Homeಚಳವಳಿಟ್ವಿಟ್ಟರ್‌ ಜಾತಿವಾದ ಮಾಡುತ್ತಿದೆ, ತಳಸಮುದಾಯಗಳನ್ನು ಕಡೆಗಣಿಸುತ್ತಿದೆ - ಪ್ರೊ.ದಿಲೀಪ್‌ ಮಂಡಲ್‌

ಟ್ವಿಟ್ಟರ್‌ ಜಾತಿವಾದ ಮಾಡುತ್ತಿದೆ, ತಳಸಮುದಾಯಗಳನ್ನು ಕಡೆಗಣಿಸುತ್ತಿದೆ – ಪ್ರೊ.ದಿಲೀಪ್‌ ಮಂಡಲ್‌

- Advertisement -
- Advertisement -

ಟ್ವಿಟ್ಟರ್‌ ಜಾತಿವಾದ ಮಾಡುತ್ತಿದ್ದು, ಎಸ್ಸಿ, ಎಸ್ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತರನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸುತ್ತಿದೆ ಎಂದು ಹಿರಿಯ ಪತ್ರಕರ್ತರಾದ ಪ್ರೊ.ದಿಲೀಪ್‌ ಮಂಡಲ್‌ ಆರೋಪಿಸಿದ್ದಾರೆ.

ಟ್ವಿಟ್ಟರ್‌ ಒರಿಜಿನಲ್‌ ಆದ, ಹೆಚ್ಚು ಬಳಕೆಯ ಖಾತೆಗಳನ್ನು ವೆರಿಫೈಡ್‌ ಮಾಡುತ್ತದೆ. ಅದಕ್ಕಾಗಿ ಖಾತೆಯ ಹೆಸರಿನ ಮುಂದೆ ’ಬ್ಲೂ ಟಿಕ್’ ಚಿಹ್ನೆ ಹಾಕುತ್ತದೆ. ಇದು ಪ್ರಮುಖ ವ್ಯಕ್ತಿಗಳನ್ನು ಗುರುತಿಸಲು, ಅವರ ಖಾತೆಯನ್ನು ದೃಢೀಕರಿಸಲು ಅನುವಾಗುತ್ತದೆ. ಉದಾಹರಣೆಗೆ ಪ್ರಧಾನಿ ನರೇಂದ್ರ ಮೋದಿಯವರ ಹೆಸರಿನಲ್ಲಿ ಅಥವಾ ಬಾಲಿವುಡ್‌ ತಾರೆ ಅಮೀರ್‌ ಖಾನ್‌ರವರ ಹೆಸರಿನಲ್ಲಿ ಹಲವಾರು ಖಾತೆಗಳಿದ್ದಾಗ ಜನರಿಗೆ ಗೊಂದಲವಾಗಬಾರದೆಂದು ಒರಿಜಿನಲ್‌ ಖಾತೆಗೆ ಟ್ವಿಟ್ಟರ್‌ ವೆರಿಫೈಡ್‌ ಎಂದು ’ಬ್ಲೂ ಟಿಕ್’ ಚಿಹ್ನೆ ನೀಡಿರುತ್ತದೆ.

ಈ ವೆರಿಫೈಡ್‌ ವಿಚಾರದಲ್ಲಿ ಟ್ವಿಟ್ಟರ್‌ ಜಾತಿವಾದಿಯಾಗಿ ನಡೆದುಕೊಳ್ಳುತ್ತಿದೆ ಎಂದು ಹಲವಾರು ತಳಸಮುದಾಯದ ಚಿಂತಕರು, ಹೋರಾಟಗಾರರು ಆರೋಪಿಸಿದ್ದಾರೆ. ಇದನ್ನು ಹಿರಿಯ ಪತ್ರಕರ್ತ ಪ್ರೊ.ದಿಲೀಪ್‌ ಮಂಡಲ್‌ರವರು ಮೊದಲು ಆರಂಭಿಸಿದರು. ಜಾತಿ ತಾರತಮ್ಯದ ಹಲವಾರು ಮುಖಗಳನ್ನು ಟ್ವಿಟ್ಟರ್‌ ಮೂಲಕ ಅನಾವರಣ ಮಾಡುತ್ತಿದ್ದ ಅವರ ಖಾತೆಯನ್ನು ಟ್ವಿಟ್ಟರ್‌ ಯಾವುದೇ ಕಾರಣವಿಲ್ಲದೇ ಬ್ಲಾಕ್‌ ಮಾಡಿತು. ಆಗ ಅವರು ಟ್ವಿಟ್ಟರ್‌ ವಿರುದ್ಧ ಅಭಿಯಾನ ಆರಂಭಿಸಿದರು.

