Homeಕರ್ನಾಟಕಜಾತಿ ಪ್ರಾತಿನಿಧ್ಯ: ಬೊಮ್ಮಾಯಿ ಸಂಪುಟಕ್ಕಿಂತ ಸಿದ್ದರಾಮಯ್ಯ ಕ್ಯಾಬಿನೆಟ್ ವೈವಿಧ್ಯಮಯ

ಜಾತಿ ಪ್ರಾತಿನಿಧ್ಯ: ಬೊಮ್ಮಾಯಿ ಸಂಪುಟಕ್ಕಿಂತ ಸಿದ್ದರಾಮಯ್ಯ ಕ್ಯಾಬಿನೆಟ್ ವೈವಿಧ್ಯಮಯ

ಬೊಮ್ಮಾಯಿ ಕ್ಯಾಬಿನೆಟ್‌ನಲ್ಲಿ ಎಷ್ಟು ಜಾತಿಗಳಿಗೆ ಪ್ರಾತಿನಿಧ್ಯ ಸಿಕ್ಕಿತ್ತು? ಸಿದ್ದರಾಮಯ್ಯನವರ ಸಂಪುಟ ವಿಶಿಷ್ಟವೇಕೆ?

- Advertisement -
- Advertisement -

ಭಾರತ ಸಾಮಾಜಿಕ ವ್ಯವಸ್ಥೆಯೇ ಜಾತಿ ಆಧಾರಿತವಾದ್ದು. ಹೀಗಾಗಿ ಪ್ರಾತಿನಿಧ್ಯವೆಂಬುದು ಇಲ್ಲಿ ಮಹತ್ವ ಪಡೆದಿದೆ. ಕುರುಬ ಸಮುದಾಯದ ಸಿದ್ದರಾಮಯ್ಯನವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಬಳಿಕ, ಯಾವ ಯಾವ ಸಮುದಾಯದವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ದೊರೆತಿದೆ ಎಂಬ ಚರ್ಚೆಯಾಗುತ್ತಿದೆ. ಅದರ ಜೊತೆಗೆ ಬಸವರಾಜ ಬೊಮ್ಮಾಯಿಯವರ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಯಾರ್‍ಯಾರಿಗೆ ಪ್ರಾತಿನಿಧ್ಯ ಸಿಕ್ಕಿತ್ತು ಎಂಬುದನ್ನೂ ತುಲನೆ ಮಾಡಿ ನೋಡುವ ಅಗತ್ಯವಿದೆ.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಎಂಟು ಶಾಸಕರು ಸಚಿವರಾಗಿ ಕಳೆದ ಶನಿವಾರ ಪ್ರಮಾಣವಚನ ಸ್ವೀಕರಿಸಿದ್ದರು. ಸಚಿವ ಸಂಪುಟದಲ್ಲಿ ಒಟ್ಟು 34 ಮಂದಿಯ ಸೇರ್ಪಡೆಗೆ ಅವಕಾಶ ಇದೆ. 24 ಮಂದಿಯ ಸೇರ್ಪಡೆ ಮೂಲಕ ಸಂಪುಟ ಸಂಪೂರ್ಣ ಭರ್ತಿಯಾದಂತೆ ಆಗಿದೆ.

ಈ ಹಿಂದಿನ ಬೊಮ್ಮಾಯಿಯವರ ಆಡಳಿತದ ಸಚಿವ ಸಂಪುಟಕ್ಕೂ ಈಗಿನ ಸಚಿವ ಸಂಪುಟಕ್ಕೂ ಹೋಲಿಕೆ ಮಾಡಿದರೆ ಹೆಚ್ಚಿನ ಸಮುದಾಯಗಳಿಗೆ ಸಿದ್ದರಾಮಯ್ಯನವರ ಕ್ಯಾಬಿನೆಟ್‌ನಲ್ಲಿ ಅವಕಾಶ ಸಿಕ್ಕಿರುವುದು ಮೇಲು ನೋಟಕ್ಕೆ ಕಾಣುತ್ತಿದೆ.

