Homeಕರ್ನಾಟಕಬಿಜೆಪಿ ನಾಯಕರ ಬುಡಕ್ಕೆ ನೀರು ಬಂದಾಗ ಜಾತಿ ನೆನಪಾಗುತ್ತದೆ: ಸಿದ್ದರಾಮಯ್ಯ

ಬಿಜೆಪಿ ನಾಯಕರ ಬುಡಕ್ಕೆ ನೀರು ಬಂದಾಗ ಜಾತಿ ನೆನಪಾಗುತ್ತದೆ: ಸಿದ್ದರಾಮಯ್ಯ

- Advertisement -
- Advertisement -

ಮೂಡಾ ಪ್ರಕರಣದಲ್ಲಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಡೆಯನ್ನು ಟೀಕಿಸುತ್ತಿರುವ ಕಾಂಗ್ರೆಸ್‌ ನಾಯಕರ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದು, ‘ರಾಜ್ಯಪಾಲರು ದಲಿತ ಸಮುದಾಯಕ್ಕೆ ಸೇರಿದವರು’ ಎಂದು ಜಾತಿ ವಿಚಾರವನ್ನು ಮುನ್ನೆಲೆಗೆ ತಂದಿದ್ದಾರೆ. ಈ ವಿಚಾರವಾಗಿ ತಿರುಗೇಟು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ “ಹಿಂದುಗಳಲ್ಲಿ ಜಾತಿಯೇ ಇಲ್ಲ, ಧರ್ಮವೇ ಎಲ್ಲ ಎಂದು ಉಪದೇಶ ಮಾಡುತ್ತಿರುವ ಬಿಜೆಪಿ ನಾಯಕರ ಬುಡಕ್ಕೆ ನೀರು ಬಂದಾಗ ಜಾತಿ ನೆನಪಾಗುತ್ತದೆ” ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ರಾಜ್ಯದ ಘನತೆವೆತ್ತ ರಾಜ್ಯಪಾಲರಾಗಿರುವ ಥಾವರ್ ಚಂದ್ ಗೆಹ್ಲೋಟ್ ಅವರ ತಪ್ಪು ನಡೆಯ ಬಗೆಗಿನ ನಮ್ಮ ಪ್ರಶ್ನೆಗಳಿಗೆ ಉತ್ತರ ನೀಡಲಾಗದ ರಾಜ್ಯದ ಬಿಜೆಪಿ ನಾಯಕರು ‘ದಲಿತ ಗುರಾಣಿ’ ಬಳಸುತ್ತಿರುವುದು ಸಮಸ್ತ ಸ್ವಾಭಿಮಾನಿ ದಲಿತ ಸಮುದಾಯಕ್ಕೆ ಮಾಡಿರುವ ಅವಮಾನವಾಗಿದೆ. ಹಿಂದುಗಳಲ್ಲಿ ಜಾತಿಯೇ ಇಲ್ಲ, ಧರ್ಮವೇ ಎಲ್ಲ ಎಂದು ಉಪದೇಶ ಮಾಡುತ್ತಿರುವ ಬಿಜೆಪಿ ನಾಯಕರ ಬುಡಕ್ಕೆ ನೀರು ಬಂದಾಗ ಜಾತಿ ನೆನಪಾಗುತ್ತದೆ” ಎಂದು ಹೇಳಿದ್ದಾರೆ.

“ರಾಜ್ಯಪಾಲರಿಗೆ ಅವಮಾನವಾಗಿದೆ ಎಂದು ಪ್ರತಿಭಟಿಸುತ್ತಿರುವ ರಾಜ್ಯದ ಬಿಜೆಪಿ ನಾಯಕರಿಗೆ ನನ್ನ ಕೆಲವು ಸರಳ ಪ್ರಶ್ನೆಗಳಿವೆ” ಎಂದು ಸಿದ್ದರಾಮಯ್ಯ ಬಿಜೆಪಿ ನಾಯಕರ ಮುಂದೆ ಸರಣಿ ಪ್ರಶ್ನೆಗಳನ್ನಿಟ್ಟಿದ್ದಾರೆ.

