Homeಕರೋನಾ ತಲ್ಲಣಕ್ಯಾಟ್‌ ಕ್ಯೂ ವೈರಸ್: ಕೊರೊನಾದಂತೆಯೇ ಮತ್ತೊಂದು ಅಪಾಯಕಾರಿ ವೈರಸ್: ICMR ಆತಂಕ

ಕ್ಯಾಟ್‌ ಕ್ಯೂ ವೈರಸ್: ಕೊರೊನಾದಂತೆಯೇ ಮತ್ತೊಂದು ಅಪಾಯಕಾರಿ ವೈರಸ್: ICMR ಆತಂಕ

ಈ ಕ್ಯಾಟ್ ಕ್ಯೂ ವೈರಸ್ ಪ್ರಾಣಿಗಳಿಗೆ (ಸೊಳ್ಳೆಗಳು, ಹಂದಿಗಳು) ಮತ್ತು ಮನುಷ್ಯರಿಗೆ ಇಬ್ಬರಿಗೂ ಸೋಂಕು ತಗುಲುತ್ತದೆ. ವೈರಸ್‌ ಸೋಂಕಿನಿಂದ ಅಧಿಕ ಜ್ವರ, ಮೆನಿಂಜೈಟಿಸ್, ಮೆದುಳಿನ ಉರಿಯೂತದಂತಹ ಭಯಾನಕ ರೋಗಲಕ್ಷಣಗಳಿಗೆ ಕಾರಣವಾಗಬಹುದು.

- Advertisement -
- Advertisement -

ಭಾರತ ಕೊರೊನಾ ಸಾಂಕ್ರಾಮಿಕದಿಂದ ತತ್ತರಿಸುತ್ತಿದೆ. ಈ ನಡುವೆಯೇ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಮತ್ತೊಂದು ಆತಂಕ ಸೃಷ್ಟಿಸುವ ಮಾಹಿತಿ ನೀಡಿದೆ. ಕೊರೊನಾ ಜೊತೆಗೇ ನಾವು ಚೀನಾದ ಮತ್ತೊಂದು ವೈರಸ್ ವಿರುದ್ಧ ಹೋರಾಡಬೇಕಿದೆ. ಅದೇ ಕ್ಯಾಟ್ ಕ್ಯೂ ವೈರಸ್ (CQV).

ಈ ವೈರಸ್ ಅನ್ನು ಆರ್ಬೋವೈರಸ್ ಎಂದು ಕರೆಯಲಾಗುತ್ತದೆ. ಚೀನಾ ಮತ್ತು ವಿಯೆಟ್ನಾಂನ ಕೆಲವು ಭಾಗಗಳಲ್ಲಿ ಕೆಲ ಜಾತಿಯ ಸೊಳ್ಳೆಗಳು ಮತ್ತು ಹಂದಿಗಳಲ್ಲಿ ಕ್ಯಾಟ್ ಕ್ಯೂ ವೈರಸ್ (CQV) ಕುರುಹುಗಳು ಕಂಡುಬಂದಿವೆ.

ಪುಣೆಯ ರಾಷ್ಟ್ರೀಯ ರೋಗ ಸೂಕ್ಷ್ಮಾಣು ಅಧ್ಯಯನ ಸಂಸ್ಥೆ ನಡೆಸಿದ ಸಂಶೋಧನೆಯಲ್ಲಿ ವಿವಿಧ ರಾಜ್ಯಗಳಲ್ಲಿ ನಡೆಸಲಾಗಿರುವ 883 ಜನರ ರಕ್ತದ ಮಾದರಿ ಪರೀಕ್ಷೆಯಲ್ಲಿ ಹಲವರಲ್ಲಿ ಕ್ಯಾಟ್ ಕ್ಯೂ ವೈರಸ್ ಇರುವುದು ದೃಢಪಟ್ಟಿದೆಯಂತೆ. ಈ ವೈರಸ್ ಕರ್ನಾಟಕದಲ್ಲಿ 2014 ಮತ್ತು 2017ರಲ್ಲಿ ಎರಡು ಪ್ರಕರಣಗಳು ಕಂಡುಬಂದಿದ್ದವು.

ಇದನ್ನೂ ಓದಿ: ಇನ್ಮುಂದೆ ಕೊರೊನಾ ಸೋಂಕಿತರಿಗೆ ಕ್ಷಯರೋಗ ಪರೀಕ್ಷೆ ಕಡ್ಡಾಯ

ಕ್ಯಾಟ್ ಕ್ಯೂ ವೈರಸ್ ಎಂದರೇನು..?

ಈ ಕ್ಯಾಟ್ ಕ್ಯೂ ವೈರಸ್ ಪ್ರಾಣಿಗಳಿಗೆ (ಸೊಳ್ಳೆಗಳು, ಹಂದಿಗಳು) ಮತ್ತು ಮನುಷ್ಯರಿಗೆ ಇಬ್ಬರಿಗೂ ಸೋಂಕು ತಗುಲುತ್ತದೆ. ವೈರಸ್‌ ಸೋಂಕಿನಿಂದ ಅಧಿಕ ಜ್ವರ, ಮೆನಿಂಜೈಟಿಸ್, ಮೆದುಳಿನ ಉರಿಯೂತದಂತಹ ಭಯಾನಕ ರೋಗಲಕ್ಷಣಗಳಿಗೆ ಕಾರಣವಾಗಬಹುದು. ವೈರಸ್ ಈಗಾಗಲೇ ಚೀನಾ ಮತ್ತು ವಿಯೆಟ್ನಾಂ ಜಿಲ್ಲೆಗಳ ಹಂದಿಗಳಲ್ಲಿ ವಾಡಿಕೆಯಂತೆ ಕಂಡುಬರುತ್ತದೆ ಎಂದು ಹೇಳಲಾಗುತ್ತದೆ.

