Homeಮುಖಪುಟ"ಜಾತಿ ಭಾರತವನ್ನು ಒಗ್ಗೂಡಿಸುವ ಅಂಶ" : ಜಾತಿ ವ್ಯವಸ್ಥೆಯನ್ನು ಸಮರ್ಥಿಸಿಕೊಂಡ ಆರ್‌ಎಸ್‌ಎಸ್‌ ಮುಖವಾಣಿ ; ವರದಿ

“ಜಾತಿ ಭಾರತವನ್ನು ಒಗ್ಗೂಡಿಸುವ ಅಂಶ” : ಜಾತಿ ವ್ಯವಸ್ಥೆಯನ್ನು ಸಮರ್ಥಿಸಿಕೊಂಡ ಆರ್‌ಎಸ್‌ಎಸ್‌ ಮುಖವಾಣಿ ; ವರದಿ

- Advertisement -
- Advertisement -

ಬಿಜೆಪಿ ಸಂಸದ ಅನುರಾಗ್ ಠಾಕೂರ್ ಅವರು ಇತ್ತೀಚಿಗೆ ಸಂಸತ್ತಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಜಾತಿ ಪ್ರಶ್ನಿಸಿ ವಿವಾದವೊಂದನ್ನು ಸೃಷ್ಟಿಸಿದ್ದರು. ಈ ಹಿನ್ನೆಲೆ ಆರ್‌ಎಸ್‌ಎಸ್‌ ಮುಖವಾಣಿ ‘ಪಾಂಚಜನ್ಯ’ ಸಾಪ್ತಾಹಿಕವು ತನ್ನ ಇತ್ತೀಚಿನ ಸಂಚಿಕೆಯಲ್ಲಿ ಜಾತಿ ವ್ಯವಸ್ಥೆಯನ್ನು ಬಲವಾಗಿ ಸಮರ್ಥಿಸಿದೆ ಎಂದು indianexpress.com ವರದಿ ಮಾಡಿದೆ.

ಜಾತಿ ವ್ಯವಸ್ಥೆಯನ್ನು ಭಾರತೀಯ ಸಮಾಜದ “ಒಗ್ಗೂಡಿಸುವ ಅಂಶ” ಎಂದು ತನ್ನ ಸಂಪಾದಕೀಯದಲ್ಲಿ ಪ್ರತಿಪಾದಿಸಿರುವ ವಾರಪತ್ರಿಕೆ, “ಮೊಘಲರಿಗೆ ಅದನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗಲಿಲ್ಲ ಮತ್ತು ಬ್ರಿಟಿಷರು ಅದನ್ನು ತಮ್ಮ ಭಾರತವನ್ನು ಆಕ್ರಮಿಸುವ ಮಾರ್ಗದಲ್ಲಿನ ತಡೆ ಎಂಬುವುದಾಗಿ ಪರಿಗಣಿಸಿದ್ದರು” ಎಂದಿದೆ.

“ಜಾತಿ ವ್ಯವಸ್ಥೆಯು ಭಾರತದ ವಿವಿಧ ವರ್ಗಗಳನ್ನು ಅವರ ವೃತ್ತಿ ಮತ್ತು ಸಂಪ್ರದಾಯದ ಆಧಾರದಲ್ಲಿ ವರ್ಗೀಕರಿಸಿದ ಒಂದು ಸರಪಳಿಯಾಗಿತ್ತು. ಕೈಗಾರಿಕಾ ಕ್ರಾಂತಿಯ ನಂತರ, ಬಂಡವಾಳಶಾಹಿಗಳು ಜಾತಿ ವ್ಯವಸ್ಥೆಯನ್ನು ಭಾರತದ ಕಾವಲುಗಾರನಂತೆ ನೋಡಿದರು” ಎಂದು ವಾರಪತ್ರಿಕೆಯ ಸಂಪಾದಕ ಹಿತೇಶ್ ಶಂಕರ್ ಸಂಪಾದಕೀಯದಲ್ಲಿ ಹೇಳಿದ್ದಾರೆ” ಎಂದು indianexpress.com ಹೇಳಿದೆ.

