Homeಕರ್ನಾಟಕಜಾತಿವಾದಿ, ಜನಾಂಗೀಯವಾದಿ ನಿಂದನೆ: ಆರಗ ಜ್ಞಾನೆಂದ್ರ ವಿರುದ್ಧ ಆಕ್ರೋಶ

ಜಾತಿವಾದಿ, ಜನಾಂಗೀಯವಾದಿ ನಿಂದನೆ: ಆರಗ ಜ್ಞಾನೆಂದ್ರ ವಿರುದ್ಧ ಆಕ್ರೋಶ

- Advertisement -
- Advertisement -

ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮೈಬಣ್ಣದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಆರಗ ಜ್ಞಾನೇಂದ್ರ ಅವರ ಜಾತಿವಾದಿ, ಜನಾಂಗೀಯವಾದಿ ನಿಂದನೆ ಹೇಳಿಕೆಗೆ ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.

ಆರಗ ಜ್ಞಾನೇಂದ್ರ ಹೇಳಿಕೆ

ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಅರಣ್ಯ ಸಚಿವ ಈಶ್ವರ್ ಖಂಡ್ರೆ ನೀಡಿದ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿ, ಮಂಗಳವಾರ ತೀರ್ಥಹಳ್ಳಿಯಲ್ಲಿ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿತ್ತು. ಸರ್ಕಾರದ ನೀತಿ ವಿರೋಧಿಸಿ ಘೋಷಣೆ, ಧಿಕ್ಕಾರ ಕೂಗಲಾಗುತ್ತಿತ್ತು. ಈ ವೇಳೆ ಆರಗ ಜ್ಞಾನೇಂದ್ರ ಅವರ ಮಾತಿನ ಸರದಿ ಬಂದಾಗ ಈಶ್ವರ್ ಖಂಡ್ರೆ ಹಾಗೂ ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ಮಾಡಿದರು.

”ಅರಣ್ಯ ಸಚಿವರಿಗೆ ಪಶ್ಚಿಮಘಟ್ಟದ ಜನರ ಜೀವನಕ್ರಮ, ಗಿಡ- ಮರಗಳ ಕುರಿತು ತಿಳಿವಳಿಕೆ ಇಲ್ಲ. ಪಶ್ಚಿಮ ಘಟ್ಟಗಳ ಬಗ್ಗೆ ವರದಿ ನೀಡಿರುವ, ವಿಜ್ಞಾನಿ ಕಸ್ತೂರಿರಂಗನ್ ಪರಿಸರ ತಜ್ಞ ಅಲ್ಲ” ಎಂದು ಖಂಡ್ರೆ ವಿರುದ್ಧ ಶಾಸಕ ಆರಗ ಜ್ಞಾನೇಂದ್ರ ಹರಿಹಾಯ್ದರು.

”ಅವರಿಗೆ ಮರ-ಗಿಡ ಎನ್ನುವುದರ ಬಗ್ಗೆ ಗೊತ್ತಿಲ್ಲ. ಮರದ ನೆರಳಿನ ಮಹತ್ವ ಗೊತ್ತಿಲ್ಲ. ಸುಟ್ಟು ಕರಕಲಾದಂತೆ ಇರ್ತಾರೆ…, ನಮ್ಮ ಖರ್ಗೆಯವರನ್ನ ನೋಡಿದ್ರೇ ಗೊತ್ತಾಗುತ್ತೆ. ಪಾಪ.., ತಲೆ ಕೂದಲು ಮುಚ್ಚಿಕೊಂಡಿದ್ದಕ್ಕೆ ಸ್ವಲ್ಪ ಉಳಿದುಕೊಂಡಿದ್ದಾರೆ. ಅದೇ ನೆರಳು ಅವರಿಗೆ.  ಮಲೆನಾಡು ಮತ್ತು ಪಶ್ಚಿಮಘಟ್ಟದ ಬದುಕು ಅವರಿಗೆ ಗೊತ್ತಿಲ್ಲ..” ಎನ್ನುವ ಮೂಲಕ ಮಲ್ಲಿಕಾರ್ಜುನ ಖರ್ಗೆ ಹೆಸರನ್ನು ಪ್ರಸ್ತಾಪಿಸಿಯೇ ಅವರ ಬಣ್ಣದ ಬಗ್ಗೆ ವ್ಯಂಗ್ಯ ಮಾಡುವಂತೆ ಮಾತನ್ನಾಡಿದ್ದಾರೆ.

