Homeಕರ್ನಾಟಕಟಿಕೆಟ್ ಹಂಚಿಕೆ: ಒಬಿಸಿಗೆ ದಕ್ಕಿದ್ದೆಷ್ಟು? ಮೈತ್ರಿ ಪಕ್ಷಗಳು – 8, ಬಿಜೆಪಿ - 1

ಟಿಕೆಟ್ ಹಂಚಿಕೆ: ಒಬಿಸಿಗೆ ದಕ್ಕಿದ್ದೆಷ್ಟು? ಮೈತ್ರಿ ಪಕ್ಷಗಳು – 8, ಬಿಜೆಪಿ – 1

- Advertisement -
- Advertisement -

ಮೀಸಲೇತರ ಕ್ಷೇತ್ರಗಳಲ್ಲಿ ಬಿಜೆಪಿ 95% ಕ್ಷೇತ್ರಗಳಲ್ಲಿ ಮೇಲ್ಜಾತಿಯವರಿಗೆ ಟಿಕೆಟ್. ಸಮತೋಲನ ಕಾಯ್ದುಕೊಂಡ ಮೈತ್ರಿ ಪಕ್ಷಗಳು. ಮಹಿಳೆಯರಿಗೆ 33% ಬಲುದೂರ.

ಈ ಲೋಕಸಭಾ ಚುನಾವಣೆಯಲ್ಲಿ ಯಾವ್ಯಾವ ಪಕ್ಷಗಳು ಯಾವ್ಯಾವ ಜಾತಿಗಳಿಗೆ ಟಿಕೆಟ್ ನೀಡಿವೆ ಎಂಬುದನ್ನು ಪರಿಶೀಲಿಸಿದರೆ ಆಶ್ಚರ್ಯ ಕಾದಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಎರಡು ಎಸ್.ಟಿ. ಮೀಸಲು ಮತ್ತು ಐದು ಎಸ್.ಸಿ. ಮೀಸಲು ಕ್ಷೇತ್ರಗಳಿದ್ದು, ಉಳಿದ 21 ಕ್ಷೇತ್ರಗಳ ಪೈಕಿ ಬಿಜೆಪಿ ಒಂದೇ ಒಂದು ಕ್ಷೇತ್ರದಲ್ಲಿ ಮಾತ್ರ ಓಬಿಸಿ ಅಭ್ಯರ್ಥಿಗೆ ಟಿಕೆಟ್ ನೀಡಿದೆ. ಇನ್ನೊಂದು ಕ್ಷೇತ್ರದಲ್ಲಿ ಬಿಜೆಪಿ ಸ್ಪರ್ಧಿಸಿಲ್ಲ. ಅದೇ ಸಂದರ್ಭದಲ್ಲಿ ಮೈತ್ರಿ ಪಕ್ಷಗಳ (ಕಾಂಗ್ರೆಸ್ ಮತ್ತು ಜೆಡಿಎಸ್) ಟಿಕೆಟ್ ನೀಡಿಕೆಯು ವೈವಿಧ್ಯಮಯವಾಗಿದೆ.

ಎಸ್.ಟಿ. ಎಂಬುದು ಪರಿಶಿಷ್ಟ ಪಂಗಡವಾಗಿದ್ದು, ಉಳಿದ ರಾಜ್ಯಗಳಲ್ಲಿ ಆದಿವಾಸಿ-ಗಿರಿಜನರು ಅದರ ಭಾಗವಾಗಿ ಒಂದಷ್ಟು ಪ್ರಾತಿನಿಧ್ಯ ಪಡೆದುಕೊಳ್ಳುತ್ತಾರೆ. ಆದರೆ, ಕರ್ನಾಟಕದಲ್ಲಿ ಹಿಂದೆ ರಾಜ್ಯದ ಕೆಲವು ಭಾಗಗಳನ್ನು ಆಳಿದ ಇತಿಹಾಸವಿರುವ (ಈಗಲೂ ಆ ಕುಟುಂಬಗಳ ಪ್ರತಿನಿಧಿಗಳು ವಿವಿಧ ರಾಜಕೀಯ ಪಕ್ಷಗಳಿಂದ ಟಿಕೆಟ್ ಪಡೆದುಕೊಳ್ಳುತ್ತಿದ್ದಾರೆ) ವಾಲ್ಮೀಕಿ/ನಾಯಕ ಸಮುದಾಯವು ಎಸ್.ಟಿ.ಯ ಭಾಗವಾಗಿದೆ. ಈ ಸಮುದಾಯದವರೇ ಬಳ್ಳಾರಿ ಮತ್ತು ರಾಯಚೂರು ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಮೈತ್ರಿ ಅಭ್ಯರ್ಥಿಗಳಾಗಿ (ಎರಡೂ ಕಾಂಗ್ರೆಸ್) ಕಣಕ್ಕಿಳಿದಿದ್ದಾರೆ.

