Homeಕರ್ನಾಟಕಜಾತಿ ಪ್ರಾತಿನಿಧ್ಯ: ಬೊಮ್ಮಾಯಿ ಸಂಪುಟಕ್ಕಿಂತ ಸಿದ್ದರಾಮಯ್ಯ ಕ್ಯಾಬಿನೆಟ್ ವೈವಿಧ್ಯಮಯ

ಜಾತಿ ಪ್ರಾತಿನಿಧ್ಯ: ಬೊಮ್ಮಾಯಿ ಸಂಪುಟಕ್ಕಿಂತ ಸಿದ್ದರಾಮಯ್ಯ ಕ್ಯಾಬಿನೆಟ್ ವೈವಿಧ್ಯಮಯ

ಬೊಮ್ಮಾಯಿ ಕ್ಯಾಬಿನೆಟ್‌ನಲ್ಲಿ ಎಷ್ಟು ಜಾತಿಗಳಿಗೆ ಪ್ರಾತಿನಿಧ್ಯ ಸಿಕ್ಕಿತ್ತು? ಸಿದ್ದರಾಮಯ್ಯನವರ ಸಂಪುಟ ವಿಶಿಷ್ಟವೇಕೆ?

- Advertisement -
- Advertisement -

ಭಾರತ ಸಾಮಾಜಿಕ ವ್ಯವಸ್ಥೆಯೇ ಜಾತಿ ಆಧಾರಿತವಾದ್ದು. ಹೀಗಾಗಿ ಪ್ರಾತಿನಿಧ್ಯವೆಂಬುದು ಇಲ್ಲಿ ಮಹತ್ವ ಪಡೆದಿದೆ. ಕುರುಬ ಸಮುದಾಯದ ಸಿದ್ದರಾಮಯ್ಯನವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಬಳಿಕ, ಯಾವ ಯಾವ ಸಮುದಾಯದವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ದೊರೆತಿದೆ ಎಂಬ ಚರ್ಚೆಯಾಗುತ್ತಿದೆ. ಅದರ ಜೊತೆಗೆ ಬಸವರಾಜ ಬೊಮ್ಮಾಯಿಯವರ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಯಾರ್‍ಯಾರಿಗೆ ಪ್ರಾತಿನಿಧ್ಯ ಸಿಕ್ಕಿತ್ತು ಎಂಬುದನ್ನೂ ತುಲನೆ ಮಾಡಿ ನೋಡುವ ಅಗತ್ಯವಿದೆ.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಎಂಟು ಶಾಸಕರು ಸಚಿವರಾಗಿ ಕಳೆದ ಶನಿವಾರ ಪ್ರಮಾಣವಚನ ಸ್ವೀಕರಿಸಿದ್ದರು. ಸಚಿವ ಸಂಪುಟದಲ್ಲಿ ಒಟ್ಟು 34 ಮಂದಿಯ ಸೇರ್ಪಡೆಗೆ ಅವಕಾಶ ಇದೆ. 24 ಮಂದಿಯ ಸೇರ್ಪಡೆ ಮೂಲಕ ಸಂಪುಟ ಸಂಪೂರ್ಣ ಭರ್ತಿಯಾದಂತೆ ಆಗಿದೆ.

ಈ ಹಿಂದಿನ ಬೊಮ್ಮಾಯಿಯವರ ಆಡಳಿತದ ಸಚಿವ ಸಂಪುಟಕ್ಕೂ ಈಗಿನ ಸಚಿವ ಸಂಪುಟಕ್ಕೂ ಹೋಲಿಕೆ ಮಾಡಿದರೆ ಹೆಚ್ಚಿನ ಸಮುದಾಯಗಳಿಗೆ ಸಿದ್ದರಾಮಯ್ಯನವರ ಕ್ಯಾಬಿನೆಟ್‌ನಲ್ಲಿ ಅವಕಾಶ ಸಿಕ್ಕಿರುವುದು ಮೇಲು ನೋಟಕ್ಕೆ ಕಾಣುತ್ತಿದೆ.

