Homeಮುಖಪುಟ"ಜಾತಿ ಭಾರತವನ್ನು ಒಗ್ಗೂಡಿಸುವ ಅಂಶ" : ಜಾತಿ ವ್ಯವಸ್ಥೆಯನ್ನು ಸಮರ್ಥಿಸಿಕೊಂಡ ಆರ್‌ಎಸ್‌ಎಸ್‌ ಮುಖವಾಣಿ ; ವರದಿ

“ಜಾತಿ ಭಾರತವನ್ನು ಒಗ್ಗೂಡಿಸುವ ಅಂಶ” : ಜಾತಿ ವ್ಯವಸ್ಥೆಯನ್ನು ಸಮರ್ಥಿಸಿಕೊಂಡ ಆರ್‌ಎಸ್‌ಎಸ್‌ ಮುಖವಾಣಿ ; ವರದಿ

- Advertisement -
- Advertisement -

ಬಿಜೆಪಿ ಸಂಸದ ಅನುರಾಗ್ ಠಾಕೂರ್ ಅವರು ಇತ್ತೀಚಿಗೆ ಸಂಸತ್ತಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಜಾತಿ ಪ್ರಶ್ನಿಸಿ ವಿವಾದವೊಂದನ್ನು ಸೃಷ್ಟಿಸಿದ್ದರು. ಈ ಹಿನ್ನೆಲೆ ಆರ್‌ಎಸ್‌ಎಸ್‌ ಮುಖವಾಣಿ ‘ಪಾಂಚಜನ್ಯ’ ಸಾಪ್ತಾಹಿಕವು ತನ್ನ ಇತ್ತೀಚಿನ ಸಂಚಿಕೆಯಲ್ಲಿ ಜಾತಿ ವ್ಯವಸ್ಥೆಯನ್ನು ಬಲವಾಗಿ ಸಮರ್ಥಿಸಿದೆ ಎಂದು indianexpress.com ವರದಿ ಮಾಡಿದೆ.

ಜಾತಿ ವ್ಯವಸ್ಥೆಯನ್ನು ಭಾರತೀಯ ಸಮಾಜದ “ಒಗ್ಗೂಡಿಸುವ ಅಂಶ” ಎಂದು ತನ್ನ ಸಂಪಾದಕೀಯದಲ್ಲಿ ಪ್ರತಿಪಾದಿಸಿರುವ ವಾರಪತ್ರಿಕೆ, “ಮೊಘಲರಿಗೆ ಅದನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗಲಿಲ್ಲ ಮತ್ತು ಬ್ರಿಟಿಷರು ಅದನ್ನು ತಮ್ಮ ಭಾರತವನ್ನು ಆಕ್ರಮಿಸುವ ಮಾರ್ಗದಲ್ಲಿನ ತಡೆ ಎಂಬುವುದಾಗಿ ಪರಿಗಣಿಸಿದ್ದರು” ಎಂದಿದೆ.

“ಜಾತಿ ವ್ಯವಸ್ಥೆಯು ಭಾರತದ ವಿವಿಧ ವರ್ಗಗಳನ್ನು ಅವರ ವೃತ್ತಿ ಮತ್ತು ಸಂಪ್ರದಾಯದ ಆಧಾರದಲ್ಲಿ ವರ್ಗೀಕರಿಸಿದ ಒಂದು ಸರಪಳಿಯಾಗಿತ್ತು. ಕೈಗಾರಿಕಾ ಕ್ರಾಂತಿಯ ನಂತರ, ಬಂಡವಾಳಶಾಹಿಗಳು ಜಾತಿ ವ್ಯವಸ್ಥೆಯನ್ನು ಭಾರತದ ಕಾವಲುಗಾರನಂತೆ ನೋಡಿದರು” ಎಂದು ವಾರಪತ್ರಿಕೆಯ ಸಂಪಾದಕ ಹಿತೇಶ್ ಶಂಕರ್ ಸಂಪಾದಕೀಯದಲ್ಲಿ ಹೇಳಿದ್ದಾರೆ” ಎಂದು indianexpress.com ಹೇಳಿದೆ.

