Homeಕರ್ನಾಟಕಜಾತಿ ಸಮೀಕ್ಷೆಯನ್ನು ಹಿಂದೆ ಒಪ್ಪಿದ್ದ ಬಿಜೆಪಿ ಈಗ ವಿರೋಧಿಸುತ್ತಿದೆ: ಜಯಪ್ರಕಾಶ್ ಹೆಗ್ಡೆ: ಜಯಪ್ರಕಾಶ್ ಹೆಗ್ಡೆ

ಜಾತಿ ಸಮೀಕ್ಷೆಯನ್ನು ಹಿಂದೆ ಒಪ್ಪಿದ್ದ ಬಿಜೆಪಿ ಈಗ ವಿರೋಧಿಸುತ್ತಿದೆ: ಜಯಪ್ರಕಾಶ್ ಹೆಗ್ಡೆ: ಜಯಪ್ರಕಾಶ್ ಹೆಗ್ಡೆ

- Advertisement -
- Advertisement -

ತಮ್ಮ ಸರ್ಕಾರ ಇದ್ದಾಗ ಜಾತಿ ಸಮೀಕ್ಷೆ ವರದಿಯನ್ನು ಒಪ್ಪಿಕೊಂಡು, ಈಗ ಅದನ್ನು ವಿರೋಧಿಸುವುದು ಸರಿಯಲ್ಲ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಅವರು ಸೋಮವಾರ ಉಡುಪಿಯಲ್ಲಿ ಬಿಜೆಪಿಯನ್ನು ಪ್ರಶ್ನಿಸಿದ್ದಾರೆ. ಸಮೀಕ್ಷಾ ವರದಿಯನ್ನು ಸಮರ್ಥಿಸಿಕೊಂಡ ಅವರು, ವರದಿಯು ಅನುಷ್ಠಾನಗೊಳ್ಳಬೇಕು ಎಂದು ಪ್ರತಿಪಾದಿಸಿದ್ದಾರೆ.

ಉಡುಪಿಯ ಬ್ರಹ್ಮಗಿರಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಜಯಪ್ರಕಾಶ್ ಅವರು, ವರದಿಯು ಅವೈಜ್ಞಾನಿಕ ಅಥವಾ ಕೇವಲ ಜಾತಿ ಎಣಿಕೆಯ ಒಂದು ಪ್ರಕ್ರಿಯೆ ಎಂಬ ಹೇಳಿಕೆಗಳನ್ನು ಅವರು ನಿರಾಕರಿಸಿದ್ದಾರೆ.

“ಇದು ಕೇವಲ ಜಾತಿ ಎಣಿಕೆಯಲ್ಲ. ಇದು ಶಿಕ್ಷಣ ಮತ್ತು ಉದ್ಯೋಗ ಉದ್ದೇಶಗಳಿಗಾಗಿ ಸಿದ್ಧಪಡಿಸಲಾದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯಾಗಿದೆ. ನಡೆಸಿದ ಸಮೀಕ್ಷೆಗಳಲ್ಲಿ, ಜಾತಿ ಯಾವುದು ಎಂಬುವುದು ಒಂದು ಅಂಶ ಮಾತ್ರವಾಗಿದೆ” ಎಂದು ಅವರು ಒತ್ತಿ ಹೇಳಿದ್ದಾರೆ. ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಈ ಹಿಂದಿನ ಅಧ್ಯಕ್ಷ ಕಾಂತರಾಜ್ ನೇತೃತ್ವದಲ್ಲಿ ಆರಂಭಿಸಲಾದ ಸಮೀಕ್ಷೆಯು 54 ಪ್ರಶ್ನೆಗಳನ್ನು ಹೊಂದಿರುವ ವಿವರವಾದ ಸ್ವರೂಪವನ್ನು ಬಳಸಿಕೊಂಡಿದ್ದು, ಜಾತಿ ಗುರುತಿಸುವಿಕೆಗಿಂತ ಹೆಚ್ಚಿನ ಸಾಮಾಜಿಕ-ಆರ್ಥಿಕ ಸೂಚಕಗಳನ್ನು ವರದಿ ಒಳಗೊಂಡಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ವರದಿಯು ಕೆಲವು ಜಾತಿಗಳನ್ನು ಕಡೆಗಣಿಸುತ್ತದೆ ಎಂಬ ಆತಂಕಗಳ ಬಗ್ಗೆ ಮಾತನಾಡಿದ ಜಯಪ್ರಕಾಶ್ ಅವರು, ವರದಿಯು ರಾಜ್ಯದಲ್ಲಿ ಪ್ರಸ್ತುತ ಇರುವ ಎಲ್ಲಾ ಜಾತಿಗಳನ್ನು ಒಳಗೊಂಡಿದೆ ಎಂದು ಹೇಳಿದ್ದಾರೆ. ವರದಿಯು ಸರಿಸುಮಾರು ಐನೂರು ಜಾತಿಗಳನ್ನು ಒಳಗೊಂಡಿದ್ದು, ಸಮೀಕ್ಷೆಯ ಸಮಯದಲ್ಲಿ ಜನರು ಹೇಳಿದ ಜಾತಿಯನ್ನು ಆಯೋಗವು ದಾಖಲಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ವರದಿಯ ರಚನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಭಾವ ಬೀರಿದ್ದಾರೆ ಎಂಬ ಆರೋಪಗಳನ್ನು ನಿರಾಕರಿಸಿದ ಅವರು, ರಾಜ್ಯಾದ್ಯಂತ ಜಿಲ್ಲಾಧಿಕಾರಿಗಳ ಮೇಲ್ವಿಚಾರಣೆಯಲ್ಲಿ ತರಬೇತಿ ಪಡೆದ ಶಿಕ್ಷಕರು ಸಮೀಕ್ಷೆಯನ್ನು ನಡೆಸಿದ್ದಾರೆ ಎಂದು ಹೇಳಿದ್ದಾರೆ. ದತ್ತಾಂಶ ಸಂಗ್ರಹಣೆಯ ಕಠಿಣ ಪ್ರಕ್ರಿಯೆಯನ್ನು ವಿವರಿಸಿದ ಅವರು, ಸಂಗ್ರಹಿಸಿದ ದತ್ತಾಂಶದ ಮೇಲೆ ಪ್ರಭಾವ ಬೀರಲು ಸಾಧ್ಯವೆ ಇಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

“ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿ, ಆಯಾ ಜಿಲ್ಲಾ ಅಧಿಕಾರಿಗಳು ಸಮೀಕ್ಷೆಯನ್ನು ನಡೆಸಿದರು. ತರಬೇತಿ ಪಡೆದ ಶಿಕ್ಷಕರು ಸಮೀಕ್ಷೆಯನ್ನು ಕೈಗೊಳ್ಳಲು ಪ್ರತಿ ಹಳ್ಳಿಗೆ ಹೋಗಿದ್ದಾರೆ. ಯಾವುದೇ ಶಿಕ್ಷಕರಿಗೆ ವೈಯಕ್ತಿಕ ಹಿತಾಸಕ್ತಿಗಳು ಇರಲು ಸಾಧ್ಯವಿಲ್ಲ. ಅವರು ಒದಗಿಸಿದ ಸ್ವರೂಪವನ್ನು ಭರ್ತಿ ಮಾಡಿದ್ದಾರೆ. ಇದು ಖಾಸಗಿ ವ್ಯಕ್ತಿಗಳು ಸಿದ್ಧಪಡಿಸಿದ ವರದಿಯಲ್ಲ. ಸಮ ಸಮಾಜವನ್ನು ನಿರ್ಮಿಸಲು ಈ ವರದಿಯನ್ನು ಜಾರಿಗೆ ತರಬೇಕು. ಅವಕಾಶಗಳಿಂದ ವಂಚಿತರಾದವರಿಗೆ ಮೀಸಲಾತಿ ಅಗತ್ಯ” ಎಂದು ಅವರು ಹೇಳಿದ್ದಾರೆ.

ಇದಲ್ಲದೆ, ವರದಿಗೆ ಸಂಬಂಧಿಸಿದಂತೆ ಬಿಜೆಪಿಯ ಟೀಕೆಯ ಬಗ್ಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರೇ ತನ್ನನ್ನು ಮತ್ತು ಸಮಿತಿಯ ಇತರ ಸದಸ್ಯರನ್ನು ನೇಮಿಸಿತ್ತು. ಅಷ್ಟೆ ಅಲ್ಲದೆ, ಆರಂಭದಲ್ಲಿ ಮಧ್ಯಂತರ ವರದಿಯನ್ನು ಬಿಜೆಪಿ ಸ್ವೀಕರಿಸಿತ್ತು, ಆದರೆ ಈಗ ಅವರು ಅದನ್ನು ತಿರಸ್ಕರಿಸುತ್ತಿದ್ದಾರೆ, ಇದು “ಅನ್ಯಾಯ” ಮತ್ತು ರಾಜಕೀಯ ಪ್ರೇರಿತ ಎಂದು ಅವರು ಹೇಳಿದ್ದಾರೆ.

“ನನ್ನನ್ನು ನೇಮಿಸಿದ್ದು ಬಿಜೆಪಿ ಸರ್ಕಾರ. ಎಲ್ಲಾ ಸಮಿತಿ ಸದಸ್ಯರನ್ನು ಬಿಜೆಪಿ ಸರ್ಕಾರ ನೇಮಿಸಿತು. ಬಿಜೆಪಿ ಅಧಿಕಾರದಲ್ಲಿದ್ದಾಗ ನಾವು ಮಧ್ಯಂತರ ವರದಿಯನ್ನು ಸಲ್ಲಿಸಿದ್ದೇವೆ. ಆಗ ಒಪ್ಪಿಕೊಂಡು ಈಗ ವಿರೋಧಿಸುವುದು ಸರಿಯಲ್ಲ; ಇದು ರಾಜಕೀಯ,” ಎಂದು ಹೆಗ್ಡೆ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಉರ್ದು ಭಾರತಕ್ಕೆ ಅನ್ಯವಲ್ಲ’ | ಮಹಾರಾಷ್ಟ್ರ ಪುರಸಭೆಯ ಸೈನ್‌ಬೋರ್ಡ್‌ನಲ್ಲಿ ಉರ್ದು ಬಳಕೆ ಎತ್ತಿಹಿಡಿದ ಸುಪ್ರೀಂಕೋರ್ಟ್

‘ಉರ್ದು ಭಾರತಕ್ಕೆ ಅನ್ಯವಲ್ಲ’ | ಮಹಾರಾಷ್ಟ್ರ ಪುರಸಭೆಯ ಸೈನ್‌ಬೋರ್ಡ್‌ನಲ್ಲಿ ಉರ್ದು ಬಳಕೆ ಎತ್ತಿಹಿಡಿದ ಸುಪ್ರೀಂಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...