Homeಮುಖಪುಟವಿಜ್ಞಾನ ಸಂಶೋಧನೆ ಮತ್ತು ಭಾರತದ ಜಾತಿ ವ್ಯವಸ್ಥೆ

ವಿಜ್ಞಾನ ಸಂಶೋಧನೆ ಮತ್ತು ಭಾರತದ ಜಾತಿ ವ್ಯವಸ್ಥೆ

- Advertisement -
- Advertisement -

ಕಳೆದ ವಾರ ನನ್ನ ಸ್ನೇಹಿತರೊಬ್ಬರು ಭಾರತದಲ್ಲಿನ ವಿಜ್ಞಾನ ಸಂಶೋಧನೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಇಲ್ಲಿನ ಬಹುತೇಕ ಸಂಶೋಧನೆಗಳು ಕಡತಗಳ ಹೊಟ್ಟೆ ತುಂಬಿಸುವುದಕ್ಕಾಗಿಯೇ ನಡೆಯುತ್ತವೆ, ಬಡ್ತಿ ಪಡೆಯಲು ಮಾಡಲಾಗುತ್ತದೆ ಮತ್ತು ನಮ್ಮ ದೇಶದ ಅಗತ್ಯಗಳಿಗೂ ಅವಕ್ಕೂ ಸಂಬಂಧವಿಲ್ಲ ಎಂದು ಹೇಳುತ್ತಿದ್ದರು. ನನ್ನ ಸ್ನೇಹಿತ ಸ್ವತಃ ಎಂಜಿನಿಯರಿಂಗ್‌ನಲ್ಲಿ ಪಿಎಚ್‌ಡಿ, ದೊಡ್ಡ ಬಯೋಟೆಕ್ನಾಲಜಿ ಕಂಪನಿಯನ್ನು ನಡೆಸುತ್ತಿದ್ದಾರೆ. ಒಂದು ವಿಶೇಷ ರೀತಿಯ ಮೆಂಬ್ರೇನ್ ತಯಾರಿಕೆಯಲ್ಲಿ ಅವರ ಕಂಪನಿಯು ವಿಶ್ವದ ಮೂರು ದೊಡ್ಡ ಕಂಪನಿಗಳಲ್ಲಿ ಒಂದಾಗಿದೆ. ಗಾಂಧಿ ಕುಟುಂಬಕ್ಕೆ ಸೇರಿದವರು, ದೇಶಕ್ಕೆ ಸೇವೆ ಸಲ್ಲಿಸುವ ಮನೋಭಾವ ಮತ್ತು ರಾಷ್ಟ್ರೀಯ ಸ್ವಾಭಿಮಾನದ ಕಲ್ಪನೆ ಅವರಲ್ಲಿದೆ. ಹಾಗಾಗಿ ಅವರಿಗೂ ಟೀಕೆ ಮಾಡುವ ಹಕ್ಕು ಇದೆ. ಕೆಲ ಕಾಲ ಭಾರತದ ವಿಜ್ಞಾನಿಗಳು ವಿದೇಶಗಳ ನಕಲು ಮಾಡುವುದನ್ನು ಬಿಟ್ಟು ತಮ್ಮ ಆದ್ಯತೆಯ ವಿಷಯಗಳ ಕುರಿತು ಸಂಶೋಧನಾ ಪ್ರಬಂಧಗಳನ್ನು ಪ್ರಕಟಿಸಬೇಕು ಮತ್ತು ಭಾರತದ ಅಗತ್ಯಕ್ಕೆ ತಕ್ಕಂತೆ ತಂತ್ರಜ್ಞಾನವನ್ನು ತಯಾರಿಸಬೇಕು, ನಮ್ಮ ಅಗತ್ಯಕ್ಕೆ ತಕ್ಕದಾದ ಆವಿಷ್ಕಾರಗಳನ್ನು ಮಾಡಬೇಕು ಎಂದರು.

