Homeಕರ್ನಾಟಕಜಾತಿವಾದಿ, ಜನಾಂಗೀಯವಾದಿ ನಿಂದನೆ: ಆರಗ ಜ್ಞಾನೆಂದ್ರ ವಿರುದ್ಧ ಆಕ್ರೋಶ

ಜಾತಿವಾದಿ, ಜನಾಂಗೀಯವಾದಿ ನಿಂದನೆ: ಆರಗ ಜ್ಞಾನೆಂದ್ರ ವಿರುದ್ಧ ಆಕ್ರೋಶ

- Advertisement -
- Advertisement -

ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮೈಬಣ್ಣದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಆರಗ ಜ್ಞಾನೇಂದ್ರ ಅವರ ಜಾತಿವಾದಿ, ಜನಾಂಗೀಯವಾದಿ ನಿಂದನೆ ಹೇಳಿಕೆಗೆ ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.

ಆರಗ ಜ್ಞಾನೇಂದ್ರ ಹೇಳಿಕೆ

ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಅರಣ್ಯ ಸಚಿವ ಈಶ್ವರ್ ಖಂಡ್ರೆ ನೀಡಿದ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿ, ಮಂಗಳವಾರ ತೀರ್ಥಹಳ್ಳಿಯಲ್ಲಿ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿತ್ತು. ಸರ್ಕಾರದ ನೀತಿ ವಿರೋಧಿಸಿ ಘೋಷಣೆ, ಧಿಕ್ಕಾರ ಕೂಗಲಾಗುತ್ತಿತ್ತು. ಈ ವೇಳೆ ಆರಗ ಜ್ಞಾನೇಂದ್ರ ಅವರ ಮಾತಿನ ಸರದಿ ಬಂದಾಗ ಈಶ್ವರ್ ಖಂಡ್ರೆ ಹಾಗೂ ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ಮಾಡಿದರು.

”ಅರಣ್ಯ ಸಚಿವರಿಗೆ ಪಶ್ಚಿಮಘಟ್ಟದ ಜನರ ಜೀವನಕ್ರಮ, ಗಿಡ- ಮರಗಳ ಕುರಿತು ತಿಳಿವಳಿಕೆ ಇಲ್ಲ. ಪಶ್ಚಿಮ ಘಟ್ಟಗಳ ಬಗ್ಗೆ ವರದಿ ನೀಡಿರುವ, ವಿಜ್ಞಾನಿ ಕಸ್ತೂರಿರಂಗನ್ ಪರಿಸರ ತಜ್ಞ ಅಲ್ಲ” ಎಂದು ಖಂಡ್ರೆ ವಿರುದ್ಧ ಶಾಸಕ ಆರಗ ಜ್ಞಾನೇಂದ್ರ ಹರಿಹಾಯ್ದರು.

”ಅವರಿಗೆ ಮರ-ಗಿಡ ಎನ್ನುವುದರ ಬಗ್ಗೆ ಗೊತ್ತಿಲ್ಲ. ಮರದ ನೆರಳಿನ ಮಹತ್ವ ಗೊತ್ತಿಲ್ಲ. ಸುಟ್ಟು ಕರಕಲಾದಂತೆ ಇರ್ತಾರೆ…, ನಮ್ಮ ಖರ್ಗೆಯವರನ್ನ ನೋಡಿದ್ರೇ ಗೊತ್ತಾಗುತ್ತೆ. ಪಾಪ.., ತಲೆ ಕೂದಲು ಮುಚ್ಚಿಕೊಂಡಿದ್ದಕ್ಕೆ ಸ್ವಲ್ಪ ಉಳಿದುಕೊಂಡಿದ್ದಾರೆ. ಅದೇ ನೆರಳು ಅವರಿಗೆ.  ಮಲೆನಾಡು ಮತ್ತು ಪಶ್ಚಿಮಘಟ್ಟದ ಬದುಕು ಅವರಿಗೆ ಗೊತ್ತಿಲ್ಲ..” ಎನ್ನುವ ಮೂಲಕ ಮಲ್ಲಿಕಾರ್ಜುನ ಖರ್ಗೆ ಹೆಸರನ್ನು ಪ್ರಸ್ತಾಪಿಸಿಯೇ ಅವರ ಬಣ್ಣದ ಬಗ್ಗೆ ವ್ಯಂಗ್ಯ ಮಾಡುವಂತೆ ಮಾತನ್ನಾಡಿದ್ದಾರೆ.

