Homeಕರೋನಾ ತಲ್ಲಣಕ್ಯಾಟ್‌ ಕ್ಯೂ ವೈರಸ್: ಕೊರೊನಾದಂತೆಯೇ ಮತ್ತೊಂದು ಅಪಾಯಕಾರಿ ವೈರಸ್: ICMR ಆತಂಕ

ಕ್ಯಾಟ್‌ ಕ್ಯೂ ವೈರಸ್: ಕೊರೊನಾದಂತೆಯೇ ಮತ್ತೊಂದು ಅಪಾಯಕಾರಿ ವೈರಸ್: ICMR ಆತಂಕ

ಈ ಕ್ಯಾಟ್ ಕ್ಯೂ ವೈರಸ್ ಪ್ರಾಣಿಗಳಿಗೆ (ಸೊಳ್ಳೆಗಳು, ಹಂದಿಗಳು) ಮತ್ತು ಮನುಷ್ಯರಿಗೆ ಇಬ್ಬರಿಗೂ ಸೋಂಕು ತಗುಲುತ್ತದೆ. ವೈರಸ್‌ ಸೋಂಕಿನಿಂದ ಅಧಿಕ ಜ್ವರ, ಮೆನಿಂಜೈಟಿಸ್, ಮೆದುಳಿನ ಉರಿಯೂತದಂತಹ ಭಯಾನಕ ರೋಗಲಕ್ಷಣಗಳಿಗೆ ಕಾರಣವಾಗಬಹುದು.

- Advertisement -
- Advertisement -

ಭಾರತ ಕೊರೊನಾ ಸಾಂಕ್ರಾಮಿಕದಿಂದ ತತ್ತರಿಸುತ್ತಿದೆ. ಈ ನಡುವೆಯೇ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಮತ್ತೊಂದು ಆತಂಕ ಸೃಷ್ಟಿಸುವ ಮಾಹಿತಿ ನೀಡಿದೆ. ಕೊರೊನಾ ಜೊತೆಗೇ ನಾವು ಚೀನಾದ ಮತ್ತೊಂದು ವೈರಸ್ ವಿರುದ್ಧ ಹೋರಾಡಬೇಕಿದೆ. ಅದೇ ಕ್ಯಾಟ್ ಕ್ಯೂ ವೈರಸ್ (CQV).

ಈ ವೈರಸ್ ಅನ್ನು ಆರ್ಬೋವೈರಸ್ ಎಂದು ಕರೆಯಲಾಗುತ್ತದೆ. ಚೀನಾ ಮತ್ತು ವಿಯೆಟ್ನಾಂನ ಕೆಲವು ಭಾಗಗಳಲ್ಲಿ ಕೆಲ ಜಾತಿಯ ಸೊಳ್ಳೆಗಳು ಮತ್ತು ಹಂದಿಗಳಲ್ಲಿ ಕ್ಯಾಟ್ ಕ್ಯೂ ವೈರಸ್ (CQV) ಕುರುಹುಗಳು ಕಂಡುಬಂದಿವೆ.

ಪುಣೆಯ ರಾಷ್ಟ್ರೀಯ ರೋಗ ಸೂಕ್ಷ್ಮಾಣು ಅಧ್ಯಯನ ಸಂಸ್ಥೆ ನಡೆಸಿದ ಸಂಶೋಧನೆಯಲ್ಲಿ ವಿವಿಧ ರಾಜ್ಯಗಳಲ್ಲಿ ನಡೆಸಲಾಗಿರುವ 883 ಜನರ ರಕ್ತದ ಮಾದರಿ ಪರೀಕ್ಷೆಯಲ್ಲಿ ಹಲವರಲ್ಲಿ ಕ್ಯಾಟ್ ಕ್ಯೂ ವೈರಸ್ ಇರುವುದು ದೃಢಪಟ್ಟಿದೆಯಂತೆ. ಈ ವೈರಸ್ ಕರ್ನಾಟಕದಲ್ಲಿ 2014 ಮತ್ತು 2017ರಲ್ಲಿ ಎರಡು ಪ್ರಕರಣಗಳು ಕಂಡುಬಂದಿದ್ದವು.

ಇದನ್ನೂ ಓದಿ: ಇನ್ಮುಂದೆ ಕೊರೊನಾ ಸೋಂಕಿತರಿಗೆ ಕ್ಷಯರೋಗ ಪರೀಕ್ಷೆ ಕಡ್ಡಾಯ

ಕ್ಯಾಟ್ ಕ್ಯೂ ವೈರಸ್ ಎಂದರೇನು..?

ಈ ಕ್ಯಾಟ್ ಕ್ಯೂ ವೈರಸ್ ಪ್ರಾಣಿಗಳಿಗೆ (ಸೊಳ್ಳೆಗಳು, ಹಂದಿಗಳು) ಮತ್ತು ಮನುಷ್ಯರಿಗೆ ಇಬ್ಬರಿಗೂ ಸೋಂಕು ತಗುಲುತ್ತದೆ. ವೈರಸ್‌ ಸೋಂಕಿನಿಂದ ಅಧಿಕ ಜ್ವರ, ಮೆನಿಂಜೈಟಿಸ್, ಮೆದುಳಿನ ಉರಿಯೂತದಂತಹ ಭಯಾನಕ ರೋಗಲಕ್ಷಣಗಳಿಗೆ ಕಾರಣವಾಗಬಹುದು. ವೈರಸ್ ಈಗಾಗಲೇ ಚೀನಾ ಮತ್ತು ವಿಯೆಟ್ನಾಂ ಜಿಲ್ಲೆಗಳ ಹಂದಿಗಳಲ್ಲಿ ವಾಡಿಕೆಯಂತೆ ಕಂಡುಬರುತ್ತದೆ ಎಂದು ಹೇಳಲಾಗುತ್ತದೆ.

