Homeದಲಿತ್ ಫೈಲ್ಸ್ರಾಜಸ್ಥಾನ: ದಲಿತ ಯುವಕನಿಗೆ ಥಳಿಸಿ ಮೂತ್ರ ಕುಡಿಸಿದ ಜಾತಿವಾದಿ ದುಷ್ಕರ್ಮಿಗಳು; ಪ್ರಕರಣ ದಾಖಲು

ರಾಜಸ್ಥಾನ: ದಲಿತ ಯುವಕನಿಗೆ ಥಳಿಸಿ ಮೂತ್ರ ಕುಡಿಸಿದ ಜಾತಿವಾದಿ ದುಷ್ಕರ್ಮಿಗಳು; ಪ್ರಕರಣ ದಾಖಲು

8 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಯಾರನ್ನೂ ಇನ್ನು ಬಂಧಿಸಿಲ್ಲ. ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

- Advertisement -
- Advertisement -

ರಾಜಸ್ಥಾನದ ಚುರು ಜಿಲ್ಲೆಯಲ್ಲಿ ಜಾಟ್ ಸಮುದಾಯದ ಎಂಟು ಜನರು 25 ವರ್ಷದ ದಲಿತ ಯುವಕನನ್ನು ಅಪಹರಿಸಿ, ಆತನ ಮೇಲೆ ಹಲ್ಲೆ ನಡೆಸಿ ತಮ್ಮ ಮೂತ್ರವನ್ನು ಕುಡಿಸಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ದಾಳಿಕೋರರ ವಿರುದ್ಧ ಐಪಿಸಿ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆದರೆ ಆರೋಪಿಗಳ ಬಂಧನವಾಗಿಲ್ಲ. ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

“ಜನವರಿ 26ರ ರಾತ್ರಿ ಚುರು ಜಿಲ್ಲೆಯ ರುಖಾಸರ್ ಗ್ರಾಮದ ನಿವಾಸಿ ರಾಕೇಶ್ ಮೇಘವಾಲ್ ಮೇಲೆ ದಾಳಿ ನಡೆಸಲಾಯಿತು. ಮರುದಿನ ದಾಖಲಾದ ಎಫ್‌ಐಆರ್‌ನಲ್ಲಿ, ಕಳೆದ ವರ್ಷ ಹೋಳಿಯಲ್ಲಿ ನಡೆದ ವಿವಾದದಿಂದಾಗಿ ಹಲ್ಲೆ ನಡೆದಿದೆ. ಆರೋಪಿಗಳು ಜಾತಿ ನಿಂದನೆ ಮಾಡಿದ್ದಾರೆ ಎಂದು ಸಂತ್ರಸ್ತ ಯುವಕ ಮೇಘವಾಲ್ ತಿಳಿಸಿದ್ದಾರೆ” ಎಂದು ಅಧಿಕಾರಿಗಳು ಮಾಹಿತಿ ನೀಡಿರುವುದಾಗಿ ದಿ ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

“ಅದೇ ಗ್ರಾಮದ ನಿವಾಸಿ ಉಮೇಶ್ ಜಾಟ್ ಮತ್ತು ಇತರ ಏಳು ಮಂದಿ ಸೇರಿ ಮೇಘವಾಲ್‌ ಅವರನ್ನು ಅಪಹರಿಸಿದ್ದರು. ಅವರನ್ನು ಬಲವಂತವಾಗಿ ಕಾರಿಗೆ ಹತ್ತಿಸಿಕೊಂಡು ಸಮೀಪದ ಹೊಲಕ್ಕೆ ಕರೆದೊಯ್ದಿದ್ದರು” ಎಂದು ವರದಿಯಾಗಿದೆ.

“ಮದ್ಯದ ಬಾಟಲಿಯನ್ನು ತೆಗೆದುಕೊಂಡು ಬಲವಂತವಾಗಿ ನನಗೆ ಕುಡಿಯುವಂತೆ ಹೇಳಿದರು. ಬಾಟಲಿಯು ಖಾಲಿಯಾದ ನಂತರ ರಾಕೇಶ್, ರಾಜೇಶ್, ಉಮೇಶ್, ತಾರಾಚಂದ್, ಅಕ್ಷಯ್, ದಿನೇಶ್, ಬಿಡದಿಚಂದ್ ಮತ್ತು ಬೀರಬಲ್ ಎಂಬವರು ಆ ಬಾಟಲಿಯಲ್ಲಿ ಮೂತ್ರ ವಿಸರ್ಜನೆ ಮಾಡಿ ನನಗೆ ಕುಡಿಸಿದರು” ಎಂದು ಮೇಘವಾಲ್‌ ಹೇಳಿದ್ದಾರೆ. ಚುರುವಿನ ರತನ್‌ಗಢ ಪೊಲೀಸ್ ಠಾಣೆಯಲ್ಲಿ ಮೇಘವಾಲ್ ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

