Homeಕರ್ನಾಟಕಜಾತಿ ಸಮೀಕ್ಷೆ ವರದಿ ರಾಜ್ಯ ಸಚಿವ ಸಂಪುಟದ ಮುಂದೆ ಮಂಡನೆ

ಜಾತಿ ಸಮೀಕ್ಷೆ ವರದಿ ರಾಜ್ಯ ಸಚಿವ ಸಂಪುಟದ ಮುಂದೆ ಮಂಡನೆ

- Advertisement -
- Advertisement -

ರಾಜ್ಯ ಸಚಿವ ಸಂಪುಟ ಶುಕ್ರವಾರ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ(ಜಾತಿ ಸಮೀಕ್ಷೆ)ಯನ್ನು ಮಂಡನೆ ಮಾಡಿದೆ. ಏಪ್ರಿಲ್ 17 ರಂದು ನಿಗದಿಯಾಗಿರುವ ವಿಶೇಷ ಸಂಪುಟ ಸಭೆಯಲ್ಲಿ ಇದನ್ನು ಚರ್ಚಿಸಲಾಗುವುದು ಎಂದು ವರದಿ ಹೇಳಿದೆ. ಜಾತಿ ಸಮೀಕ್ಷೆ ವರದಿ

2015 ರಲ್ಲಿ ಎಚ್. ಕಾಂತರಾಜ್ ನೇತೃತ್ವದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ನಡೆಸಿ, ಫೆಬ್ರವರಿ 2024 ರಲ್ಲಿ ಅವರ ಉತ್ತರಾಧಿಕಾರಿ ಕೆ ಜಯಪ್ರಕಾಶ್ ಹೆಗ್ಡೆ ಅವರು ಅಂತಿಮಗೊಳಿಸಿದ ಈ ಸಮೀಕ್ಷೆಯನ್ನು ಮುಚ್ಚಿದ ಲಕೋಟೆಯಲ್ಲಿ ಸಚಿವ ಸಂಪುಟದ ಮುಂದೆ ಇಡಲಾಗಿದ್ದು, ಸಂಪುಟದ ಮುಂದೆಯೆ ಮುದ್ರೆ ತೆರೆಯಲಾಯಿತು.

ವರದಿಗಾರರಿಗೆ ಮಾಹಿತಿ ನೀಡಿದ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ, ಏಪ್ರಿಲ್ 17 ರ ಸಭೆಯ ಮೊದಲು ಎಲ್ಲಾ ಸಂಪುಟ ಸದಸ್ಯರು ಸಂಶೋಧನೆಗಳನ್ನು ಅಧ್ಯಯನ ಮಾಡುವಂತೆ ವರದಿಯನ್ನು ನೀಡಲಾಗುವುದು ಎಂದು ಹೇಳಿದ್ದಾರೆ.

ವರದಿಯು ವಿವಿಧ ಜಾತಿ ಮತ್ತು ಸಮುದಾಯ-ಸಂಬಂಧಿತ ಅಂಶಗಳ ಕುರಿತು ವಿವರಗಳನ್ನು ಒಳಗೊಂಡಿರುವ 50 ಸಂಪುಟಗಳನ್ನು ಹೊಂದಿದೆ.

ಸರ್ಕಾರವು ಸಮೀಕ್ಷೆಯ ಸಂಶೋಧನೆಗಳನ್ನು ಇನ್ನೂ ಬಹಿರಂಗಪಡಿಸದಿದ್ದರೂ, ಸಮೀಕ್ಷೆಯನ್ನು ವೈಜ್ಞಾನಿಕವಾಗಿ ನಡೆಸಲಾಗಿದೆ ಎಂಬ ತನ್ನ ಪ್ರತಿಪಾದನೆಯನ್ನು ಸಮಸರ್ಥಿಸಲು ಸಮೀಕ್ಷೆ ನಡೆಸಿದ ಸಂಖ್ಯೆಗಳನ್ನು ಒದಗಿಸಿದೆ. ಪ್ರಬಲ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಗಳು 2015 ರ ಈ ಸಮೀಕ್ಷೆಯನ್ನು ಸರಿಯಾಗಿ ಮಾಡಲಾಗಿಲ್ಲ ಮತ್ತು ಅವರ ಸಂಖ್ಯೆಯನ್ನು ಕಡಿಮೆ ಎಣಿಸಲಾಗಿದೆ ಎಂದು ವಾದಿಸಿವೆ.

“2011 ರ ಜನಗಣತಿಯ ಪ್ರಕಾರ, ರಾಜ್ಯದ ಜನಸಂಖ್ಯೆ 6.11 ಕೋಟಿ. 2015 ರಲ್ಲಿ, ಸಮೀಕ್ಷೆ ನಡೆಸಿದಾಗ, ರಾಜ್ಯದ ಜನಸಂಖ್ಯೆ ಸುಮಾರು 6.35 ಕೋಟಿ ಎಂದು ಅಂದಾಜಿಸಲಾಗಿದೆ. ಸಮೀಕ್ಷೆಯು 5.98 ಕೋಟಿ ನಾಗರಿಕರನ್ನು ಒಳಗೊಂಡಿತ್ತು, ಇದು ಶೇಕಡಾ 94.17 ರ ವ್ಯಾಪ್ತಿಯಾಗಿದೆ” ಎಂದು ಸಚಿವ ತಂಗಡಗಿ ಹೇಳಿದ್ದಾರೆ.

ಸಮೀಕ್ಷೆಯಿಂದ ಕೇವಲ 37 ಲಕ್ಷ ಜನರು ಮಾತ್ರ ಹೊರಗುಳಿದಿದ್ದು, ಅಂದರೆ ಶೇಕಡಾ 5.83 ರಷ್ಟು ಜನರು ಸಮೀಕ್ಷೆಯನ್ನು ತಪ್ಪಿಸಿಕೊಂಡಿದ್ದಾರೆ ಎಂದು ತಂಗಡಗಿ ಹೇಳಿದ್ದಾರೆ. “1.6 ಲಕ್ಷ ಅಧಿಕಾರಿಗಳು ಸಮೀಕ್ಷಾ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದರು. ಸಮೀಕ್ಷೆಗಾಗಿ, ತಜ್ಞರ ಸಮಿತಿಯನ್ನು ರಚಿಸಲಾಯಿತು ಮತ್ತು ಅದು 54 ಮಾನದಂಡಗಳನ್ನು ನೀಡಿತು” ಎಂದು ಅವರು ಹೇಳಿದ್ದಾರೆ. ಜಾತಿ ಸಮೀಕ್ಷೆ ವರದಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಜಾತಿ ತಾರತಮ್ಯದ ಆರೋಪ ಮಾಡಿದ ಬಿಎಚ್‌ಯು ದಲಿತ ಪ್ರಾಧ್ಯಾಪಕ

ಜಾತಿ ತಾರತಮ್ಯದ ಆರೋಪ ಮಾಡಿದ ಬಿಎಚ್‌ಯು ದಲಿತ ಪ್ರಾಧ್ಯಾಪಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...