ಕಾಕತಾಳೀಯವೆಂಬಂತೆ ಕಳೆದ ವಾರ ವಿಶ್ವದ ಪ್ರತಿಷ್ಠಿತ ವಿಜ್ಞಾನ ನಿಯತಕಾಲಿಕ ’ನೇಚರ್‌’ನಲ್ಲಿ ಭಾರತೀಯ ವಿಜ್ಞಾನದಲ್ಲಿ ಅಸ್ಪೃಶ್ಯತೆಯ ಕುರಿತು ಮಹತ್ವದ ಲೇಖನ ಪ್ರಕಟವಾಗಿತ್ತು. ಅಂಕುರ್ ಪಲಿವಾಲ್ ಅವರ ಈ ಲೇಖನದ ಶೀರ್ಷಿಕೆ ’ಭಾರತದ ಜಾತಿ ವ್ಯವಸ್ಥೆಯು ವಿಜ್ಞಾನದಲ್ಲಿ ವೈವಿಧ್ಯತೆಯನ್ನು ಹೇಗೆ ಮಿತಿಗೊಳಿಸುತ್ತದೆ’ ಎಂದಾಗಿತ್ತು. ಲೇಖನವನ್ನು ಆರು ಚಾರ್ಟ್‌ಗಳ ಸುತ್ತ ಹೆಣೆಯಲಾಗಿದೆ; ಇದು ಭಾರತದ ವೈಜ್ಞಾನಿಕ ಬೋಧನೆ ಮತ್ತು ಸಂಶೋಧನಾ ಸಂಸ್ಥೆಗಳ ಜಾತಿ ಸಂಯೋಜನೆಯ ಅಂಕಿಅಂಶಗಳನ್ನು ಪ್ರಸ್ತುತಪಡಿಸುತ್ತದೆ. ಇದನ್ನು ಭಾರತದ ವಿರುದ್ಧ ಪಾಶ್ಚಾತ್ಯರ ಪಿತೂರಿ ಎಂದು ಭಾವಿಸಬೇಡಿ. ಎಲ್ಲಾ ಅಂಕಿಅಂಶಗಳನ್ನು ಭಾರತ ಸರ್ಕಾರದ ಅಧಿಕೃತ ಮೂಲದಿಂದ ತೆಗೆದುಕೊಳ್ಳಲಾಗಿದೆ. ’ನೇಚರ್’ ನಿಯತಕಾಲಿಕವು ಪ್ರಪಂಚದಾದ್ಯಂತ ಪ್ರಮುಖ ದೇಶಗಳ ವಿಜ್ಞಾನಿಗಳ ಸಾಮಾಜಿಕ ಹಿನ್ನೆಲೆಯನ್ನು ಪರಿಶೋಧಿಸುವ ಸರಣಿಯ ಭಾಗವಾಗಿದೆ ಈ ಲೇಖನ. ಈ ಸರಣಿಯ ಅಡಿಯಲ್ಲಿ, ಅಮೆರಿಕ, ಯುರೋಪ್ ಮತ್ತು ಇತರ ದೇಶಗಳಲ್ಲಿ ವಿಜ್ಞಾನದಲ್ಲಿ ಕಪ್ಪು ವರ್ಣದವರು ಮತ್ತು ಅಲ್ಪಸಂಖ್ಯಾತರ ಕೊರತೆ ಇರುವುದೂ ಎದ್ದು ಕಾಣುತ್ತಿದೆ.

ನಮ್ಮ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ದಲಿತ, ಬುಡಕಟ್ಟು ಮತ್ತು ಇತರ ಹಿಂದುಳಿದ ಜಾತಿಗಳ ವಿಜ್ಞಾನಿಗಳು ಎಷ್ಟು ಕಡಿಮೆ ಸಂಖ್ಯೆಯಲ್ಲಿದ್ದಾರೆ ಎಂಬುದನ್ನು ಈ ಲೇಖನ ತೋರಿಸುತ್ತದೆ. ಭಾರತದ ಜನಸಂಖ್ಯೆಯಲ್ಲಿ ದಲಿತ ಸಮುದಾಯದ ಪ್ರಮಾಣ 16.6% ಮತ್ತು ಬುಡಕಟ್ಟು ಸಮುದಾಯದ ಪ್ರಮಾಣ 8.6%ರಷ್ಟಿದೆ. ಹಿಂದುಳಿದ ವರ್ಗಗಳು ಅಥವಾ ಒಬಿಸಿಗಳನ್ನು ಇದಕ್ಕೆ ಸೇರಿಸಿದರೆ, ಈ ಮೂರು ವಂಚಿತ ವರ್ಗಗಳ ಒಟ್ಟು ಜನಸಂಖ್ಯೆಯು ದೇಶದ 70ರಿಂದ 75% ರಷ್ಟಿದೆ. ಅಂದರೆ ಸಾಮಾನ್ಯ ವರ್ಗದ (ಮೇಲ್ಜಾತಿ ಹಿಂದೂಗಳು, ಮುಂದುವರಿದ ಮುಸ್ಲಿಮರು, ಸಿಖ್ಖರು, ಕ್ರಿಶ್ಚಿಯನ್ನರು ಇತ್ಯಾದಿ) ಜನಸಂಖ್ಯೆಯು 25ರಿಂದ 30%ಕ್ಕಿಂತ ಹೆಚ್ಚಿಲ್ಲ.

