Homeಕರೋನಾ ತಲ್ಲಣಕ್ಯಾಟ್‌ ಕ್ಯೂ ವೈರಸ್: ಕೊರೊನಾದಂತೆಯೇ ಮತ್ತೊಂದು ಅಪಾಯಕಾರಿ ವೈರಸ್: ICMR ಆತಂಕ

ಕ್ಯಾಟ್‌ ಕ್ಯೂ ವೈರಸ್: ಕೊರೊನಾದಂತೆಯೇ ಮತ್ತೊಂದು ಅಪಾಯಕಾರಿ ವೈರಸ್: ICMR ಆತಂಕ

ಈ ಕ್ಯಾಟ್ ಕ್ಯೂ ವೈರಸ್ ಪ್ರಾಣಿಗಳಿಗೆ (ಸೊಳ್ಳೆಗಳು, ಹಂದಿಗಳು) ಮತ್ತು ಮನುಷ್ಯರಿಗೆ ಇಬ್ಬರಿಗೂ ಸೋಂಕು ತಗುಲುತ್ತದೆ. ವೈರಸ್‌ ಸೋಂಕಿನಿಂದ ಅಧಿಕ ಜ್ವರ, ಮೆನಿಂಜೈಟಿಸ್, ಮೆದುಳಿನ ಉರಿಯೂತದಂತಹ ಭಯಾನಕ ರೋಗಲಕ್ಷಣಗಳಿಗೆ ಕಾರಣವಾಗಬಹುದು.

- Advertisement -
- Advertisement -

ಭಾರತ ಕೊರೊನಾ ಸಾಂಕ್ರಾಮಿಕದಿಂದ ತತ್ತರಿಸುತ್ತಿದೆ. ಈ ನಡುವೆಯೇ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಮತ್ತೊಂದು ಆತಂಕ ಸೃಷ್ಟಿಸುವ ಮಾಹಿತಿ ನೀಡಿದೆ. ಕೊರೊನಾ ಜೊತೆಗೇ ನಾವು ಚೀನಾದ ಮತ್ತೊಂದು ವೈರಸ್ ವಿರುದ್ಧ ಹೋರಾಡಬೇಕಿದೆ. ಅದೇ ಕ್ಯಾಟ್ ಕ್ಯೂ ವೈರಸ್ (CQV).

ಈ ವೈರಸ್ ಅನ್ನು ಆರ್ಬೋವೈರಸ್ ಎಂದು ಕರೆಯಲಾಗುತ್ತದೆ. ಚೀನಾ ಮತ್ತು ವಿಯೆಟ್ನಾಂನ ಕೆಲವು ಭಾಗಗಳಲ್ಲಿ ಕೆಲ ಜಾತಿಯ ಸೊಳ್ಳೆಗಳು ಮತ್ತು ಹಂದಿಗಳಲ್ಲಿ ಕ್ಯಾಟ್ ಕ್ಯೂ ವೈರಸ್ (CQV) ಕುರುಹುಗಳು ಕಂಡುಬಂದಿವೆ.

ಪುಣೆಯ ರಾಷ್ಟ್ರೀಯ ರೋಗ ಸೂಕ್ಷ್ಮಾಣು ಅಧ್ಯಯನ ಸಂಸ್ಥೆ ನಡೆಸಿದ ಸಂಶೋಧನೆಯಲ್ಲಿ ವಿವಿಧ ರಾಜ್ಯಗಳಲ್ಲಿ ನಡೆಸಲಾಗಿರುವ 883 ಜನರ ರಕ್ತದ ಮಾದರಿ ಪರೀಕ್ಷೆಯಲ್ಲಿ ಹಲವರಲ್ಲಿ ಕ್ಯಾಟ್ ಕ್ಯೂ ವೈರಸ್ ಇರುವುದು ದೃಢಪಟ್ಟಿದೆಯಂತೆ. ಈ ವೈರಸ್ ಕರ್ನಾಟಕದಲ್ಲಿ 2014 ಮತ್ತು 2017ರಲ್ಲಿ ಎರಡು ಪ್ರಕರಣಗಳು ಕಂಡುಬಂದಿದ್ದವು.

ಇದನ್ನೂ ಓದಿ: ಇನ್ಮುಂದೆ ಕೊರೊನಾ ಸೋಂಕಿತರಿಗೆ ಕ್ಷಯರೋಗ ಪರೀಕ್ಷೆ ಕಡ್ಡಾಯ

ಕ್ಯಾಟ್ ಕ್ಯೂ ವೈರಸ್ ಎಂದರೇನು..?

ಈ ಕ್ಯಾಟ್ ಕ್ಯೂ ವೈರಸ್ ಪ್ರಾಣಿಗಳಿಗೆ (ಸೊಳ್ಳೆಗಳು, ಹಂದಿಗಳು) ಮತ್ತು ಮನುಷ್ಯರಿಗೆ ಇಬ್ಬರಿಗೂ ಸೋಂಕು ತಗುಲುತ್ತದೆ. ವೈರಸ್‌ ಸೋಂಕಿನಿಂದ ಅಧಿಕ ಜ್ವರ, ಮೆನಿಂಜೈಟಿಸ್, ಮೆದುಳಿನ ಉರಿಯೂತದಂತಹ ಭಯಾನಕ ರೋಗಲಕ್ಷಣಗಳಿಗೆ ಕಾರಣವಾಗಬಹುದು. ವೈರಸ್ ಈಗಾಗಲೇ ಚೀನಾ ಮತ್ತು ವಿಯೆಟ್ನಾಂ ಜಿಲ್ಲೆಗಳ ಹಂದಿಗಳಲ್ಲಿ ವಾಡಿಕೆಯಂತೆ ಕಂಡುಬರುತ್ತದೆ ಎಂದು ಹೇಳಲಾಗುತ್ತದೆ.

