Homeಮುಖಪುಟವಿಜ್ಞಾನ ಸಂಶೋಧನೆ ಮತ್ತು ಭಾರತದ ಜಾತಿ ವ್ಯವಸ್ಥೆ

ವಿಜ್ಞಾನ ಸಂಶೋಧನೆ ಮತ್ತು ಭಾರತದ ಜಾತಿ ವ್ಯವಸ್ಥೆ

- Advertisement -
- Advertisement -

ಕಳೆದ ವಾರ ನನ್ನ ಸ್ನೇಹಿತರೊಬ್ಬರು ಭಾರತದಲ್ಲಿನ ವಿಜ್ಞಾನ ಸಂಶೋಧನೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಇಲ್ಲಿನ ಬಹುತೇಕ ಸಂಶೋಧನೆಗಳು ಕಡತಗಳ ಹೊಟ್ಟೆ ತುಂಬಿಸುವುದಕ್ಕಾಗಿಯೇ ನಡೆಯುತ್ತವೆ, ಬಡ್ತಿ ಪಡೆಯಲು ಮಾಡಲಾಗುತ್ತದೆ ಮತ್ತು ನಮ್ಮ ದೇಶದ ಅಗತ್ಯಗಳಿಗೂ ಅವಕ್ಕೂ ಸಂಬಂಧವಿಲ್ಲ ಎಂದು ಹೇಳುತ್ತಿದ್ದರು. ನನ್ನ ಸ್ನೇಹಿತ ಸ್ವತಃ ಎಂಜಿನಿಯರಿಂಗ್‌ನಲ್ಲಿ ಪಿಎಚ್‌ಡಿ, ದೊಡ್ಡ ಬಯೋಟೆಕ್ನಾಲಜಿ ಕಂಪನಿಯನ್ನು ನಡೆಸುತ್ತಿದ್ದಾರೆ. ಒಂದು ವಿಶೇಷ ರೀತಿಯ ಮೆಂಬ್ರೇನ್ ತಯಾರಿಕೆಯಲ್ಲಿ ಅವರ ಕಂಪನಿಯು ವಿಶ್ವದ ಮೂರು ದೊಡ್ಡ ಕಂಪನಿಗಳಲ್ಲಿ ಒಂದಾಗಿದೆ. ಗಾಂಧಿ ಕುಟುಂಬಕ್ಕೆ ಸೇರಿದವರು, ದೇಶಕ್ಕೆ ಸೇವೆ ಸಲ್ಲಿಸುವ ಮನೋಭಾವ ಮತ್ತು ರಾಷ್ಟ್ರೀಯ ಸ್ವಾಭಿಮಾನದ ಕಲ್ಪನೆ ಅವರಲ್ಲಿದೆ. ಹಾಗಾಗಿ ಅವರಿಗೂ ಟೀಕೆ ಮಾಡುವ ಹಕ್ಕು ಇದೆ. ಕೆಲ ಕಾಲ ಭಾರತದ ವಿಜ್ಞಾನಿಗಳು ವಿದೇಶಗಳ ನಕಲು ಮಾಡುವುದನ್ನು ಬಿಟ್ಟು ತಮ್ಮ ಆದ್ಯತೆಯ ವಿಷಯಗಳ ಕುರಿತು ಸಂಶೋಧನಾ ಪ್ರಬಂಧಗಳನ್ನು ಪ್ರಕಟಿಸಬೇಕು ಮತ್ತು ಭಾರತದ ಅಗತ್ಯಕ್ಕೆ ತಕ್ಕಂತೆ ತಂತ್ರಜ್ಞಾನವನ್ನು ತಯಾರಿಸಬೇಕು, ನಮ್ಮ ಅಗತ್ಯಕ್ಕೆ ತಕ್ಕದಾದ ಆವಿಷ್ಕಾರಗಳನ್ನು ಮಾಡಬೇಕು ಎಂದರು.

