Homeಕರ್ನಾಟಕಜಾತಿವಾದಿ, ಜನಾಂಗೀಯವಾದಿ ನಿಂದನೆ: ಆರಗ ಜ್ಞಾನೆಂದ್ರ ವಿರುದ್ಧ ಆಕ್ರೋಶ

ಜಾತಿವಾದಿ, ಜನಾಂಗೀಯವಾದಿ ನಿಂದನೆ: ಆರಗ ಜ್ಞಾನೆಂದ್ರ ವಿರುದ್ಧ ಆಕ್ರೋಶ

- Advertisement -
- Advertisement -

ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮೈಬಣ್ಣದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಆರಗ ಜ್ಞಾನೇಂದ್ರ ಅವರ ಜಾತಿವಾದಿ, ಜನಾಂಗೀಯವಾದಿ ನಿಂದನೆ ಹೇಳಿಕೆಗೆ ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.

ಆರಗ ಜ್ಞಾನೇಂದ್ರ ಹೇಳಿಕೆ

ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಅರಣ್ಯ ಸಚಿವ ಈಶ್ವರ್ ಖಂಡ್ರೆ ನೀಡಿದ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿ, ಮಂಗಳವಾರ ತೀರ್ಥಹಳ್ಳಿಯಲ್ಲಿ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿತ್ತು. ಸರ್ಕಾರದ ನೀತಿ ವಿರೋಧಿಸಿ ಘೋಷಣೆ, ಧಿಕ್ಕಾರ ಕೂಗಲಾಗುತ್ತಿತ್ತು. ಈ ವೇಳೆ ಆರಗ ಜ್ಞಾನೇಂದ್ರ ಅವರ ಮಾತಿನ ಸರದಿ ಬಂದಾಗ ಈಶ್ವರ್ ಖಂಡ್ರೆ ಹಾಗೂ ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ಮಾಡಿದರು.

”ಅರಣ್ಯ ಸಚಿವರಿಗೆ ಪಶ್ಚಿಮಘಟ್ಟದ ಜನರ ಜೀವನಕ್ರಮ, ಗಿಡ- ಮರಗಳ ಕುರಿತು ತಿಳಿವಳಿಕೆ ಇಲ್ಲ. ಪಶ್ಚಿಮ ಘಟ್ಟಗಳ ಬಗ್ಗೆ ವರದಿ ನೀಡಿರುವ, ವಿಜ್ಞಾನಿ ಕಸ್ತೂರಿರಂಗನ್ ಪರಿಸರ ತಜ್ಞ ಅಲ್ಲ” ಎಂದು ಖಂಡ್ರೆ ವಿರುದ್ಧ ಶಾಸಕ ಆರಗ ಜ್ಞಾನೇಂದ್ರ ಹರಿಹಾಯ್ದರು.

”ಅವರಿಗೆ ಮರ-ಗಿಡ ಎನ್ನುವುದರ ಬಗ್ಗೆ ಗೊತ್ತಿಲ್ಲ. ಮರದ ನೆರಳಿನ ಮಹತ್ವ ಗೊತ್ತಿಲ್ಲ. ಸುಟ್ಟು ಕರಕಲಾದಂತೆ ಇರ್ತಾರೆ…, ನಮ್ಮ ಖರ್ಗೆಯವರನ್ನ ನೋಡಿದ್ರೇ ಗೊತ್ತಾಗುತ್ತೆ. ಪಾಪ.., ತಲೆ ಕೂದಲು ಮುಚ್ಚಿಕೊಂಡಿದ್ದಕ್ಕೆ ಸ್ವಲ್ಪ ಉಳಿದುಕೊಂಡಿದ್ದಾರೆ. ಅದೇ ನೆರಳು ಅವರಿಗೆ.  ಮಲೆನಾಡು ಮತ್ತು ಪಶ್ಚಿಮಘಟ್ಟದ ಬದುಕು ಅವರಿಗೆ ಗೊತ್ತಿಲ್ಲ..” ಎನ್ನುವ ಮೂಲಕ ಮಲ್ಲಿಕಾರ್ಜುನ ಖರ್ಗೆ ಹೆಸರನ್ನು ಪ್ರಸ್ತಾಪಿಸಿಯೇ ಅವರ ಬಣ್ಣದ ಬಗ್ಗೆ ವ್ಯಂಗ್ಯ ಮಾಡುವಂತೆ ಮಾತನ್ನಾಡಿದ್ದಾರೆ.