ಆರಗ ಹೇಳಿಕೆಗೆ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ಖಂಡನೆ

ಆರಗ ಜ್ಞಾನೇಂದ್ರ ಅವರ ಈ ಅವಹೇಳನಕಾರಿ ಹೇಳಿಕೆಗೆ ಕಾಂಗ್ರೆಸ್ ಪ್ರತಿಕ್ರಿಯಿಸಿ ಟ್ವೀಟ್ ಮಾಡಿದ್ದು, ”ಮಲ್ಲಿಕಾರ್ಜುನ್ ಖರ್ಗೆಯವರ ಮೈಬಣ್ಣದ ಬಗ್ಗೆ ಅವಹೇಳನ ಮಾಡಿದ ಆರಗ ಜ್ಞಾನೇಂದ್ರ ಅವರು ಬಿಜೆಪಿಯ ಕೀಳು ಮಟ್ಟದ ಮನಸ್ಥಿತಿಯನ್ನು ಪ್ರತಿನಿಧಿಸಿದ್ದಾರೆ” ಎಂದಿದೆ.

”ಬಿಜೆಪಿಯವರಲ್ಲಿ ದಲಿತರ ಬಗ್ಗೆ ಇರುವ ಅಸಹನೆ, ಅಸಡ್ಡೆಯನ್ನು ವ್ಯಕ್ತಪಡಿಸಿದ್ದಾರೆ. ಮೈಬಣ್ಣದ ಬಗೆಗಿನ ಈ ಅವಹೇಳನ ಕೇವಲ ಖರ್ಗೆಯವರನ್ನು ಅವಮಾನಿಸಿದ್ದಲ್ಲ, ಖರ್ಗೆಯವರ ಹೆಸರಲ್ಲಿ ಇಡೀ ಮೂಲನಿವಾಸಿ ದಲಿತರಿಗೆ ಮಾಡಿದ ಅವಮಾನ” ಎಂದು ಕಿಡಿಕಾರಿದೆ.

ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆ ಮೈಬಣ್ಣದ ಕುರಿತು ನಾಲಿಗೆ ಹರಿಬಿಟ್ಟ ಆರಗ ಜ್ಞಾನೇಂದ್ರ

”ಬಣ್ಣದ ಬಗೆಗಿನ ಶೋಷಣೆ, ಅವಮಾನವನ್ನು ತೊಡೆದುಹಾಕಲು ಜಾಗತಿಕ ಮಟ್ಟದಲ್ಲಿ ಚಳವಳಿಗಳು ನಡೆದಿವೆ, ಪಾಶ್ಚಿಮತ್ಯ ದೇಶಗಳಲ್ಲಿ ಮೈಬಣ್ಣದ ಬಗ್ಗೆ, ದೈಹಿಕ ರೂಪದ ಬಗ್ಗೆ ಅವಮಾನಿಸಿದರೆ ಮಹಾ ಅಪರಾಧಿಯಂತೆ ಕಾಣಲಾಗುತ್ತದೆ, ಆದರೆ ಇಲ್ಲಿನ ಬಿಜೆಪಿಗರು ದಲಿತರನ್ನು, ದಲಿತರ ಮೈಬಣ್ಣವನ್ನು, ರೂಪವನ್ನು ಅವಮಾನಿಸುವುದು ಹೆಗ್ಗಳಿಕೆಯಾಗಿ ನೋಡುತ್ತದೆ. ಬಿಜೆಪಿಗೆ ದಲಿತರ ಬಗ್ಗೆ ಕಿಂಚಿತ್ತಾದರೂ ಗೌರವವಿದ್ದರೆ ಜ್ಞಾನೇಂದ್ರರನ್ನು ಉಚ್ಚಾಟನೆ ಮಾಡಬೇಕು, ಜ್ಞಾನೇಂದ್ರ ಅವರು ಮಲ್ಲಿಕಾರ್ಜುನ್ ಖರ್ಗೆಯವರ ಹಾಗೂ ದಲಿತರ ಕ್ಷಮೆ ಕೇಳಬೇಕು” ಎಂದು ಒತ್ತಾಯಿಸಿದೆ.