ಜಾತಿ ಹೊರತಾಗಿ ಮಹಿಳಾ ಪ್ರಾತಿನಿಧ್ಯದಲ್ಲಿ ಎರಡು ಪಕ್ಷಗಳು ಯಥಾಸ್ಥಿತಿಯನ್ನು ಮುಂದುವರಿಸಿವೆ. ಮುಖ್ಯವಾಗಿ ರಾಜ್ಯದ ಅಲ್ಪಸಂಖ್ಯಾತ ಸಮುದಾಯವನ್ನು ಬಿಜೆಪಿ ಸರ್ಕಾರ ಸಂಪೂರ್ಣವಾಗಿ ಕಡೆಗಣಿಸಿತ್ತು. ಆದರೆ ಸಿದ್ದರಾಮಯ್ಯನವರ ಕ್ಯಾಬಿನೇಟ್‌ನಲ್ಲಿ ನಾಲ್ವರು ಅಲ್ಪಸಂಖ್ಯಾತರಿಗೆ ಸಚಿವ ಸ್ಥಾನ ದೊರೆತಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪ್ರಾತಿನಿಧ್ಯದಲ್ಲಿ ಗಣನೀಯ ಪ್ರಗತಿಯನ್ನು ಈಗಿನ ಕಾಂಗ್ರೆಸ್ ಸರ್ಕಾರ ಸಾಧಿಸಿದೆ. ಆದರೆ ಬೊಮ್ಮಾಯಿ ಅವಧಿಯಲ್ಲಿ ಪರಿಶಿಷ್ಟರಿಗೆ ಹೆಚ್ಚಿನ ಸಚಿವ ಸ್ಥಾನಗಳು ದೊರೆತಿರಲಿಲ್ಲ.

2023ರ ಕಾಂಗ್ರೆಸ್ ಸರ್ಕಾರದ ಪ್ರಾತಿನಿಧ್ಯ

ಕುರುಬರು (2 ಪ್ರಾತಿನಿಧ್ಯ): ಸಿದ್ದರಾಮಯ್ಯ (ಮುಖ್ಯಮಂತ್ರಿ), ಬೈರತಿ ಸುರೇಶ್‌

ಲಿಂಗಾಯತರು (8 ಪ್ರಾತಿನಿಧ್ಯ): ಎಂ.ಬಿ.ಪಾಟೀಲ (ಕೂಡು ಒಕ್ಕಲಿಗ ಲಿಂಗಾಯತರು), ಈಶ್ವರ ಖಂಡ್ರೆ (ಬಣಜಿಗ ಲಿಂಗಾಯತ), ಶರಣಬಸಪ್ಪ ದರ್ಶನಾಪುರ (ರಡ್ಡಿ ಲಿಂಗಾಯತ), ಶಿವಾನಂದ ಪಾಟೀಲ (ಪಂಚಮಸಾಲಿ), ಎಸ್‌.ಎಸ್‌.ಮಲ್ಲಿಕಾರ್ಜುನ (ಸಾದರ ಲಿಂಗಾಯತ), ಶರಣ ಪ್ರಕಾಶ ಪಾಟೀಲ (ಆದಿ ಬಣಜಿಗ ಲಿಂಗಾಯತ), ಲಕ್ಷ್ಮಿ ಹೆಬ್ಬಾಳಕರ್‌ (ಪಂಚಮಸಾಲಿ), ಎಚ್.ಕೆ.ಪಾಟೀಲ (ನಾಮಧಾರಿ ರೆಡ್ಡಿ- ಇವರು ಲಿಂಗಾಯತ ಸಂಪ್ರದಾಯ ಹಿನ್ನೆಲೆಯವರಲ್ಲ ಎಂಬ ವಾದವೂ ಇದೆ.)

