Homeಮುಖಪುಟ"ಜಾತಿ ಭಾರತವನ್ನು ಒಗ್ಗೂಡಿಸುವ ಅಂಶ" : ಜಾತಿ ವ್ಯವಸ್ಥೆಯನ್ನು ಸಮರ್ಥಿಸಿಕೊಂಡ ಆರ್‌ಎಸ್‌ಎಸ್‌ ಮುಖವಾಣಿ ; ವರದಿ

“ಜಾತಿ ಭಾರತವನ್ನು ಒಗ್ಗೂಡಿಸುವ ಅಂಶ” : ಜಾತಿ ವ್ಯವಸ್ಥೆಯನ್ನು ಸಮರ್ಥಿಸಿಕೊಂಡ ಆರ್‌ಎಸ್‌ಎಸ್‌ ಮುಖವಾಣಿ ; ವರದಿ

- Advertisement -
- Advertisement -

ಬಿಜೆಪಿ ಸಂಸದ ಅನುರಾಗ್ ಠಾಕೂರ್ ಅವರು ಇತ್ತೀಚಿಗೆ ಸಂಸತ್ತಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಜಾತಿ ಪ್ರಶ್ನಿಸಿ ವಿವಾದವೊಂದನ್ನು ಸೃಷ್ಟಿಸಿದ್ದರು. ಈ ಹಿನ್ನೆಲೆ ಆರ್‌ಎಸ್‌ಎಸ್‌ ಮುಖವಾಣಿ ‘ಪಾಂಚಜನ್ಯ’ ಸಾಪ್ತಾಹಿಕವು ತನ್ನ ಇತ್ತೀಚಿನ ಸಂಚಿಕೆಯಲ್ಲಿ ಜಾತಿ ವ್ಯವಸ್ಥೆಯನ್ನು ಬಲವಾಗಿ ಸಮರ್ಥಿಸಿದೆ ಎಂದು indianexpress.com ವರದಿ ಮಾಡಿದೆ.

ಜಾತಿ ವ್ಯವಸ್ಥೆಯನ್ನು ಭಾರತೀಯ ಸಮಾಜದ “ಒಗ್ಗೂಡಿಸುವ ಅಂಶ” ಎಂದು ತನ್ನ ಸಂಪಾದಕೀಯದಲ್ಲಿ ಪ್ರತಿಪಾದಿಸಿರುವ ವಾರಪತ್ರಿಕೆ, “ಮೊಘಲರಿಗೆ ಅದನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗಲಿಲ್ಲ ಮತ್ತು ಬ್ರಿಟಿಷರು ಅದನ್ನು ತಮ್ಮ ಭಾರತವನ್ನು ಆಕ್ರಮಿಸುವ ಮಾರ್ಗದಲ್ಲಿನ ತಡೆ ಎಂಬುವುದಾಗಿ ಪರಿಗಣಿಸಿದ್ದರು” ಎಂದಿದೆ.

“ಜಾತಿ ವ್ಯವಸ್ಥೆಯು ಭಾರತದ ವಿವಿಧ ವರ್ಗಗಳನ್ನು ಅವರ ವೃತ್ತಿ ಮತ್ತು ಸಂಪ್ರದಾಯದ ಆಧಾರದಲ್ಲಿ ವರ್ಗೀಕರಿಸಿದ ಒಂದು ಸರಪಳಿಯಾಗಿತ್ತು. ಕೈಗಾರಿಕಾ ಕ್ರಾಂತಿಯ ನಂತರ, ಬಂಡವಾಳಶಾಹಿಗಳು ಜಾತಿ ವ್ಯವಸ್ಥೆಯನ್ನು ಭಾರತದ ಕಾವಲುಗಾರನಂತೆ ನೋಡಿದರು” ಎಂದು ವಾರಪತ್ರಿಕೆಯ ಸಂಪಾದಕ ಹಿತೇಶ್ ಶಂಕರ್ ಸಂಪಾದಕೀಯದಲ್ಲಿ ಹೇಳಿದ್ದಾರೆ” ಎಂದು indianexpress.com ಹೇಳಿದೆ.