ಕಾಕತಾಳೀಯವೆಂಬಂತೆ ಕಳೆದ ವಾರ ವಿಶ್ವದ ಪ್ರತಿಷ್ಠಿತ ವಿಜ್ಞಾನ ನಿಯತಕಾಲಿಕ ’ನೇಚರ್‌’ನಲ್ಲಿ ಭಾರತೀಯ ವಿಜ್ಞಾನದಲ್ಲಿ ಅಸ್ಪೃಶ್ಯತೆಯ ಕುರಿತು ಮಹತ್ವದ ಲೇಖನ ಪ್ರಕಟವಾಗಿತ್ತು. ಅಂಕುರ್ ಪಲಿವಾಲ್ ಅವರ ಈ ಲೇಖನದ ಶೀರ್ಷಿಕೆ ’ಭಾರತದ ಜಾತಿ ವ್ಯವಸ್ಥೆಯು ವಿಜ್ಞಾನದಲ್ಲಿ ವೈವಿಧ್ಯತೆಯನ್ನು ಹೇಗೆ ಮಿತಿಗೊಳಿಸುತ್ತದೆ’ ಎಂದಾಗಿತ್ತು. ಲೇಖನವನ್ನು ಆರು ಚಾರ್ಟ್‌ಗಳ ಸುತ್ತ ಹೆಣೆಯಲಾಗಿದೆ; ಇದು ಭಾರತದ ವೈಜ್ಞಾನಿಕ ಬೋಧನೆ ಮತ್ತು ಸಂಶೋಧನಾ ಸಂಸ್ಥೆಗಳ ಜಾತಿ ಸಂಯೋಜನೆಯ ಅಂಕಿಅಂಶಗಳನ್ನು ಪ್ರಸ್ತುತಪಡಿಸುತ್ತದೆ. ಇದನ್ನು ಭಾರತದ ವಿರುದ್ಧ ಪಾಶ್ಚಾತ್ಯರ ಪಿತೂರಿ ಎಂದು ಭಾವಿಸಬೇಡಿ. ಎಲ್ಲಾ ಅಂಕಿಅಂಶಗಳನ್ನು ಭಾರತ ಸರ್ಕಾರದ ಅಧಿಕೃತ ಮೂಲದಿಂದ ತೆಗೆದುಕೊಳ್ಳಲಾಗಿದೆ. ’ನೇಚರ್’ ನಿಯತಕಾಲಿಕವು ಪ್ರಪಂಚದಾದ್ಯಂತ ಪ್ರಮುಖ ದೇಶಗಳ ವಿಜ್ಞಾನಿಗಳ ಸಾಮಾಜಿಕ ಹಿನ್ನೆಲೆಯನ್ನು ಪರಿಶೋಧಿಸುವ ಸರಣಿಯ ಭಾಗವಾಗಿದೆ ಈ ಲೇಖನ. ಈ ಸರಣಿಯ ಅಡಿಯಲ್ಲಿ, ಅಮೆರಿಕ, ಯುರೋಪ್ ಮತ್ತು ಇತರ ದೇಶಗಳಲ್ಲಿ ವಿಜ್ಞಾನದಲ್ಲಿ ಕಪ್ಪು ವರ್ಣದವರು ಮತ್ತು ಅಲ್ಪಸಂಖ್ಯಾತರ ಕೊರತೆ ಇರುವುದೂ ಎದ್ದು ಕಾಣುತ್ತಿದೆ.

ನಮ್ಮ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ದಲಿತ, ಬುಡಕಟ್ಟು ಮತ್ತು ಇತರ ಹಿಂದುಳಿದ ಜಾತಿಗಳ ವಿಜ್ಞಾನಿಗಳು ಎಷ್ಟು ಕಡಿಮೆ ಸಂಖ್ಯೆಯಲ್ಲಿದ್ದಾರೆ ಎಂಬುದನ್ನು ಈ ಲೇಖನ ತೋರಿಸುತ್ತದೆ. ಭಾರತದ ಜನಸಂಖ್ಯೆಯಲ್ಲಿ ದಲಿತ ಸಮುದಾಯದ ಪ್ರಮಾಣ 16.6% ಮತ್ತು ಬುಡಕಟ್ಟು ಸಮುದಾಯದ ಪ್ರಮಾಣ 8.6%ರಷ್ಟಿದೆ. ಹಿಂದುಳಿದ ವರ್ಗಗಳು ಅಥವಾ ಒಬಿಸಿಗಳನ್ನು ಇದಕ್ಕೆ ಸೇರಿಸಿದರೆ, ಈ ಮೂರು ವಂಚಿತ ವರ್ಗಗಳ ಒಟ್ಟು ಜನಸಂಖ್ಯೆಯು ದೇಶದ 70ರಿಂದ 75% ರಷ್ಟಿದೆ. ಅಂದರೆ ಸಾಮಾನ್ಯ ವರ್ಗದ (ಮೇಲ್ಜಾತಿ ಹಿಂದೂಗಳು, ಮುಂದುವರಿದ ಮುಸ್ಲಿಮರು, ಸಿಖ್ಖರು, ಕ್ರಿಶ್ಚಿಯನ್ನರು ಇತ್ಯಾದಿ) ಜನಸಂಖ್ಯೆಯು 25ರಿಂದ 30%ಕ್ಕಿಂತ ಹೆಚ್ಚಿಲ್ಲ.

