Homeಚಳವಳಿಟ್ವಿಟ್ಟರ್‌ ಜಾತಿವಾದ ಮಾಡುತ್ತಿದೆ, ತಳಸಮುದಾಯಗಳನ್ನು ಕಡೆಗಣಿಸುತ್ತಿದೆ - ಪ್ರೊ.ದಿಲೀಪ್‌ ಮಂಡಲ್‌

ಟ್ವಿಟ್ಟರ್‌ ಜಾತಿವಾದ ಮಾಡುತ್ತಿದೆ, ತಳಸಮುದಾಯಗಳನ್ನು ಕಡೆಗಣಿಸುತ್ತಿದೆ – ಪ್ರೊ.ದಿಲೀಪ್‌ ಮಂಡಲ್‌

- Advertisement -
- Advertisement -

ಟ್ವಿಟ್ಟರ್‌ ಜಾತಿವಾದ ಮಾಡುತ್ತಿದ್ದು, ಎಸ್ಸಿ, ಎಸ್ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತರನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸುತ್ತಿದೆ ಎಂದು ಹಿರಿಯ ಪತ್ರಕರ್ತರಾದ ಪ್ರೊ.ದಿಲೀಪ್‌ ಮಂಡಲ್‌ ಆರೋಪಿಸಿದ್ದಾರೆ.

ಟ್ವಿಟ್ಟರ್‌ ಒರಿಜಿನಲ್‌ ಆದ, ಹೆಚ್ಚು ಬಳಕೆಯ ಖಾತೆಗಳನ್ನು ವೆರಿಫೈಡ್‌ ಮಾಡುತ್ತದೆ. ಅದಕ್ಕಾಗಿ ಖಾತೆಯ ಹೆಸರಿನ ಮುಂದೆ ’ಬ್ಲೂ ಟಿಕ್’ ಚಿಹ್ನೆ ಹಾಕುತ್ತದೆ. ಇದು ಪ್ರಮುಖ ವ್ಯಕ್ತಿಗಳನ್ನು ಗುರುತಿಸಲು, ಅವರ ಖಾತೆಯನ್ನು ದೃಢೀಕರಿಸಲು ಅನುವಾಗುತ್ತದೆ. ಉದಾಹರಣೆಗೆ ಪ್ರಧಾನಿ ನರೇಂದ್ರ ಮೋದಿಯವರ ಹೆಸರಿನಲ್ಲಿ ಅಥವಾ ಬಾಲಿವುಡ್‌ ತಾರೆ ಅಮೀರ್‌ ಖಾನ್‌ರವರ ಹೆಸರಿನಲ್ಲಿ ಹಲವಾರು ಖಾತೆಗಳಿದ್ದಾಗ ಜನರಿಗೆ ಗೊಂದಲವಾಗಬಾರದೆಂದು ಒರಿಜಿನಲ್‌ ಖಾತೆಗೆ ಟ್ವಿಟ್ಟರ್‌ ವೆರಿಫೈಡ್‌ ಎಂದು ’ಬ್ಲೂ ಟಿಕ್’ ಚಿಹ್ನೆ ನೀಡಿರುತ್ತದೆ.

ಈ ವೆರಿಫೈಡ್‌ ವಿಚಾರದಲ್ಲಿ ಟ್ವಿಟ್ಟರ್‌ ಜಾತಿವಾದಿಯಾಗಿ ನಡೆದುಕೊಳ್ಳುತ್ತಿದೆ ಎಂದು ಹಲವಾರು ತಳಸಮುದಾಯದ ಚಿಂತಕರು, ಹೋರಾಟಗಾರರು ಆರೋಪಿಸಿದ್ದಾರೆ. ಇದನ್ನು ಹಿರಿಯ ಪತ್ರಕರ್ತ ಪ್ರೊ.ದಿಲೀಪ್‌ ಮಂಡಲ್‌ರವರು ಮೊದಲು ಆರಂಭಿಸಿದರು. ಜಾತಿ ತಾರತಮ್ಯದ ಹಲವಾರು ಮುಖಗಳನ್ನು ಟ್ವಿಟ್ಟರ್‌ ಮೂಲಕ ಅನಾವರಣ ಮಾಡುತ್ತಿದ್ದ ಅವರ ಖಾತೆಯನ್ನು ಟ್ವಿಟ್ಟರ್‌ ಯಾವುದೇ ಕಾರಣವಿಲ್ಲದೇ ಬ್ಲಾಕ್‌ ಮಾಡಿತು. ಆಗ ಅವರು ಟ್ವಿಟ್ಟರ್‌ ವಿರುದ್ಧ ಅಭಿಯಾನ ಆರಂಭಿಸಿದರು.