ಈ ಬಗ್ಗೆ ಪತ್ರಕರ್ತ ಹರ್ಷಕುಮಾರ ಕುಗ್ವೆ ಅವರು ಸಾಮಾಜಿಕ ಜಾಲತಾಣ ಫೇಸ್‌ಬುಕ್ ನಲ್ಲಿ ಪೋಸ್ಟ್ ಮಾಡಿದ್ದು, ”ಈ ಆರಗ ಜ್ನಾನೇಂದ್ರ ಅವರಿಗೆ ತಾನು ಏನು ಮಾತಾಡುತ್ತಿದ್ದೇನೆ ಎನ್ನುವ ಪರಿಜ್ಞಾನವೇ ಇಲ್ಲ. ಇವರು ಸ್ವಲ್ಪ ಬಿಳಿ ಇದ್ದ ಮಾತ್ರಕ್ಕೆ ಇಡೀ ಮಲೆನಾಡಿನ ಜನರೆಲ್ಲಾ ಬಿಳಿ ಬಣ್ಣದವರಾ? ಖರ್ಗೆಯವರನ್ನು ಕಪ್ಪು ಬಣ್ಣದ ಕಾರಣಕ್ಕೆ ಹೀಗಳೆವ ಆರಗ ಜ್ನಾನೇದ್ರಗೆ ತಮ್ಮ ಭಾಗದ ದಲಿತರ ಮತ್ತು ತಳ ಸಮುದಾಯದ ಜನರ ಬಗ್ಗೆ ಯಾವ ಅಭಿಪ್ರಾಯ ಇರಲು ಸಾದ್ಯ? ಮಲೆನಾಡಿನ‌ ರೈತರು ಕೂಲಿ ಕಾರ್ಮಿಕರು ಬೇಸಗೆಯಲ್ಲಿ ಬೇಯುವುದಿಲ್ಲವೆ?” ಎಂದು ಪ್ರಶ್ನೆ ಮಾಡಿದ್ದಾರೆ.

”ಒಬ್ಬ ಸಚಿವರಾಗಿ ಕೆಲಸ ಮಾಡಿ ಕನಿಷ್ಟ ವಿವೇಕ ಇಟ್ಟುಕೊಳ್ಳದ ಇಂತವರು ಅಂತಿಮವಾಗಿ ಒಂದು ರೋಗಿಷ್ಟ ಸಮಾಜವನ್ನೇ ಹುಟ್ಟಿಸುತ್ತಾರೆ. ಹಾಗೆ ವೈಯಕ್ತಿಕವಾಗಿ ಟೀಕೆ ಮಾಡುತ್ತಾ ಹೋದರೆ ಸ್ವತಃ ವೈಯಕ್ತಿಕ ಬದುಕಿನಲ್ಲಿ ನಾನಾ ಪಡಿಪಾಟಲು ಎದುರಿಸುತ್ತಿರುವ ಜ್ನಾನೇಂದ್ರ ಅವರು ತಾವು ಸಹ ಗಾಜಿನ ಮನೆಯಲ್ಲಿ ಇರುವವರು ಎಂಬ ಅರಿವು ಇಟ್ಟುಕೊಳ್ಳಲಿ” ಎಂದಿದ್ದಾರೆ.