ಈಗ ಇದಕ್ಕೆ ಹೋಲಿಸಿ, ದೇಶದ ಪ್ರತಿಷ್ಠಿತ ವೈಜ್ಞಾನಿಕ ಸಂಸ್ಥೆಗಳ ಸ್ಥಿತಿಯನ್ನು ನೋಡಿ. ’ನೇಚರ್’ ನಿಯತಕಾಲಿಕದ ಈ ಲೇಖನವು ನಾವು ಉನ್ನತ ಶಿಕ್ಷಣದ ಮೆಟ್ಟಿಲುಗಳನ್ನು ಏರುತ್ತಿದ್ದಂತೆ ದಲಿತ, ಬುಡಕಟ್ಟು ಮತ್ತು ಹಿಂದುಳಿದ ಸಮುದಾಯಗಳ ಉಪಸ್ಥಿತಿಯು ಕುಗ್ಗುತ್ತಿದೆ ಎಂದು ತೋರಿಸುತ್ತದೆ. ಕಾಲೇಜುಗಳಲ್ಲಿನ ಎಲ್ಲಾ ವಿಜ್ಞಾನ ಮತ್ತು ತಂತ್ರಜ್ಞಾನ ಸಂಬಂಧಿತ ಕೋರ್ಸ್‌ಗಳಲ್ಲಿ (ಬಿಎಸ್‌ಸಿ, ಎಂಜಿನಿಯರಿಂಗ್ ಅಥವಾ ಡಾಕ್ಟರೇಟ್ ಇತ್ಯಾದಿ) ಒಬಿಸಿ ವಿದ್ಯಾರ್ಥಿಗಳ ಸಂಖ್ಯೆ ಅವರ ಜನಸಂಖ್ಯೆಗಿಂತ ಸ್ವಲ್ಪ ಕಡಿಮೆಯಿದ್ದರೆ, ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳ ಸಂಖ್ಯೆ ಅವರ ಜನಸಂಖ್ಯೆಯ ಅರ್ಧದಷ್ಟಿದೆ. ಸ್ನಾತಕೋತ್ತರ ಪದವಿಯಲ್ಲಿ (ಎಂಎಸ್‌ಸಿ ಮತ್ತು ಎಂಟೆಕ್ ಇತ್ಯಾದಿ) ಈ ಅನುಪಾತ ಇನ್ನಷ್ಟು ಕಡಿಮೆಯಾಗುತ್ತದೆ. ಆದರೆ ಈ ಡಿಗ್ರಿಗಳಿಂದ ಆಗುವುದು ಏನೂ ಇಲ್ಲವಾದರೂ, ವಿಜ್ಞಾನದಲ್ಲಿ ಸಂಶೋಧನೆ ಅಥವಾ ಬೋಧನೆಗೆ ಪಿಎಚ್‌ಡಿ ಅಗತ್ಯವಾಗಿದೆ. ದೇಶದ ಅತ್ಯಂತ ಹೆಸರಾಂತ ವಿಜ್ಞಾನ ಸಂಸ್ಥೆಗಳಲ್ಲಿ (ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಹಾಗೂ ಉನ್ನತ ರ್‍ಯಾಂಕಿಂಗ್ ಹೊಂದಿರುವ ಐಐಟಿ) ಇರುವ ಪಿಎಚ್‌ಡಿ ವಿದ್ಯಾರ್ಥಿಗಳ ಹಿನ್ನೆಲೆಯನ್ನು ನಾವು ನೋಡಿದರೆ, ದಲಿತರು, ಆದಿವಾಸಿಗಳು ಮತ್ತು ಹಿಂದುಳಿದ ಜಾತಿಗಳ ಅನುಪಾತವು ಅವರ ಜನಸಂಖ್ಯೆಗೆ ಇರಬೇಕಾದ ಪಾಲಿಗಿಂತ ಅರ್ಧ ಅಥವಾ ಅದಕ್ಕಿಂತ ಕಡಿಮೆಯಾಗುತ್ತದೆ. ಸಾಮಾನ್ಯ ಅಥವಾ ಮೇಲ್ವರ್ಗದ ಜಾತಿಗಳ ಅನುಪಾತವು ಅವರ ಜನಸಂಖ್ಯೆಗೆ ಇರಬೇಕಾದ ಪಾಲಿಗಿಂತ ಡಬಲ್ ಅಥವಾ 60 ಪ್ರತಿಶತಕ್ಕಿಂತ ಹೆಚ್ಚಿದೆ.