ಮೊದಲಿಗೆ ಸ್ಯಾಕ್‌ಮಣಿಸ್‌ ಮಹೇಶ್ವರಿ ಎಂಬುದಾಗಿ ಅವರು ಟ್ರೆಂಡ್‌ ಮಾಡಿದರು. ಅದನ್ನು ಟ್ವಿಟ್ಟರ್‌ ತೆಗೆದುಹಾಕಿತು. ನಂತರ ಕ್ಯಾಸ್ಟಿಸ್ಟ್‌ ಟ್ವಿಟ್ಟರ್‌ ಎಂದು ಆನಂತರ ಜೈಭೀಮ್‌ ಟ್ವಿಟ್ಟರ್‌ ಎಂದು ಟ್ರೆಂಡ್‌ ಮಾಡಿ ಲಕ್ಷಾಂತರ ಜನರ ಗಮನಸೆಳೆದರು. ಇದಾದ ನಂತರ ಟ್ವಿಟ್ಟರ್‌ ಎಚ್ಚೆತ್ತುಕೊಂಡು ಅವರ ಅಕೌಂಟ್‌ಗೆ ವೆರಿಫೈಡ್‌ ಎಂದು ’ಬ್ಲೂ ಟಿಕ್’ ಚಿಹ್ನೆ ನೀಡಿತು.

ಆಗ ಅವರು ಕೇವಲ ನನ್ನೊಬ್ಬನದು ಮಾತ್ರವಲ್ಲದೇ ದೇಶದ ಎಲ್ಲಾ ಎಸ್ಸಿ, ಎಸ್ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತರ ಟ್ವಿಟ್ಟರ್‌ ಖಾತೆಗಳಿಗೂ ವೆರಿಫೈಡ್‌ ಎಂದು ’ಬ್ಲೂ ಟಿಕ್’ ಚಿಹ್ನೆ ನೀಡುವಂತೆ ಆಗ್ರಹಿಸಿದರು. #verifySCSTOBCMinority ಹ್ಯಾಷ್‌ಟ್ಯಾಗ್‌ ನೀಡಿದರು. ಆನಂತರ ಈ ವಿಚಾರವಾಗಿ ಇಂದು, ಭೀಮ್ ಆರ್ಮಿ ಮುಂಬೈ ತಂಡವು ಟ್ವಿಟ್ಟರ್ ಇಂಡಿಯಾ ವರ್ಣಭೇದ ನೀತಿಯ ವಿರುದ್ಧ ಪ್ರತಿಭಟನೆಯನ್ನು ನಡೆಸಿ ಇಡೀದಿನ ಟ್ವಟ್ಟರ್‌ ಕಚೇರಿಯನ್ನು ಬಂದ್‌ಮಾಡಿತ್ತು. ಆಗ ಟ್ವಿಟ್ಟರ್‌ನವರು ಭೀಮ್‌ ಆರ್ಮಿ ಸಂಘಟಕರೊಡನೆ ಸಭೆ ಕರೆದಿದ್ದರು.

ಇದನ್ನೂ ಓದಿ: ’ಜೈಭೀಮ್‌ ಟ್ವಿಟ್ಟರ್‌’ ಮೊಳಗಿದ ಘೋಷಗಳು: ಟ್ವಿಟ್ಟರ್‌ನ ಜಾತೀಯತೆಗೆ ಭಾರೀ ಪ್ರತಿರೋಧ…