ಮೊದಲಿಗೆ ಸ್ಯಾಕ್‌ಮಣಿಸ್‌ ಮಹೇಶ್ವರಿ ಎಂಬುದಾಗಿ ಅವರು ಟ್ರೆಂಡ್‌ ಮಾಡಿದರು. ಅದನ್ನು ಟ್ವಿಟ್ಟರ್‌ ತೆಗೆದುಹಾಕಿತು. ನಂತರ ಕ್ಯಾಸ್ಟಿಸ್ಟ್‌ ಟ್ವಿಟ್ಟರ್‌ ಎಂದು ಆನಂತರ ಜೈಭೀಮ್‌ ಟ್ವಿಟ್ಟರ್‌ ಎಂದು ಟ್ರೆಂಡ್‌ ಮಾಡಿ ಲಕ್ಷಾಂತರ ಜನರ ಗಮನಸೆಳೆದರು. ಇದಾದ ನಂತರ ಟ್ವಿಟ್ಟರ್‌ ಎಚ್ಚೆತ್ತುಕೊಂಡು ಅವರ ಅಕೌಂಟ್‌ಗೆ ವೆರಿಫೈಡ್‌ ಎಂದು ’ಬ್ಲೂ ಟಿಕ್’ ಚಿಹ್ನೆ ನೀಡಿತು.

ಆಗ ಅವರು ಕೇವಲ ನನ್ನೊಬ್ಬನದು ಮಾತ್ರವಲ್ಲದೇ ದೇಶದ ಎಲ್ಲಾ ಎಸ್ಸಿ, ಎಸ್ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತರ ಟ್ವಿಟ್ಟರ್‌ ಖಾತೆಗಳಿಗೂ ವೆರಿಫೈಡ್‌ ಎಂದು ’ಬ್ಲೂ ಟಿಕ್’ ಚಿಹ್ನೆ ನೀಡುವಂತೆ ಆಗ್ರಹಿಸಿದರು. #verifySCSTOBCMinority ಹ್ಯಾಷ್‌ಟ್ಯಾಗ್‌ ನೀಡಿದರು. ಆನಂತರ ಈ ವಿಚಾರವಾಗಿ ಇಂದು, ಭೀಮ್ ಆರ್ಮಿ ಮುಂಬೈ ತಂಡವು ಟ್ವಿಟ್ಟರ್ ಇಂಡಿಯಾ ವರ್ಣಭೇದ ನೀತಿಯ ವಿರುದ್ಧ ಪ್ರತಿಭಟನೆಯನ್ನು ನಡೆಸಿ ಇಡೀದಿನ ಟ್ವಟ್ಟರ್‌ ಕಚೇರಿಯನ್ನು ಬಂದ್‌ಮಾಡಿತ್ತು. ಆಗ ಟ್ವಿಟ್ಟರ್‌ನವರು ಭೀಮ್‌ ಆರ್ಮಿ ಸಂಘಟಕರೊಡನೆ ಸಭೆ ಕರೆದಿದ್ದರು.

ಇದನ್ನೂ ಓದಿ: ’ಜೈಭೀಮ್‌ ಟ್ವಿಟ್ಟರ್‌’ ಮೊಳಗಿದ ಘೋಷಗಳು: ಟ್ವಿಟ್ಟರ್‌ನ ಜಾತೀಯತೆಗೆ ಭಾರೀ ಪ್ರತಿರೋಧ…