ಈಗ ಇದಕ್ಕೆ ಹೋಲಿಸಿ, ದೇಶದ ಪ್ರತಿಷ್ಠಿತ ವೈಜ್ಞಾನಿಕ ಸಂಸ್ಥೆಗಳ ಸ್ಥಿತಿಯನ್ನು ನೋಡಿ. ’ನೇಚರ್’ ನಿಯತಕಾಲಿಕದ ಈ ಲೇಖನವು ನಾವು ಉನ್ನತ ಶಿಕ್ಷಣದ ಮೆಟ್ಟಿಲುಗಳನ್ನು ಏರುತ್ತಿದ್ದಂತೆ ದಲಿತ, ಬುಡಕಟ್ಟು ಮತ್ತು ಹಿಂದುಳಿದ ಸಮುದಾಯಗಳ ಉಪಸ್ಥಿತಿಯು ಕುಗ್ಗುತ್ತಿದೆ ಎಂದು ತೋರಿಸುತ್ತದೆ. ಕಾಲೇಜುಗಳಲ್ಲಿನ ಎಲ್ಲಾ ವಿಜ್ಞಾನ ಮತ್ತು ತಂತ್ರಜ್ಞಾನ ಸಂಬಂಧಿತ ಕೋರ್ಸ್‌ಗಳಲ್ಲಿ (ಬಿಎಸ್‌ಸಿ, ಎಂಜಿನಿಯರಿಂಗ್ ಅಥವಾ ಡಾಕ್ಟರೇಟ್ ಇತ್ಯಾದಿ) ಒಬಿಸಿ ವಿದ್ಯಾರ್ಥಿಗಳ ಸಂಖ್ಯೆ ಅವರ ಜನಸಂಖ್ಯೆಗಿಂತ ಸ್ವಲ್ಪ ಕಡಿಮೆಯಿದ್ದರೆ, ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳ ಸಂಖ್ಯೆ ಅವರ ಜನಸಂಖ್ಯೆಯ ಅರ್ಧದಷ್ಟಿದೆ. ಸ್ನಾತಕೋತ್ತರ ಪದವಿಯಲ್ಲಿ (ಎಂಎಸ್‌ಸಿ ಮತ್ತು ಎಂಟೆಕ್ ಇತ್ಯಾದಿ) ಈ ಅನುಪಾತ ಇನ್ನಷ್ಟು ಕಡಿಮೆಯಾಗುತ್ತದೆ. ಆದರೆ ಈ ಡಿಗ್ರಿಗಳಿಂದ ಆಗುವುದು ಏನೂ ಇಲ್ಲವಾದರೂ, ವಿಜ್ಞಾನದಲ್ಲಿ ಸಂಶೋಧನೆ ಅಥವಾ ಬೋಧನೆಗೆ ಪಿಎಚ್‌ಡಿ ಅಗತ್ಯವಾಗಿದೆ. ದೇಶದ ಅತ್ಯಂತ ಹೆಸರಾಂತ ವಿಜ್ಞಾನ ಸಂಸ್ಥೆಗಳಲ್ಲಿ (ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಹಾಗೂ ಉನ್ನತ ರ್‍ಯಾಂಕಿಂಗ್ ಹೊಂದಿರುವ ಐಐಟಿ) ಇರುವ ಪಿಎಚ್‌ಡಿ ವಿದ್ಯಾರ್ಥಿಗಳ ಹಿನ್ನೆಲೆಯನ್ನು ನಾವು ನೋಡಿದರೆ, ದಲಿತರು, ಆದಿವಾಸಿಗಳು ಮತ್ತು ಹಿಂದುಳಿದ ಜಾತಿಗಳ ಅನುಪಾತವು ಅವರ ಜನಸಂಖ್ಯೆಗೆ ಇರಬೇಕಾದ ಪಾಲಿಗಿಂತ ಅರ್ಧ ಅಥವಾ ಅದಕ್ಕಿಂತ ಕಡಿಮೆಯಾಗುತ್ತದೆ. ಸಾಮಾನ್ಯ ಅಥವಾ ಮೇಲ್ವರ್ಗದ ಜಾತಿಗಳ ಅನುಪಾತವು ಅವರ ಜನಸಂಖ್ಯೆಗೆ ಇರಬೇಕಾದ ಪಾಲಿಗಿಂತ ಡಬಲ್ ಅಥವಾ 60 ಪ್ರತಿಶತಕ್ಕಿಂತ ಹೆಚ್ಚಿದೆ.

