Homeಕರೋನಾ ತಲ್ಲಣಕ್ಯಾಟ್‌ ಕ್ಯೂ ವೈರಸ್: ಕೊರೊನಾದಂತೆಯೇ ಮತ್ತೊಂದು ಅಪಾಯಕಾರಿ ವೈರಸ್: ICMR ಆತಂಕ

ಕ್ಯಾಟ್‌ ಕ್ಯೂ ವೈರಸ್: ಕೊರೊನಾದಂತೆಯೇ ಮತ್ತೊಂದು ಅಪಾಯಕಾರಿ ವೈರಸ್: ICMR ಆತಂಕ

ಈ ಕ್ಯಾಟ್ ಕ್ಯೂ ವೈರಸ್ ಪ್ರಾಣಿಗಳಿಗೆ (ಸೊಳ್ಳೆಗಳು, ಹಂದಿಗಳು) ಮತ್ತು ಮನುಷ್ಯರಿಗೆ ಇಬ್ಬರಿಗೂ ಸೋಂಕು ತಗುಲುತ್ತದೆ. ವೈರಸ್‌ ಸೋಂಕಿನಿಂದ ಅಧಿಕ ಜ್ವರ, ಮೆನಿಂಜೈಟಿಸ್, ಮೆದುಳಿನ ಉರಿಯೂತದಂತಹ ಭಯಾನಕ ರೋಗಲಕ್ಷಣಗಳಿಗೆ ಕಾರಣವಾಗಬಹುದು.

- Advertisement -
- Advertisement -

ಭಾರತ ಕೊರೊನಾ ಸಾಂಕ್ರಾಮಿಕದಿಂದ ತತ್ತರಿಸುತ್ತಿದೆ. ಈ ನಡುವೆಯೇ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಮತ್ತೊಂದು ಆತಂಕ ಸೃಷ್ಟಿಸುವ ಮಾಹಿತಿ ನೀಡಿದೆ. ಕೊರೊನಾ ಜೊತೆಗೇ ನಾವು ಚೀನಾದ ಮತ್ತೊಂದು ವೈರಸ್ ವಿರುದ್ಧ ಹೋರಾಡಬೇಕಿದೆ. ಅದೇ ಕ್ಯಾಟ್ ಕ್ಯೂ ವೈರಸ್ (CQV).

ಈ ವೈರಸ್ ಅನ್ನು ಆರ್ಬೋವೈರಸ್ ಎಂದು ಕರೆಯಲಾಗುತ್ತದೆ. ಚೀನಾ ಮತ್ತು ವಿಯೆಟ್ನಾಂನ ಕೆಲವು ಭಾಗಗಳಲ್ಲಿ ಕೆಲ ಜಾತಿಯ ಸೊಳ್ಳೆಗಳು ಮತ್ತು ಹಂದಿಗಳಲ್ಲಿ ಕ್ಯಾಟ್ ಕ್ಯೂ ವೈರಸ್ (CQV) ಕುರುಹುಗಳು ಕಂಡುಬಂದಿವೆ.

ಪುಣೆಯ ರಾಷ್ಟ್ರೀಯ ರೋಗ ಸೂಕ್ಷ್ಮಾಣು ಅಧ್ಯಯನ ಸಂಸ್ಥೆ ನಡೆಸಿದ ಸಂಶೋಧನೆಯಲ್ಲಿ ವಿವಿಧ ರಾಜ್ಯಗಳಲ್ಲಿ ನಡೆಸಲಾಗಿರುವ 883 ಜನರ ರಕ್ತದ ಮಾದರಿ ಪರೀಕ್ಷೆಯಲ್ಲಿ ಹಲವರಲ್ಲಿ ಕ್ಯಾಟ್ ಕ್ಯೂ ವೈರಸ್ ಇರುವುದು ದೃಢಪಟ್ಟಿದೆಯಂತೆ. ಈ ವೈರಸ್ ಕರ್ನಾಟಕದಲ್ಲಿ 2014 ಮತ್ತು 2017ರಲ್ಲಿ ಎರಡು ಪ್ರಕರಣಗಳು ಕಂಡುಬಂದಿದ್ದವು.

ಇದನ್ನೂ ಓದಿ: ಇನ್ಮುಂದೆ ಕೊರೊನಾ ಸೋಂಕಿತರಿಗೆ ಕ್ಷಯರೋಗ ಪರೀಕ್ಷೆ ಕಡ್ಡಾಯ

ಕ್ಯಾಟ್ ಕ್ಯೂ ವೈರಸ್ ಎಂದರೇನು..?

ಈ ಕ್ಯಾಟ್ ಕ್ಯೂ ವೈರಸ್ ಪ್ರಾಣಿಗಳಿಗೆ (ಸೊಳ್ಳೆಗಳು, ಹಂದಿಗಳು) ಮತ್ತು ಮನುಷ್ಯರಿಗೆ ಇಬ್ಬರಿಗೂ ಸೋಂಕು ತಗುಲುತ್ತದೆ. ವೈರಸ್‌ ಸೋಂಕಿನಿಂದ ಅಧಿಕ ಜ್ವರ, ಮೆನಿಂಜೈಟಿಸ್, ಮೆದುಳಿನ ಉರಿಯೂತದಂತಹ ಭಯಾನಕ ರೋಗಲಕ್ಷಣಗಳಿಗೆ ಕಾರಣವಾಗಬಹುದು. ವೈರಸ್ ಈಗಾಗಲೇ ಚೀನಾ ಮತ್ತು ವಿಯೆಟ್ನಾಂ ಜಿಲ್ಲೆಗಳ ಹಂದಿಗಳಲ್ಲಿ ವಾಡಿಕೆಯಂತೆ ಕಂಡುಬರುತ್ತದೆ ಎಂದು ಹೇಳಲಾಗುತ್ತದೆ.