“ಜಾತಿ ವ್ಯವಸ್ಥೆಯು ಯಾವಾಗಲೂ ಆಕ್ರಮಣಕೋರರ ಗುರಿಯಾಗಿತ್ತು ಎಂದು ವಾದಿಸಿರುವ ಶಂಕರ್,‌ ಮೊಘಲರು ತಮ್ಮ ಖಡ್ಗದ ಬಲದಿಂದ ಅದನ್ನು ಗುರಿಯಾಗಿಸಿಕೊಂಡಿದ್ದರೆ, ಕ್ರೈಸ್ತ ಮಿಶನರಿಗಳು ಸೇವೆ ಮತ್ತು ಸುಧಾರಣೆಯ ಸೋಗಿನಲ್ಲಿ ಹಾಗೆ ಮಾಡಿದ್ದರು. ಜಾತಿಯ ರೂಪದಲ್ಲಿ ಭಾರತೀಯ ಸಮಾಜವು ಒಬ್ಬರ ಜಾತಿಗೆ ದ್ರೋಹವನ್ನು ಬಗೆಯುವುದು ದೇಶಕ್ಕೆ ದ್ರೋಹವಾಗಿದೆ ಎಂಬ ಸರಳವಾದ ವಿಷಯವನ್ನು ಅರ್ಥ ಮಾಡಿಕೊಂಡಿದೆ. ಮಿಶನರಿಗಳು ಭಾರತದ ಈ ಒಗ್ಗಟ್ಟಿನ ಸಮೀಕರಣವನ್ನು ಮೊಘಲರಿಗಿಂತ ಚೆನ್ನಾಗಿ ಅರಿತಿದ್ದರು. ಭಾರತ ಮತ್ತು ಅದರ ಸ್ವಾಭಿಮಾನವನ್ನು ಮುರಿಯಬೇಕಿದ್ದರೆ ಮೊದಲು ಜಾತಿ ವ್ಯವಸ್ಥೆಯನ್ನು ಬಂಧನ ಅಥವಾ ಶೃಂಖಲೆ ಎಂದು ಕರೆಯುವ ಮೂಲಕ ಜಾತಿಯ ಏಕೀಕರಣ ಸಮೀಕರಣವನ್ನು ಮುರಿಯಬೇಕು ಎನ್ನುವುದನ್ನು ಅವರು ಕಂಡುಕೊಂಡಿದ್ದರು. ಜಾತಿ ವ್ಯವಸ್ಥೆಯ ಕುರಿತು ಮಿಶನರಿಗಳ ಈ ತಿಳುವಳಿಕೆಯನ್ನು ಬ್ರಿಟಿಷರು ತಮ್ಮ ‘ಒಡೆದು ಆಳುವ’ ನೀತಿಗಾಗಿ ಅಳವಡಿಸಿಕೊಂಡಿದ್ದರು” ಎಂದು ಸಂಪಾದಕೀಯವು ವಾದಿಸಿದೆ ವರದಿ ತಿಳಿಸಿದೆ.

‘ಪಾಂಚಜನ್ಯ’ ದಿಂದ ಜಾತಿ ವ್ಯವಸ್ಥೆಯ ಈ ಸಮರ್ಥನೆಯು ಮಹತ್ವದ್ದಾಗಿದೆ, ಏಕೆಂದರೆ ವಂಚಿತ ವರ್ಗಗಳಿಗೆ ನೀಡಲಾಗಿರುವ ಮೀಸಲಾತಿಗೆ ತಾನು ವಿರುದ್ಧವಾಗಿಲ್ಲ ಎಂದು ವಿವರಿಸುವುದು ಆರೆಸ್ಸೆಸ್‌ಗೆ ಕಷ್ಟವಾಗಿರುವ ಸಮಯದಲ್ಲಿ ಈ ಸಮರ್ಥನೆ ಬಂದಿದೆ.

ಜಾತಿ ತಾರತಮ್ಯವು ಭಾರತೀಯ ಸಮಾಜಕ್ಕೆ ಶಾಪವಾಗಿದೆ ಮತ್ತು ಅದನ್ನು ತೊಡೆದುಹಾಕಬೇಕು ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ ಭಾಗವತ್ ಪದೇ ಪದೇ ಹೇಳುತ್ತಾರೆ. ತಮ್ಮ ಸಹೋದ್ಯೋಗಿಗಳ ಜಾತಿ ತಮಗೆ ತಿಳಿದಿಲ್ಲ ಎಂದು ಆರೆಸ್ಸೆಸ್ ಸದಸ್ಯರು ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ.

ಕಳೆದ 2,000 ವರ್ಷಗಳಿಂದ ಕೆಳಜಾತಿಗಳು ಅನುಭವಿಸಿರುವ ತಾರತಮ್ಯವನ್ನು ಸರಿದೂಗಿಸಲು ಮೀಸಲಾತಿಯನ್ನು ಇನ್ನೂ 200 ವರ್ಷಗಳ ಕಾಲ ಮುಂದುವರಿಸಿದರೂ ತಾನು ಅದನ್ನು ಬೆಂಬಲಿಸುತ್ತೇನೆ ಎಂದು ಭಾಗವತ್ ಕಳೆದ ವರ್ಷ ಹೇಳಿದ್ದರು.

