Homeಕರ್ನಾಟಕಬಿಜೆಪಿ ನಾಯಕರ ಬುಡಕ್ಕೆ ನೀರು ಬಂದಾಗ ಜಾತಿ ನೆನಪಾಗುತ್ತದೆ: ಸಿದ್ದರಾಮಯ್ಯ

ಬಿಜೆಪಿ ನಾಯಕರ ಬುಡಕ್ಕೆ ನೀರು ಬಂದಾಗ ಜಾತಿ ನೆನಪಾಗುತ್ತದೆ: ಸಿದ್ದರಾಮಯ್ಯ

- Advertisement -
- Advertisement -

ಮೂಡಾ ಪ್ರಕರಣದಲ್ಲಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಡೆಯನ್ನು ಟೀಕಿಸುತ್ತಿರುವ ಕಾಂಗ್ರೆಸ್‌ ನಾಯಕರ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದು, ‘ರಾಜ್ಯಪಾಲರು ದಲಿತ ಸಮುದಾಯಕ್ಕೆ ಸೇರಿದವರು’ ಎಂದು ಜಾತಿ ವಿಚಾರವನ್ನು ಮುನ್ನೆಲೆಗೆ ತಂದಿದ್ದಾರೆ. ಈ ವಿಚಾರವಾಗಿ ತಿರುಗೇಟು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ “ಹಿಂದುಗಳಲ್ಲಿ ಜಾತಿಯೇ ಇಲ್ಲ, ಧರ್ಮವೇ ಎಲ್ಲ ಎಂದು ಉಪದೇಶ ಮಾಡುತ್ತಿರುವ ಬಿಜೆಪಿ ನಾಯಕರ ಬುಡಕ್ಕೆ ನೀರು ಬಂದಾಗ ಜಾತಿ ನೆನಪಾಗುತ್ತದೆ” ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ರಾಜ್ಯದ ಘನತೆವೆತ್ತ ರಾಜ್ಯಪಾಲರಾಗಿರುವ ಥಾವರ್ ಚಂದ್ ಗೆಹ್ಲೋಟ್ ಅವರ ತಪ್ಪು ನಡೆಯ ಬಗೆಗಿನ ನಮ್ಮ ಪ್ರಶ್ನೆಗಳಿಗೆ ಉತ್ತರ ನೀಡಲಾಗದ ರಾಜ್ಯದ ಬಿಜೆಪಿ ನಾಯಕರು ‘ದಲಿತ ಗುರಾಣಿ’ ಬಳಸುತ್ತಿರುವುದು ಸಮಸ್ತ ಸ್ವಾಭಿಮಾನಿ ದಲಿತ ಸಮುದಾಯಕ್ಕೆ ಮಾಡಿರುವ ಅವಮಾನವಾಗಿದೆ. ಹಿಂದುಗಳಲ್ಲಿ ಜಾತಿಯೇ ಇಲ್ಲ, ಧರ್ಮವೇ ಎಲ್ಲ ಎಂದು ಉಪದೇಶ ಮಾಡುತ್ತಿರುವ ಬಿಜೆಪಿ ನಾಯಕರ ಬುಡಕ್ಕೆ ನೀರು ಬಂದಾಗ ಜಾತಿ ನೆನಪಾಗುತ್ತದೆ” ಎಂದು ಹೇಳಿದ್ದಾರೆ.

“ರಾಜ್ಯಪಾಲರಿಗೆ ಅವಮಾನವಾಗಿದೆ ಎಂದು ಪ್ರತಿಭಟಿಸುತ್ತಿರುವ ರಾಜ್ಯದ ಬಿಜೆಪಿ ನಾಯಕರಿಗೆ ನನ್ನ ಕೆಲವು ಸರಳ ಪ್ರಶ್ನೆಗಳಿವೆ” ಎಂದು ಸಿದ್ದರಾಮಯ್ಯ ಬಿಜೆಪಿ ನಾಯಕರ ಮುಂದೆ ಸರಣಿ ಪ್ರಶ್ನೆಗಳನ್ನಿಟ್ಟಿದ್ದಾರೆ.