“ಜಾತಿ ವ್ಯವಸ್ಥೆಯು ಯಾವಾಗಲೂ ಆಕ್ರಮಣಕೋರರ ಗುರಿಯಾಗಿತ್ತು ಎಂದು ವಾದಿಸಿರುವ ಶಂಕರ್,‌ ಮೊಘಲರು ತಮ್ಮ ಖಡ್ಗದ ಬಲದಿಂದ ಅದನ್ನು ಗುರಿಯಾಗಿಸಿಕೊಂಡಿದ್ದರೆ, ಕ್ರೈಸ್ತ ಮಿಶನರಿಗಳು ಸೇವೆ ಮತ್ತು ಸುಧಾರಣೆಯ ಸೋಗಿನಲ್ಲಿ ಹಾಗೆ ಮಾಡಿದ್ದರು. ಜಾತಿಯ ರೂಪದಲ್ಲಿ ಭಾರತೀಯ ಸಮಾಜವು ಒಬ್ಬರ ಜಾತಿಗೆ ದ್ರೋಹವನ್ನು ಬಗೆಯುವುದು ದೇಶಕ್ಕೆ ದ್ರೋಹವಾಗಿದೆ ಎಂಬ ಸರಳವಾದ ವಿಷಯವನ್ನು ಅರ್ಥ ಮಾಡಿಕೊಂಡಿದೆ. ಮಿಶನರಿಗಳು ಭಾರತದ ಈ ಒಗ್ಗಟ್ಟಿನ ಸಮೀಕರಣವನ್ನು ಮೊಘಲರಿಗಿಂತ ಚೆನ್ನಾಗಿ ಅರಿತಿದ್ದರು. ಭಾರತ ಮತ್ತು ಅದರ ಸ್ವಾಭಿಮಾನವನ್ನು ಮುರಿಯಬೇಕಿದ್ದರೆ ಮೊದಲು ಜಾತಿ ವ್ಯವಸ್ಥೆಯನ್ನು ಬಂಧನ ಅಥವಾ ಶೃಂಖಲೆ ಎಂದು ಕರೆಯುವ ಮೂಲಕ ಜಾತಿಯ ಏಕೀಕರಣ ಸಮೀಕರಣವನ್ನು ಮುರಿಯಬೇಕು ಎನ್ನುವುದನ್ನು ಅವರು ಕಂಡುಕೊಂಡಿದ್ದರು. ಜಾತಿ ವ್ಯವಸ್ಥೆಯ ಕುರಿತು ಮಿಶನರಿಗಳ ಈ ತಿಳುವಳಿಕೆಯನ್ನು ಬ್ರಿಟಿಷರು ತಮ್ಮ ‘ಒಡೆದು ಆಳುವ’ ನೀತಿಗಾಗಿ ಅಳವಡಿಸಿಕೊಂಡಿದ್ದರು” ಎಂದು ಸಂಪಾದಕೀಯವು ವಾದಿಸಿದೆ ವರದಿ ತಿಳಿಸಿದೆ.

‘ಪಾಂಚಜನ್ಯ’ ದಿಂದ ಜಾತಿ ವ್ಯವಸ್ಥೆಯ ಈ ಸಮರ್ಥನೆಯು ಮಹತ್ವದ್ದಾಗಿದೆ, ಏಕೆಂದರೆ ವಂಚಿತ ವರ್ಗಗಳಿಗೆ ನೀಡಲಾಗಿರುವ ಮೀಸಲಾತಿಗೆ ತಾನು ವಿರುದ್ಧವಾಗಿಲ್ಲ ಎಂದು ವಿವರಿಸುವುದು ಆರೆಸ್ಸೆಸ್‌ಗೆ ಕಷ್ಟವಾಗಿರುವ ಸಮಯದಲ್ಲಿ ಈ ಸಮರ್ಥನೆ ಬಂದಿದೆ.

ಜಾತಿ ತಾರತಮ್ಯವು ಭಾರತೀಯ ಸಮಾಜಕ್ಕೆ ಶಾಪವಾಗಿದೆ ಮತ್ತು ಅದನ್ನು ತೊಡೆದುಹಾಕಬೇಕು ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ ಭಾಗವತ್ ಪದೇ ಪದೇ ಹೇಳುತ್ತಾರೆ. ತಮ್ಮ ಸಹೋದ್ಯೋಗಿಗಳ ಜಾತಿ ತಮಗೆ ತಿಳಿದಿಲ್ಲ ಎಂದು ಆರೆಸ್ಸೆಸ್ ಸದಸ್ಯರು ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ.

ಕಳೆದ 2,000 ವರ್ಷಗಳಿಂದ ಕೆಳಜಾತಿಗಳು ಅನುಭವಿಸಿರುವ ತಾರತಮ್ಯವನ್ನು ಸರಿದೂಗಿಸಲು ಮೀಸಲಾತಿಯನ್ನು ಇನ್ನೂ 200 ವರ್ಷಗಳ ಕಾಲ ಮುಂದುವರಿಸಿದರೂ ತಾನು ಅದನ್ನು ಬೆಂಬಲಿಸುತ್ತೇನೆ ಎಂದು ಭಾಗವತ್ ಕಳೆದ ವರ್ಷ ಹೇಳಿದ್ದರು.