ಈ ವೈರಸ್, ಆರ್ತ್ರೋಪಾಡ್ ವಾಹಕಗಳ ಮೂಲಕ ಹರಡುವ ವೈರಸ್, ಇದನ್ನು ಅರ್ಬೊವೈರಸ್ ಎಂದೂ ಕರೆಯುತ್ತಾರೆ. ತಜ್ಞರ ಪ್ರಕಾರ, 130 ಕ್ಕೂ ಹೆಚ್ಚು ವಿವಿಧ ರೀತಿಯ ಆರ್ಬೊವೈರಸ್‌ಗಳಿದ್ದು ಇವು ಮನುಷ್ಯರಲ್ಲಿ ಸೋಂಕು ಹಬ್ಬಿಸುತ್ತವೆ. ಈ ವೈರಸ್ ಲಕ್ಷಣಗಳು ಲಕ್ಷಣರಹಿತ, ಸಾಮಾನ್ಯ ಜ್ವರದ ಜೊತೆಗೆ ಅತಿಯಾದ ತೀವ್ರತೆಯನ್ನು ಹೊಂದಿರುತ್ತವೆ.

ಕ್ಯಾಟ್ ಕ್ಯೂ ವೈರಸ್ ಹೇಗೆ ಹರಡುತ್ತದೆ…?

ಸೋಂಕು ಸಾಮಾನ್ಯವಾಗಿ ಕೋಳಿ ಮತ್ತು ಸಸ್ತನಿಗಳಲ್ಲಿ ಹರಡಿದರೆ, ಸೊಳ್ಳೆಗಳು ಮತ್ತು ಕೀಟಗಳ ಮೂಲಕ  ಮೂಲಕ ಮನುಷ್ಯರಿಗೂ ಹರಡಬಹುದು. ಮನುಷ್ಯನಿಗೆ ಸೋಂಕಿತ ಸೊಳ್ಳೆ ಅಥವಾ ಕೀಟ ಕಚ್ಚಿದಾಗ ಸೋಂಕು ಹರಡಬಹುದು.

ಇದನ್ನೂ ಓದಿ: ಕೊರೊನಾ ಲಸಿಕೆಯ ಕ್ಲಿನಿಕಲ್ ಪ್ರಯೋಗದ ಪುನರಾರಂಭ: ಅನುಮತಿ ನೀಡಿದ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ

ಕಚ್ಚುವಿಕೆಯ ಹೊರತಾಗಿ, ರಕ್ತ ವರ್ಗಾವಣೆ, ಕಸಿ, ಲೈಂಗಿಕ ಸಂಪರ್ಕ, ಗರ್ಭಧಾರಣೆ ಮತ್ತು ಜನ್ಮ ನೀಡುವ ಸಂದರ್ಭಗಳಲ್ಲೂ ಆರ್ಬೊವೈರಸ್‌ಗಳು ಮನುಷ್ಯರ ಮೇಲೆ ಪರಿಣಾಮ ಬೀರಬಹುದು. ಮನುಷ್ಯರಿಗೆ ಹರಡುವ ಸಾಧ್ಯತೆ ಬಗ್ಗೆ ಐಸಿಎಂಆರ್ ಕಳವಳ ವ್ಯಕ್ತಪಡಿಸಿದೆ.

ಐಸಿಎಂಆರ್ ಪ್ರಕಾರ, ಭಾರತದಲ್ಲಿ, ಕೆಲವು ಸೊಳ್ಳೆ ತಳಿಗಳಾದ ಏಜಿಪ್ಟಿ, Cx quinquefasciatus ಮತ್ತು Cx Tritaeniorhynchus ಇವುಗಳಿಂದ ವೈರಸ್ ಹಬ್ಬುವ ಅಪಾಯ ಹೆಚ್ಚಾಗಿದೆ. ಈ ಅಧ್ಯಯನದ ಸಂಶೋಧನೆಗಳನ್ನು ಇಂಡಿಯನ್ ಜರ್ನಲ್ ಆಫ್ ಮೆಡಿಕಲ್ ರಿಸರ್ಚ್ (ಐಜೆಎಂಆರ್) ನ ಇತ್ತೀಚಿನ ಸಂಚಿಕೆಯಲ್ಲಿ ಪ್ರಕಟಿಸಲಾಗಿದೆ.

ಹಂದಿ, ಕಾಡು ಮೈನಾ ಹಕ್ಕಿ ಮತ್ತು ಸೊಳ್ಳೆಗಳಂತಹ ಜೀವಿಗಳಲ್ಲಿ ಕಂಡುಬರುವ ಸೋಂಕಿನ ಕುರುಹುಗಳು ಸಾರ್ವಜನಿಕ ಆರೋಗ್ಯ ಬಿಕ್ಕಟ್ಟಾಗಿ ಬದಲಾಗಬಹುದು. ಕೊರೊನಾ ವೈರಸ್ ಸಾಂಕ್ರಾಮಿಕ ರೋಗದಂತೆಯೇ ಇದು ಇರಬಹುದು ಎಂದು ವಿಜ್ಞಾನಿಗಳು ಸೂಚಿಸಿದ್ದಾರೆ.


ಇದನ್ನೂ ಓದಿ: ಕೊರೊನಾ ಲಸಿಕೆ ಮುಂದಿನ ವರ್ಷಕ್ಕೆ ಸಿದ್ಧವಾಗಬಹುದು: ಕೇಂದ್ರ ಸಚಿವ ಹರ್ಷವರ್ಧನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...