ಆರಗ ಹೇಳಿಕೆಗೆ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ಖಂಡನೆ

ಆರಗ ಜ್ಞಾನೇಂದ್ರ ಅವರ ಈ ಅವಹೇಳನಕಾರಿ ಹೇಳಿಕೆಗೆ ಕಾಂಗ್ರೆಸ್ ಪ್ರತಿಕ್ರಿಯಿಸಿ ಟ್ವೀಟ್ ಮಾಡಿದ್ದು, ”ಮಲ್ಲಿಕಾರ್ಜುನ್ ಖರ್ಗೆಯವರ ಮೈಬಣ್ಣದ ಬಗ್ಗೆ ಅವಹೇಳನ ಮಾಡಿದ ಆರಗ ಜ್ಞಾನೇಂದ್ರ ಅವರು ಬಿಜೆಪಿಯ ಕೀಳು ಮಟ್ಟದ ಮನಸ್ಥಿತಿಯನ್ನು ಪ್ರತಿನಿಧಿಸಿದ್ದಾರೆ” ಎಂದಿದೆ.

”ಬಿಜೆಪಿಯವರಲ್ಲಿ ದಲಿತರ ಬಗ್ಗೆ ಇರುವ ಅಸಹನೆ, ಅಸಡ್ಡೆಯನ್ನು ವ್ಯಕ್ತಪಡಿಸಿದ್ದಾರೆ. ಮೈಬಣ್ಣದ ಬಗೆಗಿನ ಈ ಅವಹೇಳನ ಕೇವಲ ಖರ್ಗೆಯವರನ್ನು ಅವಮಾನಿಸಿದ್ದಲ್ಲ, ಖರ್ಗೆಯವರ ಹೆಸರಲ್ಲಿ ಇಡೀ ಮೂಲನಿವಾಸಿ ದಲಿತರಿಗೆ ಮಾಡಿದ ಅವಮಾನ” ಎಂದು ಕಿಡಿಕಾರಿದೆ.

ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆ ಮೈಬಣ್ಣದ ಕುರಿತು ನಾಲಿಗೆ ಹರಿಬಿಟ್ಟ ಆರಗ ಜ್ಞಾನೇಂದ್ರ

”ಬಣ್ಣದ ಬಗೆಗಿನ ಶೋಷಣೆ, ಅವಮಾನವನ್ನು ತೊಡೆದುಹಾಕಲು ಜಾಗತಿಕ ಮಟ್ಟದಲ್ಲಿ ಚಳವಳಿಗಳು ನಡೆದಿವೆ, ಪಾಶ್ಚಿಮತ್ಯ ದೇಶಗಳಲ್ಲಿ ಮೈಬಣ್ಣದ ಬಗ್ಗೆ, ದೈಹಿಕ ರೂಪದ ಬಗ್ಗೆ ಅವಮಾನಿಸಿದರೆ ಮಹಾ ಅಪರಾಧಿಯಂತೆ ಕಾಣಲಾಗುತ್ತದೆ, ಆದರೆ ಇಲ್ಲಿನ ಬಿಜೆಪಿಗರು ದಲಿತರನ್ನು, ದಲಿತರ ಮೈಬಣ್ಣವನ್ನು, ರೂಪವನ್ನು ಅವಮಾನಿಸುವುದು ಹೆಗ್ಗಳಿಕೆಯಾಗಿ ನೋಡುತ್ತದೆ. ಬಿಜೆಪಿಗೆ ದಲಿತರ ಬಗ್ಗೆ ಕಿಂಚಿತ್ತಾದರೂ ಗೌರವವಿದ್ದರೆ ಜ್ಞಾನೇಂದ್ರರನ್ನು ಉಚ್ಚಾಟನೆ ಮಾಡಬೇಕು, ಜ್ಞಾನೇಂದ್ರ ಅವರು ಮಲ್ಲಿಕಾರ್ಜುನ್ ಖರ್ಗೆಯವರ ಹಾಗೂ ದಲಿತರ ಕ್ಷಮೆ ಕೇಳಬೇಕು” ಎಂದು ಒತ್ತಾಯಿಸಿದೆ.