ಇನ್ನು ಎಸ್.ಸಿ. ಮೀಸಲು ಕ್ಷೇತ್ರಗಳಿಗೆ ಬಂದರೆ, ಐದು ಕ್ಷೇತ್ರಗಳಲ್ಲಿ ಬಿಜೆಪಿಯು ಎರಡು ಎಡಗೈ ಸಮುದಾಯಕ್ಕೆ, ಎರಡು ಬಲಗೈ ಸಮುದಾಯಕ್ಕೆ ಟಿಕೆಟ್ ನೀಡಿದ್ದರೆ, ಕಾಂಗ್ರೆಸ್ ಸಹ ಎರಡು ಬಲಗೈ ಮತ್ತು ಎರಡು ಎಡಗೈ ಸಮುದಾಯಕ್ಕೆ ನೀಡಿದೆ.ಮತ್ತು ಮೈತ್ರಿಯಿಂದ ವಿಜಯಪುರದಲ್ಲಿ ಲಂಬಾಣಿ ಸಮುದಾಯದ ಸುನೀತಾ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಬಿಜೆಪಿಯು ಒಬ್ಬ ಸ್ಪೃಶ್ಯ (ಲಂಬಾಣಿ) ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದೆ.

ಉಳಿದ 21 ಕ್ಷೇತ್ರಗಳ ಪೈಕಿ ಬೆಂಗಳೂರು ಕೇಂದ್ರದಲ್ಲಿ ಓಬಿಸಿ ಸಮುದಾಯದ ಪಿ.ಸಿ.ಮೋಹನ್‍ರಿಗೆ ಬಿಜೆಪಿ ಟಿಕೆಟ್ ನೀಡಿರುವುದನ್ನು ಬಿಟ್ಟರೆ, ರಾಜ್ಯದ ಉಳಿದೆಲ್ಲಾ ಕ್ಷೇತ್ರಗಳಲ್ಲಿ ಮೇಲ್ಜಾತಿಗಳಿಗೇ ಮಣೆ ಹಾಕಿದೆ. ಅದರಲ್ಲಿ 7 ಲಿಂಗಾಯಿತರಿಗೆ, 6 ಒಕ್ಕಲಿಗರಿಗೆ, ಮೂರು (ಶೇ.10ಕ್ಕಿಂತ ಹೆಚ್ಚು) ಬ್ರಾಹ್ಮಣರಿಗೆ ಮತ್ತು 1 ಬಂಟ ಸಮುದಾಯಕ್ಕೆ ನೀಡಿದೆ.

ಆದರೆ, ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಯಿಂದ 5 ಒಕ್ಕಲಿಗರಿಗೆ, 5 ಲಿಂಗಾಯಿತರಿಗೆ, 1 ನಾಮಧಾರಿ ರೆಡ್ಡಿ, 1 ಬಂಟರಿಗೆ ನೀಡಿದ್ದರೆ, ಹಿಂದುಳಿದ ವರ್ಗಗಳಲ್ಲಿ 8 (3 ಕುರುಬರು, 2 ಈಡಿಗರು, 1 ಬಿಲ್ಲವ, 1 ಸವಿತಾ ಸಮಾಜ, 1 ದೇವಳಿ) ಸಮುದಾಯದವರಿಗೆ ಟಿಕೆಟ್ ನೀಡಿದೆ ಮತ್ತು ಒಬ್ಬರು ಮುಸ್ಲಿಮರಿಗೆ ಟಿಕೆಟ್ ನೀಡಿದೆ. ಬಿಜೆಪಿ ಒಬ್ಬರು ಮಹಿಳೆಗೆ ಟಿಕೆಟ್ ನೀಡಿದ್ದರೆ, ಮೈತ್ರಿ ಪಕ್ಷಗಳು ಇಬ್ಬರಿಗೆ ನೀಡಿವೆ. ಬಿಜೆಪಿ ಒಬ್ಬರೂ ಮುಸ್ಲಿಮರಿಗೆ (ಕರ್ನಾಟಕದ ಜನಸಂಖ್ಯೆಯ ಶೇ.13ರಷ್ಟಿರುವ ಸಮುದಾಯ) ಟಿಕೆಟ್ ನೀಡಿಲ್ಲ.