ಇಂತಹ ವೈಜ್ಞಾನಿಕ ಸಂಸ್ಥೆಗಳ ಪ್ರೊಫೆಸರ್ ಅಥವಾ ವಿಜ್ಞಾನಿಗಳ ಸ್ಥಾನಕ್ಕೆ ತಲುಪುತ್ತ ಈ ಅಸಮಾನತೆಯ ವಿಷಮತೆಯು ಇನ್ನಷ್ಟು ತೀವ್ರತೆಯನ್ನು ಮುಟ್ಟುತ್ತದೆ.

ಈ ಸಂಶೋಧನೆಯು ಆರ್‌ಟಿಐ ಮೂಲಕ ಎಲ್ಲಾ ಸಂಸ್ಥೆಗಳಿಂದ ಮಾಹಿತಿಯನ್ನು ಪಡೆದುಕೊಂಡು, ಉನ್ನತ ವೈಜ್ಞಾನಿಕ ಸಂಸ್ಥೆಗಳ ಬೋಧಕರ ಹುದ್ದೆಗಳಲ್ಲಿ ಶೇ.50ರಷ್ಟು ಮೀಸಲಾತಿ ಇದ್ದರೂ, ದಲಿತ, ಬುಡಕಟ್ಟು ಮತ್ತು ಹಿಂದುಳಿದ ವರ್ಗಗಳ ಪ್ರಮಾಣವು ಶೇ.10ಕ್ಕಿಂತ ಕಡಿಮೆ ಇದೆ ಎಂದು ಗುರುತಿಸಿದೆ. ಕೆಲವೆಡೆ ಉಪನ್ಯಾಸಕರ ಸಂಖ್ಯೆಗಳಲ್ಲಿ ಶೇ.10ಕ್ಕಿಂತ ಹೆಚ್ಚಿದ್ದರೂ ಪ್ರೊಫೆಸರ್‌ನಂತಹ ಉನ್ನತ ಹುದ್ದೆಗೆ ಏರುತ್ತಲೇ ದಲಿತರು, ಆದಿವಾಸಿಗಳು, ಹಿಂದುಳಿದವರ ಸಂಖ್ಯೆ ನಗಣ್ಯವಾಗುತ್ತದೆ. ಅಷ್ಟೇ ಅಲ್ಲ, ವಿಜ್ಞಾನದ ಫಂಡಿಂಗ್‌ನ ಪ್ರಮುಖ ಯೋಜನೆಗಳಲ್ಲಿಯೂ ಮೇಲ್ಜಾತಿ ಅಭ್ಯರ್ಥಿಗಳು 80% ಸೀಟುಗಳನ್ನು ಪಡೆಯುತ್ತಾರೆ. ಇದರರ್ಥ ವಿಜ್ಞಾನ ಕ್ಷೇತ್ರದಲ್ಲಿ, ದೇಶದ ಜನಸಂಖ್ಯೆಯ 80% ಜನರಿಗೆ 20% ಅಥವಾ ಅದಕ್ಕಿಂತ ಕಡಿಮೆ ಸ್ಥಾನ ಸಿಗುತ್ತದೆ ಹಾಗೂ 20% ಜನಸಂಖ್ಯೆಯು 80% ಸ್ಥಾನಗಳನ್ನು ಆಕ್ರಮಿಸಿಕೊಂಡಿದೆ. ದೇಶದ ವಂಚಿತ ಸಮಾಜಗಳ ಮೇಲೆ ಈ ಅಸಮಾನತೆಯ ಪರಿಣಾಮವು ಸ್ಪಷ್ಟವಾಗಿದೆ.