ಈ ಬಗ್ಗೆ ಪತ್ರಕರ್ತ ಹರ್ಷಕುಮಾರ ಕುಗ್ವೆ ಅವರು ಸಾಮಾಜಿಕ ಜಾಲತಾಣ ಫೇಸ್‌ಬುಕ್ ನಲ್ಲಿ ಪೋಸ್ಟ್ ಮಾಡಿದ್ದು, ”ಈ ಆರಗ ಜ್ನಾನೇಂದ್ರ ಅವರಿಗೆ ತಾನು ಏನು ಮಾತಾಡುತ್ತಿದ್ದೇನೆ ಎನ್ನುವ ಪರಿಜ್ಞಾನವೇ ಇಲ್ಲ. ಇವರು ಸ್ವಲ್ಪ ಬಿಳಿ ಇದ್ದ ಮಾತ್ರಕ್ಕೆ ಇಡೀ ಮಲೆನಾಡಿನ ಜನರೆಲ್ಲಾ ಬಿಳಿ ಬಣ್ಣದವರಾ? ಖರ್ಗೆಯವರನ್ನು ಕಪ್ಪು ಬಣ್ಣದ ಕಾರಣಕ್ಕೆ ಹೀಗಳೆವ ಆರಗ ಜ್ನಾನೇದ್ರಗೆ ತಮ್ಮ ಭಾಗದ ದಲಿತರ ಮತ್ತು ತಳ ಸಮುದಾಯದ ಜನರ ಬಗ್ಗೆ ಯಾವ ಅಭಿಪ್ರಾಯ ಇರಲು ಸಾದ್ಯ? ಮಲೆನಾಡಿನ‌ ರೈತರು ಕೂಲಿ ಕಾರ್ಮಿಕರು ಬೇಸಗೆಯಲ್ಲಿ ಬೇಯುವುದಿಲ್ಲವೆ?” ಎಂದು ಪ್ರಶ್ನೆ ಮಾಡಿದ್ದಾರೆ.

”ಒಬ್ಬ ಸಚಿವರಾಗಿ ಕೆಲಸ ಮಾಡಿ ಕನಿಷ್ಟ ವಿವೇಕ ಇಟ್ಟುಕೊಳ್ಳದ ಇಂತವರು ಅಂತಿಮವಾಗಿ ಒಂದು ರೋಗಿಷ್ಟ ಸಮಾಜವನ್ನೇ ಹುಟ್ಟಿಸುತ್ತಾರೆ. ಹಾಗೆ ವೈಯಕ್ತಿಕವಾಗಿ ಟೀಕೆ ಮಾಡುತ್ತಾ ಹೋದರೆ ಸ್ವತಃ ವೈಯಕ್ತಿಕ ಬದುಕಿನಲ್ಲಿ ನಾನಾ ಪಡಿಪಾಟಲು ಎದುರಿಸುತ್ತಿರುವ ಜ್ನಾನೇಂದ್ರ ಅವರು ತಾವು ಸಹ ಗಾಜಿನ ಮನೆಯಲ್ಲಿ ಇರುವವರು ಎಂಬ ಅರಿವು ಇಟ್ಟುಕೊಳ್ಳಲಿ” ಎಂದಿದ್ದಾರೆ.