ಈ ವೈರಸ್, ಆರ್ತ್ರೋಪಾಡ್ ವಾಹಕಗಳ ಮೂಲಕ ಹರಡುವ ವೈರಸ್, ಇದನ್ನು ಅರ್ಬೊವೈರಸ್ ಎಂದೂ ಕರೆಯುತ್ತಾರೆ. ತಜ್ಞರ ಪ್ರಕಾರ, 130 ಕ್ಕೂ ಹೆಚ್ಚು ವಿವಿಧ ರೀತಿಯ ಆರ್ಬೊವೈರಸ್‌ಗಳಿದ್ದು ಇವು ಮನುಷ್ಯರಲ್ಲಿ ಸೋಂಕು ಹಬ್ಬಿಸುತ್ತವೆ. ಈ ವೈರಸ್ ಲಕ್ಷಣಗಳು ಲಕ್ಷಣರಹಿತ, ಸಾಮಾನ್ಯ ಜ್ವರದ ಜೊತೆಗೆ ಅತಿಯಾದ ತೀವ್ರತೆಯನ್ನು ಹೊಂದಿರುತ್ತವೆ.

ಕ್ಯಾಟ್ ಕ್ಯೂ ವೈರಸ್ ಹೇಗೆ ಹರಡುತ್ತದೆ…?

ಸೋಂಕು ಸಾಮಾನ್ಯವಾಗಿ ಕೋಳಿ ಮತ್ತು ಸಸ್ತನಿಗಳಲ್ಲಿ ಹರಡಿದರೆ, ಸೊಳ್ಳೆಗಳು ಮತ್ತು ಕೀಟಗಳ ಮೂಲಕ  ಮೂಲಕ ಮನುಷ್ಯರಿಗೂ ಹರಡಬಹುದು. ಮನುಷ್ಯನಿಗೆ ಸೋಂಕಿತ ಸೊಳ್ಳೆ ಅಥವಾ ಕೀಟ ಕಚ್ಚಿದಾಗ ಸೋಂಕು ಹರಡಬಹುದು.

ಇದನ್ನೂ ಓದಿ: ಕೊರೊನಾ ಲಸಿಕೆಯ ಕ್ಲಿನಿಕಲ್ ಪ್ರಯೋಗದ ಪುನರಾರಂಭ: ಅನುಮತಿ ನೀಡಿದ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ

ಕಚ್ಚುವಿಕೆಯ ಹೊರತಾಗಿ, ರಕ್ತ ವರ್ಗಾವಣೆ, ಕಸಿ, ಲೈಂಗಿಕ ಸಂಪರ್ಕ, ಗರ್ಭಧಾರಣೆ ಮತ್ತು ಜನ್ಮ ನೀಡುವ ಸಂದರ್ಭಗಳಲ್ಲೂ ಆರ್ಬೊವೈರಸ್‌ಗಳು ಮನುಷ್ಯರ ಮೇಲೆ ಪರಿಣಾಮ ಬೀರಬಹುದು. ಮನುಷ್ಯರಿಗೆ ಹರಡುವ ಸಾಧ್ಯತೆ ಬಗ್ಗೆ ಐಸಿಎಂಆರ್ ಕಳವಳ ವ್ಯಕ್ತಪಡಿಸಿದೆ.

ಐಸಿಎಂಆರ್ ಪ್ರಕಾರ, ಭಾರತದಲ್ಲಿ, ಕೆಲವು ಸೊಳ್ಳೆ ತಳಿಗಳಾದ ಏಜಿಪ್ಟಿ, Cx quinquefasciatus ಮತ್ತು Cx Tritaeniorhynchus ಇವುಗಳಿಂದ ವೈರಸ್ ಹಬ್ಬುವ ಅಪಾಯ ಹೆಚ್ಚಾಗಿದೆ. ಈ ಅಧ್ಯಯನದ ಸಂಶೋಧನೆಗಳನ್ನು ಇಂಡಿಯನ್ ಜರ್ನಲ್ ಆಫ್ ಮೆಡಿಕಲ್ ರಿಸರ್ಚ್ (ಐಜೆಎಂಆರ್) ನ ಇತ್ತೀಚಿನ ಸಂಚಿಕೆಯಲ್ಲಿ ಪ್ರಕಟಿಸಲಾಗಿದೆ.

ಹಂದಿ, ಕಾಡು ಮೈನಾ ಹಕ್ಕಿ ಮತ್ತು ಸೊಳ್ಳೆಗಳಂತಹ ಜೀವಿಗಳಲ್ಲಿ ಕಂಡುಬರುವ ಸೋಂಕಿನ ಕುರುಹುಗಳು ಸಾರ್ವಜನಿಕ ಆರೋಗ್ಯ ಬಿಕ್ಕಟ್ಟಾಗಿ ಬದಲಾಗಬಹುದು. ಕೊರೊನಾ ವೈರಸ್ ಸಾಂಕ್ರಾಮಿಕ ರೋಗದಂತೆಯೇ ಇದು ಇರಬಹುದು ಎಂದು ವಿಜ್ಞಾನಿಗಳು ಸೂಚಿಸಿದ್ದಾರೆ.


ಇದನ್ನೂ ಓದಿ: ಕೊರೊನಾ ಲಸಿಕೆ ಮುಂದಿನ ವರ್ಷಕ್ಕೆ ಸಿದ್ಧವಾಗಬಹುದು: ಕೇಂದ್ರ ಸಚಿವ ಹರ್ಷವರ್ಧನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...