾಗಿತ್ತು. ಸ್ವಾಭಿಮಾನಿ ಸಮುದಾಯವು ತನ್ನ ತಲೆಯ ಮೇಲೆ ಮಾನವ ಮಲ ಹೊರುವಂತೆ ಬಲವಂತಗೊಳಿಸಿದ್ದವರು ಇದೇ ಜನರಾಗಿದ್ದರು. ಅದಕ್ಕೂ ಮೊದಲು ಭಾರತದಲ್ಲಿ ಇಂತಹ ಸಂಪ್ರದಾಯವಿರಲಿಲ್ಲ”ಎಂದು ಹೇಳಿದೆ.

“ಭಾರತೀಯ ಪೀಳಿಗೆಗಳ ಪ್ರತಿಭೆಗಳನ್ನು ಕಂಡು ಮತ್ಸರ ಪಡುತ್ತಿದ್ದ ಅವೇ ಕಣ್ಣುಗಳು ಹಿಂದೂ ಧರ್ಮದ ವೈವಿಧ್ಯತೆ, ಸಂಪ್ರದಾಯಗಳು ಮತ್ತು ಆಚರಣೆಗಳನ್ನು ನಾಶಗೊಳಿಸುವ ಕನಸು ಕಾಣುತ್ತಿವೆ” ಎಂದು ಶಂಕರ್ ಸಂಪಾದಕೀಯದಲ್ಲಿ ಹೇಳಿದ್ದಾರೆ.

ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಸಂಪಾದಕೀಯ, “ಹಿಂದೂ ಜೀವನವು ಘನತೆ, ನೈತಿಕತೆ, ಜವಾಬ್ದಾರಿ ಮತ್ತು ಕೋಮು ಭ್ರಾತೃತ್ವವನ್ನು ಒಳಗೊಂಡಿದ್ದು, ಜಾತಿಯ ಸುತ್ತ ಸುತ್ತುತ್ತದೆ. ಇದು ವೈಯಕ್ತಿಕ ಕೇಂದ್ರಿತ ಮಿಷನರಿಗಳಿಗೆ ಅರ್ಥವಾಗದ ವಿಷಯ. ಮಿಷನರಿಗಳು ತಮ್ಮ ಮತಾಂತರ ಕಾರ್ಯಕ್ರಮಕ್ಕೆ ಜಾತಿಯನ್ನು ಅಡ್ಡಿಯಾಗಿ ಕಂಡರೆ, ಕಾಂಗ್ರೆಸ್ ಅದನ್ನು ಹಿಂದೂ ಐಕ್ಯತೆಗೆ ಒಂದು ತಡೆಯಾಗಿ ನೋಡುತ್ತದೆ. ಬ್ರಿಟಿಷರ ಮಾದರಿಯಲ್ಲಿ ಲೋಕಸಭೆ ಸ್ಥಾನಗಳನ್ನು ಜಾತಿ ಆಧಾರದ ಮೇಲೆ ವಿಭಜಿಸಿ ದೇಶದಲ್ಲಿ ವಿಭಜನೆಯನ್ನು ಹೆಚ್ಚಿಸಲು ಬಯಸುತ್ತಿದೆ. ಅದಕ್ಕಾಗಿಯೇ ಅದು ಜಾತಿ ಗಣತಿಯನ್ನು ಬಯಸುತ್ತದೆ ಎಂದು ಪಾಂಚಜನ್ಯ ಸಂಪಾದಕೀಯ ಹೇಳಿದೆ ಎಂದು indianexpress.com ವಿವರಿಸಿದೆ.

ಇದನ್ನೂ ಓದಿ : ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ; ಕೃತ್ಯದ ನಂತರ ತನ್ನ ಬಟ್ಟೆಗಳನ್ನು ತೊಳೆದಿದ್ದ ಆರೋಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...