Homeಕರೋನಾ ತಲ್ಲಣಕ್ಯಾಟ್‌ ಕ್ಯೂ ವೈರಸ್: ಕೊರೊನಾದಂತೆಯೇ ಮತ್ತೊಂದು ಅಪಾಯಕಾರಿ ವೈರಸ್: ICMR ಆತಂಕ

ಕ್ಯಾಟ್‌ ಕ್ಯೂ ವೈರಸ್: ಕೊರೊನಾದಂತೆಯೇ ಮತ್ತೊಂದು ಅಪಾಯಕಾರಿ ವೈರಸ್: ICMR ಆತಂಕ

ಈ ಕ್ಯಾಟ್ ಕ್ಯೂ ವೈರಸ್ ಪ್ರಾಣಿಗಳಿಗೆ (ಸೊಳ್ಳೆಗಳು, ಹಂದಿಗಳು) ಮತ್ತು ಮನುಷ್ಯರಿಗೆ ಇಬ್ಬರಿಗೂ ಸೋಂಕು ತಗುಲುತ್ತದೆ. ವೈರಸ್‌ ಸೋಂಕಿನಿಂದ ಅಧಿಕ ಜ್ವರ, ಮೆನಿಂಜೈಟಿಸ್, ಮೆದುಳಿನ ಉರಿಯೂತದಂತಹ ಭಯಾನಕ ರೋಗಲಕ್ಷಣಗಳಿಗೆ ಕಾರಣವಾಗಬಹುದು.

- Advertisement -
- Advertisement -

ಭಾರತ ಕೊರೊನಾ ಸಾಂಕ್ರಾಮಿಕದಿಂದ ತತ್ತರಿಸುತ್ತಿದೆ. ಈ ನಡುವೆಯೇ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಮತ್ತೊಂದು ಆತಂಕ ಸೃಷ್ಟಿಸುವ ಮಾಹಿತಿ ನೀಡಿದೆ. ಕೊರೊನಾ ಜೊತೆಗೇ ನಾವು ಚೀನಾದ ಮತ್ತೊಂದು ವೈರಸ್ ವಿರುದ್ಧ ಹೋರಾಡಬೇಕಿದೆ. ಅದೇ ಕ್ಯಾಟ್ ಕ್ಯೂ ವೈರಸ್ (CQV).

ಈ ವೈರಸ್ ಅನ್ನು ಆರ್ಬೋವೈರಸ್ ಎಂದು ಕರೆಯಲಾಗುತ್ತದೆ. ಚೀನಾ ಮತ್ತು ವಿಯೆಟ್ನಾಂನ ಕೆಲವು ಭಾಗಗಳಲ್ಲಿ ಕೆಲ ಜಾತಿಯ ಸೊಳ್ಳೆಗಳು ಮತ್ತು ಹಂದಿಗಳಲ್ಲಿ ಕ್ಯಾಟ್ ಕ್ಯೂ ವೈರಸ್ (CQV) ಕುರುಹುಗಳು ಕಂಡುಬಂದಿವೆ.

ಪುಣೆಯ ರಾಷ್ಟ್ರೀಯ ರೋಗ ಸೂಕ್ಷ್ಮಾಣು ಅಧ್ಯಯನ ಸಂಸ್ಥೆ ನಡೆಸಿದ ಸಂಶೋಧನೆಯಲ್ಲಿ ವಿವಿಧ ರಾಜ್ಯಗಳಲ್ಲಿ ನಡೆಸಲಾಗಿರುವ 883 ಜನರ ರಕ್ತದ ಮಾದರಿ ಪರೀಕ್ಷೆಯಲ್ಲಿ ಹಲವರಲ್ಲಿ ಕ್ಯಾಟ್ ಕ್ಯೂ ವೈರಸ್ ಇರುವುದು ದೃಢಪಟ್ಟಿದೆಯಂತೆ. ಈ ವೈರಸ್ ಕರ್ನಾಟಕದಲ್ಲಿ 2014 ಮತ್ತು 2017ರಲ್ಲಿ ಎರಡು ಪ್ರಕರಣಗಳು ಕಂಡುಬಂದಿದ್ದವು.

ಇದನ್ನೂ ಓದಿ: ಇನ್ಮುಂದೆ ಕೊರೊನಾ ಸೋಂಕಿತರಿಗೆ ಕ್ಷಯರೋಗ ಪರೀಕ್ಷೆ ಕಡ್ಡಾಯ

ಕ್ಯಾಟ್ ಕ್ಯೂ ವೈರಸ್ ಎಂದರೇನು..?

ಈ ಕ್ಯಾಟ್ ಕ್ಯೂ ವೈರಸ್ ಪ್ರಾಣಿಗಳಿಗೆ (ಸೊಳ್ಳೆಗಳು, ಹಂದಿಗಳು) ಮತ್ತು ಮನುಷ್ಯರಿಗೆ ಇಬ್ಬರಿಗೂ ಸೋಂಕು ತಗುಲುತ್ತದೆ. ವೈರಸ್‌ ಸೋಂಕಿನಿಂದ ಅಧಿಕ ಜ್ವರ, ಮೆನಿಂಜೈಟಿಸ್, ಮೆದುಳಿನ ಉರಿಯೂತದಂತಹ ಭಯಾನಕ ರೋಗಲಕ್ಷಣಗಳಿಗೆ ಕಾರಣವಾಗಬಹುದು. ವೈರಸ್ ಈಗಾಗಲೇ ಚೀನಾ ಮತ್ತು ವಿಯೆಟ್ನಾಂ ಜಿಲ್ಲೆಗಳ ಹಂದಿಗಳಲ್ಲಿ ವಾಡಿಕೆಯಂತೆ ಕಂಡುಬರುತ್ತದೆ ಎಂದು ಹೇಳಲಾಗುತ್ತದೆ.