ಆರಗ ಹೇಳಿಕೆಗೆ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ಖಂಡನೆ

ಆರಗ ಜ್ಞಾನೇಂದ್ರ ಅವರ ಈ ಅವಹೇಳನಕಾರಿ ಹೇಳಿಕೆಗೆ ಕಾಂಗ್ರೆಸ್ ಪ್ರತಿಕ್ರಿಯಿಸಿ ಟ್ವೀಟ್ ಮಾಡಿದ್ದು, ”ಮಲ್ಲಿಕಾರ್ಜುನ್ ಖರ್ಗೆಯವರ ಮೈಬಣ್ಣದ ಬಗ್ಗೆ ಅವಹೇಳನ ಮಾಡಿದ ಆರಗ ಜ್ಞಾನೇಂದ್ರ ಅವರು ಬಿಜೆಪಿಯ ಕೀಳು ಮಟ್ಟದ ಮನಸ್ಥಿತಿಯನ್ನು ಪ್ರತಿನಿಧಿಸಿದ್ದಾರೆ” ಎಂದಿದೆ.

”ಬಿಜೆಪಿಯವರಲ್ಲಿ ದಲಿತರ ಬಗ್ಗೆ ಇರುವ ಅಸಹನೆ, ಅಸಡ್ಡೆಯನ್ನು ವ್ಯಕ್ತಪಡಿಸಿದ್ದಾರೆ. ಮೈಬಣ್ಣದ ಬಗೆಗಿನ ಈ ಅವಹೇಳನ ಕೇವಲ ಖರ್ಗೆಯವರನ್ನು ಅವಮಾನಿಸಿದ್ದಲ್ಲ, ಖರ್ಗೆಯವರ ಹೆಸರಲ್ಲಿ ಇಡೀ ಮೂಲನಿವಾಸಿ ದಲಿತರಿಗೆ ಮಾಡಿದ ಅವಮಾನ” ಎಂದು ಕಿಡಿಕಾರಿದೆ.

ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆ ಮೈಬಣ್ಣದ ಕುರಿತು ನಾಲಿಗೆ ಹರಿಬಿಟ್ಟ ಆರಗ ಜ್ಞಾನೇಂದ್ರ

”ಬಣ್ಣದ ಬಗೆಗಿನ ಶೋಷಣೆ, ಅವಮಾನವನ್ನು ತೊಡೆದುಹಾಕಲು ಜಾಗತಿಕ ಮಟ್ಟದಲ್ಲಿ ಚಳವಳಿಗಳು ನಡೆದಿವೆ, ಪಾಶ್ಚಿಮತ್ಯ ದೇಶಗಳಲ್ಲಿ ಮೈಬಣ್ಣದ ಬಗ್ಗೆ, ದೈಹಿಕ ರೂಪದ ಬಗ್ಗೆ ಅವಮಾನಿಸಿದರೆ ಮಹಾ ಅಪರಾಧಿಯಂತೆ ಕಾಣಲಾಗುತ್ತದೆ, ಆದರೆ ಇಲ್ಲಿನ ಬಿಜೆಪಿಗರು ದಲಿತರನ್ನು, ದಲಿತರ ಮೈಬಣ್ಣವನ್ನು, ರೂಪವನ್ನು ಅವಮಾನಿಸುವುದು ಹೆಗ್ಗಳಿಕೆಯಾಗಿ ನೋಡುತ್ತದೆ. ಬಿಜೆಪಿಗೆ ದಲಿತರ ಬಗ್ಗೆ ಕಿಂಚಿತ್ತಾದರೂ ಗೌರವವಿದ್ದರೆ ಜ್ಞಾನೇಂದ್ರರನ್ನು ಉಚ್ಚಾಟನೆ ಮಾಡಬೇಕು, ಜ್ಞಾನೇಂದ್ರ ಅವರು ಮಲ್ಲಿಕಾರ್ಜುನ್ ಖರ್ಗೆಯವರ ಹಾಗೂ ದಲಿತರ ಕ್ಷಮೆ ಕೇಳಬೇಕು” ಎಂದು ಒತ್ತಾಯಿಸಿದೆ.