“ಮೊದಲನೆಯದಾಗಿ, ದಲಿತ ಸಮುದಾಯಕ್ಕೆ ಸೇರಿರುವ ಥಾವರಚಂದ್ ಗೆಹ್ಲೋಟ್ ಅವರ ಬಗ್ಗೆ ನಿಮ್ಮಲ್ಲಿ ಅಷ್ಟೊಂದು ಗೌರವ ಮತ್ತು ಅಭಿಮಾನವಿದ್ದರೆ ಕೇಂದ್ರ ಸಚಿವ ಸಂಪುಟದಲ್ಲಿರಬೇಕಾಗಿದ್ದ ಅವರನ್ನು ಇಲ್ಲಿ ತಂದು ‘ಪಂಜರದ ಗಿಣಿ’ಯನ್ನಾಗಿ ಯಾಕೆ ಮಾಡಿದ್ದೀರಿ? ‘ಮಾರ್ಗದರ್ಶಕ ಮಂಡಳಿ ಎಂಬ ವನವಾಸಾಶ್ರಮ’ ಸೇರುವಷ್ಟು ವಯಸ್ಸಾಗದೆ ಇದ್ದರೂ ಅವರ ಸಕ್ರಿಯ ರಾಜಕೀಯ ಜೀವನವನ್ನು ಯಾಕೆ ಮೊಟಕುಗೊಳಿಸಿದಿರಿ?
ಕೇಂದ್ರ ಸಚಿವ ಸ್ಥಾನದಿಂದ ವಂಚಿತರನ್ನಾಗಿ ಮಾಡಿ, ತಮ್ಮ ರಾಜಕೀಯ ವಿರೋಧಿಗಳ ವಿರುದ್ದದ ದ್ವೇಷದ ರಾಜಕಾರಣಕ್ಕೆ ದಲಿತ ಸಮುದಾಯದ ನಾಯಕನನ್ನು ದುರ್ಬಳಕೆ ಮಾಡಿಕೊಳ್ಳುವುದು ಆ ಸಮುದಾಯಕ್ಕೆ ಮಾಡುವ ಅನ್ಯಾಯ-ಅವಮಾನ ಅಲ್ಲವೇ? ಬಿಜೆಪಿ ನಾಯಕರೇ, ದಲಿತ ನಾಯಕರೊಬ್ಬರನ್ನು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಬಳಸುವಾಗ ಕನಿಷ್ಠ ನಿಮ್ಮ ಆತ್ಮಸಾಕ್ಷಿಯೂ ಚುಚ್ಚಲಿಲ್ಲವೇ” ಎಂದು ಸಿಎಂ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

“ದಲಿತರನ್ನು ಬಳಸಿ ಬಿಸಾಡುವ ಬಿಜೆಪಿ ಮತ್ತು ಸಂಘ ಪರಿವಾರದ ಪಿತೂರಿ ರಾಜಕಾರಣವನ್ನು ಅರ್ಥಮಾಡಿಕೊಳ್ಳುವಷ್ಟು ದಲಿತ ಸಮುದಾಯ ಜಾಗೃತವಾಗಿದೆ. ಈಗ ನೀವು ದಲಿತರ ಹೆಸರಲ್ಲಿ ಸುರಿಸುತ್ತಿರುವ ಮೊಸಳೆ ಕಣ್ಣೀರಿನ ಹಿಂದಿನ ಪ್ರಾಮಾಣಿಕತೆ ತಿಳಿಯದಷ್ಟು ದಡ್ಡರಲ್ಲ. ಕನಿಷ್ಠ ಅಟಲ್ ಬಿಹಾರಿ ವಾಜಪೇಯಿ ಅವರು ದಲಿತ ಸಮುದಾಯಕ್ಕೆ ಸೇರಿರುವ ಬಂಗಾರು ಲಕ್ಷ್ಮಣ್ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಕ ಮಾಡಿದರು. ಆದರೆ ಬಿಜೆಪಿಯೊಳಗಿನ ‘ಸಂಘಿ ಮನಸ್ಸು’’ ಅದನ್ನು ಸಹಿಸಿಕೊಳ್ಳದೆ ಅವರ ಮೇಲೆ ಭ್ರಷ್ಟಾಚಾರದ ಆರೋಪ ಹೊರಿಸಿತು, ಕೊನೆಗೆ ಅದೇ ಕೊರಗಿನಲ್ಲಿ ಅವರು ಸಾವಿಗೀಡಾದರು” ಎಂದು ಹೇಳಿದ್ದಾರೆ.