ಈ ವೈರಸ್, ಆರ್ತ್ರೋಪಾಡ್ ವಾಹಕಗಳ ಮೂಲಕ ಹರಡುವ ವೈರಸ್, ಇದನ್ನು ಅರ್ಬೊವೈರಸ್ ಎಂದೂ ಕರೆಯುತ್ತಾರೆ. ತಜ್ಞರ ಪ್ರಕಾರ, 130 ಕ್ಕೂ ಹೆಚ್ಚು ವಿವಿಧ ರೀತಿಯ ಆರ್ಬೊವೈರಸ್‌ಗಳಿದ್ದು ಇವು ಮನುಷ್ಯರಲ್ಲಿ ಸೋಂಕು ಹಬ್ಬಿಸುತ್ತವೆ. ಈ ವೈರಸ್ ಲಕ್ಷಣಗಳು ಲಕ್ಷಣರಹಿತ, ಸಾಮಾನ್ಯ ಜ್ವರದ ಜೊತೆಗೆ ಅತಿಯಾದ ತೀವ್ರತೆಯನ್ನು ಹೊಂದಿರುತ್ತವೆ.

ಕ್ಯಾಟ್ ಕ್ಯೂ ವೈರಸ್ ಹೇಗೆ ಹರಡುತ್ತದೆ…?

ಸೋಂಕು ಸಾಮಾನ್ಯವಾಗಿ ಕೋಳಿ ಮತ್ತು ಸಸ್ತನಿಗಳಲ್ಲಿ ಹರಡಿದರೆ, ಸೊಳ್ಳೆಗಳು ಮತ್ತು ಕೀಟಗಳ ಮೂಲಕ  ಮೂಲಕ ಮನುಷ್ಯರಿಗೂ ಹರಡಬಹುದು. ಮನುಷ್ಯನಿಗೆ ಸೋಂಕಿತ ಸೊಳ್ಳೆ ಅಥವಾ ಕೀಟ ಕಚ್ಚಿದಾಗ ಸೋಂಕು ಹರಡಬಹುದು.

ಇದನ್ನೂ ಓದಿ: ಕೊರೊನಾ ಲಸಿಕೆಯ ಕ್ಲಿನಿಕಲ್ ಪ್ರಯೋಗದ ಪುನರಾರಂಭ: ಅನುಮತಿ ನೀಡಿದ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ

ಕಚ್ಚುವಿಕೆಯ ಹೊರತಾಗಿ, ರಕ್ತ ವರ್ಗಾವಣೆ, ಕಸಿ, ಲೈಂಗಿಕ ಸಂಪರ್ಕ, ಗರ್ಭಧಾರಣೆ ಮತ್ತು ಜನ್ಮ ನೀಡುವ ಸಂದರ್ಭಗಳಲ್ಲೂ ಆರ್ಬೊವೈರಸ್‌ಗಳು ಮನುಷ್ಯರ ಮೇಲೆ ಪರಿಣಾಮ ಬೀರಬಹುದು. ಮನುಷ್ಯರಿಗೆ ಹರಡುವ ಸಾಧ್ಯತೆ ಬಗ್ಗೆ ಐಸಿಎಂಆರ್ ಕಳವಳ ವ್ಯಕ್ತಪಡಿಸಿದೆ.

ಐಸಿಎಂಆರ್ ಪ್ರಕಾರ, ಭಾರತದಲ್ಲಿ, ಕೆಲವು ಸೊಳ್ಳೆ ತಳಿಗಳಾದ ಏಜಿಪ್ಟಿ, Cx quinquefasciatus ಮತ್ತು Cx Tritaeniorhynchus ಇವುಗಳಿಂದ ವೈರಸ್ ಹಬ್ಬುವ ಅಪಾಯ ಹೆಚ್ಚಾಗಿದೆ. ಈ ಅಧ್ಯಯನದ ಸಂಶೋಧನೆಗಳನ್ನು ಇಂಡಿಯನ್ ಜರ್ನಲ್ ಆಫ್ ಮೆಡಿಕಲ್ ರಿಸರ್ಚ್ (ಐಜೆಎಂಆರ್) ನ ಇತ್ತೀಚಿನ ಸಂಚಿಕೆಯಲ್ಲಿ ಪ್ರಕಟಿಸಲಾಗಿದೆ.

ಹಂದಿ, ಕಾಡು ಮೈನಾ ಹಕ್ಕಿ ಮತ್ತು ಸೊಳ್ಳೆಗಳಂತಹ ಜೀವಿಗಳಲ್ಲಿ ಕಂಡುಬರುವ ಸೋಂಕಿನ ಕುರುಹುಗಳು ಸಾರ್ವಜನಿಕ ಆರೋಗ್ಯ ಬಿಕ್ಕಟ್ಟಾಗಿ ಬದಲಾಗಬಹುದು. ಕೊರೊನಾ ವೈರಸ್ ಸಾಂಕ್ರಾಮಿಕ ರೋಗದಂತೆಯೇ ಇದು ಇರಬಹುದು ಎಂದು ವಿಜ್ಞಾನಿಗಳು ಸೂಚಿಸಿದ್ದಾರೆ.


ಇದನ್ನೂ ಓದಿ: ಕೊರೊನಾ ಲಸಿಕೆ ಮುಂದಿನ ವರ್ಷಕ್ಕೆ ಸಿದ್ಧವಾಗಬಹುದು: ಕೇಂದ್ರ ಸಚಿವ ಹರ್ಷವರ್ಧನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...