”ಮಲೆನಾಡಿನ ಜನರ, ರೈತರ ಹಕ್ಕುಗಳ ಬಗ್ಗೆ ಧನಿ ಎತ್ತುವುದು ಸ್ವಾಗತಾರ್ಹ. ಆದರೆ ಕೆಲ ತಿಂಗಳ ಹಿಂದೆ ಬಿಜೆಪಿ ಸರ್ಕಾರದ ಅವದಿಯಲ್ಲಿ ತಮ್ಮ ವ್ಯಾಪ್ತಿಯಲ್ಲೇ ಎಷ್ಟು ರೈತರ ಹೊಟ್ಟೆ ಮೇಲೆ ಅರಣ್ಯ ಇಲಾಕೆ ಹೊಡೆದಿತ್ತು, ಎಷ್ಟು ತೋಟಗಳನ್ನು ಕಡಿದು ಹಾಕಿತ್ತು ಎಂಬುದನ್ನು ಅವರು ನೆನಪು ಮಾಡಿಕೊಳ್ಳಬೇಕು. ಇನ್ನಾದರೂ ವೈಯಕ್ತಿಕವಾಗಿ ಜಾತಿ-ವರ್ಣದ ದುರಭಿಮಾನದಿಂದ ತೇಜೋವಧೆ ಮಾಡದೇ ಮಾತಾಡುವುದನ್ನ ಆರಗ ಅವರು ಕಲಿತುಕೊಳ್ಳಲಿ. ಅಗತ್ಯ ಬಿದ್ದರೆ ಕಿಮ್ಮನೆ ರತ್ನಾಕರ ಅವರ ಬಳಿ ಸಜ್ಜನಿಕೆಯಿಂದ ಮಾತಾಡುವುದನ್ನು ತರಬೇತಿ ಪಡೆದುಕೊಳ್ಳಲಿ” ಎಂದು ಬರೆದಿದ್ದಾರೆ.

ಸಾಮಾಜಿಕ ಕಾರ್ಯಕರ್ತರಾದ ಡಾ. ವಾಸು ಅವರು ಆರಗ ಜ್ಙಾನೇಂದ್ರ ಹೇಳಿಕೆ ಖಂಡಿಸಿ ಪೋಸ್ಟ್ ಮಾಡಿದ್ದು, ”ಆ ಭಾಗದವರು ಸುಟ್ಟು ಕರಕಲಾಗಿರುತ್ತಾರೆ. ಖರ್ಗೆ ಅವರನ್ನು ನೋಡಿದರೇ ಅಲ್ಲಿನವರ ಸ್ಥಿತಿ ಗೊತ್ತಾಗುತ್ತದೆ.”
ಈ ಮಾತನ್ನು ಹೇಳಿದ್ದು ಆರಗ ಜ್ಞಾನೇಂದ್ರ. ಈ ವ್ಯಕ್ತಿ ಗೃಹ ಸಚಿವರಾಗಿದ್ದರು. 5 ಸಾರಿ ಶಾಸಕರಾಗಿದ್ದರು. ಆಶ್ಚರ್ಯ ಏನಿದೆ? ಪತ್ರಿಕೆಯ ಸಂಪಾದಕರೊಬ್ಬರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೇ ಇಂತಹ ಮಾತನ್ನು ಬರೆದಿದ್ದರು ಅದಕ್ಕೇನು ಅಂತೀರಾ? ಇದು ಅಶ್ಚರ್ಯ ಪಟ್ಟುಕೊಳ್ಳುವ ವಿಚಾರ ಅಲ್ಲ, ಇಂತಹವರ ಮನಸ್ಸಿನಲ್ಲಿರುವ ಗಟಾರದ ಕೊಳಕನ್ನು ತೊಳೆಯದೇ ಇದ್ದರೆ, ಇಂಥವು ನಾರ್ಮಲ್ ಆಗಿಬಿಡುತ್ತದೆ.
ಅಂದ ಹಾಗೆ ಯಾಕೆ ಬಿಜೆಪಿಯವರೇ ಇಂತಹ ಮಾತುಗಳನ್ನು ಹೆಚ್ಚಾಗಿ ಆಡುತ್ತಾರೆ?” ಎಂದು ಕಿಡಿಕಾರಿದ್ದಾರೆ.