“ಒಂದು ಜಾತಿ ಗುಂಪಿನಲ್ಲಿ ಪೀಳಿಗೆಯಿಂದ ಪೀಳಿಗೆಗೆ ವರ್ಗಾವಣೆಗೊಂಡ ಕೌಶಲ್ಯಗಳಿಂದಾಗಿ ಬಂಗಾಳದ ನೇಕಾರರಂತಹ ಕುಶಲಕರ್ಮಿಗಳು ಎಷ್ಟೊಂದು ನಿಪುಣರಾಗಿದ್ದರೆಂದರೆ ಅವರಂತೆ ಉತ್ಪನ್ನಗಳನ್ನು ಉತ್ಪಾದಿಸಲು ಮ್ಯಾಂಚೆಸ್ಟರ್‌ನ ಜವಳಿ ಗಿರಣಿಗಳಿಗೂ ಸಾಧ್ಯವಾಗಿರಲಿಲ್ಲ ಎಂದು ಪ್ರತಿಪಾದಿಸಿರುವ ಸಂಪಾದಕೀಯವು, ಆಕ್ರಮಣಕೋರರು ಭಾರತದ ಕೈಗಾರಿಕೆಗಳನ್ನು ನಾಶಗೊಳಿಸಿದ್ದು ಮಾತ್ರವಲ್ಲ, ಭಾರತದ ಅನನ್ಯತೆಯನ್ನು ಬದಲಿಸಲು ಮತಾಂತರದ ಮೇಲೂ ಕೇಂದ್ರೀಕರಿಸಿದ್ದರು. ಜಾತಿಗತ ಗುಂಪುಗಳು ಇದಕ್ಕೆ ಮಣಿಯದಿದ್ದಾಗ ಅವರನ್ನು ಅವಮಾನಿಸಲಾಗಿತ್ತು. ಸ್ವಾಭಿಮಾನಿ ಸಮುದಾಯವು ತನ್ನ ತಲೆಯ ಮೇಲೆ ಮಾನವ ಮಲ ಹೊರುವಂತೆ ಬಲವಂತಗೊಳಿಸಿದ್ದವರು ಇದೇ ಜನರಾಗಿದ್ದರು. ಅದಕ್ಕೂ ಮೊದಲು ಭಾರತದಲ್ಲಿ ಇಂತಹ ಸಂಪ್ರದಾಯವಿರಲಿಲ್ಲ”ಎಂದು ಹೇಳಿದೆ.

“ಭಾರತೀಯ ಪೀಳಿಗೆಗಳ ಪ್ರತಿಭೆಗಳನ್ನು ಕಂಡು ಮತ್ಸರ ಪಡುತ್ತಿದ್ದ ಅವೇ ಕಣ್ಣುಗಳು ಹಿಂದೂ ಧರ್ಮದ ವೈವಿಧ್ಯತೆ, ಸಂಪ್ರದಾಯಗಳು ಮತ್ತು ಆಚರಣೆಗಳನ್ನು ನಾಶಗೊಳಿಸುವ ಕನಸು ಕಾಣುತ್ತಿವೆ” ಎಂದು ಶಂಕರ್ ಸಂಪಾದಕೀಯದಲ್ಲಿ ಹೇಳಿದ್ದಾರೆ.

ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಸಂಪಾದಕೀಯ, “ಹಿಂದೂ ಜೀವನವು ಘನತೆ, ನೈತಿಕತೆ, ಜವಾಬ್ದಾರಿ ಮತ್ತು ಕೋಮು ಭ್ರಾತೃತ್ವವನ್ನು ಒಳಗೊಂಡಿದ್ದು, ಜಾತಿಯ ಸುತ್ತ ಸುತ್ತುತ್ತದೆ. ಇದು ವೈಯಕ್ತಿಕ ಕೇಂದ್ರಿತ ಮಿಷನರಿಗಳಿಗೆ ಅರ್ಥವಾಗದ ವಿಷಯ. ಮಿಷನರಿಗಳು ತಮ್ಮ ಮತಾಂತರ ಕಾರ್ಯಕ್ರಮಕ್ಕೆ ಜಾತಿಯನ್ನು ಅಡ್ಡಿಯಾಗಿ ಕಂಡರೆ, ಕಾಂಗ್ರೆಸ್ ಅದನ್ನು ಹಿಂದೂ ಐಕ್ಯತೆಗೆ ಒಂದು ತಡೆಯಾಗಿ ನೋಡುತ್ತದೆ. ಬ್ರಿಟಿಷರ ಮಾದರಿಯಲ್ಲಿ ಲೋಕಸಭೆ ಸ್ಥಾನಗಳನ್ನು ಜಾತಿ ಆಧಾರದ ಮೇಲೆ ವಿಭಜಿಸಿ ದೇಶದಲ್ಲಿ ವಿಭಜನೆಯನ್ನು ಹೆಚ್ಚಿಸಲು ಬಯಸುತ್ತಿದೆ. ಅದಕ್ಕಾಗಿಯೇ ಅದು ಜಾತಿ ಗಣತಿಯನ್ನು ಬಯಸುತ್ತದೆ ಎಂದು ಪಾಂಚಜನ್ಯ ಸಂಪಾದಕೀಯ ಹೇಳಿದೆ ಎಂದು indianexpress.com ವಿವರಿಸಿದೆ.

ಇದನ್ನೂ ಓದಿ : ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ; ಕೃತ್ಯದ ನಂತರ ತನ್ನ ಬಟ್ಟೆಗಳನ್ನು ತೊಳೆದಿದ್ದ ಆರೋಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...