ಕರ್ನಾಟಕದ ಜನಸಂಖ್ಯೆಯಲ್ಲಿ ಶೇ.50ಕ್ಕಿಂತ ಹೆಚ್ಚಿರುವ ಜಾತಿ ಸಮುದಾಯಗಳಿಗೆ ಬಿಜೆಪಿ ಪಕ್ಷವು ಇಷ್ಟು ಕಡಿಮೆ ಸಂಖ್ಯೆಯಲ್ಲಿ ಪ್ರಾತಿನಿಧ್ಯ ಕೊಟ್ಟಿದೆ ಮತ್ತು ಈ ಕುರಿತು ಅವರಿಗೆ ಇದೊಂದು ಸಮಸ್ಯೆ ಎಂತಲೂ ಅನಿಸುತ್ತಿಲ್ಲ. ಚುನಾವಣಾ ರಾಜಕಾರಣದಲ್ಲಿ ಗೆಲುವು ಒಂದು ಮಾನದಂಡವಾದಾಗ ಪ್ರಾಬಲ್ಯ ಮತ್ತು ಜಾತಿ ಜನಗಳ ಸಂಖ್ಯೆಯೇ ಮುಖ್ಯವಾಗಿಬಿಡುತ್ತದೆ. ಹಾಗಾಗಿ ಸಂಖ್ಯೆಯಲ್ಲಿ ಸಣ್ಣದಾಗಿರುವ ಜಾತಿಗಳಂತೂ ಅನಾಥವಾಗಿಬಿಡುತ್ತವೆ. ಆದರೆ, ಸಂಖ್ಯೆಯಲ್ಲೂ ದೊಡ್ಡದಾಗಿರುವ ಹಿಂದುಳಿದ ಜಾತಿಗಳಿಗೆ ಬಿಜೆಪಿ ಪ್ರಾತಿನಿಧ್ಯ ಕಲ್ಪಿಸಿಲ್ಲ. ಕಾಂಗ್ರೆಸ್ ಈ ವಿಚಾರದಲ್ಲಿ ಗಣನೀಯವಾದ ಪ್ರಾತಿನಿಧ್ಯವನ್ನು ಕೊಟ್ಟಿದೆ. ಆದರೆ, ಬಹುತೇಕ ಕಾಂಗ್ರೆಸ್‍ಗೇ ಮತ ಹಾಕುವ ಮುಸ್ಲಿಮರಿಗೆ ಈ ರಾಜ್ಯದಲ್ಲಿ ಕನಿಷ್ಠ 3 ಪ್ರಾತಿನಿಧ್ಯವಾದರೂ ಇರಬೇಕಿತ್ತು. ಒಂದೇ ಕ್ಷೇತ್ರದಲ್ಲಿ ಟಿಕೆಟ್ ಕೊಟ್ಟಿದೆ. ಮುಸ್ಲಿಮರು ನಿಂತರೆ ಗೆಲ್ಲುವುದಿಲ್ಲ ಎಂಬ ದುರಂತದ ಸ್ಥಿತಿ ಇರುವುದು ವಾಸ್ತವವಾದರೂ ಅದನ್ನು ಸರಿ ಮಾಡುವ ಬಗೆಯ ಕುರಿತು ಆ ಪಕ್ಷ ಯೋಚಿಸಿದಂತೆ ಕಾಣುವುದಿಲ್ಲ.
ಮಹಿಳೆಯರ ವಿಚಾರಕ್ಕೆ ಬರುವುದಾದರೆ, ಯಾವ ಪಕ್ಷಗಳೂ ಬೆನ್ನು ತಟ್ಟಿಕೊಳ್ಳುವ ಹಾಗಿಲ್ಲ. ಈ ಬಾರಿ ತೃಣಮೂಲ ಕಾಂಗ್ರೆಸ್ ಮತ್ತು ಒರಿಸ್ಸಾದ ಬಿಜೆಡಿ ಮಾತ್ರ ಧೈರ್ಯದ ನಿರ್ಧಾರಕ್ಕೆ ಮುಂದಾಗಿವೆ.

