Homeಕರ್ನಾಟಕಜಾತಿ ಪ್ರಾತಿನಿಧ್ಯ: ಬೊಮ್ಮಾಯಿ ಸಂಪುಟಕ್ಕಿಂತ ಸಿದ್ದರಾಮಯ್ಯ ಕ್ಯಾಬಿನೆಟ್ ವೈವಿಧ್ಯಮಯ

ಜಾತಿ ಪ್ರಾತಿನಿಧ್ಯ: ಬೊಮ್ಮಾಯಿ ಸಂಪುಟಕ್ಕಿಂತ ಸಿದ್ದರಾಮಯ್ಯ ಕ್ಯಾಬಿನೆಟ್ ವೈವಿಧ್ಯಮಯ

ಬೊಮ್ಮಾಯಿ ಕ್ಯಾಬಿನೆಟ್‌ನಲ್ಲಿ ಎಷ್ಟು ಜಾತಿಗಳಿಗೆ ಪ್ರಾತಿನಿಧ್ಯ ಸಿಕ್ಕಿತ್ತು? ಸಿದ್ದರಾಮಯ್ಯನವರ ಸಂಪುಟ ವಿಶಿಷ್ಟವೇಕೆ?

- Advertisement -
- Advertisement -

ಭಾರತ ಸಾಮಾಜಿಕ ವ್ಯವಸ್ಥೆಯೇ ಜಾತಿ ಆಧಾರಿತವಾದ್ದು. ಹೀಗಾಗಿ ಪ್ರಾತಿನಿಧ್ಯವೆಂಬುದು ಇಲ್ಲಿ ಮಹತ್ವ ಪಡೆದಿದೆ. ಕುರುಬ ಸಮುದಾಯದ ಸಿದ್ದರಾಮಯ್ಯನವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಬಳಿಕ, ಯಾವ ಯಾವ ಸಮುದಾಯದವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ದೊರೆತಿದೆ ಎಂಬ ಚರ್ಚೆಯಾಗುತ್ತಿದೆ. ಅದರ ಜೊತೆಗೆ ಬಸವರಾಜ ಬೊಮ್ಮಾಯಿಯವರ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಯಾರ್‍ಯಾರಿಗೆ ಪ್ರಾತಿನಿಧ್ಯ ಸಿಕ್ಕಿತ್ತು ಎಂಬುದನ್ನೂ ತುಲನೆ ಮಾಡಿ ನೋಡುವ ಅಗತ್ಯವಿದೆ.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಎಂಟು ಶಾಸಕರು ಸಚಿವರಾಗಿ ಕಳೆದ ಶನಿವಾರ ಪ್ರಮಾಣವಚನ ಸ್ವೀಕರಿಸಿದ್ದರು. ಸಚಿವ ಸಂಪುಟದಲ್ಲಿ ಒಟ್ಟು 34 ಮಂದಿಯ ಸೇರ್ಪಡೆಗೆ ಅವಕಾಶ ಇದೆ. 24 ಮಂದಿಯ ಸೇರ್ಪಡೆ ಮೂಲಕ ಸಂಪುಟ ಸಂಪೂರ್ಣ ಭರ್ತಿಯಾದಂತೆ ಆಗಿದೆ.

ಈ ಹಿಂದಿನ ಬೊಮ್ಮಾಯಿಯವರ ಆಡಳಿತದ ಸಚಿವ ಸಂಪುಟಕ್ಕೂ ಈಗಿನ ಸಚಿವ ಸಂಪುಟಕ್ಕೂ ಹೋಲಿಕೆ ಮಾಡಿದರೆ ಹೆಚ್ಚಿನ ಸಮುದಾಯಗಳಿಗೆ ಸಿದ್ದರಾಮಯ್ಯನವರ ಕ್ಯಾಬಿನೆಟ್‌ನಲ್ಲಿ ಅವಕಾಶ ಸಿಕ್ಕಿರುವುದು ಮೇಲು ನೋಟಕ್ಕೆ ಕಾಣುತ್ತಿದೆ.