ಈ ವೈರಸ್, ಆರ್ತ್ರೋಪಾಡ್ ವಾಹಕಗಳ ಮೂಲಕ ಹರಡುವ ವೈರಸ್, ಇದನ್ನು ಅರ್ಬೊವೈರಸ್ ಎಂದೂ ಕರೆಯುತ್ತಾರೆ. ತಜ್ಞರ ಪ್ರಕಾರ, 130 ಕ್ಕೂ ಹೆಚ್ಚು ವಿವಿಧ ರೀತಿಯ ಆರ್ಬೊವೈರಸ್‌ಗಳಿದ್ದು ಇವು ಮನುಷ್ಯರಲ್ಲಿ ಸೋಂಕು ಹಬ್ಬಿಸುತ್ತವೆ. ಈ ವೈರಸ್ ಲಕ್ಷಣಗಳು ಲಕ್ಷಣರಹಿತ, ಸಾಮಾನ್ಯ ಜ್ವರದ ಜೊತೆಗೆ ಅತಿಯಾದ ತೀವ್ರತೆಯನ್ನು ಹೊಂದಿರುತ್ತವೆ.

ಕ್ಯಾಟ್ ಕ್ಯೂ ವೈರಸ್ ಹೇಗೆ ಹರಡುತ್ತದೆ…?

ಸೋಂಕು ಸಾಮಾನ್ಯವಾಗಿ ಕೋಳಿ ಮತ್ತು ಸಸ್ತನಿಗಳಲ್ಲಿ ಹರಡಿದರೆ, ಸೊಳ್ಳೆಗಳು ಮತ್ತು ಕೀಟಗಳ ಮೂಲಕ  ಮೂಲಕ ಮನುಷ್ಯರಿಗೂ ಹರಡಬಹುದು. ಮನುಷ್ಯನಿಗೆ ಸೋಂಕಿತ ಸೊಳ್ಳೆ ಅಥವಾ ಕೀಟ ಕಚ್ಚಿದಾಗ ಸೋಂಕು ಹರಡಬಹುದು.

ಇದನ್ನೂ ಓದಿ: ಕೊರೊನಾ ಲಸಿಕೆಯ ಕ್ಲಿನಿಕಲ್ ಪ್ರಯೋಗದ ಪುನರಾರಂಭ: ಅನುಮತಿ ನೀಡಿದ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ

ಕಚ್ಚುವಿಕೆಯ ಹೊರತಾಗಿ, ರಕ್ತ ವರ್ಗಾವಣೆ, ಕಸಿ, ಲೈಂಗಿಕ ಸಂಪರ್ಕ, ಗರ್ಭಧಾರಣೆ ಮತ್ತು ಜನ್ಮ ನೀಡುವ ಸಂದರ್ಭಗಳಲ್ಲೂ ಆರ್ಬೊವೈರಸ್‌ಗಳು ಮನುಷ್ಯರ ಮೇಲೆ ಪರಿಣಾಮ ಬೀರಬಹುದು. ಮನುಷ್ಯರಿಗೆ ಹರಡುವ ಸಾಧ್ಯತೆ ಬಗ್ಗೆ ಐಸಿಎಂಆರ್ ಕಳವಳ ವ್ಯಕ್ತಪಡಿಸಿದೆ.

ಐಸಿಎಂಆರ್ ಪ್ರಕಾರ, ಭಾರತದಲ್ಲಿ, ಕೆಲವು ಸೊಳ್ಳೆ ತಳಿಗಳಾದ ಏಜಿಪ್ಟಿ, Cx quinquefasciatus ಮತ್ತು Cx Tritaeniorhynchus ಇವುಗಳಿಂದ ವೈರಸ್ ಹಬ್ಬುವ ಅಪಾಯ ಹೆಚ್ಚಾಗಿದೆ. ಈ ಅಧ್ಯಯನದ ಸಂಶೋಧನೆಗಳನ್ನು ಇಂಡಿಯನ್ ಜರ್ನಲ್ ಆಫ್ ಮೆಡಿಕಲ್ ರಿಸರ್ಚ್ (ಐಜೆಎಂಆರ್) ನ ಇತ್ತೀಚಿನ ಸಂಚಿಕೆಯಲ್ಲಿ ಪ್ರಕಟಿಸಲಾಗಿದೆ.

ಹಂದಿ, ಕಾಡು ಮೈನಾ ಹಕ್ಕಿ ಮತ್ತು ಸೊಳ್ಳೆಗಳಂತಹ ಜೀವಿಗಳಲ್ಲಿ ಕಂಡುಬರುವ ಸೋಂಕಿನ ಕುರುಹುಗಳು ಸಾರ್ವಜನಿಕ ಆರೋಗ್ಯ ಬಿಕ್ಕಟ್ಟಾಗಿ ಬದಲಾಗಬಹುದು. ಕೊರೊನಾ ವೈರಸ್ ಸಾಂಕ್ರಾಮಿಕ ರೋಗದಂತೆಯೇ ಇದು ಇರಬಹುದು ಎಂದು ವಿಜ್ಞಾನಿಗಳು ಸೂಚಿಸಿದ್ದಾರೆ.


ಇದನ್ನೂ ಓದಿ: ಕೊರೊನಾ ಲಸಿಕೆ ಮುಂದಿನ ವರ್ಷಕ್ಕೆ ಸಿದ್ಧವಾಗಬಹುದು: ಕೇಂದ್ರ ಸಚಿವ ಹರ್ಷವರ್ಧನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...