“ಜಾತಿ ವ್ಯವಸ್ಥೆಯು ಯಾವಾಗಲೂ ಆಕ್ರಮಣಕೋರರ ಗುರಿಯಾಗಿತ್ತು ಎಂದು ವಾದಿಸಿರುವ ಶಂಕರ್,‌ ಮೊಘಲರು ತಮ್ಮ ಖಡ್ಗದ ಬಲದಿಂದ ಅದನ್ನು ಗುರಿಯಾಗಿಸಿಕೊಂಡಿದ್ದರೆ, ಕ್ರೈಸ್ತ ಮಿಶನರಿಗಳು ಸೇವೆ ಮತ್ತು ಸುಧಾರಣೆಯ ಸೋಗಿನಲ್ಲಿ ಹಾಗೆ ಮಾಡಿದ್ದರು. ಜಾತಿಯ ರೂಪದಲ್ಲಿ ಭಾರತೀಯ ಸಮಾಜವು ಒಬ್ಬರ ಜಾತಿಗೆ ದ್ರೋಹವನ್ನು ಬಗೆಯುವುದು ದೇಶಕ್ಕೆ ದ್ರೋಹವಾಗಿದೆ ಎಂಬ ಸರಳವಾದ ವಿಷಯವನ್ನು ಅರ್ಥ ಮಾಡಿಕೊಂಡಿದೆ. ಮಿಶನರಿಗಳು ಭಾರತದ ಈ ಒಗ್ಗಟ್ಟಿನ ಸಮೀಕರಣವನ್ನು ಮೊಘಲರಿಗಿಂತ ಚೆನ್ನಾಗಿ ಅರಿತಿದ್ದರು. ಭಾರತ ಮತ್ತು ಅದರ ಸ್ವಾಭಿಮಾನವನ್ನು ಮುರಿಯಬೇಕಿದ್ದರೆ ಮೊದಲು ಜಾತಿ ವ್ಯವಸ್ಥೆಯನ್ನು ಬಂಧನ ಅಥವಾ ಶೃಂಖಲೆ ಎಂದು ಕರೆಯುವ ಮೂಲಕ ಜಾತಿಯ ಏಕೀಕರಣ ಸಮೀಕರಣವನ್ನು ಮುರಿಯಬೇಕು ಎನ್ನುವುದನ್ನು ಅವರು ಕಂಡುಕೊಂಡಿದ್ದರು. ಜಾತಿ ವ್ಯವಸ್ಥೆಯ ಕುರಿತು ಮಿಶನರಿಗಳ ಈ ತಿಳುವಳಿಕೆಯನ್ನು ಬ್ರಿಟಿಷರು ತಮ್ಮ ‘ಒಡೆದು ಆಳುವ’ ನೀತಿಗಾಗಿ ಅಳವಡಿಸಿಕೊಂಡಿದ್ದರು” ಎಂದು ಸಂಪಾದಕೀಯವು ವಾದಿಸಿದೆ ವರದಿ ತಿಳಿಸಿದೆ.

‘ಪಾಂಚಜನ್ಯ’ ದಿಂದ ಜಾತಿ ವ್ಯವಸ್ಥೆಯ ಈ ಸಮರ್ಥನೆಯು ಮಹತ್ವದ್ದಾಗಿದೆ, ಏಕೆಂದರೆ ವಂಚಿತ ವರ್ಗಗಳಿಗೆ ನೀಡಲಾಗಿರುವ ಮೀಸಲಾತಿಗೆ ತಾನು ವಿರುದ್ಧವಾಗಿಲ್ಲ ಎಂದು ವಿವರಿಸುವುದು ಆರೆಸ್ಸೆಸ್‌ಗೆ ಕಷ್ಟವಾಗಿರುವ ಸಮಯದಲ್ಲಿ ಈ ಸಮರ್ಥನೆ ಬಂದಿದೆ.

ಜಾತಿ ತಾರತಮ್ಯವು ಭಾರತೀಯ ಸಮಾಜಕ್ಕೆ ಶಾಪವಾಗಿದೆ ಮತ್ತು ಅದನ್ನು ತೊಡೆದುಹಾಕಬೇಕು ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ ಭಾಗವತ್ ಪದೇ ಪದೇ ಹೇಳುತ್ತಾರೆ. ತಮ್ಮ ಸಹೋದ್ಯೋಗಿಗಳ ಜಾತಿ ತಮಗೆ ತಿಳಿದಿಲ್ಲ ಎಂದು ಆರೆಸ್ಸೆಸ್ ಸದಸ್ಯರು ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ.

ಕಳೆದ 2,000 ವರ್ಷಗಳಿಂದ ಕೆಳಜಾತಿಗಳು ಅನುಭವಿಸಿರುವ ತಾರತಮ್ಯವನ್ನು ಸರಿದೂಗಿಸಲು ಮೀಸಲಾತಿಯನ್ನು ಇನ್ನೂ 200 ವರ್ಷಗಳ ಕಾಲ ಮುಂದುವರಿಸಿದರೂ ತಾನು ಅದನ್ನು ಬೆಂಬಲಿಸುತ್ತೇನೆ ಎಂದು ಭಾಗವತ್ ಕಳೆದ ವರ್ಷ ಹೇಳಿದ್ದರು.