ಜಾತಿ ಹೊರತಾಗಿ ಮಹಿಳಾ ಪ್ರಾತಿನಿಧ್ಯದಲ್ಲಿ ಎರಡು ಪಕ್ಷಗಳು ಯಥಾಸ್ಥಿತಿಯನ್ನು ಮುಂದುವರಿಸಿವೆ. ಮುಖ್ಯವಾಗಿ ರಾಜ್ಯದ ಅಲ್ಪಸಂಖ್ಯಾತ ಸಮುದಾಯವನ್ನು ಬಿಜೆಪಿ ಸರ್ಕಾರ ಸಂಪೂರ್ಣವಾಗಿ ಕಡೆಗಣಿಸಿತ್ತು. ಆದರೆ ಸಿದ್ದರಾಮಯ್ಯನವರ ಕ್ಯಾಬಿನೇಟ್‌ನಲ್ಲಿ ನಾಲ್ವರು ಅಲ್ಪಸಂಖ್ಯಾತರಿಗೆ ಸಚಿವ ಸ್ಥಾನ ದೊರೆತಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪ್ರಾತಿನಿಧ್ಯದಲ್ಲಿ ಗಣನೀಯ ಪ್ರಗತಿಯನ್ನು ಈಗಿನ ಕಾಂಗ್ರೆಸ್ ಸರ್ಕಾರ ಸಾಧಿಸಿದೆ. ಆದರೆ ಬೊಮ್ಮಾಯಿ ಅವಧಿಯಲ್ಲಿ ಪರಿಶಿಷ್ಟರಿಗೆ ಹೆಚ್ಚಿನ ಸಚಿವ ಸ್ಥಾನಗಳು ದೊರೆತಿರಲಿಲ್ಲ.

2023ರ ಕಾಂಗ್ರೆಸ್ ಸರ್ಕಾರದ ಪ್ರಾತಿನಿಧ್ಯ

ಕುರುಬರು (2 ಪ್ರಾತಿನಿಧ್ಯ): ಸಿದ್ದರಾಮಯ್ಯ (ಮುಖ್ಯಮಂತ್ರಿ), ಬೈರತಿ ಸುರೇಶ್‌

ಲಿಂಗಾಯತರು (8 ಪ್ರಾತಿನಿಧ್ಯ): ಎಂ.ಬಿ.ಪಾಟೀಲ (ಕೂಡು ಒಕ್ಕಲಿಗ ಲಿಂಗಾಯತರು), ಈಶ್ವರ ಖಂಡ್ರೆ (ಬಣಜಿಗ ಲಿಂಗಾಯತ), ಶರಣಬಸಪ್ಪ ದರ್ಶನಾಪುರ (ರಡ್ಡಿ ಲಿಂಗಾಯತ), ಶಿವಾನಂದ ಪಾಟೀಲ (ಪಂಚಮಸಾಲಿ), ಎಸ್‌.ಎಸ್‌.ಮಲ್ಲಿಕಾರ್ಜುನ (ಸಾದರ ಲಿಂಗಾಯತ), ಶರಣ ಪ್ರಕಾಶ ಪಾಟೀಲ (ಆದಿ ಬಣಜಿಗ ಲಿಂಗಾಯತ), ಲಕ್ಷ್ಮಿ ಹೆಬ್ಬಾಳಕರ್‌ (ಪಂಚಮಸಾಲಿ), ಎಚ್.ಕೆ.ಪಾಟೀಲ (ನಾಮಧಾರಿ ರೆಡ್ಡಿ- ಇವರು ಲಿಂಗಾಯತ ಸಂಪ್ರದಾಯ ಹಿನ್ನೆಲೆಯವರಲ್ಲ ಎಂಬ ವಾದವೂ ಇದೆ.)