ಒಕ್ಕಲಿಗರು (6 ಪ್ರಾತಿನಿಧ್ಯ): ಡಿ.ಕೆ.ಶಿವಕುಮಾರ್‌, ರಾಮಲಿಂಗ ರೆಡ್ಡಿ (ರೆಡ್ಡಿ ಒಕ್ಕಲಿಗ), ಕೃಷ್ಣ ಬೈರೇಗೌಡ, ಎನ್.ಚಲುವರಾಯಸ್ವಾಮಿ, ಕೆ.ವೆಂಕಟೇಶ್‌, ಡಾ.ಎಂ.ಸಿ.ಸುಧಾಕರ್‌.

ಪರಿಶಿಷ್ಟ ಜಾತಿಗಳು (6 ಪ್ರಾತಿನಿಧ್ಯ): ಬಲಗೈ (ಹೊಲೆಯ) ಸಮುದಾಯದ ಡಾ.ಎಚ್‌.ಸಿ.ಮಹದೇವಪ್ಪ, ಡಾ.ಜಿ.ಪರಮೇಶ್ವರ, ಪ್ರಿಯಾಂಕ್ ಖರ್ಗೆ, ಎಡಗೈ (ಮಾದಿಗ) ಸಮುದಾಯದ ಆರ್.ಬಿ.ತಿಮ್ಮಾಪುರ, ಕೆ.ಎಚ್.ಮುನಿಯಪ್ಪ, ಭೋವಿ ಸಮುದಾಯದ ಶಿವರಾಜ ತಂಗಡಗಿ.

ಪರಿಶಿಷ್ಟ ಪಂಗಡಗಳು (3 ಪ್ರಾತಿನಿಧ್ಯ): ಸತೀಶ್ ಜಾರಕಿಹೊಳಿ, ಕೆ.ಎನ್‌.ರಾಜಣ್ಣ, ಬಿ.ನಾಗೇಂದ್ರ.

ಅಲ್ಪಸಂಖ್ಯಾತರು (4 ಪ್ರಾತಿನಿಧ್ಯ): ಜಮೀರ್ ಅಹ್ಮದ್ ಖಾನ್- ಮುಸ್ಲಿಂ, ರಹೀಂ ಖಾನ್‌- ಮುಸ್ಲಿಂ, ಕೆ.ಜೆ.ಜಾರ್ಜ್- ಕ್ರಿಶ್ಚಿಯನ್, ಡಿ.ಸುಧಾಕರ್‌- ಜೈನ.

ಇತರೆ ಜಾತಿಗಳಗ ಪ್ರಾತಿನಿಧ್ಯ

ಬ್ರಾಹ್ಮಣ: ದಿನೇಶ್‌ ಗುಂಡೂರಾವ್‌

ಮೊಗವೀರ: ಮಂಕಾಳ ಸುಬ್ಬ ವೈದ್ಯ

ಮರಾಠ: ಸಂತೋಷ್ ಎಸ್.ಲಾಡ್‌

ರಾಜು ಕ್ಷತ್ರೀಯ: ಎನ್‌.ಎಸ್.ಬೋಸರಾಜು

ಈಡಿಗ: ಮಧು ಬಂಗಾರಪ್ಪ

***

ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ

2018ರಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌- ಜೆಡಿಎಸ್‌ ಸರ್ಕಾರವನ್ನು ಆಪರೇಷನ್ ಕಮಲದ ಮೂಲಕ ಉರುಳಿಸಿ ಬಿಜೆಪಿ ಅಧಿಕಾರ ಹಿಡಿದಿತ್ತು. ಲಿಂಗಾಯತ ಸಮುದಾಯದ ಬಿ.ಎಸ್.ಯಡಿಯೂರಪ್ಪನವರ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ, ಬಸವರಾಜ ಬೊಮ್ಮಾಯಿಯವರನ್ನು ಸಿಎಂ ಮಾಡಲಾಗಿತ್ತು. ಬೊಮ್ಮಾಯಿ ಕ್ಯಾಬಿನೆಟ್‌ನಲ್ಲಿ 29 ಮಂದಿ ಸಂಪುಟದರ್ಜೆಯ ಸಚಿವರಿದ್ದರು.