”ಮಲೆನಾಡಿನ ಜನರ, ರೈತರ ಹಕ್ಕುಗಳ ಬಗ್ಗೆ ಧನಿ ಎತ್ತುವುದು ಸ್ವಾಗತಾರ್ಹ. ಆದರೆ ಕೆಲ ತಿಂಗಳ ಹಿಂದೆ ಬಿಜೆಪಿ ಸರ್ಕಾರದ ಅವದಿಯಲ್ಲಿ ತಮ್ಮ ವ್ಯಾಪ್ತಿಯಲ್ಲೇ ಎಷ್ಟು ರೈತರ ಹೊಟ್ಟೆ ಮೇಲೆ ಅರಣ್ಯ ಇಲಾಕೆ ಹೊಡೆದಿತ್ತು, ಎಷ್ಟು ತೋಟಗಳನ್ನು ಕಡಿದು ಹಾಕಿತ್ತು ಎಂಬುದನ್ನು ಅವರು ನೆನಪು ಮಾಡಿಕೊಳ್ಳಬೇಕು. ಇನ್ನಾದರೂ ವೈಯಕ್ತಿಕವಾಗಿ ಜಾತಿ-ವರ್ಣದ ದುರಭಿಮಾನದಿಂದ ತೇಜೋವಧೆ ಮಾಡದೇ ಮಾತಾಡುವುದನ್ನ ಆರಗ ಅವರು ಕಲಿತುಕೊಳ್ಳಲಿ. ಅಗತ್ಯ ಬಿದ್ದರೆ ಕಿಮ್ಮನೆ ರತ್ನಾಕರ ಅವರ ಬಳಿ ಸಜ್ಜನಿಕೆಯಿಂದ ಮಾತಾಡುವುದನ್ನು ತರಬೇತಿ ಪಡೆದುಕೊಳ್ಳಲಿ” ಎಂದು ಬರೆದಿದ್ದಾರೆ.

ಸಾಮಾಜಿಕ ಕಾರ್ಯಕರ್ತರಾದ ಡಾ. ವಾಸು ಅವರು ಆರಗ ಜ್ಙಾನೇಂದ್ರ ಹೇಳಿಕೆ ಖಂಡಿಸಿ ಪೋಸ್ಟ್ ಮಾಡಿದ್ದು, ”ಆ ಭಾಗದವರು ಸುಟ್ಟು ಕರಕಲಾಗಿರುತ್ತಾರೆ. ಖರ್ಗೆ ಅವರನ್ನು ನೋಡಿದರೇ ಅಲ್ಲಿನವರ ಸ್ಥಿತಿ ಗೊತ್ತಾಗುತ್ತದೆ.”
ಈ ಮಾತನ್ನು ಹೇಳಿದ್ದು ಆರಗ ಜ್ಞಾನೇಂದ್ರ. ಈ ವ್ಯಕ್ತಿ ಗೃಹ ಸಚಿವರಾಗಿದ್ದರು. 5 ಸಾರಿ ಶಾಸಕರಾಗಿದ್ದರು. ಆಶ್ಚರ್ಯ ಏನಿದೆ? ಪತ್ರಿಕೆಯ ಸಂಪಾದಕರೊಬ್ಬರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೇ ಇಂತಹ ಮಾತನ್ನು ಬರೆದಿದ್ದರು ಅದಕ್ಕೇನು ಅಂತೀರಾ? ಇದು ಅಶ್ಚರ್ಯ ಪಟ್ಟುಕೊಳ್ಳುವ ವಿಚಾರ ಅಲ್ಲ, ಇಂತಹವರ ಮನಸ್ಸಿನಲ್ಲಿರುವ ಗಟಾರದ ಕೊಳಕನ್ನು ತೊಳೆಯದೇ ಇದ್ದರೆ, ಇಂಥವು ನಾರ್ಮಲ್ ಆಗಿಬಿಡುತ್ತದೆ.
ಅಂದ ಹಾಗೆ ಯಾಕೆ ಬಿಜೆಪಿಯವರೇ ಇಂತಹ ಮಾತುಗಳನ್ನು ಹೆಚ್ಚಾಗಿ ಆಡುತ್ತಾರೆ?” ಎಂದು ಕಿಡಿಕಾರಿದ್ದಾರೆ.