ಜಾತಿ ಹೊರತಾಗಿ ಮಹಿಳಾ ಪ್ರಾತಿನಿಧ್ಯದಲ್ಲಿ ಎರಡು ಪಕ್ಷಗಳು ಯಥಾಸ್ಥಿತಿಯನ್ನು ಮುಂದುವರಿಸಿವೆ. ಮುಖ್ಯವಾಗಿ ರಾಜ್ಯದ ಅಲ್ಪಸಂಖ್ಯಾತ ಸಮುದಾಯವನ್ನು ಬಿಜೆಪಿ ಸರ್ಕಾರ ಸಂಪೂರ್ಣವಾಗಿ ಕಡೆಗಣಿಸಿತ್ತು. ಆದರೆ ಸಿದ್ದರಾಮಯ್ಯನವರ ಕ್ಯಾಬಿನೇಟ್‌ನಲ್ಲಿ ನಾಲ್ವರು ಅಲ್ಪಸಂಖ್ಯಾತರಿಗೆ ಸಚಿವ ಸ್ಥಾನ ದೊರೆತಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪ್ರಾತಿನಿಧ್ಯದಲ್ಲಿ ಗಣನೀಯ ಪ್ರಗತಿಯನ್ನು ಈಗಿನ ಕಾಂಗ್ರೆಸ್ ಸರ್ಕಾರ ಸಾಧಿಸಿದೆ. ಆದರೆ ಬೊಮ್ಮಾಯಿ ಅವಧಿಯಲ್ಲಿ ಪರಿಶಿಷ್ಟರಿಗೆ ಹೆಚ್ಚಿನ ಸಚಿವ ಸ್ಥಾನಗಳು ದೊರೆತಿರಲಿಲ್ಲ.

2023ರ ಕಾಂಗ್ರೆಸ್ ಸರ್ಕಾರದ ಪ್ರಾತಿನಿಧ್ಯ

ಕುರುಬರು (2 ಪ್ರಾತಿನಿಧ್ಯ): ಸಿದ್ದರಾಮಯ್ಯ (ಮುಖ್ಯಮಂತ್ರಿ), ಬೈರತಿ ಸುರೇಶ್‌

ಲಿಂಗಾಯತರು (8 ಪ್ರಾತಿನಿಧ್ಯ): ಎಂ.ಬಿ.ಪಾಟೀಲ (ಕೂಡು ಒಕ್ಕಲಿಗ ಲಿಂಗಾಯತರು), ಈಶ್ವರ ಖಂಡ್ರೆ (ಬಣಜಿಗ ಲಿಂಗಾಯತ), ಶರಣಬಸಪ್ಪ ದರ್ಶನಾಪುರ (ರಡ್ಡಿ ಲಿಂಗಾಯತ), ಶಿವಾನಂದ ಪಾಟೀಲ (ಪಂಚಮಸಾಲಿ), ಎಸ್‌.ಎಸ್‌.ಮಲ್ಲಿಕಾರ್ಜುನ (ಸಾದರ ಲಿಂಗಾಯತ), ಶರಣ ಪ್ರಕಾಶ ಪಾಟೀಲ (ಆದಿ ಬಣಜಿಗ ಲಿಂಗಾಯತ), ಲಕ್ಷ್ಮಿ ಹೆಬ್ಬಾಳಕರ್‌ (ಪಂಚಮಸಾಲಿ), ಎಚ್.ಕೆ.ಪಾಟೀಲ (ನಾಮಧಾರಿ ರೆಡ್ಡಿ- ಇವರು ಲಿಂಗಾಯತ ಸಂಪ್ರದಾಯ ಹಿನ್ನೆಲೆಯವರಲ್ಲ ಎಂಬ ವಾದವೂ ಇದೆ.)