ಈ ವೈರಸ್, ಆರ್ತ್ರೋಪಾಡ್ ವಾಹಕಗಳ ಮೂಲಕ ಹರಡುವ ವೈರಸ್, ಇದನ್ನು ಅರ್ಬೊವೈರಸ್ ಎಂದೂ ಕರೆಯುತ್ತಾರೆ. ತಜ್ಞರ ಪ್ರಕಾರ, 130 ಕ್ಕೂ ಹೆಚ್ಚು ವಿವಿಧ ರೀತಿಯ ಆರ್ಬೊವೈರಸ್‌ಗಳಿದ್ದು ಇವು ಮನುಷ್ಯರಲ್ಲಿ ಸೋಂಕು ಹಬ್ಬಿಸುತ್ತವೆ. ಈ ವೈರಸ್ ಲಕ್ಷಣಗಳು ಲಕ್ಷಣರಹಿತ, ಸಾಮಾನ್ಯ ಜ್ವರದ ಜೊತೆಗೆ ಅತಿಯಾದ ತೀವ್ರತೆಯನ್ನು ಹೊಂದಿರುತ್ತವೆ.

ಕ್ಯಾಟ್ ಕ್ಯೂ ವೈರಸ್ ಹೇಗೆ ಹರಡುತ್ತದೆ…?

ಸೋಂಕು ಸಾಮಾನ್ಯವಾಗಿ ಕೋಳಿ ಮತ್ತು ಸಸ್ತನಿಗಳಲ್ಲಿ ಹರಡಿದರೆ, ಸೊಳ್ಳೆಗಳು ಮತ್ತು ಕೀಟಗಳ ಮೂಲಕ  ಮೂಲಕ ಮನುಷ್ಯರಿಗೂ ಹರಡಬಹುದು. ಮನುಷ್ಯನಿಗೆ ಸೋಂಕಿತ ಸೊಳ್ಳೆ ಅಥವಾ ಕೀಟ ಕಚ್ಚಿದಾಗ ಸೋಂಕು ಹರಡಬಹುದು.

ಇದನ್ನೂ ಓದಿ: ಕೊರೊನಾ ಲಸಿಕೆಯ ಕ್ಲಿನಿಕಲ್ ಪ್ರಯೋಗದ ಪುನರಾರಂಭ: ಅನುಮತಿ ನೀಡಿದ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ

ಕಚ್ಚುವಿಕೆಯ ಹೊರತಾಗಿ, ರಕ್ತ ವರ್ಗಾವಣೆ, ಕಸಿ, ಲೈಂಗಿಕ ಸಂಪರ್ಕ, ಗರ್ಭಧಾರಣೆ ಮತ್ತು ಜನ್ಮ ನೀಡುವ ಸಂದರ್ಭಗಳಲ್ಲೂ ಆರ್ಬೊವೈರಸ್‌ಗಳು ಮನುಷ್ಯರ ಮೇಲೆ ಪರಿಣಾಮ ಬೀರಬಹುದು. ಮನುಷ್ಯರಿಗೆ ಹರಡುವ ಸಾಧ್ಯತೆ ಬಗ್ಗೆ ಐಸಿಎಂಆರ್ ಕಳವಳ ವ್ಯಕ್ತಪಡಿಸಿದೆ.

ಐಸಿಎಂಆರ್ ಪ್ರಕಾರ, ಭಾರತದಲ್ಲಿ, ಕೆಲವು ಸೊಳ್ಳೆ ತಳಿಗಳಾದ ಏಜಿಪ್ಟಿ, Cx quinquefasciatus ಮತ್ತು Cx Tritaeniorhynchus ಇವುಗಳಿಂದ ವೈರಸ್ ಹಬ್ಬುವ ಅಪಾಯ ಹೆಚ್ಚಾಗಿದೆ. ಈ ಅಧ್ಯಯನದ ಸಂಶೋಧನೆಗಳನ್ನು ಇಂಡಿಯನ್ ಜರ್ನಲ್ ಆಫ್ ಮೆಡಿಕಲ್ ರಿಸರ್ಚ್ (ಐಜೆಎಂಆರ್) ನ ಇತ್ತೀಚಿನ ಸಂಚಿಕೆಯಲ್ಲಿ ಪ್ರಕಟಿಸಲಾಗಿದೆ.

ಹಂದಿ, ಕಾಡು ಮೈನಾ ಹಕ್ಕಿ ಮತ್ತು ಸೊಳ್ಳೆಗಳಂತಹ ಜೀವಿಗಳಲ್ಲಿ ಕಂಡುಬರುವ ಸೋಂಕಿನ ಕುರುಹುಗಳು ಸಾರ್ವಜನಿಕ ಆರೋಗ್ಯ ಬಿಕ್ಕಟ್ಟಾಗಿ ಬದಲಾಗಬಹುದು. ಕೊರೊನಾ ವೈರಸ್ ಸಾಂಕ್ರಾಮಿಕ ರೋಗದಂತೆಯೇ ಇದು ಇರಬಹುದು ಎಂದು ವಿಜ್ಞಾನಿಗಳು ಸೂಚಿಸಿದ್ದಾರೆ.


ಇದನ್ನೂ ಓದಿ: ಕೊರೊನಾ ಲಸಿಕೆ ಮುಂದಿನ ವರ್ಷಕ್ಕೆ ಸಿದ್ಧವಾಗಬಹುದು: ಕೇಂದ್ರ ಸಚಿವ ಹರ್ಷವರ್ಧನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...