“ಮೊದಲನೆಯದಾಗಿ, ದಲಿತ ಸಮುದಾಯಕ್ಕೆ ಸೇರಿರುವ ಥಾವರಚಂದ್ ಗೆಹ್ಲೋಟ್ ಅವರ ಬಗ್ಗೆ ನಿಮ್ಮಲ್ಲಿ ಅಷ್ಟೊಂದು ಗೌರವ ಮತ್ತು ಅಭಿಮಾನವಿದ್ದರೆ ಕೇಂದ್ರ ಸಚಿವ ಸಂಪುಟದಲ್ಲಿರಬೇಕಾಗಿದ್ದ ಅವರನ್ನು ಇಲ್ಲಿ ತಂದು ‘ಪಂಜರದ ಗಿಣಿ’ಯನ್ನಾಗಿ ಯಾಕೆ ಮಾಡಿದ್ದೀರಿ? ‘ಮಾರ್ಗದರ್ಶಕ ಮಂಡಳಿ ಎಂಬ ವನವಾಸಾಶ್ರಮ’ ಸೇರುವಷ್ಟು ವಯಸ್ಸಾಗದೆ ಇದ್ದರೂ ಅವರ ಸಕ್ರಿಯ ರಾಜಕೀಯ ಜೀವನವನ್ನು ಯಾಕೆ ಮೊಟಕುಗೊಳಿಸಿದಿರಿ?
ಕೇಂದ್ರ ಸಚಿವ ಸ್ಥಾನದಿಂದ ವಂಚಿತರನ್ನಾಗಿ ಮಾಡಿ, ತಮ್ಮ ರಾಜಕೀಯ ವಿರೋಧಿಗಳ ವಿರುದ್ದದ ದ್ವೇಷದ ರಾಜಕಾರಣಕ್ಕೆ ದಲಿತ ಸಮುದಾಯದ ನಾಯಕನನ್ನು ದುರ್ಬಳಕೆ ಮಾಡಿಕೊಳ್ಳುವುದು ಆ ಸಮುದಾಯಕ್ಕೆ ಮಾಡುವ ಅನ್ಯಾಯ-ಅವಮಾನ ಅಲ್ಲವೇ? ಬಿಜೆಪಿ ನಾಯಕರೇ, ದಲಿತ ನಾಯಕರೊಬ್ಬರನ್ನು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಬಳಸುವಾಗ ಕನಿಷ್ಠ ನಿಮ್ಮ ಆತ್ಮಸಾಕ್ಷಿಯೂ ಚುಚ್ಚಲಿಲ್ಲವೇ” ಎಂದು ಸಿಎಂ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

“ದಲಿತರನ್ನು ಬಳಸಿ ಬಿಸಾಡುವ ಬಿಜೆಪಿ ಮತ್ತು ಸಂಘ ಪರಿವಾರದ ಪಿತೂರಿ ರಾಜಕಾರಣವನ್ನು ಅರ್ಥಮಾಡಿಕೊಳ್ಳುವಷ್ಟು ದಲಿತ ಸಮುದಾಯ ಜಾಗೃತವಾಗಿದೆ. ಈಗ ನೀವು ದಲಿತರ ಹೆಸರಲ್ಲಿ ಸುರಿಸುತ್ತಿರುವ ಮೊಸಳೆ ಕಣ್ಣೀರಿನ ಹಿಂದಿನ ಪ್ರಾಮಾಣಿಕತೆ ತಿಳಿಯದಷ್ಟು ದಡ್ಡರಲ್ಲ. ಕನಿಷ್ಠ ಅಟಲ್ ಬಿಹಾರಿ ವಾಜಪೇಯಿ ಅವರು ದಲಿತ ಸಮುದಾಯಕ್ಕೆ ಸೇರಿರುವ ಬಂಗಾರು ಲಕ್ಷ್ಮಣ್ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಕ ಮಾಡಿದರು. ಆದರೆ ಬಿಜೆಪಿಯೊಳಗಿನ ‘ಸಂಘಿ ಮನಸ್ಸು’’ ಅದನ್ನು ಸಹಿಸಿಕೊಳ್ಳದೆ ಅವರ ಮೇಲೆ ಭ್ರಷ್ಟಾಚಾರದ ಆರೋಪ ಹೊರಿಸಿತು, ಕೊನೆಗೆ ಅದೇ ಕೊರಗಿನಲ್ಲಿ ಅವರು ಸಾವಿಗೀಡಾದರು” ಎಂದು ಹೇಳಿದ್ದಾರೆ.