ಒಕ್ಕಲಿಗರು (6 ಪ್ರಾತಿನಿಧ್ಯ): ಡಿ.ಕೆ.ಶಿವಕುಮಾರ್‌, ರಾಮಲಿಂಗ ರೆಡ್ಡಿ (ರೆಡ್ಡಿ ಒಕ್ಕಲಿಗ), ಕೃಷ್ಣ ಬೈರೇಗೌಡ, ಎನ್.ಚಲುವರಾಯಸ್ವಾಮಿ, ಕೆ.ವೆಂಕಟೇಶ್‌, ಡಾ.ಎಂ.ಸಿ.ಸುಧಾಕರ್‌.

ಪರಿಶಿಷ್ಟ ಜಾತಿಗಳು (6 ಪ್ರಾತಿನಿಧ್ಯ): ಬಲಗೈ (ಹೊಲೆಯ) ಸಮುದಾಯದ ಡಾ.ಎಚ್‌.ಸಿ.ಮಹದೇವಪ್ಪ, ಡಾ.ಜಿ.ಪರಮೇಶ್ವರ, ಪ್ರಿಯಾಂಕ್ ಖರ್ಗೆ, ಎಡಗೈ (ಮಾದಿಗ) ಸಮುದಾಯದ ಆರ್.ಬಿ.ತಿಮ್ಮಾಪುರ, ಕೆ.ಎಚ್.ಮುನಿಯಪ್ಪ, ಭೋವಿ ಸಮುದಾಯದ ಶಿವರಾಜ ತಂಗಡಗಿ.

ಪರಿಶಿಷ್ಟ ಪಂಗಡಗಳು (3 ಪ್ರಾತಿನಿಧ್ಯ): ಸತೀಶ್ ಜಾರಕಿಹೊಳಿ, ಕೆ.ಎನ್‌.ರಾಜಣ್ಣ, ಬಿ.ನಾಗೇಂದ್ರ.

ಅಲ್ಪಸಂಖ್ಯಾತರು (4 ಪ್ರಾತಿನಿಧ್ಯ): ಜಮೀರ್ ಅಹ್ಮದ್ ಖಾನ್- ಮುಸ್ಲಿಂ, ರಹೀಂ ಖಾನ್‌- ಮುಸ್ಲಿಂ, ಕೆ.ಜೆ.ಜಾರ್ಜ್- ಕ್ರಿಶ್ಚಿಯನ್, ಡಿ.ಸುಧಾಕರ್‌- ಜೈನ.

ಇತರೆ ಜಾತಿಗಳಗ ಪ್ರಾತಿನಿಧ್ಯ

ಬ್ರಾಹ್ಮಣ: ದಿನೇಶ್‌ ಗುಂಡೂರಾವ್‌

ಮೊಗವೀರ: ಮಂಕಾಳ ಸುಬ್ಬ ವೈದ್ಯ

ಮರಾಠ: ಸಂತೋಷ್ ಎಸ್.ಲಾಡ್‌

ರಾಜು ಕ್ಷತ್ರೀಯ: ಎನ್‌.ಎಸ್.ಬೋಸರಾಜು

ಈಡಿಗ: ಮಧು ಬಂಗಾರಪ್ಪ

***

ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ

2018ರಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌- ಜೆಡಿಎಸ್‌ ಸರ್ಕಾರವನ್ನು ಆಪರೇಷನ್ ಕಮಲದ ಮೂಲಕ ಉರುಳಿಸಿ ಬಿಜೆಪಿ ಅಧಿಕಾರ ಹಿಡಿದಿತ್ತು. ಲಿಂಗಾಯತ ಸಮುದಾಯದ ಬಿ.ಎಸ್.ಯಡಿಯೂರಪ್ಪನವರ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ, ಬಸವರಾಜ ಬೊಮ್ಮಾಯಿಯವರನ್ನು ಸಿಎಂ ಮಾಡಲಾಗಿತ್ತು. ಬೊಮ್ಮಾಯಿ ಕ್ಯಾಬಿನೆಟ್‌ನಲ್ಲಿ 29 ಮಂದಿ ಸಂಪುಟದರ್ಜೆಯ ಸಚಿವರಿದ್ದರು.

