Homeಕರೋನಾ ತಲ್ಲಣಕ್ಯಾಟ್‌ ಕ್ಯೂ ವೈರಸ್: ಕೊರೊನಾದಂತೆಯೇ ಮತ್ತೊಂದು ಅಪಾಯಕಾರಿ ವೈರಸ್: ICMR ಆತಂಕ

ಕ್ಯಾಟ್‌ ಕ್ಯೂ ವೈರಸ್: ಕೊರೊನಾದಂತೆಯೇ ಮತ್ತೊಂದು ಅಪಾಯಕಾರಿ ವೈರಸ್: ICMR ಆತಂಕ

ಈ ಕ್ಯಾಟ್ ಕ್ಯೂ ವೈರಸ್ ಪ್ರಾಣಿಗಳಿಗೆ (ಸೊಳ್ಳೆಗಳು, ಹಂದಿಗಳು) ಮತ್ತು ಮನುಷ್ಯರಿಗೆ ಇಬ್ಬರಿಗೂ ಸೋಂಕು ತಗುಲುತ್ತದೆ. ವೈರಸ್‌ ಸೋಂಕಿನಿಂದ ಅಧಿಕ ಜ್ವರ, ಮೆನಿಂಜೈಟಿಸ್, ಮೆದುಳಿನ ಉರಿಯೂತದಂತಹ ಭಯಾನಕ ರೋಗಲಕ್ಷಣಗಳಿಗೆ ಕಾರಣವಾಗಬಹುದು.

- Advertisement -
- Advertisement -

ಭಾರತ ಕೊರೊನಾ ಸಾಂಕ್ರಾಮಿಕದಿಂದ ತತ್ತರಿಸುತ್ತಿದೆ. ಈ ನಡುವೆಯೇ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಮತ್ತೊಂದು ಆತಂಕ ಸೃಷ್ಟಿಸುವ ಮಾಹಿತಿ ನೀಡಿದೆ. ಕೊರೊನಾ ಜೊತೆಗೇ ನಾವು ಚೀನಾದ ಮತ್ತೊಂದು ವೈರಸ್ ವಿರುದ್ಧ ಹೋರಾಡಬೇಕಿದೆ. ಅದೇ ಕ್ಯಾಟ್ ಕ್ಯೂ ವೈರಸ್ (CQV).

ಈ ವೈರಸ್ ಅನ್ನು ಆರ್ಬೋವೈರಸ್ ಎಂದು ಕರೆಯಲಾಗುತ್ತದೆ. ಚೀನಾ ಮತ್ತು ವಿಯೆಟ್ನಾಂನ ಕೆಲವು ಭಾಗಗಳಲ್ಲಿ ಕೆಲ ಜಾತಿಯ ಸೊಳ್ಳೆಗಳು ಮತ್ತು ಹಂದಿಗಳಲ್ಲಿ ಕ್ಯಾಟ್ ಕ್ಯೂ ವೈರಸ್ (CQV) ಕುರುಹುಗಳು ಕಂಡುಬಂದಿವೆ.

ಪುಣೆಯ ರಾಷ್ಟ್ರೀಯ ರೋಗ ಸೂಕ್ಷ್ಮಾಣು ಅಧ್ಯಯನ ಸಂಸ್ಥೆ ನಡೆಸಿದ ಸಂಶೋಧನೆಯಲ್ಲಿ ವಿವಿಧ ರಾಜ್ಯಗಳಲ್ಲಿ ನಡೆಸಲಾಗಿರುವ 883 ಜನರ ರಕ್ತದ ಮಾದರಿ ಪರೀಕ್ಷೆಯಲ್ಲಿ ಹಲವರಲ್ಲಿ ಕ್ಯಾಟ್ ಕ್ಯೂ ವೈರಸ್ ಇರುವುದು ದೃಢಪಟ್ಟಿದೆಯಂತೆ. ಈ ವೈರಸ್ ಕರ್ನಾಟಕದಲ್ಲಿ 2014 ಮತ್ತು 2017ರಲ್ಲಿ ಎರಡು ಪ್ರಕರಣಗಳು ಕಂಡುಬಂದಿದ್ದವು.

ಇದನ್ನೂ ಓದಿ: ಇನ್ಮುಂದೆ ಕೊರೊನಾ ಸೋಂಕಿತರಿಗೆ ಕ್ಷಯರೋಗ ಪರೀಕ್ಷೆ ಕಡ್ಡಾಯ

ಕ್ಯಾಟ್ ಕ್ಯೂ ವೈರಸ್ ಎಂದರೇನು..?

ಈ ಕ್ಯಾಟ್ ಕ್ಯೂ ವೈರಸ್ ಪ್ರಾಣಿಗಳಿಗೆ (ಸೊಳ್ಳೆಗಳು, ಹಂದಿಗಳು) ಮತ್ತು ಮನುಷ್ಯರಿಗೆ ಇಬ್ಬರಿಗೂ ಸೋಂಕು ತಗುಲುತ್ತದೆ. ವೈರಸ್‌ ಸೋಂಕಿನಿಂದ ಅಧಿಕ ಜ್ವರ, ಮೆನಿಂಜೈಟಿಸ್, ಮೆದುಳಿನ ಉರಿಯೂತದಂತಹ ಭಯಾನಕ ರೋಗಲಕ್ಷಣಗಳಿಗೆ ಕಾರಣವಾಗಬಹುದು. ವೈರಸ್ ಈಗಾಗಲೇ ಚೀನಾ ಮತ್ತು ವಿಯೆಟ್ನಾಂ ಜಿಲ್ಲೆಗಳ ಹಂದಿಗಳಲ್ಲಿ ವಾಡಿಕೆಯಂತೆ ಕಂಡುಬರುತ್ತದೆ ಎಂದು ಹೇಳಲಾಗುತ್ತದೆ.

