Homeಚಳವಳಿಟ್ವಿಟ್ಟರ್‌ ಜಾತಿವಾದ ಮಾಡುತ್ತಿದೆ, ತಳಸಮುದಾಯಗಳನ್ನು ಕಡೆಗಣಿಸುತ್ತಿದೆ - ಪ್ರೊ.ದಿಲೀಪ್‌ ಮಂಡಲ್‌

ಟ್ವಿಟ್ಟರ್‌ ಜಾತಿವಾದ ಮಾಡುತ್ತಿದೆ, ತಳಸಮುದಾಯಗಳನ್ನು ಕಡೆಗಣಿಸುತ್ತಿದೆ – ಪ್ರೊ.ದಿಲೀಪ್‌ ಮಂಡಲ್‌

- Advertisement -
- Advertisement -

ಟ್ವಿಟ್ಟರ್‌ ಜಾತಿವಾದ ಮಾಡುತ್ತಿದ್ದು, ಎಸ್ಸಿ, ಎಸ್ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತರನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸುತ್ತಿದೆ ಎಂದು ಹಿರಿಯ ಪತ್ರಕರ್ತರಾದ ಪ್ರೊ.ದಿಲೀಪ್‌ ಮಂಡಲ್‌ ಆರೋಪಿಸಿದ್ದಾರೆ.

ಟ್ವಿಟ್ಟರ್‌ ಒರಿಜಿನಲ್‌ ಆದ, ಹೆಚ್ಚು ಬಳಕೆಯ ಖಾತೆಗಳನ್ನು ವೆರಿಫೈಡ್‌ ಮಾಡುತ್ತದೆ. ಅದಕ್ಕಾಗಿ ಖಾತೆಯ ಹೆಸರಿನ ಮುಂದೆ ’ಬ್ಲೂ ಟಿಕ್’ ಚಿಹ್ನೆ ಹಾಕುತ್ತದೆ. ಇದು ಪ್ರಮುಖ ವ್ಯಕ್ತಿಗಳನ್ನು ಗುರುತಿಸಲು, ಅವರ ಖಾತೆಯನ್ನು ದೃಢೀಕರಿಸಲು ಅನುವಾಗುತ್ತದೆ. ಉದಾಹರಣೆಗೆ ಪ್ರಧಾನಿ ನರೇಂದ್ರ ಮೋದಿಯವರ ಹೆಸರಿನಲ್ಲಿ ಅಥವಾ ಬಾಲಿವುಡ್‌ ತಾರೆ ಅಮೀರ್‌ ಖಾನ್‌ರವರ ಹೆಸರಿನಲ್ಲಿ ಹಲವಾರು ಖಾತೆಗಳಿದ್ದಾಗ ಜನರಿಗೆ ಗೊಂದಲವಾಗಬಾರದೆಂದು ಒರಿಜಿನಲ್‌ ಖಾತೆಗೆ ಟ್ವಿಟ್ಟರ್‌ ವೆರಿಫೈಡ್‌ ಎಂದು ’ಬ್ಲೂ ಟಿಕ್’ ಚಿಹ್ನೆ ನೀಡಿರುತ್ತದೆ.

ಈ ವೆರಿಫೈಡ್‌ ವಿಚಾರದಲ್ಲಿ ಟ್ವಿಟ್ಟರ್‌ ಜಾತಿವಾದಿಯಾಗಿ ನಡೆದುಕೊಳ್ಳುತ್ತಿದೆ ಎಂದು ಹಲವಾರು ತಳಸಮುದಾಯದ ಚಿಂತಕರು, ಹೋರಾಟಗಾರರು ಆರೋಪಿಸಿದ್ದಾರೆ. ಇದನ್ನು ಹಿರಿಯ ಪತ್ರಕರ್ತ ಪ್ರೊ.ದಿಲೀಪ್‌ ಮಂಡಲ್‌ರವರು ಮೊದಲು ಆರಂಭಿಸಿದರು. ಜಾತಿ ತಾರತಮ್ಯದ ಹಲವಾರು ಮುಖಗಳನ್ನು ಟ್ವಿಟ್ಟರ್‌ ಮೂಲಕ ಅನಾವರಣ ಮಾಡುತ್ತಿದ್ದ ಅವರ ಖಾತೆಯನ್ನು ಟ್ವಿಟ್ಟರ್‌ ಯಾವುದೇ ಕಾರಣವಿಲ್ಲದೇ ಬ್ಲಾಕ್‌ ಮಾಡಿತು. ಆಗ ಅವರು ಟ್ವಿಟ್ಟರ್‌ ವಿರುದ್ಧ ಅಭಿಯಾನ ಆರಂಭಿಸಿದರು.