“ದಲಿತ ಸಮುದಾಯದಕ್ಕೆ ಸೇರಿರುವ ನಮ್ಮ ಪಕ್ಷದ ಈಗಿನ ರಾಷ್ಟ್ರೀಯ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪಕ್ಷದ ಹಿರಿಯ ನಾಯಕರು ಎಷ್ಟು ಗೌರವ ಮತ್ತು ಘನತೆಯಿಂದ ನಡೆಸಿಕೊಳ್ಳುತ್ತಿದ್ದಾರೆ ಎನ್ನುವುದನ್ನು ನೋಡಿ ಕಲಿಯಿರಿ” ಎಂದು ಅವರು ತಿರುಗೇಟು ಕೊಟ್ಟಿದ್ದಾರೆ.

“ಸಂವಿಧಾನವನ್ನೇ ಬದಲಾಯಿಸಲು ಹೊರಟಿರುವ, ಮೀಸಲಾತಿಯನ್ನು ವಿರೋಧಿಸುತ್ತಿರುವ ಮತ್ತು ಜಾತಿ ತಾರತಮ್ಯವನ್ನು ಅಂತರಂಗದಲ್ಲಿ ಒಪ್ಪಿಕೊಂಡು ಬಹಿರಂಗದಲ್ಲಿ ಜಾತ್ಯತೀತತೆಯ ಸೋಗುಹಾಕಿರುವ ನಿಮಗೆ ದಲಿತರ ಬಗ್ಗೆ ಮಾತನಾಡುವ ಯಾವ ನೈತಿಕತೆಯೂ ಇಲ್ಲ. ನಿಮಗೆ ದಲಿತ ಸಮುದಾಯದ ಬಗ್ಗೆ ನಿಜವಾಗಿಯೂ ಗೌರವ ಇದ್ದರೆ ಥಾವರಚಂದ್ ಗೆಹ್ಲೋಟ್ ಅವರ ಮೇಲೆ ಕೆಟ್ಟ ಕೆಲಸ ಮಾಡಲು ರಾಜಕೀಯ ಒತ್ತಡ ಹೇರಲು ಹೋಗದೆ, ಅವರು ಸಂವಿಧಾನದತ್ತವಾಗಿ ಕರ್ತವ್ಯ ನಿರ್ವಹಣೆ ಮಾಡಲು ಅವಕಾಶ ಮಾಡಿಕೊಡಿ, ಈ ಪ್ರತಿಭಟನೆ, ಪ್ರತಿರೋಧದ ನಾಟಕಗಳನ್ನು ನಿಲ್ಲಿಸಿ” ಎಂದು ಸಿಎಂ ಬಿಜೆಪಿ ನಾಯಕರಿಗೆ ಸವಾಲು ಹಾಕಿದ್ದಾರೆ.

ಇದನ್ನೂ ಓದಿ; ರಾಜ್ಯಪಾಲರು ಸಂವಿಧಾನ ವಿರೋಧಿ ಕೆಲಸದಲ್ಲಿ ತೊಡಗಿದ್ದಾರೆ : ಎದ್ದೇಳು ಕರ್ನಾಟಕ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...