ಈ ಬಗ್ಗೆ ಪತ್ರಕರ್ತ ಹರ್ಷಕುಮಾರ ಕುಗ್ವೆ ಅವರು ಸಾಮಾಜಿಕ ಜಾಲತಾಣ ಫೇಸ್‌ಬುಕ್ ನಲ್ಲಿ ಪೋಸ್ಟ್ ಮಾಡಿದ್ದು, ”ಈ ಆರಗ ಜ್ನಾನೇಂದ್ರ ಅವರಿಗೆ ತಾನು ಏನು ಮಾತಾಡುತ್ತಿದ್ದೇನೆ ಎನ್ನುವ ಪರಿಜ್ಞಾನವೇ ಇಲ್ಲ. ಇವರು ಸ್ವಲ್ಪ ಬಿಳಿ ಇದ್ದ ಮಾತ್ರಕ್ಕೆ ಇಡೀ ಮಲೆನಾಡಿನ ಜನರೆಲ್ಲಾ ಬಿಳಿ ಬಣ್ಣದವರಾ? ಖರ್ಗೆಯವರನ್ನು ಕಪ್ಪು ಬಣ್ಣದ ಕಾರಣಕ್ಕೆ ಹೀಗಳೆವ ಆರಗ ಜ್ನಾನೇದ್ರಗೆ ತಮ್ಮ ಭಾಗದ ದಲಿತರ ಮತ್ತು ತಳ ಸಮುದಾಯದ ಜನರ ಬಗ್ಗೆ ಯಾವ ಅಭಿಪ್ರಾಯ ಇರಲು ಸಾದ್ಯ? ಮಲೆನಾಡಿನ‌ ರೈತರು ಕೂಲಿ ಕಾರ್ಮಿಕರು ಬೇಸಗೆಯಲ್ಲಿ ಬೇಯುವುದಿಲ್ಲವೆ?” ಎಂದು ಪ್ರಶ್ನೆ ಮಾಡಿದ್ದಾರೆ.

”ಒಬ್ಬ ಸಚಿವರಾಗಿ ಕೆಲಸ ಮಾಡಿ ಕನಿಷ್ಟ ವಿವೇಕ ಇಟ್ಟುಕೊಳ್ಳದ ಇಂತವರು ಅಂತಿಮವಾಗಿ ಒಂದು ರೋಗಿಷ್ಟ ಸಮಾಜವನ್ನೇ ಹುಟ್ಟಿಸುತ್ತಾರೆ. ಹಾಗೆ ವೈಯಕ್ತಿಕವಾಗಿ ಟೀಕೆ ಮಾಡುತ್ತಾ ಹೋದರೆ ಸ್ವತಃ ವೈಯಕ್ತಿಕ ಬದುಕಿನಲ್ಲಿ ನಾನಾ ಪಡಿಪಾಟಲು ಎದುರಿಸುತ್ತಿರುವ ಜ್ನಾನೇಂದ್ರ ಅವರು ತಾವು ಸಹ ಗಾಜಿನ ಮನೆಯಲ್ಲಿ ಇರುವವರು ಎಂಬ ಅರಿವು ಇಟ್ಟುಕೊಳ್ಳಲಿ” ಎಂದಿದ್ದಾರೆ.