ಬಿಜೆಪಿ ಸರ್ಕಾರದ ಜಾತಿ ಪ್ರಾತಿನಿಧ್ಯ

ಲಿಂಗಾಯತರು (10 ಪ್ರಾತಿನಿಧ್ಯ): ಬಸವರಾಜ ಬೊಮ್ಮಾಯಿ (ಸಾದರ), ಬಿ.ಸಿ.ಪಾಟೀಲ್ (ಸಾದರ), ಉಮೇಶ್ ಕತ್ತಿ (ಬಣಜಿಗರು), ಮುರುಗೇಶ್ ನಿರಾಣಿ (ಪಂಚಮಸಾಲಿ), ಶಶಿಕಲಾ ಜೊಲ್ಲೆ (ಆದಿ ಬಣಜಿಗರು), ಜೆ.ಸಿ.ಮಾಧುಸ್ವಾಮಿ (ನೊಣಬರು), ಶಂಕರ್ ಪಾಟೀಲ್ ಮುನೇನಕೊಪ್ಪ (ಪಂಚಮಸಾಲಿ), ವಿ.ಸೋಮಣ್ಣ (ಗೌಡ ಲಿಂಗಾಯತರು), ಸಿಸಿ‌ ಪಾಟೀಲ್ (ಪಂಚಮಸಾಲಿ), ಹಾಲಪ್ಪ ಆಚಾರ್ (ರಡ್ಡಿ ಲಿಂಗಾಯತ)

ಒಕ್ಕಲಿಗ (7 ಪ್ರಾತಿನಿಧ್ಯ): ಆರ್.ಅಶೋಕ್, ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಎಸ್.ಟಿ.ಸೋಮಶೇಖರ್, ಡಾ.ಕೆ.ಸುಧಾಕರ್, ಕೆಸಿ ನಾರಾಯಣಗೌಡ, ಅರಗ ಜ್ಞಾನೇಂದ್ರ, ಗೋಪಾಲಯ್ಯ

ಕುರುಬರು (3 ಪ್ರಾತಿನಿಧ್ಯ) : ಕೆ.ಎಸ್.ಈಶ್ವರಪ್ಪ, ಬೈರತಿ‌ ಬಸವರಾಜ, ಎಂ.ಟಿ.ಬಿ.ನಾಗರಾಜ್

ಪರಿಶಿಷ್ಟ ಜಾತಿ (3 ಪ್ರಾತಿನಿಧ್ಯ): ಗೋವಿಂದ ಕಾರಜೋಳ (ಎಡಗೈ), ಪ್ರಭು ಚವ್ಹಾಣ್‌ ಔರಾದ್‌ (ಬಂಜಾರ), ಎಸ್.ಅಂಗಾರ (ಮೊಗೇರ)

ಪರಿಶಿಷ್ಟ ಪಂಗಡ (1 ಪ್ರಾತಿನಿಧ್ಯ): ಬಿ.ಶ್ರೀ ರಾಮುಲು

ಬ್ರಾಹ್ಮಣರು (2 ಪ್ರಾತಿನಿಧ್ಯ):  ಶಿವರಾಂ ಹೆಬ್ಬಾರ್, ಬಿ.ಸಿ.ನಾಗೇಶ್

ಬಿಲ್ಲವ (2 ಪ್ರಾತಿನಿಧ್ಯ): ಸುನೀಲ್‌ ಕುಮಾರ್‌, ಕೋಟಾ ಶ್ರೀನಿವಾಸ ಪೂಜಾರಿ

ನಾಯ್ಡು (1 ಪ್ರಾತಿನಿಧ್ಯ): ಮುನಿರತ್ನ

ರಜಪೂತ (1 ಪ್ರಾತಿನಿಧ್ಯ): ಆನಂದ್ ಸಿಂಗ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...