ಪಾ. ರಂಜಿತ್‌ ಎಂಬ ತಮಿಳು ನಿರ್ದೇಶಕರು ಕಾಲ ಮತ್ತು ಕಬಾಲಿಯಂತಹ ಸಾವಿರಾರು ಕೋಟಿ ಬಂಡವಾಳದ ಅದ್ಭುತ ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ. ಭಾರತದ ಅತ್ಯಂತ ಯಶಸ್ವಿ ಚಿತ್ರಗಳ ನಿರ್ದೇಶಕರಾಗಿದ್ದು, ಟ್ವಿಟ್ಟರ್‌ನಲ್ಲಿ 8 ಲಕ್ಷಕ್ಕೂ ಹೆಚ್ಚು ಅನುಯಾಯಿಗಳಳನ್ನು ಹೊಂದಿರುವ ಅಂಬೇಡ್ಕರೈಟ್ ಆಗಿದ್ದಾರೆ. ಅವರ ಖಾತೆಯನ್ನು ವೈರಫೈ ಮಾಡಿಲ್ಲ ಏಕೆ ಎಂದು ಟ್ವಿಟರ್ ಇಂಡಿಯಾ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಅದೇ ರೀತಿಯಾಗಿ ನೂರಾರು ಜನರ ಉದಾಹರಣೆಯನ್ನು ದಿಲೀಪ್‌ ಮಂಡಲ್‌ರವರು ಟ್ವಿಟ್ಟರ್‌ನಲ್ಲಿ ಹೆಸರಿಸಿದ್ದಾರೆ. ಕಾಕಾವಾಣಿ ಎಂಬುವವರು ಒಂದೂವರೆ ಲಕ್ಷ ಫಾಲೋವರ್ಸ್‌ಗಳನ್ನು ಹೊಂದಿದ್ದಾರೆ. ಟ್ರೈಬಲ್‌ ಆರ್ಮಿ 12ಸಾವರ ಅನುಯಾಯಿಗಳನ್ನು ಹೊಂದಿದೆ. ಜೈಭೀಮ್‌ ಆರ್ಮಿಯ ಮುಖ್ಯಸ್ಥ ಚಂದ್ರಶೇಖರ್‌ ರಾವಣ್‌ರವರು 67 ಸಾವಿರ ಫಾಲೋವರ್ಸ್‌ಗಳನ್ನು ಹೊಂದಿದ್ದಾರೆ. ಇಂತಹ ಅಸಂಖ್ಯ ತಳಸಮುದಾಯದವರ ಟ್ವಿಟ್ಟರ್‌ ಅಕೌಂಟ್‌ ವೆರಿಫೈ ಆಗಿಲ್ಲ. ಆದರೆ ಕೇವಲ 27 ಜನ ಫಾಲೋವರ್ಸ್‌ಗಳನ್ನು ಹೊಂದಿರುವ ಜೈ ಶಾ ಅಕೌಂಟ್‌ ವೈರಿಫೈ ಆಗಿದೆ. 877 ಫಾಲೋವರ್ಸ್‌ಗಳನ್ನು ಹೊಂದಿರುವ ಹಿಂದೂ ವಿಶ್ವ ಎಂಬುವವರ ಅಕೌಂಟ್‌ ವರಿಫೈ ಆಗಲು ಕಾರಣವೇನು? ಎಂದು ಕಿಡಿಕಾರಿದ್ದಾರೆ.

ಇದು ಕೇವಲ ವೆರಿಫೈ ವಿಷಯ ಮಾತ್ರವಲ್ಲ. ಟ್ವಿಟ್ಟರ್‌ನಲ್ಲಿ ತಳಸಮುದಾಯ ವಿಷಯ, ಸುದ್ದಿಗಳನ್ನು, ಬರಹಗಳನ್ನು ಸಹ ಹೆಚ್ಚು ಜನರಿಗೆ ತಲುಪದಂತೆ ಟ್ವಿಟ್ಟರ್‌ ತಡಯುತ್ತಿದೆ ಎಂದು ದಿಲೀಪ್‌ ಮಂಡಲ್‌ರವರ ಆರೋಪಿಸಿದ್ದಾರೆ. ಇದಕ್ಕೆ ಟ್ವಿಟ್ಟರ್‌ ಇಂಡಿಯಾದ ಆಯಾಕಟ್ಟಿಯ ಹುದ್ದೆಗಳಲ್ಲಿ ಕುಳಿತಿರುವ ಜಾತಿವಾದಿಗಳೇ ಕಾರಣ ಎಂದು ದೂರಿದ್ದಾರೆ.

ಇದ್ಯಾವುದಕ್ಕೂ ಟ್ವಿಟ್ಟರ್‌ ಬಳಿ ಉತ್ತರವಿಲ್ಲ. ಮುಕ್ತ ಮತ್ತ ಸ್ವತಂತ್ರ ಎಂದು ಭಾವಿಸುವ ಸೋಷಿಯಲ್‌ ಫ್ಲಾಟ್‌ಫಾರಂಗಳು ಸಹ ಹೇಗೆ ಜಾತಿವಾದಿಗಳಾಗಿವೆ ಎಂಬುದಕ್ಕೆ ಇದೊಂದು ಉತ್ತಮ ಉದಾಹರಣೆಯಾಗಿದೆ. ಹಾಗಾಗಿ ಇದರ ವಿರುದ್ಧ ಹೋರಾಟ ನಡೆಯುತ್ತಿದೆ ಎಂದು ದಿಲೀಪ್‌ ಮಂಡಲ್‌ ಹೇಳಿದ್ದಾರೆ.

ಈ ಹಿಂದೆಯೂ ಸಹ 7 ಜನ ಮಹಿಳೆಯರೊಂದಿಗೆ ಟ್ವಿಟ್ಟರ್‌ ಸಿಇಓ ಸಭೆ ಮಾಡುವಾಗ ಸ್ಮಾಶ್ ಬ್ರಾಹ್ಮಿನಿಕಲ್ ಪೆಟ್ರಿಯಾರ್ಕಿ ಎಂಬ ಚಿತ್ರ ನೀಡಿದಾಗ ದೊಡ್ಡ ವಿವಾದವಾಗಿತ್ತು. ಅದು ನಿಜ ಎಂಬುದು ಪದೇ ಪದೇ ಸಾಬೀತಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...