ಈ ವೈರಸ್, ಆರ್ತ್ರೋಪಾಡ್ ವಾಹಕಗಳ ಮೂಲಕ ಹರಡುವ ವೈರಸ್, ಇದನ್ನು ಅರ್ಬೊವೈರಸ್ ಎಂದೂ ಕರೆಯುತ್ತಾರೆ. ತಜ್ಞರ ಪ್ರಕಾರ, 130 ಕ್ಕೂ ಹೆಚ್ಚು ವಿವಿಧ ರೀತಿಯ ಆರ್ಬೊವೈರಸ್‌ಗಳಿದ್ದು ಇವು ಮನುಷ್ಯರಲ್ಲಿ ಸೋಂಕು ಹಬ್ಬಿಸುತ್ತವೆ. ಈ ವೈರಸ್ ಲಕ್ಷಣಗಳು ಲಕ್ಷಣರಹಿತ, ಸಾಮಾನ್ಯ ಜ್ವರದ ಜೊತೆಗೆ ಅತಿಯಾದ ತೀವ್ರತೆಯನ್ನು ಹೊಂದಿರುತ್ತವೆ.

ಕ್ಯಾಟ್ ಕ್ಯೂ ವೈರಸ್ ಹೇಗೆ ಹರಡುತ್ತದೆ…?

ಸೋಂಕು ಸಾಮಾನ್ಯವಾಗಿ ಕೋಳಿ ಮತ್ತು ಸಸ್ತನಿಗಳಲ್ಲಿ ಹರಡಿದರೆ, ಸೊಳ್ಳೆಗಳು ಮತ್ತು ಕೀಟಗಳ ಮೂಲಕ  ಮೂಲಕ ಮನುಷ್ಯರಿಗೂ ಹರಡಬಹುದು. ಮನುಷ್ಯನಿಗೆ ಸೋಂಕಿತ ಸೊಳ್ಳೆ ಅಥವಾ ಕೀಟ ಕಚ್ಚಿದಾಗ ಸೋಂಕು ಹರಡಬಹುದು.

ಇದನ್ನೂ ಓದಿ: ಕೊರೊನಾ ಲಸಿಕೆಯ ಕ್ಲಿನಿಕಲ್ ಪ್ರಯೋಗದ ಪುನರಾರಂಭ: ಅನುಮತಿ ನೀಡಿದ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ

ಕಚ್ಚುವಿಕೆಯ ಹೊರತಾಗಿ, ರಕ್ತ ವರ್ಗಾವಣೆ, ಕಸಿ, ಲೈಂಗಿಕ ಸಂಪರ್ಕ, ಗರ್ಭಧಾರಣೆ ಮತ್ತು ಜನ್ಮ ನೀಡುವ ಸಂದರ್ಭಗಳಲ್ಲೂ ಆರ್ಬೊವೈರಸ್‌ಗಳು ಮನುಷ್ಯರ ಮೇಲೆ ಪರಿಣಾಮ ಬೀರಬಹುದು. ಮನುಷ್ಯರಿಗೆ ಹರಡುವ ಸಾಧ್ಯತೆ ಬಗ್ಗೆ ಐಸಿಎಂಆರ್ ಕಳವಳ ವ್ಯಕ್ತಪಡಿಸಿದೆ.

ಐಸಿಎಂಆರ್ ಪ್ರಕಾರ, ಭಾರತದಲ್ಲಿ, ಕೆಲವು ಸೊಳ್ಳೆ ತಳಿಗಳಾದ ಏಜಿಪ್ಟಿ, Cx quinquefasciatus ಮತ್ತು Cx Tritaeniorhynchus ಇವುಗಳಿಂದ ವೈರಸ್ ಹಬ್ಬುವ ಅಪಾಯ ಹೆಚ್ಚಾಗಿದೆ. ಈ ಅಧ್ಯಯನದ ಸಂಶೋಧನೆಗಳನ್ನು ಇಂಡಿಯನ್ ಜರ್ನಲ್ ಆಫ್ ಮೆಡಿಕಲ್ ರಿಸರ್ಚ್ (ಐಜೆಎಂಆರ್) ನ ಇತ್ತೀಚಿನ ಸಂಚಿಕೆಯಲ್ಲಿ ಪ್ರಕಟಿಸಲಾಗಿದೆ.

ಹಂದಿ, ಕಾಡು ಮೈನಾ ಹಕ್ಕಿ ಮತ್ತು ಸೊಳ್ಳೆಗಳಂತಹ ಜೀವಿಗಳಲ್ಲಿ ಕಂಡುಬರುವ ಸೋಂಕಿನ ಕುರುಹುಗಳು ಸಾರ್ವಜನಿಕ ಆರೋಗ್ಯ ಬಿಕ್ಕಟ್ಟಾಗಿ ಬದಲಾಗಬಹುದು. ಕೊರೊನಾ ವೈರಸ್ ಸಾಂಕ್ರಾಮಿಕ ರೋಗದಂತೆಯೇ ಇದು ಇರಬಹುದು ಎಂದು ವಿಜ್ಞಾನಿಗಳು ಸೂಚಿಸಿದ್ದಾರೆ.


ಇದನ್ನೂ ಓದಿ: ಕೊರೊನಾ ಲಸಿಕೆ ಮುಂದಿನ ವರ್ಷಕ್ಕೆ ಸಿದ್ಧವಾಗಬಹುದು: ಕೇಂದ್ರ ಸಚಿವ ಹರ್ಷವರ್ಧನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...