“ದಲಿತ ಸಮುದಾಯದಕ್ಕೆ ಸೇರಿರುವ ನಮ್ಮ ಪಕ್ಷದ ಈಗಿನ ರಾಷ್ಟ್ರೀಯ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪಕ್ಷದ ಹಿರಿಯ ನಾಯಕರು ಎಷ್ಟು ಗೌರವ ಮತ್ತು ಘನತೆಯಿಂದ ನಡೆಸಿಕೊಳ್ಳುತ್ತಿದ್ದಾರೆ ಎನ್ನುವುದನ್ನು ನೋಡಿ ಕಲಿಯಿರಿ” ಎಂದು ಅವರು ತಿರುಗೇಟು ಕೊಟ್ಟಿದ್ದಾರೆ.

“ಸಂವಿಧಾನವನ್ನೇ ಬದಲಾಯಿಸಲು ಹೊರಟಿರುವ, ಮೀಸಲಾತಿಯನ್ನು ವಿರೋಧಿಸುತ್ತಿರುವ ಮತ್ತು ಜಾತಿ ತಾರತಮ್ಯವನ್ನು ಅಂತರಂಗದಲ್ಲಿ ಒಪ್ಪಿಕೊಂಡು ಬಹಿರಂಗದಲ್ಲಿ ಜಾತ್ಯತೀತತೆಯ ಸೋಗುಹಾಕಿರುವ ನಿಮಗೆ ದಲಿತರ ಬಗ್ಗೆ ಮಾತನಾಡುವ ಯಾವ ನೈತಿಕತೆಯೂ ಇಲ್ಲ. ನಿಮಗೆ ದಲಿತ ಸಮುದಾಯದ ಬಗ್ಗೆ ನಿಜವಾಗಿಯೂ ಗೌರವ ಇದ್ದರೆ ಥಾವರಚಂದ್ ಗೆಹ್ಲೋಟ್ ಅವರ ಮೇಲೆ ಕೆಟ್ಟ ಕೆಲಸ ಮಾಡಲು ರಾಜಕೀಯ ಒತ್ತಡ ಹೇರಲು ಹೋಗದೆ, ಅವರು ಸಂವಿಧಾನದತ್ತವಾಗಿ ಕರ್ತವ್ಯ ನಿರ್ವಹಣೆ ಮಾಡಲು ಅವಕಾಶ ಮಾಡಿಕೊಡಿ, ಈ ಪ್ರತಿಭಟನೆ, ಪ್ರತಿರೋಧದ ನಾಟಕಗಳನ್ನು ನಿಲ್ಲಿಸಿ” ಎಂದು ಸಿಎಂ ಬಿಜೆಪಿ ನಾಯಕರಿಗೆ ಸವಾಲು ಹಾಕಿದ್ದಾರೆ.

ಇದನ್ನೂ ಓದಿ; ರಾಜ್ಯಪಾಲರು ಸಂವಿಧಾನ ವಿರೋಧಿ ಕೆಲಸದಲ್ಲಿ ತೊಡಗಿದ್ದಾರೆ : ಎದ್ದೇಳು ಕರ್ನಾಟಕ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...