ಹಿಂದುಳಿದ ವರ್ಗಗಳ ಪ್ರಾತಿನಿಧ್ಯದ ವಿಚಾರದಲ್ಲಿ ಅಭಿಪ್ರಾಯಗಳಿಗಾಗಿ ವಿವಿಧ ಪಕ್ಷಗಳು ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿರುವವರನ್ನು ಮಾತಾಡಿಸಿದೆವು.
ವಿ.ನಾಗರಾಜು, ದಸಂಸ (ಸಂಯೋಜಕ) ಮುಖಂಡರು
ಇದರಲ್ಲಿ ಸ್ಪಷ್ಟವಾಗುತ್ತದೆ ಇವರು ಎಷ್ಟು ಶೋಷಿತ ಸಮುದಾಯಗಳ ವಿರುದ್ಧವಿದ್ದಾರೆಂಬುದು. ಒಂದು ವೇಳೆ ಎಸ್‍ಸಿ ಮತ್ತು ಎಸ್‍ಟಿ ಮೀಸಲು ಇರದಿರುತ್ತಿದ್ದರೆ, ಅವರಿಗೂ ಟಿಕೆಟ್ ನೀಡುತ್ತಿರಲಿಲ್ಲ. ಮುಖ್ಯವಾಗಿ ಬಿಜೆಪಿಯು ಮನುವಾದಿ ಪಕ್ಷ. ಅವರ ಕಿಚನ್ ಒಳಗೆ ಯಾವ ಕಾರಣಕ್ಕೂ ಶೋಷಿತ ಸಮುದಾಯಗಳನ್ನು ಮತ್ತು ಮುಸ್ಲಿಮರನ್ನು ಬಿಟ್ಟುಕೊಳ್ಳುವುದಿಲ್ಲ. ಹಾಗಾಗಿಯೇ ಹಿಂದುಳಿದ ವರ್ಗದ ನಾಯಕರಿದ್ದರೂ ಅವರು ಮೇಲಕ್ಕೆ ಬಂದರೆ ತಮಗೆ ತೊಂದರೆ ಎಂದು ಭಾವಿಸುತ್ತಾರೆ.

ಬಿ.ಜೆ.ಪುಟ್ಟಸ್ವಾಮಿ, ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷರು
ಪಾರ್ಲಿಮೆಂಟ್‍ನಲ್ಲಿ ಗೆಲ್ಲುವ ಅವಕಾಶ ಇರಬೇಕು. ನಮ್ಮಲ್ಲಿ ಹೆಚ್ಚು ಎಸ್ಟಾಬ್ಲಿಷ್ ಆಗಿರುವ ಬ್ಯಾಕ್‍ವರ್ಡ್ ಕ್ಲಾಸ್ ಲೀಡರ್ಸ್ ಇಲ್ಲ. ಬೇರೆ ಪಕ್ಷಗಳಲ್ಲಿ ಮೊದಲಿಂದಲೂ ಎಸ್ಟಾಬ್ಲಿಷ್ ಆಗಿದ್ದಾರೆ. ನಾಲ್ಕು ಕಡೆ ಟಿಕೆಟ್ ಕೊಡಬೇಕೆಂದು ಕೇಳಿದ್ದೆವು. ಆದರೆ, ನಮಗೆ ಸೀಟು ಕೊಡಿ ಎಂದು ಕೇಳಿದವರೇ ಇಬ್ಬರು. ಹಿಂದುಳಿದ ವರ್ಗಗಳಿಗೆ ಯಡಿಯೂರಪ್ಪನವರೇ ಆದ್ಯತೆ ಕೊಟ್ಟು ಮಠಮಾನ್ಯಗಳಿಗೆ ಹಣ ಕೊಟ್ಟರು.

