Homeಮುಖಪುಟದಾಳಿ ಯತ್ನದ ನಂತರ ಸಿಜೆಐ ಜಾತಿ ನಿಂದಿಸಿ ಪೋಸ್ಟ್ : 100ಕ್ಕೂ ಹೆಚ್ಚು ಸಾಮಾಜಿಕ ಮಾಧ್ಯಮ...

ದಾಳಿ ಯತ್ನದ ನಂತರ ಸಿಜೆಐ ಜಾತಿ ನಿಂದಿಸಿ ಪೋಸ್ಟ್ : 100ಕ್ಕೂ ಹೆಚ್ಚು ಸಾಮಾಜಿಕ ಮಾಧ್ಯಮ ಖಾತೆಗಳ ವಿರುದ್ಧ ಎಫ್‌ಐಆರ್

- Advertisement -
- Advertisement -

ಸುಪ್ರೀಂ ಕೋರ್ಟ್‌ನಲ್ಲಿ ವಕೀಲನಿಂದ ಶೂ ಎಸೆತ ಪ್ರಯತ್ನದ ಬಳಿಕ, ಮುಖ್ಯ ನ್ಯಾಯಮೂರ್ತಿ ಬಿ. ಆರ್ ಗವಾಯಿ ಅವರ ಜಾತಿ ಗುರಿಯಾಗಿಸಿ ನಿಂದನಾತ್ಮಕ ಪೋಸ್ಟ್‌ಗಳನ್ನು ಹಾಕಿದ 100ಕ್ಕೂ ಹೆಚ್ಚು ಸಾಮಾಜಿಕ ಮಾಧ್ಯಮ ಖಾತೆಗಳ ವಿರುದ್ದ ಪಂಜಾಬ್ ಪೊಲೀಸರು ಬುಧವಾರ (ಅ.8) ಹಲವು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ಉನ್ನತ ಸಾಂವಿಧಾನಿಕ ಹುದ್ದೆಯಲ್ಲಿರುವ ವ್ಯಕ್ತಿಯ ಜಾತಿ ನಿಂದನೆ ಮಾಡುವ ಮತ್ತು ಕೋಮು ದ್ವೇಷವನ್ನು ಪ್ರಚೋದಿಸುವ ಪೋಸ್ಟ್‌ಗಳನ್ನು ಹಾಕುವ ಮೂಲಕ ಶಾಂತಿ-ಸುವ್ಯವಸ್ಥೆಯನ್ನು ಕದಡಲು ಪ್ರಯತ್ನಿಸಿದ ಸಾಮಾಜಿಕ ಮಾಧ್ಯಮ ಖಾತೆಗಳ ವಿರುದ್ದ ಕಾನೂನಿನ ಪ್ರಕಾರ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಪಂಜಾಬ್ ಪೊಲೀಸ್ ವಕ್ತಾರರು ತಿಳಿಸಿದ್ದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಸಾಮಾಜಿಕ ಜಾಲತಾಣಗಳ ಪೋಸ್ಟ್‌ಗಳು ಮತ್ತು ವಿಡಿಯೋಗಳು ಕೋಮು ಸೌಹಾರ್ದತೆ, ಶಾಂತಿ- ಸುವ್ಯವಸ್ಥೆಯನ್ನು ಕದಡುವ ಮತ್ತು ನ್ಯಾಯಾಂಗ ಸಂಸ್ಥೆಗಳ ಮೇಲಿನ ಗೌರವವನ್ನು ಕುಗ್ಗಿಸುವ ಉದ್ದೇಶದಿಂದ ಜಾತಿವಾದ ಮತ್ತು ದ್ವೇಷ ತುಂಬಿದ ಅಭಿವ್ಯಕ್ತಿಗಳನ್ನು ಒಳಗೊಂಡಿವೆ ಎಂದು ಪೊಲೀಸ್ ವಕ್ತಾರರು ಹೇಳಿದ್ದಾರೆ.

ಹಿಂಸೆಯನ್ನು ಉತ್ತೇಜಿಸುವ, ಸಂವಿಧಾನದ ಗೌರವವನ್ನು ಕುಗ್ಗಿಸುವ, ಪರಿಶಿಷ್ಟ ಜಾತಿಗಳ ಜನರ ವಿರುದ್ಧ ದ್ವೇಷ ಹರಡುವ, ಜಾತಿಯ ಆಧಾರದ ಮೇಲೆ ಗುಂಪುಗಳ ನಡುವೆ ಘರ್ಷಣೆಯನ್ನು ಉಂಟುಮಾಡುವ, ಶಾಂತಿಭಂಗಕ್ಕೆ ಕಾರಣವಾಗುವಂತೆ ಅವಮಾನಿಸುವ ಮತ್ತು ಸಾರ್ವಜನಿಕ ಗೊಂದಲಕ್ಕೆ ಕಾರಣವಾಗುವ ಉದ್ದೇಶವನ್ನು ಈ ಪೋಸ್ಟ್‌ಗಳು ಹೊಂದಿವೆ ಎಂದಿದ್ದಾರೆ.

ಸಿಜೆಐ ಮೇಲೆ ಶೂ ಎಸೆಯುವ ಪ್ರಯತ್ನ ನಡೆಯುವ ಮುನ್ನವೇ ಯೂಟ್ಯೂಬ್ ವಿಡಿಯೋಗಳು, ಸಾಮಾಜಿಕ ಮಾಧ್ಯಮಗಳ ಪೋಸ್ಟ್‌ಗಳ ಮೂಲಕ, ಹಲವರು ಸಿಜೆಐ ಮೇಲೆ ದಾಳಿಗೆ ಪ್ರಚೋದಿಸಿದ್ದರು. ವಿಶೇಷವಾಗಿ ದಲಿತ ಸಮುದಾಯದವರಾದ ಸಿಜೆಐ ಅವರ ಜಾತಿ ಮುಂದಿಟ್ಟು ನಿಂದಿಸಲಾಗಿತ್ತು. ಶೂ ಎಸೆತ ಪ್ರಯತ್ನದ ಬಳಿಕ ಹಲವರು ಸಿಜೆಐ ಹತ್ಯೆಯನ್ನು ಬಯಸಿ ಪೋಸ್ಟ್ ಹಾಕಿದ್ದರು.

ಈ ಎಲ್ಲಾ ಪೋಸ್ಟ್‌ಗಳು ಮತ್ತು ವಿಡಿಯೋಗಳ ವಿರುದ್ದ ಪಂಜಾಬ್ ಹೊರತುಪಡಿಸಿ ಪೊಲೀಸರು ಕ್ರಮ ಕೈಗೊಂಡಿರುವ ಬಗ್ಗೆ ಎಲ್ಲೂ ವರದಿಯಾಗಿಲ್ಲ. ಕನಿಷ್ಠ ಪಕ್ಷ ಫೇಸ್‌ಬುಕ್‌, ಎಕ್ಸ್‌ನಂತಹ ಸಾಮಾಜಿಕ ಮಾಧ್ಯಮ ಸಂಸ್ಥೆಗಳು ಇಂತಹ ಬೆದರಿಕೆ, ಜಾತಿ ನಿಂದನೆಯ ಪೋಸ್ಟ್‌ಗಳನ್ನು ತೆಗೆದು ಹಾಕುವ ಪ್ರಯತ್ನವನ್ನೂ ಮಾಡಿಲ್ಲ.

ಸಿಜೆಐ ಮೇಲೆ ದಾಳಿ: ಆರೋಪಿ ವಕೀಲನ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಅನುಮತಿ ಕೋರಿ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...