ಒಕ್ಕಲಿಗರು (6 ಪ್ರಾತಿನಿಧ್ಯ): ಡಿ.ಕೆ.ಶಿವಕುಮಾರ್‌, ರಾಮಲಿಂಗ ರೆಡ್ಡಿ (ರೆಡ್ಡಿ ಒಕ್ಕಲಿಗ), ಕೃಷ್ಣ ಬೈರೇಗೌಡ, ಎನ್.ಚಲುವರಾಯಸ್ವಾಮಿ, ಕೆ.ವೆಂಕಟೇಶ್‌, ಡಾ.ಎಂ.ಸಿ.ಸುಧಾಕರ್‌.

ಪರಿಶಿಷ್ಟ ಜಾತಿಗಳು (6 ಪ್ರಾತಿನಿಧ್ಯ): ಬಲಗೈ (ಹೊಲೆಯ) ಸಮುದಾಯದ ಡಾ.ಎಚ್‌.ಸಿ.ಮಹದೇವಪ್ಪ, ಡಾ.ಜಿ.ಪರಮೇಶ್ವರ, ಪ್ರಿಯಾಂಕ್ ಖರ್ಗೆ, ಎಡಗೈ (ಮಾದಿಗ) ಸಮುದಾಯದ ಆರ್.ಬಿ.ತಿಮ್ಮಾಪುರ, ಕೆ.ಎಚ್.ಮುನಿಯಪ್ಪ, ಭೋವಿ ಸಮುದಾಯದ ಶಿವರಾಜ ತಂಗಡಗಿ.

ಪರಿಶಿಷ್ಟ ಪಂಗಡಗಳು (3 ಪ್ರಾತಿನಿಧ್ಯ): ಸತೀಶ್ ಜಾರಕಿಹೊಳಿ, ಕೆ.ಎನ್‌.ರಾಜಣ್ಣ, ಬಿ.ನಾಗೇಂದ್ರ.

ಅಲ್ಪಸಂಖ್ಯಾತರು (4 ಪ್ರಾತಿನಿಧ್ಯ): ಜಮೀರ್ ಅಹ್ಮದ್ ಖಾನ್- ಮುಸ್ಲಿಂ, ರಹೀಂ ಖಾನ್‌- ಮುಸ್ಲಿಂ, ಕೆ.ಜೆ.ಜಾರ್ಜ್- ಕ್ರಿಶ್ಚಿಯನ್, ಡಿ.ಸುಧಾಕರ್‌- ಜೈನ.

ಇತರೆ ಜಾತಿಗಳಗ ಪ್ರಾತಿನಿಧ್ಯ

ಬ್ರಾಹ್ಮಣ: ದಿನೇಶ್‌ ಗುಂಡೂರಾವ್‌

ಮೊಗವೀರ: ಮಂಕಾಳ ಸುಬ್ಬ ವೈದ್ಯ

ಮರಾಠ: ಸಂತೋಷ್ ಎಸ್.ಲಾಡ್‌

ರಾಜು ಕ್ಷತ್ರೀಯ: ಎನ್‌.ಎಸ್.ಬೋಸರಾಜು

ಈಡಿಗ: ಮಧು ಬಂಗಾರಪ್ಪ

***

ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ

2018ರಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌- ಜೆಡಿಎಸ್‌ ಸರ್ಕಾರವನ್ನು ಆಪರೇಷನ್ ಕಮಲದ ಮೂಲಕ ಉರುಳಿಸಿ ಬಿಜೆಪಿ ಅಧಿಕಾರ ಹಿಡಿದಿತ್ತು. ಲಿಂಗಾಯತ ಸಮುದಾಯದ ಬಿ.ಎಸ್.ಯಡಿಯೂರಪ್ಪನವರ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ, ಬಸವರಾಜ ಬೊಮ್ಮಾಯಿಯವರನ್ನು ಸಿಎಂ ಮಾಡಲಾಗಿತ್ತು. ಬೊಮ್ಮಾಯಿ ಕ್ಯಾಬಿನೆಟ್‌ನಲ್ಲಿ 29 ಮಂದಿ ಸಂಪುಟದರ್ಜೆಯ ಸಚಿವರಿದ್ದರು.