ಮೇಘವಾಲ್ ಅವರಿಗೆ ಜಾತಿ ನಿಂದನೆ ಮಾಡಲಾಗಿದೆ. ದಲಿತರಿಗೆ ಅವಹೇಳನಕಾರಿ ಪದಗಳನ್ನು ಬಳಸಿ ನಿಂದಿಸಲಾಗಿದೆ ಎಂದು ಎಫ್ಐಆರ್ ಹೇಳಿದೆ.

“ಅವರೆಲ್ಲರೂ ಸುಮಾರು ಅರ್ಧ ಗಂಟೆ ಕಾಲ ಕೋಲುಗಳು ಮತ್ತು ಹಗ್ಗಗಳಿಂದ ನನ್ನನ್ನು ಹೊಡೆದರು. ಹೀಗಾಗಿ ನನ್ನ ದೇಹದ ಮೇಲೆಲ್ಲ ಗಾಯಗಳಾಗಿವೆ” ಎಂದು ಮೇಘವಾಲ್‌ ಹೇಳಿರುವುದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಉಮೇಶ್, ರಾಜೇಶ್, ತಾರಾಚಂದ್, ರಾಕೇಶ್, ಬೀರ್ಬಲ್, ಅಕ್ಷಯ್, ದಿನೇಶ್ ಮತ್ತು ಬಿಡದಿ ಚಂದ್ ಅವರನ್ನು ಆರೋಪಿಗಳೆಂದು ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆ. ಐಪಿಸಿ ಸೆಕ್ಷನ್ 143 (ಕಾನೂನುಬಾಹಿರ ಸಭೆ), 323 (ಸ್ವಯಂಪ್ರೇರಿತವಾಗಿ ಗಾಯಗೊಳಿಸುವುದು), 365 (ಅಪಹರಣ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಜೊತೆಗೆ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯಿದೆ 1989ರ ಸಂಬಂಧಿತ ವಿಭಾಗಗಳನ್ನೂ ಪ್ರಕರಣದಲ್ಲಿ ಸೇರಿಸಲಾಗಿದೆ.

ಮೇಘವಾಲ್ ಅವರ ಹಲ್ಲೆ ಆರೋಪ ನಿಜವೆಂದು ತೋರುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. “ನಾವು ಆರೋಪಿಗಳನ್ನು ಬಂಧಿಸಲು ಪ್ರಯತ್ನಿಸುತ್ತಿದ್ದೇವೆ. ಮೇಲ್ನೋಟಕ್ಕೆ ಮೇಘವಾಲ್ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ನಿಜವೆಂದು ಕಂಡುಬಂದಿದೆ. ಎಲ್ಲಾ ಆರೋಪಿಗಳು ಮೇಘವಾಲ್‌ ರವರ ವಯಸ್ಸಿನವರಾಗಿದ್ದು, ಅವರ ನಡುವೆ ಜಗಳ ನಡೆದಿತ್ತು. ಒಂದು ವರ್ಷದ ಹಿಂದೆ ವಾದ್ಯ ನುಡಿಸುವುದನ್ನು ಮೇಘವಾಲ್‌ ಬಿಟ್ಟಿದ್ದರು. ಆರೋಪಿಗಳ ಕಡೆಯವರು ಕೆಲವು ಹೇಳಿಕೆಗಳನ್ನು ನೀಡಿದ್ದರು. ಇದು ದ್ವೇಷಕ್ಕೆ ಕಾರಣವಾಯಿತು ಎಂದು ದೂರುದಾರರು ಹೇಳಿದ್ದಾರೆ. ನಾವು ಈ ಅಂಶಗಳ ಕುರಿತು ತನಿಖೆ ಮಾಡುತ್ತಿದ್ದೇವೆ” ಎಂದು ಪೊಲೀಸರು ತಿಳಿಸಿದ್ದಾರೆ.


ಇದನ್ನೂ ಓದಿರಿ: ಬೆಂಗಳೂರು: ವಿಕಲಾಂಗ ಮಹಿಳೆಯ ಮೇಲೆ ಟ್ರಾಫಿಕ್‌ ಎಎಸ್‌ಐ ಹಲ್ಲೆ; ಮಹಿಳೆಯ ಮೇಲೆಯೇ ಪ್ರಕರಣ ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...