”ಮಲೆನಾಡಿನ ಜನರ, ರೈತರ ಹಕ್ಕುಗಳ ಬಗ್ಗೆ ಧನಿ ಎತ್ತುವುದು ಸ್ವಾಗತಾರ್ಹ. ಆದರೆ ಕೆಲ ತಿಂಗಳ ಹಿಂದೆ ಬಿಜೆಪಿ ಸರ್ಕಾರದ ಅವದಿಯಲ್ಲಿ ತಮ್ಮ ವ್ಯಾಪ್ತಿಯಲ್ಲೇ ಎಷ್ಟು ರೈತರ ಹೊಟ್ಟೆ ಮೇಲೆ ಅರಣ್ಯ ಇಲಾಕೆ ಹೊಡೆದಿತ್ತು, ಎಷ್ಟು ತೋಟಗಳನ್ನು ಕಡಿದು ಹಾಕಿತ್ತು ಎಂಬುದನ್ನು ಅವರು ನೆನಪು ಮಾಡಿಕೊಳ್ಳಬೇಕು. ಇನ್ನಾದರೂ ವೈಯಕ್ತಿಕವಾಗಿ ಜಾತಿ-ವರ್ಣದ ದುರಭಿಮಾನದಿಂದ ತೇಜೋವಧೆ ಮಾಡದೇ ಮಾತಾಡುವುದನ್ನ ಆರಗ ಅವರು ಕಲಿತುಕೊಳ್ಳಲಿ. ಅಗತ್ಯ ಬಿದ್ದರೆ ಕಿಮ್ಮನೆ ರತ್ನಾಕರ ಅವರ ಬಳಿ ಸಜ್ಜನಿಕೆಯಿಂದ ಮಾತಾಡುವುದನ್ನು ತರಬೇತಿ ಪಡೆದುಕೊಳ್ಳಲಿ” ಎಂದು ಬರೆದಿದ್ದಾರೆ.

ಸಾಮಾಜಿಕ ಕಾರ್ಯಕರ್ತರಾದ ಡಾ. ವಾಸು ಅವರು ಆರಗ ಜ್ಙಾನೇಂದ್ರ ಹೇಳಿಕೆ ಖಂಡಿಸಿ ಪೋಸ್ಟ್ ಮಾಡಿದ್ದು, ”ಆ ಭಾಗದವರು ಸುಟ್ಟು ಕರಕಲಾಗಿರುತ್ತಾರೆ. ಖರ್ಗೆ ಅವರನ್ನು ನೋಡಿದರೇ ಅಲ್ಲಿನವರ ಸ್ಥಿತಿ ಗೊತ್ತಾಗುತ್ತದೆ.”
ಈ ಮಾತನ್ನು ಹೇಳಿದ್ದು ಆರಗ ಜ್ಞಾನೇಂದ್ರ. ಈ ವ್ಯಕ್ತಿ ಗೃಹ ಸಚಿವರಾಗಿದ್ದರು. 5 ಸಾರಿ ಶಾಸಕರಾಗಿದ್ದರು. ಆಶ್ಚರ್ಯ ಏನಿದೆ? ಪತ್ರಿಕೆಯ ಸಂಪಾದಕರೊಬ್ಬರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೇ ಇಂತಹ ಮಾತನ್ನು ಬರೆದಿದ್ದರು ಅದಕ್ಕೇನು ಅಂತೀರಾ? ಇದು ಅಶ್ಚರ್ಯ ಪಟ್ಟುಕೊಳ್ಳುವ ವಿಚಾರ ಅಲ್ಲ, ಇಂತಹವರ ಮನಸ್ಸಿನಲ್ಲಿರುವ ಗಟಾರದ ಕೊಳಕನ್ನು ತೊಳೆಯದೇ ಇದ್ದರೆ, ಇಂಥವು ನಾರ್ಮಲ್ ಆಗಿಬಿಡುತ್ತದೆ.
ಅಂದ ಹಾಗೆ ಯಾಕೆ ಬಿಜೆಪಿಯವರೇ ಇಂತಹ ಮಾತುಗಳನ್ನು ಹೆಚ್ಚಾಗಿ ಆಡುತ್ತಾರೆ?” ಎಂದು ಕಿಡಿಕಾರಿದ್ದಾರೆ.

