Homeಮುಖಪುಟಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

- Advertisement -
- Advertisement -

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು ‘ದ ಸಂಡೇ ಗಾರ್ಡಿಯನ್’ ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ ‘ಜಾತಿ ಮತ್ತು ವಿಕ್ಟಿಮ್ ಕಾರ್ಡ್’ ಕುರಿತು ನೀಡಿದ ಹೇಳಿಕೆ ದೇಶದಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಜೆಎನ್‌ಯು ವಿದ್ಯಾರ್ಥಿ ಸಂಘಟನೆ (ಜೆಎನ್‌ಯುಎಸ್‌ಯು) ಪಂಡಿತ್ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದು, ಅವರ ರಾಜೀನಾಮೆಗೆ ಒತ್ತಾಯಿಸಿದೆ. ಅಲ್ಲದೆ, ದೇಶದಾದ್ಯಂತ ಎಲ್ಲಾ ವಿದ್ಯಾರ್ಥಿ ಒಕ್ಕೂಟಗಳು, ಸಂಘಟನೆಗಳು ಮತ್ತು ವಿದ್ಯಾರ್ಥಿಗಳು ಪಂಡಿತ್ ಹೇಳಿಕೆ ಖಂಡಿಸಿ, ಅವರ ರಾಜೀನಾಮೆಗೆ ಆಗ್ರಹಿಸಿ ಶನಿವಾರ (ಫೆ. 21) ‘ರಾಷ್ಟ್ರೀಯ ಪ್ರತಿಭಟನಾ ದಿನ’ವನ್ನು ಆಚರಿಸುವಂತೆ ಮನವಿ ಮಾಡಿದೆ.

ಫೆ.16ರಂದು ಅಪ್ಲೋಡ್‌ ಮಾಡಲಾದ ಪಾಡ್‌ಕಾಸ್ಟ್‌ನಲ್ಲಿ ಮಾತನಾಡಿದ ಉಪಕುಲಪತಿ ಪಂಡಿತ್, “ಯಾರೂ ಕೂಡ ಶಾಶ್ವತವಾಗಿ ಸಂತ್ರಸ್ತರಾಗಿ ಅಥವಾ ವಿಕ್ಟಿಮ್ ಕಾರ್ಡ್ ಬಳಸುವ ಮೂಲಕ ಪ್ರಗತಿ ಸಾಧಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಮುಂದುವರಿದು, “ಯಾರನ್ನಾದರೂ ಕೆಟ್ಟವರೆಂದು ಬಿಂಬಿಸುವ ಮೂಲಕ ಅಥವಾ ಶತ್ರು ಎಂದು ಕೂಗಾಡುವ ಮೂಲಕ ಪ್ರಗತಿ ಹೊಂದಲು ಸಾಧ್ಯವಿಲ್ಲ. ಇದು ಕೇವಲ ತಾತ್ಕಾಲಿಕವಾಗಿ ಒಳ್ಳೆಯ ಭಾವನೆ ನೀಡುವ ಒಂದು ಡ್ರಗ್ ತರಹದ ಪ್ರವೃತ್ತಿಯಾಗಿದೆ” ಎಂದಿದ್ದಾರೆ.

ದಲಿತ ವಿದ್ಯಾರ್ಥಿಗಳ ಹೋರಾಟಕ್ಕೆ ಅಂತಾರಾಷ್ಟ್ರೀಯ ಉದಾಹರಣೆಯನ್ನು ನೀಡಿದ ಪಂಡಿತ್, “ಇದೇ ವಿಷಯವನ್ನು ವಿದೇಶಗಳಲ್ಲಿ ಕಪ್ಪು ಸಮುದಾಯದ ವಿಚಾರದಲ್ಲಿ ಮಾಡಲಾಗಿತ್ತು; ಈಗ ಅದೇ ವಿಷಯವನ್ನು ಇಲ್ಲಿ ದಲಿತರ ವಿಚಾರದಲ್ಲೂ ತರಲಾಗಿದೆ” ಎಂದು ಹೇಳಿದ್ದಾರೆ.

ವಿವಾದಾತ್ಮಕ ಹೇಳಿಕೆಯನ್ನು ಕೆಳಗಿನ ವಿಡಿಯೋದಲ್ಲಿ 45 ನಿಮಿಷದಿಂದ ನೋಡಬಹುದು

ಅಂದರೆ, ಸಾಮಾಜಿಕ ನ್ಯಾಯದ ಹೋರಾಟಗಳು ಅಥವಾ ಮೀಸಲಾತಿಯಂತಹ ನೀತಿಗಳು ಸಮುದಾಯಗಳನ್ನು ಶಾಶ್ವತವಾಗಿ ‘ಸಂತ್ರಸ್ತರು’ ಎಂಬ ಭಾವನೆಯಲ್ಲಿ ಇರಿಸುತ್ತವೆ ಎಂಬುದು ಪಂಡಿತ್ ಅವರ ಮಾತಿನ ಅರ್ಥವಾಗಿದೆ ಎಂದು ವಿಶ್ಲೇಷಿಸಲಾಗಿದೆ.

ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ತಾರತಮ್ಯ ತಡೆಯಲು ರೂಪಿಸಲಾದ ‘ಯುಜಿಸಿ ಈಕ್ವಿಟಿ ರೆಗ್ಯುಲೇಷನ್ಸ್ 2026’ ಅನ್ನು ಪಂಡಿತ್ ‘ಅನಗತ್ಯ ಮತ್ತು ‘ಅಸಂಬದ್ಧ’ ಎಂದು ಹೇಳಿದ್ದಾರೆ. ಒಬ್ಬರ ಹುಟ್ಟಿನ ಗುರುತಿನ ಆಧಾರದ ಮೇಲೆ ಅವರಿಗೆ ಹಕ್ಕುಗಳನ್ನು ನಿರಾಕರಿಸಬಾರದು ಅಥವಾ ಅದರ ಆಧಾರದ ಮೇಲೆ ಶಿಕ್ಷಿಸಬಾರದು ಎಂದು ಅವರು ವಾದಿಸಿದ್ದಾರೆ.

ಈ ಹೇಳಿಕೆಗಳು ದಲಿತರ ದಶಕಗಳ ಕಾಲದ ಹೋರಾಟ ಮತ್ತು ಅವರಿಗೆ ಸಂವಿಧಾನಬದ್ಧವಾಗಿ ಸಿಗಬೇಕಾದ ಹಕ್ಕುಗಳನ್ನು ಕಡೆಗಣಿಸುವಂತಿವೆ ಎಂದು ಜೆಎನ್‌ಯು ವಿದ್ಯಾರ್ಥಿ ಸಂಘ ಖಂಡಿಸಿದೆ.

ವಿಡಿಯೋದಲ್ಲಿ ಆರ್‌ಎಸ್‌ಎಸ್‌ ಜೊತೆಗಿನ ನಂಟಿನ ಕುರಿತು ಪಂಡಿತ್ ಅವರು ನೀಡಿರುವ ಹೇಳಿಕೆಗೂ ಜೆಎನ್‌ಯುಎಸ್‌ಯು ಖಂಡನೆ ವ್ಯಕ್ತಪಡಿಸಿದೆ.

ಆದರೆ, ಪಂಡಿತ್ ಅವರು ತನ್ನ ಮಾತುಗಳನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಹೇಳಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...