ಮೊದಲಿಗೆ ಸ್ಯಾಕ್‌ಮಣಿಸ್‌ ಮಹೇಶ್ವರಿ ಎಂಬುದಾಗಿ ಅವರು ಟ್ರೆಂಡ್‌ ಮಾಡಿದರು. ಅದನ್ನು ಟ್ವಿಟ್ಟರ್‌ ತೆಗೆದುಹಾಕಿತು. ನಂತರ ಕ್ಯಾಸ್ಟಿಸ್ಟ್‌ ಟ್ವಿಟ್ಟರ್‌ ಎಂದು ಆನಂತರ ಜೈಭೀಮ್‌ ಟ್ವಿಟ್ಟರ್‌ ಎಂದು ಟ್ರೆಂಡ್‌ ಮಾಡಿ ಲಕ್ಷಾಂತರ ಜನರ ಗಮನಸೆಳೆದರು. ಇದಾದ ನಂತರ ಟ್ವಿಟ್ಟರ್‌ ಎಚ್ಚೆತ್ತುಕೊಂಡು ಅವರ ಅಕೌಂಟ್‌ಗೆ ವೆರಿಫೈಡ್‌ ಎಂದು ’ಬ್ಲೂ ಟಿಕ್’ ಚಿಹ್ನೆ ನೀಡಿತು.

ಆಗ ಅವರು ಕೇವಲ ನನ್ನೊಬ್ಬನದು ಮಾತ್ರವಲ್ಲದೇ ದೇಶದ ಎಲ್ಲಾ ಎಸ್ಸಿ, ಎಸ್ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತರ ಟ್ವಿಟ್ಟರ್‌ ಖಾತೆಗಳಿಗೂ ವೆರಿಫೈಡ್‌ ಎಂದು ’ಬ್ಲೂ ಟಿಕ್’ ಚಿಹ್ನೆ ನೀಡುವಂತೆ ಆಗ್ರಹಿಸಿದರು. #verifySCSTOBCMinority ಹ್ಯಾಷ್‌ಟ್ಯಾಗ್‌ ನೀಡಿದರು. ಆನಂತರ ಈ ವಿಚಾರವಾಗಿ ಇಂದು, ಭೀಮ್ ಆರ್ಮಿ ಮುಂಬೈ ತಂಡವು ಟ್ವಿಟ್ಟರ್ ಇಂಡಿಯಾ ವರ್ಣಭೇದ ನೀತಿಯ ವಿರುದ್ಧ ಪ್ರತಿಭಟನೆಯನ್ನು ನಡೆಸಿ ಇಡೀದಿನ ಟ್ವಟ್ಟರ್‌ ಕಚೇರಿಯನ್ನು ಬಂದ್‌ಮಾಡಿತ್ತು. ಆಗ ಟ್ವಿಟ್ಟರ್‌ನವರು ಭೀಮ್‌ ಆರ್ಮಿ ಸಂಘಟಕರೊಡನೆ ಸಭೆ ಕರೆದಿದ್ದರು.

ಇದನ್ನೂ ಓದಿ: ’ಜೈಭೀಮ್‌ ಟ್ವಿಟ್ಟರ್‌’ ಮೊಳಗಿದ ಘೋಷಗಳು: ಟ್ವಿಟ್ಟರ್‌ನ ಜಾತೀಯತೆಗೆ ಭಾರೀ ಪ್ರತಿರೋಧ…

