Homeಕರ್ನಾಟಕಜಾತಿ ಸಮೀಕ್ಷೆಯನ್ನು ಹಿಂದೆ ಒಪ್ಪಿದ್ದ ಬಿಜೆಪಿ ಈಗ ವಿರೋಧಿಸುತ್ತಿದೆ: ಜಯಪ್ರಕಾಶ್ ಹೆಗ್ಡೆ: ಜಯಪ್ರಕಾಶ್ ಹೆಗ್ಡೆ

ಜಾತಿ ಸಮೀಕ್ಷೆಯನ್ನು ಹಿಂದೆ ಒಪ್ಪಿದ್ದ ಬಿಜೆಪಿ ಈಗ ವಿರೋಧಿಸುತ್ತಿದೆ: ಜಯಪ್ರಕಾಶ್ ಹೆಗ್ಡೆ: ಜಯಪ್ರಕಾಶ್ ಹೆಗ್ಡೆ

- Advertisement -
- Advertisement -

ತಮ್ಮ ಸರ್ಕಾರ ಇದ್ದಾಗ ಜಾತಿ ಸಮೀಕ್ಷೆ ವರದಿಯನ್ನು ಒಪ್ಪಿಕೊಂಡು, ಈಗ ಅದನ್ನು ವಿರೋಧಿಸುವುದು ಸರಿಯಲ್ಲ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಅವರು ಸೋಮವಾರ ಉಡುಪಿಯಲ್ಲಿ ಬಿಜೆಪಿಯನ್ನು ಪ್ರಶ್ನಿಸಿದ್ದಾರೆ. ಸಮೀಕ್ಷಾ ವರದಿಯನ್ನು ಸಮರ್ಥಿಸಿಕೊಂಡ ಅವರು, ವರದಿಯು ಅನುಷ್ಠಾನಗೊಳ್ಳಬೇಕು ಎಂದು ಪ್ರತಿಪಾದಿಸಿದ್ದಾರೆ.

ಉಡುಪಿಯ ಬ್ರಹ್ಮಗಿರಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಜಯಪ್ರಕಾಶ್ ಅವರು, ವರದಿಯು ಅವೈಜ್ಞಾನಿಕ ಅಥವಾ ಕೇವಲ ಜಾತಿ ಎಣಿಕೆಯ ಒಂದು ಪ್ರಕ್ರಿಯೆ ಎಂಬ ಹೇಳಿಕೆಗಳನ್ನು ಅವರು ನಿರಾಕರಿಸಿದ್ದಾರೆ.

“ಇದು ಕೇವಲ ಜಾತಿ ಎಣಿಕೆಯಲ್ಲ. ಇದು ಶಿಕ್ಷಣ ಮತ್ತು ಉದ್ಯೋಗ ಉದ್ದೇಶಗಳಿಗಾಗಿ ಸಿದ್ಧಪಡಿಸಲಾದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯಾಗಿದೆ. ನಡೆಸಿದ ಸಮೀಕ್ಷೆಗಳಲ್ಲಿ, ಜಾತಿ ಯಾವುದು ಎಂಬುವುದು ಒಂದು ಅಂಶ ಮಾತ್ರವಾಗಿದೆ” ಎಂದು ಅವರು ಒತ್ತಿ ಹೇಳಿದ್ದಾರೆ. ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಈ ಹಿಂದಿನ ಅಧ್ಯಕ್ಷ ಕಾಂತರಾಜ್ ನೇತೃತ್ವದಲ್ಲಿ ಆರಂಭಿಸಲಾದ ಸಮೀಕ್ಷೆಯು 54 ಪ್ರಶ್ನೆಗಳನ್ನು ಹೊಂದಿರುವ ವಿವರವಾದ ಸ್ವರೂಪವನ್ನು ಬಳಸಿಕೊಂಡಿದ್ದು, ಜಾತಿ ಗುರುತಿಸುವಿಕೆಗಿಂತ ಹೆಚ್ಚಿನ ಸಾಮಾಜಿಕ-ಆರ್ಥಿಕ ಸೂಚಕಗಳನ್ನು ವರದಿ ಒಳಗೊಂಡಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ವರದಿಯು ಕೆಲವು ಜಾತಿಗಳನ್ನು ಕಡೆಗಣಿಸುತ್ತದೆ ಎಂಬ ಆತಂಕಗಳ ಬಗ್ಗೆ ಮಾತನಾಡಿದ ಜಯಪ್ರಕಾಶ್ ಅವರು, ವರದಿಯು ರಾಜ್ಯದಲ್ಲಿ ಪ್ರಸ್ತುತ ಇರುವ ಎಲ್ಲಾ ಜಾತಿಗಳನ್ನು ಒಳಗೊಂಡಿದೆ ಎಂದು ಹೇಳಿದ್ದಾರೆ. ವರದಿಯು ಸರಿಸುಮಾರು ಐನೂರು ಜಾತಿಗಳನ್ನು ಒಳಗೊಂಡಿದ್ದು, ಸಮೀಕ್ಷೆಯ ಸಮಯದಲ್ಲಿ ಜನರು ಹೇಳಿದ ಜಾತಿಯನ್ನು ಆಯೋಗವು ದಾಖಲಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ವರದಿಯ ರಚನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಭಾವ ಬೀರಿದ್ದಾರೆ ಎಂಬ ಆರೋಪಗಳನ್ನು ನಿರಾಕರಿಸಿದ ಅವರು, ರಾಜ್ಯಾದ್ಯಂತ ಜಿಲ್ಲಾಧಿಕಾರಿಗಳ ಮೇಲ್ವಿಚಾರಣೆಯಲ್ಲಿ ತರಬೇತಿ ಪಡೆದ ಶಿಕ್ಷಕರು ಸಮೀಕ್ಷೆಯನ್ನು ನಡೆಸಿದ್ದಾರೆ ಎಂದು ಹೇಳಿದ್ದಾರೆ. ದತ್ತಾಂಶ ಸಂಗ್ರಹಣೆಯ ಕಠಿಣ ಪ್ರಕ್ರಿಯೆಯನ್ನು ವಿವರಿಸಿದ ಅವರು, ಸಂಗ್ರಹಿಸಿದ ದತ್ತಾಂಶದ ಮೇಲೆ ಪ್ರಭಾವ ಬೀರಲು ಸಾಧ್ಯವೆ ಇಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

“ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿ, ಆಯಾ ಜಿಲ್ಲಾ ಅಧಿಕಾರಿಗಳು ಸಮೀಕ್ಷೆಯನ್ನು ನಡೆಸಿದರು. ತರಬೇತಿ ಪಡೆದ ಶಿಕ್ಷಕರು ಸಮೀಕ್ಷೆಯನ್ನು ಕೈಗೊಳ್ಳಲು ಪ್ರತಿ ಹಳ್ಳಿಗೆ ಹೋಗಿದ್ದಾರೆ. ಯಾವುದೇ ಶಿಕ್ಷಕರಿಗೆ ವೈಯಕ್ತಿಕ ಹಿತಾಸಕ್ತಿಗಳು ಇರಲು ಸಾಧ್ಯವಿಲ್ಲ. ಅವರು ಒದಗಿಸಿದ ಸ್ವರೂಪವನ್ನು ಭರ್ತಿ ಮಾಡಿದ್ದಾರೆ. ಇದು ಖಾಸಗಿ ವ್ಯಕ್ತಿಗಳು ಸಿದ್ಧಪಡಿಸಿದ ವರದಿಯಲ್ಲ. ಸಮ ಸಮಾಜವನ್ನು ನಿರ್ಮಿಸಲು ಈ ವರದಿಯನ್ನು ಜಾರಿಗೆ ತರಬೇಕು. ಅವಕಾಶಗಳಿಂದ ವಂಚಿತರಾದವರಿಗೆ ಮೀಸಲಾತಿ ಅಗತ್ಯ” ಎಂದು ಅವರು ಹೇಳಿದ್ದಾರೆ.

ಇದಲ್ಲದೆ, ವರದಿಗೆ ಸಂಬಂಧಿಸಿದಂತೆ ಬಿಜೆಪಿಯ ಟೀಕೆಯ ಬಗ್ಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರೇ ತನ್ನನ್ನು ಮತ್ತು ಸಮಿತಿಯ ಇತರ ಸದಸ್ಯರನ್ನು ನೇಮಿಸಿತ್ತು. ಅಷ್ಟೆ ಅಲ್ಲದೆ, ಆರಂಭದಲ್ಲಿ ಮಧ್ಯಂತರ ವರದಿಯನ್ನು ಬಿಜೆಪಿ ಸ್ವೀಕರಿಸಿತ್ತು, ಆದರೆ ಈಗ ಅವರು ಅದನ್ನು ತಿರಸ್ಕರಿಸುತ್ತಿದ್ದಾರೆ, ಇದು “ಅನ್ಯಾಯ” ಮತ್ತು ರಾಜಕೀಯ ಪ್ರೇರಿತ ಎಂದು ಅವರು ಹೇಳಿದ್ದಾರೆ.

“ನನ್ನನ್ನು ನೇಮಿಸಿದ್ದು ಬಿಜೆಪಿ ಸರ್ಕಾರ. ಎಲ್ಲಾ ಸಮಿತಿ ಸದಸ್ಯರನ್ನು ಬಿಜೆಪಿ ಸರ್ಕಾರ ನೇಮಿಸಿತು. ಬಿಜೆಪಿ ಅಧಿಕಾರದಲ್ಲಿದ್ದಾಗ ನಾವು ಮಧ್ಯಂತರ ವರದಿಯನ್ನು ಸಲ್ಲಿಸಿದ್ದೇವೆ. ಆಗ ಒಪ್ಪಿಕೊಂಡು ಈಗ ವಿರೋಧಿಸುವುದು ಸರಿಯಲ್ಲ; ಇದು ರಾಜಕೀಯ,” ಎಂದು ಹೆಗ್ಡೆ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಉರ್ದು ಭಾರತಕ್ಕೆ ಅನ್ಯವಲ್ಲ’ | ಮಹಾರಾಷ್ಟ್ರ ಪುರಸಭೆಯ ಸೈನ್‌ಬೋರ್ಡ್‌ನಲ್ಲಿ ಉರ್ದು ಬಳಕೆ ಎತ್ತಿಹಿಡಿದ ಸುಪ್ರೀಂಕೋರ್ಟ್

‘ಉರ್ದು ಭಾರತಕ್ಕೆ ಅನ್ಯವಲ್ಲ’ | ಮಹಾರಾಷ್ಟ್ರ ಪುರಸಭೆಯ ಸೈನ್‌ಬೋರ್ಡ್‌ನಲ್ಲಿ ಉರ್ದು ಬಳಕೆ ಎತ್ತಿಹಿಡಿದ ಸುಪ್ರೀಂಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...