ಬಿಜೆಪಿ ಸರ್ಕಾರದ ಜಾತಿ ಪ್ರಾತಿನಿಧ್ಯ

ಲಿಂಗಾಯತರು (10 ಪ್ರಾತಿನಿಧ್ಯ): ಬಸವರಾಜ ಬೊಮ್ಮಾಯಿ (ಸಾದರ), ಬಿ.ಸಿ.ಪಾಟೀಲ್ (ಸಾದರ), ಉಮೇಶ್ ಕತ್ತಿ (ಬಣಜಿಗರು), ಮುರುಗೇಶ್ ನಿರಾಣಿ (ಪಂಚಮಸಾಲಿ), ಶಶಿಕಲಾ ಜೊಲ್ಲೆ (ಆದಿ ಬಣಜಿಗರು), ಜೆ.ಸಿ.ಮಾಧುಸ್ವಾಮಿ (ನೊಣಬರು), ಶಂಕರ್ ಪಾಟೀಲ್ ಮುನೇನಕೊಪ್ಪ (ಪಂಚಮಸಾಲಿ), ವಿ.ಸೋಮಣ್ಣ (ಗೌಡ ಲಿಂಗಾಯತರು), ಸಿಸಿ‌ ಪಾಟೀಲ್ (ಪಂಚಮಸಾಲಿ), ಹಾಲಪ್ಪ ಆಚಾರ್ (ರಡ್ಡಿ ಲಿಂಗಾಯತ)

ಒಕ್ಕಲಿಗ (7 ಪ್ರಾತಿನಿಧ್ಯ): ಆರ್.ಅಶೋಕ್, ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಎಸ್.ಟಿ.ಸೋಮಶೇಖರ್, ಡಾ.ಕೆ.ಸುಧಾಕರ್, ಕೆಸಿ ನಾರಾಯಣಗೌಡ, ಅರಗ ಜ್ಞಾನೇಂದ್ರ, ಗೋಪಾಲಯ್ಯ

ಕುರುಬರು (3 ಪ್ರಾತಿನಿಧ್ಯ) : ಕೆ.ಎಸ್.ಈಶ್ವರಪ್ಪ, ಬೈರತಿ‌ ಬಸವರಾಜ, ಎಂ.ಟಿ.ಬಿ.ನಾಗರಾಜ್

ಪರಿಶಿಷ್ಟ ಜಾತಿ (3 ಪ್ರಾತಿನಿಧ್ಯ): ಗೋವಿಂದ ಕಾರಜೋಳ (ಎಡಗೈ), ಪ್ರಭು ಚವ್ಹಾಣ್‌ ಔರಾದ್‌ (ಬಂಜಾರ), ಎಸ್.ಅಂಗಾರ (ಮೊಗೇರ)

ಪರಿಶಿಷ್ಟ ಪಂಗಡ (1 ಪ್ರಾತಿನಿಧ್ಯ): ಬಿ.ಶ್ರೀ ರಾಮುಲು

ಬ್ರಾಹ್ಮಣರು (2 ಪ್ರಾತಿನಿಧ್ಯ):  ಶಿವರಾಂ ಹೆಬ್ಬಾರ್, ಬಿ.ಸಿ.ನಾಗೇಶ್

ಬಿಲ್ಲವ (2 ಪ್ರಾತಿನಿಧ್ಯ): ಸುನೀಲ್‌ ಕುಮಾರ್‌, ಕೋಟಾ ಶ್ರೀನಿವಾಸ ಪೂಜಾರಿ

ನಾಯ್ಡು (1 ಪ್ರಾತಿನಿಧ್ಯ): ಮುನಿರತ್ನ

ರಜಪೂತ (1 ಪ್ರಾತಿನಿಧ್ಯ): ಆನಂದ್ ಸಿಂಗ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...