ಈ ಬಗ್ಗೆ ಪತ್ರಕರ್ತ ಯತಿರಾಜ್ ಬ್ಯಾಲಹಳ್ಳಿ ಪೋಸ್ಟ್ ಮಾಡಿದ್ದು, ”ಆರಗ ಜ್ಞಾನೇಂದ್ರರನ್ನು ಅಜ್ಞಾನೇಂದ್ರ ಎಂದು ಕರೆಯುವುದಿಲ್ಲ. ಯಾಕೆಂದರೆ ʼಅಜ್ಞಾನಿʼ ಎಂಬ ಜಾತಿಯೊಂದು ಇರುವುದರಿಂದ ಒಂದು ಜಾತಿಗೆ ಅವಮಾನ ಮಾಡಿದಂತಾಗುತ್ತದೆ. ಆರಗ ಜ್ಞಾನೇಂದ್ರ ಫ್ಯಾಸಿಸ್ಟ್‌ ಮತ್ತು ವಿಕೃತ ಮನುಷ್ಯ ಎಂದಷ್ಟೇ ಹೇಳಬಹುದು. ಖರ್ಗೆಯವರ ಮೈ ಬಣ್ಣ ನೋಡಿ ಅಣಕ ಮಾಡಿರುವ ಆರಗ ಜ್ಞಾನೇಂದ್ರ, ಕೇವಲ ಖರ್ಗೆಯವರಿಗೆ ಅಗೌರವ ತೋರಿಲ್ಲ. ಸಮಸ್ತ ಕರ್ನಾಟಕದ ಜನತೆಗೆ ಅವಮಾನ ಮಾಡಿದ್ದಾರೆ” ಎಂದು ಹೇಳಿದ್ದಾರೆ.

”ಕರ್ನಾಟಕ ಎಂಬ ಹೆಸರೇ ʼಕಪ್ಪುʼ ಎಂಬ ಪದದಿಂದ ಹುಟ್ಟಿದೆ. ಪ್ರಾಚೀನ ಕಾಲದಲ್ಲಿ ಕರೆಯಲ್ಪಡುತ್ತಿದ್ದ ಕರ್ನಾಟಕದ ಹೆಸರುಗಳು- ಕರ್‌ನಾಡು, ಕಮ್ಮಿತ್ತುನಾಡು(ಕಪ್ಪು ಮಣ್ಣಿನ ನಾಡು), ಕರುನಾಡರು, ಕನ್ನಾಡು, ಕರ್ನಾಡು, ಕರುನುಡುಗರಂ, ಕರುನಾಟಕ, ಕಣ್‌ನೀರ್‌, ಕನ್ನಡ, ಕನ್ನಡನಾಡು, ಕನ್ನಾಟ, ಕುಂತಳನಾಡು, ಮಹಿಷ ಮಂಡಲ- ಹೀಗೆ… ಕಪ್ಪುಮಣ್ಣಿನ ನಾಡು ಈ ಕರುನಾಡು, ಕಪ್ಪುಜನರ ನಾಡು ಈ ಕರುನಾಡು… ನಮ್ಮ ನಾಡಿನ ಮೂಲದ ಕುರಿತು, ಇಲ್ಲಿನ ಜನರ ಮೈಬಣ್ಣದ ಕುರಿತು ಅಣಕ ಮಾಡಿರುವ ಅರಗ ಜ್ಞಾನೇಂದ್ರರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಇಲ್ಲವಾದರೆ ರಾಜ್ಯದ ಜನತೆಗೆ ಕೆಟ್ಟ ಸಂದೇಶ ನೀಡಿದಂತಾಗುತ್ತದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನೇ ಅಣಕಿಸಿದ ಸಂಘಿಗಳ ಗುಂಪಿನ ಆರಗ ಜ್ಞಾನೇಂದ್ರರಿಗೆ ಪಾಠ ಕಲಿಸುವ ಸಮಯ ಬಂದಿದೆ” ಎಂದು ಬರೆದು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...