ಇಂತಹ ವೈಜ್ಞಾನಿಕ ಸಂಸ್ಥೆಗಳ ಪ್ರೊಫೆಸರ್ ಅಥವಾ ವಿಜ್ಞಾನಿಗಳ ಸ್ಥಾನಕ್ಕೆ ತಲುಪುತ್ತ ಈ ಅಸಮಾನತೆಯ ವಿಷಮತೆಯು ಇನ್ನಷ್ಟು ತೀವ್ರತೆಯನ್ನು ಮುಟ್ಟುತ್ತದೆ.

ಈ ಸಂಶೋಧನೆಯು ಆರ್‌ಟಿಐ ಮೂಲಕ ಎಲ್ಲಾ ಸಂಸ್ಥೆಗಳಿಂದ ಮಾಹಿತಿಯನ್ನು ಪಡೆದುಕೊಂಡು, ಉನ್ನತ ವೈಜ್ಞಾನಿಕ ಸಂಸ್ಥೆಗಳ ಬೋಧಕರ ಹುದ್ದೆಗಳಲ್ಲಿ ಶೇ.50ರಷ್ಟು ಮೀಸಲಾತಿ ಇದ್ದರೂ, ದಲಿತ, ಬುಡಕಟ್ಟು ಮತ್ತು ಹಿಂದುಳಿದ ವರ್ಗಗಳ ಪ್ರಮಾಣವು ಶೇ.10ಕ್ಕಿಂತ ಕಡಿಮೆ ಇದೆ ಎಂದು ಗುರುತಿಸಿದೆ. ಕೆಲವೆಡೆ ಉಪನ್ಯಾಸಕರ ಸಂಖ್ಯೆಗಳಲ್ಲಿ ಶೇ.10ಕ್ಕಿಂತ ಹೆಚ್ಚಿದ್ದರೂ ಪ್ರೊಫೆಸರ್‌ನಂತಹ ಉನ್ನತ ಹುದ್ದೆಗೆ ಏರುತ್ತಲೇ ದಲಿತರು, ಆದಿವಾಸಿಗಳು, ಹಿಂದುಳಿದವರ ಸಂಖ್ಯೆ ನಗಣ್ಯವಾಗುತ್ತದೆ. ಅಷ್ಟೇ ಅಲ್ಲ, ವಿಜ್ಞಾನದ ಫಂಡಿಂಗ್‌ನ ಪ್ರಮುಖ ಯೋಜನೆಗಳಲ್ಲಿಯೂ ಮೇಲ್ಜಾತಿ ಅಭ್ಯರ್ಥಿಗಳು 80% ಸೀಟುಗಳನ್ನು ಪಡೆಯುತ್ತಾರೆ. ಇದರರ್ಥ ವಿಜ್ಞಾನ ಕ್ಷೇತ್ರದಲ್ಲಿ, ದೇಶದ ಜನಸಂಖ್ಯೆಯ 80% ಜನರಿಗೆ 20% ಅಥವಾ ಅದಕ್ಕಿಂತ ಕಡಿಮೆ ಸ್ಥಾನ ಸಿಗುತ್ತದೆ ಹಾಗೂ 20% ಜನಸಂಖ್ಯೆಯು 80% ಸ್ಥಾನಗಳನ್ನು ಆಕ್ರಮಿಸಿಕೊಂಡಿದೆ. ದೇಶದ ವಂಚಿತ ಸಮಾಜಗಳ ಮೇಲೆ ಈ ಅಸಮಾನತೆಯ ಪರಿಣಾಮವು ಸ್ಪಷ್ಟವಾಗಿದೆ.