ಈ ಬಗ್ಗೆ ಪತ್ರಕರ್ತ ಯತಿರಾಜ್ ಬ್ಯಾಲಹಳ್ಳಿ ಪೋಸ್ಟ್ ಮಾಡಿದ್ದು, ”ಆರಗ ಜ್ಞಾನೇಂದ್ರರನ್ನು ಅಜ್ಞಾನೇಂದ್ರ ಎಂದು ಕರೆಯುವುದಿಲ್ಲ. ಯಾಕೆಂದರೆ ʼಅಜ್ಞಾನಿʼ ಎಂಬ ಜಾತಿಯೊಂದು ಇರುವುದರಿಂದ ಒಂದು ಜಾತಿಗೆ ಅವಮಾನ ಮಾಡಿದಂತಾಗುತ್ತದೆ. ಆರಗ ಜ್ಞಾನೇಂದ್ರ ಫ್ಯಾಸಿಸ್ಟ್‌ ಮತ್ತು ವಿಕೃತ ಮನುಷ್ಯ ಎಂದಷ್ಟೇ ಹೇಳಬಹುದು. ಖರ್ಗೆಯವರ ಮೈ ಬಣ್ಣ ನೋಡಿ ಅಣಕ ಮಾಡಿರುವ ಆರಗ ಜ್ಞಾನೇಂದ್ರ, ಕೇವಲ ಖರ್ಗೆಯವರಿಗೆ ಅಗೌರವ ತೋರಿಲ್ಲ. ಸಮಸ್ತ ಕರ್ನಾಟಕದ ಜನತೆಗೆ ಅವಮಾನ ಮಾಡಿದ್ದಾರೆ” ಎಂದು ಹೇಳಿದ್ದಾರೆ.

”ಕರ್ನಾಟಕ ಎಂಬ ಹೆಸರೇ ʼಕಪ್ಪುʼ ಎಂಬ ಪದದಿಂದ ಹುಟ್ಟಿದೆ. ಪ್ರಾಚೀನ ಕಾಲದಲ್ಲಿ ಕರೆಯಲ್ಪಡುತ್ತಿದ್ದ ಕರ್ನಾಟಕದ ಹೆಸರುಗಳು- ಕರ್‌ನಾಡು, ಕಮ್ಮಿತ್ತುನಾಡು(ಕಪ್ಪು ಮಣ್ಣಿನ ನಾಡು), ಕರುನಾಡರು, ಕನ್ನಾಡು, ಕರ್ನಾಡು, ಕರುನುಡುಗರಂ, ಕರುನಾಟಕ, ಕಣ್‌ನೀರ್‌, ಕನ್ನಡ, ಕನ್ನಡನಾಡು, ಕನ್ನಾಟ, ಕುಂತಳನಾಡು, ಮಹಿಷ ಮಂಡಲ- ಹೀಗೆ… ಕಪ್ಪುಮಣ್ಣಿನ ನಾಡು ಈ ಕರುನಾಡು, ಕಪ್ಪುಜನರ ನಾಡು ಈ ಕರುನಾಡು… ನಮ್ಮ ನಾಡಿನ ಮೂಲದ ಕುರಿತು, ಇಲ್ಲಿನ ಜನರ ಮೈಬಣ್ಣದ ಕುರಿತು ಅಣಕ ಮಾಡಿರುವ ಅರಗ ಜ್ಞಾನೇಂದ್ರರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಇಲ್ಲವಾದರೆ ರಾಜ್ಯದ ಜನತೆಗೆ ಕೆಟ್ಟ ಸಂದೇಶ ನೀಡಿದಂತಾಗುತ್ತದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನೇ ಅಣಕಿಸಿದ ಸಂಘಿಗಳ ಗುಂಪಿನ ಆರಗ ಜ್ಞಾನೇಂದ್ರರಿಗೆ ಪಾಠ ಕಲಿಸುವ ಸಮಯ ಬಂದಿದೆ” ಎಂದು ಬರೆದು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...