Homeಕರ್ನಾಟಕಜಾತಿ ಸಮೀಕ್ಷೆಯನ್ನು ಹಿಂದೆ ಒಪ್ಪಿದ್ದ ಬಿಜೆಪಿ ಈಗ ವಿರೋಧಿಸುತ್ತಿದೆ: ಜಯಪ್ರಕಾಶ್ ಹೆಗ್ಡೆ: ಜಯಪ್ರಕಾಶ್ ಹೆಗ್ಡೆ

ಜಾತಿ ಸಮೀಕ್ಷೆಯನ್ನು ಹಿಂದೆ ಒಪ್ಪಿದ್ದ ಬಿಜೆಪಿ ಈಗ ವಿರೋಧಿಸುತ್ತಿದೆ: ಜಯಪ್ರಕಾಶ್ ಹೆಗ್ಡೆ: ಜಯಪ್ರಕಾಶ್ ಹೆಗ್ಡೆ

- Advertisement -
- Advertisement -

ತಮ್ಮ ಸರ್ಕಾರ ಇದ್ದಾಗ ಜಾತಿ ಸಮೀಕ್ಷೆ ವರದಿಯನ್ನು ಒಪ್ಪಿಕೊಂಡು, ಈಗ ಅದನ್ನು ವಿರೋಧಿಸುವುದು ಸರಿಯಲ್ಲ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಅವರು ಸೋಮವಾರ ಉಡುಪಿಯಲ್ಲಿ ಬಿಜೆಪಿಯನ್ನು ಪ್ರಶ್ನಿಸಿದ್ದಾರೆ. ಸಮೀಕ್ಷಾ ವರದಿಯನ್ನು ಸಮರ್ಥಿಸಿಕೊಂಡ ಅವರು, ವರದಿಯು ಅನುಷ್ಠಾನಗೊಳ್ಳಬೇಕು ಎಂದು ಪ್ರತಿಪಾದಿಸಿದ್ದಾರೆ.

ಉಡುಪಿಯ ಬ್ರಹ್ಮಗಿರಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಜಯಪ್ರಕಾಶ್ ಅವರು, ವರದಿಯು ಅವೈಜ್ಞಾನಿಕ ಅಥವಾ ಕೇವಲ ಜಾತಿ ಎಣಿಕೆಯ ಒಂದು ಪ್ರಕ್ರಿಯೆ ಎಂಬ ಹೇಳಿಕೆಗಳನ್ನು ಅವರು ನಿರಾಕರಿಸಿದ್ದಾರೆ.

“ಇದು ಕೇವಲ ಜಾತಿ ಎಣಿಕೆಯಲ್ಲ. ಇದು ಶಿಕ್ಷಣ ಮತ್ತು ಉದ್ಯೋಗ ಉದ್ದೇಶಗಳಿಗಾಗಿ ಸಿದ್ಧಪಡಿಸಲಾದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯಾಗಿದೆ. ನಡೆಸಿದ ಸಮೀಕ್ಷೆಗಳಲ್ಲಿ, ಜಾತಿ ಯಾವುದು ಎಂಬುವುದು ಒಂದು ಅಂಶ ಮಾತ್ರವಾಗಿದೆ” ಎಂದು ಅವರು ಒತ್ತಿ ಹೇಳಿದ್ದಾರೆ. ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಈ ಹಿಂದಿನ ಅಧ್ಯಕ್ಷ ಕಾಂತರಾಜ್ ನೇತೃತ್ವದಲ್ಲಿ ಆರಂಭಿಸಲಾದ ಸಮೀಕ್ಷೆಯು 54 ಪ್ರಶ್ನೆಗಳನ್ನು ಹೊಂದಿರುವ ವಿವರವಾದ ಸ್ವರೂಪವನ್ನು ಬಳಸಿಕೊಂಡಿದ್ದು, ಜಾತಿ ಗುರುತಿಸುವಿಕೆಗಿಂತ ಹೆಚ್ಚಿನ ಸಾಮಾಜಿಕ-ಆರ್ಥಿಕ ಸೂಚಕಗಳನ್ನು ವರದಿ ಒಳಗೊಂಡಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ವರದಿಯು ಕೆಲವು ಜಾತಿಗಳನ್ನು ಕಡೆಗಣಿಸುತ್ತದೆ ಎಂಬ ಆತಂಕಗಳ ಬಗ್ಗೆ ಮಾತನಾಡಿದ ಜಯಪ್ರಕಾಶ್ ಅವರು, ವರದಿಯು ರಾಜ್ಯದಲ್ಲಿ ಪ್ರಸ್ತುತ ಇರುವ ಎಲ್ಲಾ ಜಾತಿಗಳನ್ನು ಒಳಗೊಂಡಿದೆ ಎಂದು ಹೇಳಿದ್ದಾರೆ. ವರದಿಯು ಸರಿಸುಮಾರು ಐನೂರು ಜಾತಿಗಳನ್ನು ಒಳಗೊಂಡಿದ್ದು, ಸಮೀಕ್ಷೆಯ ಸಮಯದಲ್ಲಿ ಜನರು ಹೇಳಿದ ಜಾತಿಯನ್ನು ಆಯೋಗವು ದಾಖಲಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ವರದಿಯ ರಚನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಭಾವ ಬೀರಿದ್ದಾರೆ ಎಂಬ ಆರೋಪಗಳನ್ನು ನಿರಾಕರಿಸಿದ ಅವರು, ರಾಜ್ಯಾದ್ಯಂತ ಜಿಲ್ಲಾಧಿಕಾರಿಗಳ ಮೇಲ್ವಿಚಾರಣೆಯಲ್ಲಿ ತರಬೇತಿ ಪಡೆದ ಶಿಕ್ಷಕರು ಸಮೀಕ್ಷೆಯನ್ನು ನಡೆಸಿದ್ದಾರೆ ಎಂದು ಹೇಳಿದ್ದಾರೆ. ದತ್ತಾಂಶ ಸಂಗ್ರಹಣೆಯ ಕಠಿಣ ಪ್ರಕ್ರಿಯೆಯನ್ನು ವಿವರಿಸಿದ ಅವರು, ಸಂಗ್ರಹಿಸಿದ ದತ್ತಾಂಶದ ಮೇಲೆ ಪ್ರಭಾವ ಬೀರಲು ಸಾಧ್ಯವೆ ಇಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

“ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿ, ಆಯಾ ಜಿಲ್ಲಾ ಅಧಿಕಾರಿಗಳು ಸಮೀಕ್ಷೆಯನ್ನು ನಡೆಸಿದರು. ತರಬೇತಿ ಪಡೆದ ಶಿಕ್ಷಕರು ಸಮೀಕ್ಷೆಯನ್ನು ಕೈಗೊಳ್ಳಲು ಪ್ರತಿ ಹಳ್ಳಿಗೆ ಹೋಗಿದ್ದಾರೆ. ಯಾವುದೇ ಶಿಕ್ಷಕರಿಗೆ ವೈಯಕ್ತಿಕ ಹಿತಾಸಕ್ತಿಗಳು ಇರಲು ಸಾಧ್ಯವಿಲ್ಲ. ಅವರು ಒದಗಿಸಿದ ಸ್ವರೂಪವನ್ನು ಭರ್ತಿ ಮಾಡಿದ್ದಾರೆ. ಇದು ಖಾಸಗಿ ವ್ಯಕ್ತಿಗಳು ಸಿದ್ಧಪಡಿಸಿದ ವರದಿಯಲ್ಲ. ಸಮ ಸಮಾಜವನ್ನು ನಿರ್ಮಿಸಲು ಈ ವರದಿಯನ್ನು ಜಾರಿಗೆ ತರಬೇಕು. ಅವಕಾಶಗಳಿಂದ ವಂಚಿತರಾದವರಿಗೆ ಮೀಸಲಾತಿ ಅಗತ್ಯ” ಎಂದು ಅವರು ಹೇಳಿದ್ದಾರೆ.

ಇದಲ್ಲದೆ, ವರದಿಗೆ ಸಂಬಂಧಿಸಿದಂತೆ ಬಿಜೆಪಿಯ ಟೀಕೆಯ ಬಗ್ಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರೇ ತನ್ನನ್ನು ಮತ್ತು ಸಮಿತಿಯ ಇತರ ಸದಸ್ಯರನ್ನು ನೇಮಿಸಿತ್ತು. ಅಷ್ಟೆ ಅಲ್ಲದೆ, ಆರಂಭದಲ್ಲಿ ಮಧ್ಯಂತರ ವರದಿಯನ್ನು ಬಿಜೆಪಿ ಸ್ವೀಕರಿಸಿತ್ತು, ಆದರೆ ಈಗ ಅವರು ಅದನ್ನು ತಿರಸ್ಕರಿಸುತ್ತಿದ್ದಾರೆ, ಇದು “ಅನ್ಯಾಯ” ಮತ್ತು ರಾಜಕೀಯ ಪ್ರೇರಿತ ಎಂದು ಅವರು ಹೇಳಿದ್ದಾರೆ.

“ನನ್ನನ್ನು ನೇಮಿಸಿದ್ದು ಬಿಜೆಪಿ ಸರ್ಕಾರ. ಎಲ್ಲಾ ಸಮಿತಿ ಸದಸ್ಯರನ್ನು ಬಿಜೆಪಿ ಸರ್ಕಾರ ನೇಮಿಸಿತು. ಬಿಜೆಪಿ ಅಧಿಕಾರದಲ್ಲಿದ್ದಾಗ ನಾವು ಮಧ್ಯಂತರ ವರದಿಯನ್ನು ಸಲ್ಲಿಸಿದ್ದೇವೆ. ಆಗ ಒಪ್ಪಿಕೊಂಡು ಈಗ ವಿರೋಧಿಸುವುದು ಸರಿಯಲ್ಲ; ಇದು ರಾಜಕೀಯ,” ಎಂದು ಹೆಗ್ಡೆ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಉರ್ದು ಭಾರತಕ್ಕೆ ಅನ್ಯವಲ್ಲ’ | ಮಹಾರಾಷ್ಟ್ರ ಪುರಸಭೆಯ ಸೈನ್‌ಬೋರ್ಡ್‌ನಲ್ಲಿ ಉರ್ದು ಬಳಕೆ ಎತ್ತಿಹಿಡಿದ ಸುಪ್ರೀಂಕೋರ್ಟ್

‘ಉರ್ದು ಭಾರತಕ್ಕೆ ಅನ್ಯವಲ್ಲ’ | ಮಹಾರಾಷ್ಟ್ರ ಪುರಸಭೆಯ ಸೈನ್‌ಬೋರ್ಡ್‌ನಲ್ಲಿ ಉರ್ದು ಬಳಕೆ ಎತ್ತಿಹಿಡಿದ ಸುಪ್ರೀಂಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...