ಈ ಬಗ್ಗೆ ಪತ್ರಕರ್ತ ಯತಿರಾಜ್ ಬ್ಯಾಲಹಳ್ಳಿ ಪೋಸ್ಟ್ ಮಾಡಿದ್ದು, ”ಆರಗ ಜ್ಞಾನೇಂದ್ರರನ್ನು ಅಜ್ಞಾನೇಂದ್ರ ಎಂದು ಕರೆಯುವುದಿಲ್ಲ. ಯಾಕೆಂದರೆ ʼಅಜ್ಞಾನಿʼ ಎಂಬ ಜಾತಿಯೊಂದು ಇರುವುದರಿಂದ ಒಂದು ಜಾತಿಗೆ ಅವಮಾನ ಮಾಡಿದಂತಾಗುತ್ತದೆ. ಆರಗ ಜ್ಞಾನೇಂದ್ರ ಫ್ಯಾಸಿಸ್ಟ್‌ ಮತ್ತು ವಿಕೃತ ಮನುಷ್ಯ ಎಂದಷ್ಟೇ ಹೇಳಬಹುದು. ಖರ್ಗೆಯವರ ಮೈ ಬಣ್ಣ ನೋಡಿ ಅಣಕ ಮಾಡಿರುವ ಆರಗ ಜ್ಞಾನೇಂದ್ರ, ಕೇವಲ ಖರ್ಗೆಯವರಿಗೆ ಅಗೌರವ ತೋರಿಲ್ಲ. ಸಮಸ್ತ ಕರ್ನಾಟಕದ ಜನತೆಗೆ ಅವಮಾನ ಮಾಡಿದ್ದಾರೆ” ಎಂದು ಹೇಳಿದ್ದಾರೆ.

”ಕರ್ನಾಟಕ ಎಂಬ ಹೆಸರೇ ʼಕಪ್ಪುʼ ಎಂಬ ಪದದಿಂದ ಹುಟ್ಟಿದೆ. ಪ್ರಾಚೀನ ಕಾಲದಲ್ಲಿ ಕರೆಯಲ್ಪಡುತ್ತಿದ್ದ ಕರ್ನಾಟಕದ ಹೆಸರುಗಳು- ಕರ್‌ನಾಡು, ಕಮ್ಮಿತ್ತುನಾಡು(ಕಪ್ಪು ಮಣ್ಣಿನ ನಾಡು), ಕರುನಾಡರು, ಕನ್ನಾಡು, ಕರ್ನಾಡು, ಕರುನುಡುಗರಂ, ಕರುನಾಟಕ, ಕಣ್‌ನೀರ್‌, ಕನ್ನಡ, ಕನ್ನಡನಾಡು, ಕನ್ನಾಟ, ಕುಂತಳನಾಡು, ಮಹಿಷ ಮಂಡಲ- ಹೀಗೆ… ಕಪ್ಪುಮಣ್ಣಿನ ನಾಡು ಈ ಕರುನಾಡು, ಕಪ್ಪುಜನರ ನಾಡು ಈ ಕರುನಾಡು… ನಮ್ಮ ನಾಡಿನ ಮೂಲದ ಕುರಿತು, ಇಲ್ಲಿನ ಜನರ ಮೈಬಣ್ಣದ ಕುರಿತು ಅಣಕ ಮಾಡಿರುವ ಅರಗ ಜ್ಞಾನೇಂದ್ರರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಇಲ್ಲವಾದರೆ ರಾಜ್ಯದ ಜನತೆಗೆ ಕೆಟ್ಟ ಸಂದೇಶ ನೀಡಿದಂತಾಗುತ್ತದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನೇ ಅಣಕಿಸಿದ ಸಂಘಿಗಳ ಗುಂಪಿನ ಆರಗ ಜ್ಞಾನೇಂದ್ರರಿಗೆ ಪಾಠ ಕಲಿಸುವ ಸಮಯ ಬಂದಿದೆ” ಎಂದು ಬರೆದು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...