“ಒಂದು ಜಾತಿ ಗುಂಪಿನಲ್ಲಿ ಪೀಳಿಗೆಯಿಂದ ಪೀಳಿಗೆಗೆ ವರ್ಗಾವಣೆಗೊಂಡ ಕೌಶಲ್ಯಗಳಿಂದಾಗಿ ಬಂಗಾಳದ ನೇಕಾರರಂತಹ ಕುಶಲಕರ್ಮಿಗಳು ಎಷ್ಟೊಂದು ನಿಪುಣರಾಗಿದ್ದರೆಂದರೆ ಅವರಂತೆ ಉತ್ಪನ್ನಗಳನ್ನು ಉತ್ಪಾದಿಸಲು ಮ್ಯಾಂಚೆಸ್ಟರ್‌ನ ಜವಳಿ ಗಿರಣಿಗಳಿಗೂ ಸಾಧ್ಯವಾಗಿರಲಿಲ್ಲ ಎಂದು ಪ್ರತಿಪಾದಿಸಿರುವ ಸಂಪಾದಕೀಯವು, ಆಕ್ರಮಣಕೋರರು ಭಾರತದ ಕೈಗಾರಿಕೆಗಳನ್ನು ನಾಶಗೊಳಿಸಿದ್ದು ಮಾತ್ರವಲ್ಲ, ಭಾರತದ ಅನನ್ಯತೆಯನ್ನು ಬದಲಿಸಲು ಮತಾಂತರದ ಮೇಲೂ ಕೇಂದ್ರೀಕರಿಸಿದ್ದರು. ಜಾತಿಗತ ಗುಂಪುಗಳು ಇದಕ್ಕೆ ಮಣಿಯದಿದ್ದಾಗ ಅವರನ್ನು ಅವಮಾನಿಸಲಾಗಿತ್ತು. ಸ್ವಾಭಿಮಾನಿ ಸಮುದಾಯವು ತನ್ನ ತಲೆಯ ಮೇಲೆ ಮಾನವ ಮಲ ಹೊರುವಂತೆ ಬಲವಂತಗೊಳಿಸಿದ್ದವರು ಇದೇ ಜನರಾಗಿದ್ದರು. ಅದಕ್ಕೂ ಮೊದಲು ಭಾರತದಲ್ಲಿ ಇಂತಹ ಸಂಪ್ರದಾಯವಿರಲಿಲ್ಲ”ಎಂದು ಹೇಳಿದೆ.

“ಭಾರತೀಯ ಪೀಳಿಗೆಗಳ ಪ್ರತಿಭೆಗಳನ್ನು ಕಂಡು ಮತ್ಸರ ಪಡುತ್ತಿದ್ದ ಅವೇ ಕಣ್ಣುಗಳು ಹಿಂದೂ ಧರ್ಮದ ವೈವಿಧ್ಯತೆ, ಸಂಪ್ರದಾಯಗಳು ಮತ್ತು ಆಚರಣೆಗಳನ್ನು ನಾಶಗೊಳಿಸುವ ಕನಸು ಕಾಣುತ್ತಿವೆ” ಎಂದು ಶಂಕರ್ ಸಂಪಾದಕೀಯದಲ್ಲಿ ಹೇಳಿದ್ದಾರೆ.

ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಸಂಪಾದಕೀಯ, “ಹಿಂದೂ ಜೀವನವು ಘನತೆ, ನೈತಿಕತೆ, ಜವಾಬ್ದಾರಿ ಮತ್ತು ಕೋಮು ಭ್ರಾತೃತ್ವವನ್ನು ಒಳಗೊಂಡಿದ್ದು, ಜಾತಿಯ ಸುತ್ತ ಸುತ್ತುತ್ತದೆ. ಇದು ವೈಯಕ್ತಿಕ ಕೇಂದ್ರಿತ ಮಿಷನರಿಗಳಿಗೆ ಅರ್ಥವಾಗದ ವಿಷಯ. ಮಿಷನರಿಗಳು ತಮ್ಮ ಮತಾಂತರ ಕಾರ್ಯಕ್ರಮಕ್ಕೆ ಜಾತಿಯನ್ನು ಅಡ್ಡಿಯಾಗಿ ಕಂಡರೆ, ಕಾಂಗ್ರೆಸ್ ಅದನ್ನು ಹಿಂದೂ ಐಕ್ಯತೆಗೆ ಒಂದು ತಡೆಯಾಗಿ ನೋಡುತ್ತದೆ. ಬ್ರಿಟಿಷರ ಮಾದರಿಯಲ್ಲಿ ಲೋಕಸಭೆ ಸ್ಥಾನಗಳನ್ನು ಜಾತಿ ಆಧಾರದ ಮೇಲೆ ವಿಭಜಿಸಿ ದೇಶದಲ್ಲಿ ವಿಭಜನೆಯನ್ನು ಹೆಚ್ಚಿಸಲು ಬಯಸುತ್ತಿದೆ. ಅದಕ್ಕಾಗಿಯೇ ಅದು ಜಾತಿ ಗಣತಿಯನ್ನು ಬಯಸುತ್ತದೆ ಎಂದು ಪಾಂಚಜನ್ಯ ಸಂಪಾದಕೀಯ ಹೇಳಿದೆ ಎಂದು indianexpress.com ವಿವರಿಸಿದೆ.

ಇದನ್ನೂ ಓದಿ : ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ; ಕೃತ್ಯದ ನಂತರ ತನ್ನ ಬಟ್ಟೆಗಳನ್ನು ತೊಳೆದಿದ್ದ ಆರೋಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...