ಭಗವಂತ ಖೂಬಾ ಅವರನ್ನು ಹಿಂದುಳಿದ ವರ್ಗವೆಂದ ಪುಟ್ಟಸ್ವಾಮಿ
ಪತ್ರಿಕೆಯ ವತಿಯಿಂದ ಪುಟ್ಟಸ್ವಾಮಿಯವರನ್ನು ಸಂಪರ್ಕಿಸಿದಾಗ ಭಗವಂತ ಖೂಬಾ ಅವರಿಗೂ ಕೊಟ್ಟಿದೆ, ಅವರು ಹಿಂದುಳಿದ ವರ್ಗ ಎಂದರು. ವಾಸ್ತವದಲ್ಲಿ ಭಗವಂತ ಖೂಬಾ ಅವರು ದೀಕ್ಷಾ ಲಿಂಗಾಯಿತರಾಗಿದ್ದಾರೆ. ಸರ್ಕಾರದ ಹಿಂದುಳಿದ ವರ್ಗಗಳ ಪಟ್ಟಿಯನ್ನು ಆಧಾರವಾಗಿಟ್ಟುಕೊಂಡರೆ ಕರ್ನಾಟಕದಲ್ಲಿ ಒಕ್ಕಲಿಗರು, ಲಿಂಗಾಯಿತರೂ ಒಬಿಸಿ ಅಡಿಯಲ್ಲಿ ಮೀಸಲಾತಿ ಪಡೆಯುತ್ತಾರೆ. ಹಾಗಾಗಿಯೇ ಮೋದಿಯವರ ಮೇಲ್ಜಾತಿಗೆ 10% ಮೀಸಲಾತಿಯು ನಿಜವಾದ ಅರ್ಥದಲ್ಲಿ ಲಭ್ಯವಾಗುವುದು ಬ್ರಾಹ್ಮಣರಿಗೆ. ಹೀಗಿದ್ದರೂ ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷರು ಎರಡು ಸೀಟು ಕೊಟ್ಟಿದ್ದೇವೆ ಎಂದರು.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ವೇದಿಕೆಯ ಶಿವರಾಂ
ಬಿಜೆಪಿ ಪಕ್ಷವು ಸಮಾನತೆಯ ವಿರೋಧಿ, ಹಿಂದುಳಿದ ವರ್ಗಗಳ ವಿರೋಧಿಯಾಗಿದ್ದು, ಅವರು ಮನುಸಂಸ್ಕøತಿಯನ್ನು ಮರುಸ್ಥಾಪಿಸಲು ಯೋಚಿಸುವವರು. 3% ಇರುವ ಬ್ರಾಹ್ಮಣರಿಗೆ ಮೇಲ್ಜಾತಿಗಳ ಬಡವರಿಗೆ ಮೀಸಲಾತಿ ಕಲ್ಪಿಸುವ ಹೆಸರಿನಲ್ಲಿ ಶೇ.10ರಷ್ಟು ಮೀಸಲಾತಿ ಕಲ್ಪಿಸಿದವರು. ಹಾಗಾಗಿ ಅವರು ಈ ರೀತಿ ಮಾಡಿದ್ದಾರೆ.

ಕೆ.ಆರ್.ಗೋಪಾಲಕೃಷ್ಣ, ಸಾಮಾಜಿಕ ಕಾರ್ಯಕರ್ತರು, ಮೈಸೂರು
ಬಿಜೆಪಿಗೂ ಸಾಮಾಜಿಕ ನ್ಯಾಯಕ್ಕೂ ಸಂಬಂಧವಿಲ್ಲ. ಏಕಮುಖಿ ಸಂಸ್ಕೃತಿಯ ಪ್ರತಿಪಾದಕರಿಗೆ ಬಹುಮುಖಿ ಸಂಸ್ಕೃತಿಯ ವೈವಿಧ್ಯದ ಮಹತ್ವದ ಅರಿವು ಅರ್ಥವಾಗುವುದು ಹೇಗೆ? ಜಾತಿ ಆಧಾರದಲ್ಲಿ ಶೋಷಣೆ, ತಾರತಮ್ಯ, ಆಸ್ತಿಯ ಮೇಲಿನ ಅಧಿಕಾರ ಇರುವ ಈ ದೇಶದಲ್ಲಿ ರಾಜಕೀಯ ಪ್ರಾತಿನಿಧ್ಯವನ್ನಾದರೂ ಕಲ್ಪಿಸುವುದಕ್ಕೆ ಪಕ್ಷಗಳು ಯೋಚಿಸಬೇಕು. ಮೀಸಲಾತಿ ಇರದಿದ್ದರೆ ಒಬ್ಬ ದಲಿತರಿಗೂ ಅವರು ಟಿಕೆಟ್ ನೀಡುತ್ತಿರಲಿಲ್ಲ ಎಂಬ ಅನಿಸಿಕೆ ಮುಂದಿಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...