ಇದನ್ನೂ ಓದಿ: ಭಾರತದ ವಿಜ್ಞಾನ ಕ್ಷೇತ್ರದಲ್ಲಿ ದಲಿತರಿಗಿಲ್ಲ ಹೆಚ್ಚಿನ ಪ್ರಾತಿನಿಧ್ಯ: ‘ನೇಚರ್‌’ ವರದಿ

ಆದರೆ ಇದು ಭಾರತದ ವೈಜ್ಞಾನಿಕ ಸಂಶೋಧನೆಯ ಗುಣಮಟ್ಟದ ಮೇಲೂ ಪರಿಣಾಮ ಬೀರುತ್ತದೆಯೇ ಎಂಬುದು ನಿಜವಾದ ಪ್ರಶ್ನೆ. ಸಮಾಜದ ಅತ್ಯಂತ ಪ್ರತಿಭಾವಂತ ವಿದ್ಯಾರ್ಥಿಗಳ ಶೋಧವು ಸಮಾಜದ ಮೂರನೇ ಒಂದು ಭಾಗಕ್ಕೆ ಮಾತ್ರ ಸೀಮಿತವಾದಲ್ಲಿ, ನಿಸ್ಸಂಶಯವಾಗಿ ದೇಶವು ಶ್ರೇಷ್ಠ ಪ್ರತಿಭೆಗಳಿಂದ ವಂಚಿತವಾಗುತ್ತದೆ. ಅಷ್ಟೇ ಅಲ್ಲ, ಇಂದು ನಾವು ಯಾರನ್ನು ವಂಚಿತ ಸಮಾಜ ಎಂದು ಕರೆಯುತ್ತಿದ್ದೇವೆಯೋ, ಅವರು ನಮ್ಮ ಸಮಾಜದ ಎಲ್ಲಾ ರೀತಿಯ ಜ್ಞಾನದ ಮೂಲವಾಗಿದ್ದಾರೆ: ಕೃಷಿ ಜ್ಞಾನ, ಬಟ್ಟೆ ನೇಯ್ಗೆಯ ಜ್ಞಾನ, ಚರ್ಮದ ವಸ್ತುಗಳ ರಚನೆಯ ಜ್ಞಾನ, ಕರಕುಶಲ ಕೌಶಲ್ಯ, ಉಪಕರಣಗಳನ್ನು ತಯಾರಿಸುವ ಜ್ಞಾನ, ಔಷಧ ತಯಾರಿಕೆಯ ಜ್ಞಾನ, ಔಷಧೀಯ ಸಸ್ಯಗಳ ಜ್ಞಾನ ಇತ್ಯಾದಿ. ನಮ್ಮ ದೇಶದ ಇಂತಹ ಜ್ಞಾನವುಳ್ಳ ವರ್ಗವನ್ನು ವಿಜ್ಞಾನ ಶಿಕ್ಷಣ ಮತ್ತು ಸಂಶೋಧನೆಯಿಂದ ವಂಚಿತರನ್ನಾಗಿಸುವ ಮೂಲಕ ನಾವು ಅವರಿಗೆ ಮಾತ್ರವಲ್ಲದೆ ನಮ್ಮ ದೇಶ ಮತ್ತು ವಿಜ್ಞಾನಕ್ಕೂ ಹಾನಿ ಮಾಡಿದ್ದೇವೆ.

ಕನ್ನಡಕ್ಕೆ: ರಾಜಶೇಖರ್ ಅಕ್ಕಿ

ಯೋಗೇಂದ್ರ ಯಾದವ್

ಯೋಗೇಂದ್ರ ಯಾದವ್
ರಾಜಕೀಯ ಚಿಂತಕರು. ಪ್ರಸ್ತುತ ರಾಜಕೀಯ ಸಂತಿಗಳ ಬಗ್ಗೆ, ಪ್ರಜಾಪ್ರಭುತ್ವವನ್ನು ಉಳಿಸುವ ತಮ್ಮ ಚಿಂತನೆಗಳನ್ನು ಹಲವು ಪತ್ರಿಕೆಗಳಲ್ಲಿ ಸಕ್ರಿಯವಾಗಿ ಮಂಡಿಸುತ್ತಾರೆ. ‘ಮೇಕಿಂಗ್ ಸೆನ್ಸ್ ಆಫ್ ಇಂಡಿಯನ್ ಡೆಮಾಕ್ರಸಿ’ ಪುಸ್ತಕ ರಚಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...