“ಒಂದು ಜಾತಿ ಗುಂಪಿನಲ್ಲಿ ಪೀಳಿಗೆಯಿಂದ ಪೀಳಿಗೆಗೆ ವರ್ಗಾವಣೆಗೊಂಡ ಕೌಶಲ್ಯಗಳಿಂದಾಗಿ ಬಂಗಾಳದ ನೇಕಾರರಂತಹ ಕುಶಲಕರ್ಮಿಗಳು ಎಷ್ಟೊಂದು ನಿಪುಣರಾಗಿದ್ದರೆಂದರೆ ಅವರಂತೆ ಉತ್ಪನ್ನಗಳನ್ನು ಉತ್ಪಾದಿಸಲು ಮ್ಯಾಂಚೆಸ್ಟರ್‌ನ ಜವಳಿ ಗಿರಣಿಗಳಿಗೂ ಸಾಧ್ಯವಾಗಿರಲಿಲ್ಲ ಎಂದು ಪ್ರತಿಪಾದಿಸಿರುವ ಸಂಪಾದಕೀಯವು, ಆಕ್ರಮಣಕೋರರು ಭಾರತದ ಕೈಗಾರಿಕೆಗಳನ್ನು ನಾಶಗೊಳಿಸಿದ್ದು ಮಾತ್ರವಲ್ಲ, ಭಾರತದ ಅನನ್ಯತೆಯನ್ನು ಬದಲಿಸಲು ಮತಾಂತರದ ಮೇಲೂ ಕೇಂದ್ರೀಕರಿಸಿದ್ದರು. ಜಾತಿಗತ ಗುಂಪುಗಳು ಇದಕ್ಕೆ ಮಣಿಯದಿದ್ದಾಗ ಅವರನ್ನು ಅವಮಾನಿಸಲಾಗಿತ್ತು. ಸ್ವಾಭಿಮಾನಿ ಸಮುದಾಯವು ತನ್ನ ತಲೆಯ ಮೇಲೆ ಮಾನವ ಮಲ ಹೊರುವಂತೆ ಬಲವಂತಗೊಳಿಸಿದ್ದವರು ಇದೇ ಜನರಾಗಿದ್ದರು. ಅದಕ್ಕೂ ಮೊದಲು ಭಾರತದಲ್ಲಿ ಇಂತಹ ಸಂಪ್ರದಾಯವಿರಲಿಲ್ಲ”ಎಂದು ಹೇಳಿದೆ.

“ಭಾರತೀಯ ಪೀಳಿಗೆಗಳ ಪ್ರತಿಭೆಗಳನ್ನು ಕಂಡು ಮತ್ಸರ ಪಡುತ್ತಿದ್ದ ಅವೇ ಕಣ್ಣುಗಳು ಹಿಂದೂ ಧರ್ಮದ ವೈವಿಧ್ಯತೆ, ಸಂಪ್ರದಾಯಗಳು ಮತ್ತು ಆಚರಣೆಗಳನ್ನು ನಾಶಗೊಳಿಸುವ ಕನಸು ಕಾಣುತ್ತಿವೆ” ಎಂದು ಶಂಕರ್ ಸಂಪಾದಕೀಯದಲ್ಲಿ ಹೇಳಿದ್ದಾರೆ.

ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಸಂಪಾದಕೀಯ, “ಹಿಂದೂ ಜೀವನವು ಘನತೆ, ನೈತಿಕತೆ, ಜವಾಬ್ದಾರಿ ಮತ್ತು ಕೋಮು ಭ್ರಾತೃತ್ವವನ್ನು ಒಳಗೊಂಡಿದ್ದು, ಜಾತಿಯ ಸುತ್ತ ಸುತ್ತುತ್ತದೆ. ಇದು ವೈಯಕ್ತಿಕ ಕೇಂದ್ರಿತ ಮಿಷನರಿಗಳಿಗೆ ಅರ್ಥವಾಗದ ವಿಷಯ. ಮಿಷನರಿಗಳು ತಮ್ಮ ಮತಾಂತರ ಕಾರ್ಯಕ್ರಮಕ್ಕೆ ಜಾತಿಯನ್ನು ಅಡ್ಡಿಯಾಗಿ ಕಂಡರೆ, ಕಾಂಗ್ರೆಸ್ ಅದನ್ನು ಹಿಂದೂ ಐಕ್ಯತೆಗೆ ಒಂದು ತಡೆಯಾಗಿ ನೋಡುತ್ತದೆ. ಬ್ರಿಟಿಷರ ಮಾದರಿಯಲ್ಲಿ ಲೋಕಸಭೆ ಸ್ಥಾನಗಳನ್ನು ಜಾತಿ ಆಧಾರದ ಮೇಲೆ ವಿಭಜಿಸಿ ದೇಶದಲ್ಲಿ ವಿಭಜನೆಯನ್ನು ಹೆಚ್ಚಿಸಲು ಬಯಸುತ್ತಿದೆ. ಅದಕ್ಕಾಗಿಯೇ ಅದು ಜಾತಿ ಗಣತಿಯನ್ನು ಬಯಸುತ್ತದೆ ಎಂದು ಪಾಂಚಜನ್ಯ ಸಂಪಾದಕೀಯ ಹೇಳಿದೆ ಎಂದು indianexpress.com ವಿವರಿಸಿದೆ.

ಇದನ್ನೂ ಓದಿ : ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ; ಕೃತ್ಯದ ನಂತರ ತನ್ನ ಬಟ್ಟೆಗಳನ್ನು ತೊಳೆದಿದ್ದ ಆರೋಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...