ಇದನ್ನೂ ಓದಿ: ಭಾರತದ ವಿಜ್ಞಾನ ಕ್ಷೇತ್ರದಲ್ಲಿ ದಲಿತರಿಗಿಲ್ಲ ಹೆಚ್ಚಿನ ಪ್ರಾತಿನಿಧ್ಯ: ‘ನೇಚರ್‌’ ವರದಿ

ಆದರೆ ಇದು ಭಾರತದ ವೈಜ್ಞಾನಿಕ ಸಂಶೋಧನೆಯ ಗುಣಮಟ್ಟದ ಮೇಲೂ ಪರಿಣಾಮ ಬೀರುತ್ತದೆಯೇ ಎಂಬುದು ನಿಜವಾದ ಪ್ರಶ್ನೆ. ಸಮಾಜದ ಅತ್ಯಂತ ಪ್ರತಿಭಾವಂತ ವಿದ್ಯಾರ್ಥಿಗಳ ಶೋಧವು ಸಮಾಜದ ಮೂರನೇ ಒಂದು ಭಾಗಕ್ಕೆ ಮಾತ್ರ ಸೀಮಿತವಾದಲ್ಲಿ, ನಿಸ್ಸಂಶಯವಾಗಿ ದೇಶವು ಶ್ರೇಷ್ಠ ಪ್ರತಿಭೆಗಳಿಂದ ವಂಚಿತವಾಗುತ್ತದೆ. ಅಷ್ಟೇ ಅಲ್ಲ, ಇಂದು ನಾವು ಯಾರನ್ನು ವಂಚಿತ ಸಮಾಜ ಎಂದು ಕರೆಯುತ್ತಿದ್ದೇವೆಯೋ, ಅವರು ನಮ್ಮ ಸಮಾಜದ ಎಲ್ಲಾ ರೀತಿಯ ಜ್ಞಾನದ ಮೂಲವಾಗಿದ್ದಾರೆ: ಕೃಷಿ ಜ್ಞಾನ, ಬಟ್ಟೆ ನೇಯ್ಗೆಯ ಜ್ಞಾನ, ಚರ್ಮದ ವಸ್ತುಗಳ ರಚನೆಯ ಜ್ಞಾನ, ಕರಕುಶಲ ಕೌಶಲ್ಯ, ಉಪಕರಣಗಳನ್ನು ತಯಾರಿಸುವ ಜ್ಞಾನ, ಔಷಧ ತಯಾರಿಕೆಯ ಜ್ಞಾನ, ಔಷಧೀಯ ಸಸ್ಯಗಳ ಜ್ಞಾನ ಇತ್ಯಾದಿ. ನಮ್ಮ ದೇಶದ ಇಂತಹ ಜ್ಞಾನವುಳ್ಳ ವರ್ಗವನ್ನು ವಿಜ್ಞಾನ ಶಿಕ್ಷಣ ಮತ್ತು ಸಂಶೋಧನೆಯಿಂದ ವಂಚಿತರನ್ನಾಗಿಸುವ ಮೂಲಕ ನಾವು ಅವರಿಗೆ ಮಾತ್ರವಲ್ಲದೆ ನಮ್ಮ ದೇಶ ಮತ್ತು ವಿಜ್ಞಾನಕ್ಕೂ ಹಾನಿ ಮಾಡಿದ್ದೇವೆ.

ಕನ್ನಡಕ್ಕೆ: ರಾಜಶೇಖರ್ ಅಕ್ಕಿ

ಯೋಗೇಂದ್ರ ಯಾದವ್

ಯೋಗೇಂದ್ರ ಯಾದವ್
ರಾಜಕೀಯ ಚಿಂತಕರು. ಪ್ರಸ್ತುತ ರಾಜಕೀಯ ಸಂತಿಗಳ ಬಗ್ಗೆ, ಪ್ರಜಾಪ್ರಭುತ್ವವನ್ನು ಉಳಿಸುವ ತಮ್ಮ ಚಿಂತನೆಗಳನ್ನು ಹಲವು ಪತ್ರಿಕೆಗಳಲ್ಲಿ ಸಕ್ರಿಯವಾಗಿ ಮಂಡಿಸುತ್ತಾರೆ. ‘ಮೇಕಿಂಗ್ ಸೆನ್ಸ್ ಆಫ್ ಇಂಡಿಯನ್ ಡೆಮಾಕ್ರಸಿ’ ಪುಸ್ತಕ ರಚಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...