ಪಾ. ರಂಜಿತ್‌ ಎಂಬ ತಮಿಳು ನಿರ್ದೇಶಕರು ಕಾಲ ಮತ್ತು ಕಬಾಲಿಯಂತಹ ಸಾವಿರಾರು ಕೋಟಿ ಬಂಡವಾಳದ ಅದ್ಭುತ ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ. ಭಾರತದ ಅತ್ಯಂತ ಯಶಸ್ವಿ ಚಿತ್ರಗಳ ನಿರ್ದೇಶಕರಾಗಿದ್ದು, ಟ್ವಿಟ್ಟರ್‌ನಲ್ಲಿ 8 ಲಕ್ಷಕ್ಕೂ ಹೆಚ್ಚು ಅನುಯಾಯಿಗಳಳನ್ನು ಹೊಂದಿರುವ ಅಂಬೇಡ್ಕರೈಟ್ ಆಗಿದ್ದಾರೆ. ಅವರ ಖಾತೆಯನ್ನು ವೈರಫೈ ಮಾಡಿಲ್ಲ ಏಕೆ ಎಂದು ಟ್ವಿಟರ್ ಇಂಡಿಯಾ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಅದೇ ರೀತಿಯಾಗಿ ನೂರಾರು ಜನರ ಉದಾಹರಣೆಯನ್ನು ದಿಲೀಪ್‌ ಮಂಡಲ್‌ರವರು ಟ್ವಿಟ್ಟರ್‌ನಲ್ಲಿ ಹೆಸರಿಸಿದ್ದಾರೆ. ಕಾಕಾವಾಣಿ ಎಂಬುವವರು ಒಂದೂವರೆ ಲಕ್ಷ ಫಾಲೋವರ್ಸ್‌ಗಳನ್ನು ಹೊಂದಿದ್ದಾರೆ. ಟ್ರೈಬಲ್‌ ಆರ್ಮಿ 12ಸಾವರ ಅನುಯಾಯಿಗಳನ್ನು ಹೊಂದಿದೆ. ಜೈಭೀಮ್‌ ಆರ್ಮಿಯ ಮುಖ್ಯಸ್ಥ ಚಂದ್ರಶೇಖರ್‌ ರಾವಣ್‌ರವರು 67 ಸಾವಿರ ಫಾಲೋವರ್ಸ್‌ಗಳನ್ನು ಹೊಂದಿದ್ದಾರೆ. ಇಂತಹ ಅಸಂಖ್ಯ ತಳಸಮುದಾಯದವರ ಟ್ವಿಟ್ಟರ್‌ ಅಕೌಂಟ್‌ ವೆರಿಫೈ ಆಗಿಲ್ಲ. ಆದರೆ ಕೇವಲ 27 ಜನ ಫಾಲೋವರ್ಸ್‌ಗಳನ್ನು ಹೊಂದಿರುವ ಜೈ ಶಾ ಅಕೌಂಟ್‌ ವೈರಿಫೈ ಆಗಿದೆ. 877 ಫಾಲೋವರ್ಸ್‌ಗಳನ್ನು ಹೊಂದಿರುವ ಹಿಂದೂ ವಿಶ್ವ ಎಂಬುವವರ ಅಕೌಂಟ್‌ ವರಿಫೈ ಆಗಲು ಕಾರಣವೇನು? ಎಂದು ಕಿಡಿಕಾರಿದ್ದಾರೆ.

ಇದು ಕೇವಲ ವೆರಿಫೈ ವಿಷಯ ಮಾತ್ರವಲ್ಲ. ಟ್ವಿಟ್ಟರ್‌ನಲ್ಲಿ ತಳಸಮುದಾಯ ವಿಷಯ, ಸುದ್ದಿಗಳನ್ನು, ಬರಹಗಳನ್ನು ಸಹ ಹೆಚ್ಚು ಜನರಿಗೆ ತಲುಪದಂತೆ ಟ್ವಿಟ್ಟರ್‌ ತಡಯುತ್ತಿದೆ ಎಂದು ದಿಲೀಪ್‌ ಮಂಡಲ್‌ರವರ ಆರೋಪಿಸಿದ್ದಾರೆ. ಇದಕ್ಕೆ ಟ್ವಿಟ್ಟರ್‌ ಇಂಡಿಯಾದ ಆಯಾಕಟ್ಟಿಯ ಹುದ್ದೆಗಳಲ್ಲಿ ಕುಳಿತಿರುವ ಜಾತಿವಾದಿಗಳೇ ಕಾರಣ ಎಂದು ದೂರಿದ್ದಾರೆ.

ಇದ್ಯಾವುದಕ್ಕೂ ಟ್ವಿಟ್ಟರ್‌ ಬಳಿ ಉತ್ತರವಿಲ್ಲ. ಮುಕ್ತ ಮತ್ತ ಸ್ವತಂತ್ರ ಎಂದು ಭಾವಿಸುವ ಸೋಷಿಯಲ್‌ ಫ್ಲಾಟ್‌ಫಾರಂಗಳು ಸಹ ಹೇಗೆ ಜಾತಿವಾದಿಗಳಾಗಿವೆ ಎಂಬುದಕ್ಕೆ ಇದೊಂದು ಉತ್ತಮ ಉದಾಹರಣೆಯಾಗಿದೆ. ಹಾಗಾಗಿ ಇದರ ವಿರುದ್ಧ ಹೋರಾಟ ನಡೆಯುತ್ತಿದೆ ಎಂದು ದಿಲೀಪ್‌ ಮಂಡಲ್‌ ಹೇಳಿದ್ದಾರೆ.

ಈ ಹಿಂದೆಯೂ ಸಹ 7 ಜನ ಮಹಿಳೆಯರೊಂದಿಗೆ ಟ್ವಿಟ್ಟರ್‌ ಸಿಇಓ ಸಭೆ ಮಾಡುವಾಗ ಸ್ಮಾಶ್ ಬ್ರಾಹ್ಮಿನಿಕಲ್ ಪೆಟ್ರಿಯಾರ್ಕಿ ಎಂಬ ಚಿತ್ರ ನೀಡಿದಾಗ ದೊಡ್ಡ ವಿವಾದವಾಗಿತ್ತು. ಅದು ನಿಜ ಎಂಬುದು ಪದೇ ಪದೇ ಸಾಬೀತಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...