ಪಾ. ರಂಜಿತ್‌ ಎಂಬ ತಮಿಳು ನಿರ್ದೇಶಕರು ಕಾಲ ಮತ್ತು ಕಬಾಲಿಯಂತಹ ಸಾವಿರಾರು ಕೋಟಿ ಬಂಡವಾಳದ ಅದ್ಭುತ ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ. ಭಾರತದ ಅತ್ಯಂತ ಯಶಸ್ವಿ ಚಿತ್ರಗಳ ನಿರ್ದೇಶಕರಾಗಿದ್ದು, ಟ್ವಿಟ್ಟರ್‌ನಲ್ಲಿ 8 ಲಕ್ಷಕ್ಕೂ ಹೆಚ್ಚು ಅನುಯಾಯಿಗಳಳನ್ನು ಹೊಂದಿರುವ ಅಂಬೇಡ್ಕರೈಟ್ ಆಗಿದ್ದಾರೆ. ಅವರ ಖಾತೆಯನ್ನು ವೈರಫೈ ಮಾಡಿಲ್ಲ ಏಕೆ ಎಂದು ಟ್ವಿಟರ್ ಇಂಡಿಯಾ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಅದೇ ರೀತಿಯಾಗಿ ನೂರಾರು ಜನರ ಉದಾಹರಣೆಯನ್ನು ದಿಲೀಪ್‌ ಮಂಡಲ್‌ರವರು ಟ್ವಿಟ್ಟರ್‌ನಲ್ಲಿ ಹೆಸರಿಸಿದ್ದಾರೆ. ಕಾಕಾವಾಣಿ ಎಂಬುವವರು ಒಂದೂವರೆ ಲಕ್ಷ ಫಾಲೋವರ್ಸ್‌ಗಳನ್ನು ಹೊಂದಿದ್ದಾರೆ. ಟ್ರೈಬಲ್‌ ಆರ್ಮಿ 12ಸಾವರ ಅನುಯಾಯಿಗಳನ್ನು ಹೊಂದಿದೆ. ಜೈಭೀಮ್‌ ಆರ್ಮಿಯ ಮುಖ್ಯಸ್ಥ ಚಂದ್ರಶೇಖರ್‌ ರಾವಣ್‌ರವರು 67 ಸಾವಿರ ಫಾಲೋವರ್ಸ್‌ಗಳನ್ನು ಹೊಂದಿದ್ದಾರೆ. ಇಂತಹ ಅಸಂಖ್ಯ ತಳಸಮುದಾಯದವರ ಟ್ವಿಟ್ಟರ್‌ ಅಕೌಂಟ್‌ ವೆರಿಫೈ ಆಗಿಲ್ಲ. ಆದರೆ ಕೇವಲ 27 ಜನ ಫಾಲೋವರ್ಸ್‌ಗಳನ್ನು ಹೊಂದಿರುವ ಜೈ ಶಾ ಅಕೌಂಟ್‌ ವೈರಿಫೈ ಆಗಿದೆ. 877 ಫಾಲೋವರ್ಸ್‌ಗಳನ್ನು ಹೊಂದಿರುವ ಹಿಂದೂ ವಿಶ್ವ ಎಂಬುವವರ ಅಕೌಂಟ್‌ ವರಿಫೈ ಆಗಲು ಕಾರಣವೇನು? ಎಂದು ಕಿಡಿಕಾರಿದ್ದಾರೆ.

ಇದು ಕೇವಲ ವೆರಿಫೈ ವಿಷಯ ಮಾತ್ರವಲ್ಲ. ಟ್ವಿಟ್ಟರ್‌ನಲ್ಲಿ ತಳಸಮುದಾಯ ವಿಷಯ, ಸುದ್ದಿಗಳನ್ನು, ಬರಹಗಳನ್ನು ಸಹ ಹೆಚ್ಚು ಜನರಿಗೆ ತಲುಪದಂತೆ ಟ್ವಿಟ್ಟರ್‌ ತಡಯುತ್ತಿದೆ ಎಂದು ದಿಲೀಪ್‌ ಮಂಡಲ್‌ರವರ ಆರೋಪಿಸಿದ್ದಾರೆ. ಇದಕ್ಕೆ ಟ್ವಿಟ್ಟರ್‌ ಇಂಡಿಯಾದ ಆಯಾಕಟ್ಟಿಯ ಹುದ್ದೆಗಳಲ್ಲಿ ಕುಳಿತಿರುವ ಜಾತಿವಾದಿಗಳೇ ಕಾರಣ ಎಂದು ದೂರಿದ್ದಾರೆ.

ಇದ್ಯಾವುದಕ್ಕೂ ಟ್ವಿಟ್ಟರ್‌ ಬಳಿ ಉತ್ತರವಿಲ್ಲ. ಮುಕ್ತ ಮತ್ತ ಸ್ವತಂತ್ರ ಎಂದು ಭಾವಿಸುವ ಸೋಷಿಯಲ್‌ ಫ್ಲಾಟ್‌ಫಾರಂಗಳು ಸಹ ಹೇಗೆ ಜಾತಿವಾದಿಗಳಾಗಿವೆ ಎಂಬುದಕ್ಕೆ ಇದೊಂದು ಉತ್ತಮ ಉದಾಹರಣೆಯಾಗಿದೆ. ಹಾಗಾಗಿ ಇದರ ವಿರುದ್ಧ ಹೋರಾಟ ನಡೆಯುತ್ತಿದೆ ಎಂದು ದಿಲೀಪ್‌ ಮಂಡಲ್‌ ಹೇಳಿದ್ದಾರೆ.

ಈ ಹಿಂದೆಯೂ ಸಹ 7 ಜನ ಮಹಿಳೆಯರೊಂದಿಗೆ ಟ್ವಿಟ್ಟರ್‌ ಸಿಇಓ ಸಭೆ ಮಾಡುವಾಗ ಸ್ಮಾಶ್ ಬ್ರಾಹ್ಮಿನಿಕಲ್ ಪೆಟ್ರಿಯಾರ್ಕಿ ಎಂಬ ಚಿತ್ರ ನೀಡಿದಾಗ ದೊಡ್ಡ ವಿವಾದವಾಗಿತ್ತು. ಅದು ನಿಜ ಎಂಬುದು ಪದೇ ಪದೇ ಸಾಬೀತಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...