ಬಿಜೆಪಿ ಸರ್ಕಾರದ ಜಾತಿ ಪ್ರಾತಿನಿಧ್ಯ

ಲಿಂಗಾಯತರು (10 ಪ್ರಾತಿನಿಧ್ಯ): ಬಸವರಾಜ ಬೊಮ್ಮಾಯಿ (ಸಾದರ), ಬಿ.ಸಿ.ಪಾಟೀಲ್ (ಸಾದರ), ಉಮೇಶ್ ಕತ್ತಿ (ಬಣಜಿಗರು), ಮುರುಗೇಶ್ ನಿರಾಣಿ (ಪಂಚಮಸಾಲಿ), ಶಶಿಕಲಾ ಜೊಲ್ಲೆ (ಆದಿ ಬಣಜಿಗರು), ಜೆ.ಸಿ.ಮಾಧುಸ್ವಾಮಿ (ನೊಣಬರು), ಶಂಕರ್ ಪಾಟೀಲ್ ಮುನೇನಕೊಪ್ಪ (ಪಂಚಮಸಾಲಿ), ವಿ.ಸೋಮಣ್ಣ (ಗೌಡ ಲಿಂಗಾಯತರು), ಸಿಸಿ‌ ಪಾಟೀಲ್ (ಪಂಚಮಸಾಲಿ), ಹಾಲಪ್ಪ ಆಚಾರ್ (ರಡ್ಡಿ ಲಿಂಗಾಯತ)

ಒಕ್ಕಲಿಗ (7 ಪ್ರಾತಿನಿಧ್ಯ): ಆರ್.ಅಶೋಕ್, ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಎಸ್.ಟಿ.ಸೋಮಶೇಖರ್, ಡಾ.ಕೆ.ಸುಧಾಕರ್, ಕೆಸಿ ನಾರಾಯಣಗೌಡ, ಅರಗ ಜ್ಞಾನೇಂದ್ರ, ಗೋಪಾಲಯ್ಯ

ಕುರುಬರು (3 ಪ್ರಾತಿನಿಧ್ಯ) : ಕೆ.ಎಸ್.ಈಶ್ವರಪ್ಪ, ಬೈರತಿ‌ ಬಸವರಾಜ, ಎಂ.ಟಿ.ಬಿ.ನಾಗರಾಜ್

ಪರಿಶಿಷ್ಟ ಜಾತಿ (3 ಪ್ರಾತಿನಿಧ್ಯ): ಗೋವಿಂದ ಕಾರಜೋಳ (ಎಡಗೈ), ಪ್ರಭು ಚವ್ಹಾಣ್‌ ಔರಾದ್‌ (ಬಂಜಾರ), ಎಸ್.ಅಂಗಾರ (ಮೊಗೇರ)

ಪರಿಶಿಷ್ಟ ಪಂಗಡ (1 ಪ್ರಾತಿನಿಧ್ಯ): ಬಿ.ಶ್ರೀ ರಾಮುಲು

ಬ್ರಾಹ್ಮಣರು (2 ಪ್ರಾತಿನಿಧ್ಯ):  ಶಿವರಾಂ ಹೆಬ್ಬಾರ್, ಬಿ.ಸಿ.ನಾಗೇಶ್

ಬಿಲ್ಲವ (2 ಪ್ರಾತಿನಿಧ್ಯ): ಸುನೀಲ್‌ ಕುಮಾರ್‌, ಕೋಟಾ ಶ್ರೀನಿವಾಸ ಪೂಜಾರಿ

ನಾಯ್ಡು (1 ಪ್ರಾತಿನಿಧ್ಯ): ಮುನಿರತ್ನ

ರಜಪೂತ (1 ಪ್ರಾತಿನಿಧ್ಯ): ಆನಂದ್ ಸಿಂಗ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....